Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಬಿಹಾರದಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ?

ಫ್ಯಾಕ್ಟ್‌ಚೆಕ್‌: ಬಿಹಾರದಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ?

- Advertisement -
- Advertisement -

ಇತ್ತೀಚೆಗೆ ಬಿಹಾರದಲ್ಲಿ ವರ್ಚುವಲ್ ಚುನಾವಣಾ ರ್‍ಯಾಲಿ ನಡೆಸಲು ಗೃಹಸಚಿವ ಅಮಿತ್‌ ಶಾರವರು ಬಿಹಾರಕ್ಕೆ ತೆರಳಿದ್ದರು. ಆಗ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು, ಇಟ್ಟಿಗೆಗಳನ್ನು ಎಸೆದು ದಾಳಿ ಮಾಡಲಾಗಿದೆ ಎಂಬ ವಿಡಿಯೋವನ್ನು ಎಲ್ಲಾ ಕಡೆ ಹಂಚಿಕೊಳ್ಳಲಾಗುತ್ತಿದೆ.

ಬಿಹಾರದಲ್ಲಿ ಬಿಜೆಪಿ Rally ಯ ವಿರುದ್ಧ ಜನಾಕ್ರೋಶ.ಇಂತ ಪರಿಸ್ಥಿತಿ ಯಾವ ಪಕ್ಷಕ್ಕೂ ಬಂದಿಲ್ಲ

Posted by Chandru Chandru on Monday, June 22, 2020

ಬಿಹಾರದಲ್ಲಿ ಬಿಜೆಪಿ Rally ಯ ವಿರುದ್ಧ ಜನಾಕ್ರೋಶ.ಇಂತ ಪರಿಸ್ಥಿತಿ ಯಾವ ಪಕ್ಷಕ್ಕೂ ಬಂದಿಲ್ಲ ಎಂದು ಚಂದ್ರು ಎಂಬುವವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಎರಡು ನಿಮಿಷಗಳ ವೀಡಿಯೊದಲ್ಲಿ ಬೆಂಗಾವಲು ವಾಹನ ಹೋಗುತ್ತಿದ್ದಂತೆಯೇ ಪ್ರೇಕ್ಷಕರು ಇಟ್ಟಿಗೆಗಳನ್ನು ಎಸೆಯುವುದನ್ನು ಕಾಣಬಹುದು. ಇದರಿಂದ ಪೊಲೀಸ್ ವಾಹನವು ಕಂದಕಕ್ಕೆ ಜಾರುವುದನ್ನು ಕಾಣಬಹುದು. ಕಾರಿನಿಂದ ಹೊರಬಂದ ಒಬ್ಬ ಪೋಲೀಸ್ ಸಹ ಗಾಯಗೊಂಡಂತೆ ಕಂಡುಬರುತ್ತದೆ. ಇದರ ನಂತರ ಅವ್ಯವಸ್ಥೆ ಉಂಟಾಗುತ್ತದೆ ಮತ್ತು ದಾಳಿ ಮಾಡಿದ ಜನರನ್ನು ಪೊಲೀಸರು ಲಾಠಿ ಹಿಡಿದು ಪೊಲೀಸರು ಅಟ್ಟಿಸಿಕೊಂಡು ಹೋಗುತ್ತಾರೆ.

ಅದೇ ಮಂಡನೆಯೊಂದಿಗೆ ಆ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಬಹಳಷ್ಟು ಜನರು ಹಂಚಿಕೊಂಡಿದ್ದಾರೆ.

ವಾಸ್ತವವೇನು?

ವೀಡಿಯೊವನ್ನು ಕೂಲಂಕುಷವಾಗಿ ನೋಡಿದಾಗ, ಕಂದಕಕ್ಕೆ ಬೀಳುವ ವಾಹನವು ‘ಬಿಆರ್ 11 ಟಿ’ ಎಂದು ಬರೆದಿರುವ ನಂಬರ್‌ಪ್ಲೇಟ್ ಅನ್ನು ಹೊಂದಿದೆ. ಈ ನೋಂದಣಿ ಸಂಖ್ಯೆ ಬಿಹಾರದ ಪೂರ್ಣಿಯಾಕ್ಕೆ ಸೇರಿದೆ. ಅದರ ಜಾಡು ಹಿಡಿದು ಹುಡುಕಾಡಿದಾಗ ಹಲವು ಸುದ್ದಿವಾಹಿನಿಗಳ ವಿಡಿಯೋಗಳು, ಸುದ್ದಿಗಳು ಸಿಗುತ್ತವೆ. ಅವುಗಳ ಪ್ರಕಾರ ಈ ವಿಡಿಯೋ ಮೊದಲು ಅಪ್‌ಲೋಡ್ ಆಗಿರುವುದು 12 ಜನವರಿ 2018 ಆಗಿದೆ. ಅಂದರೆ ಎರಡು ವರ್ಷಗಳಷ್ಟು ಹಳೆಯ ವಿಡಿಯೋ ಇದಾಗಿದೆ. ಅಲ್ಲದೇ ಇದು ಅಮಿತ್‌ ಶಾ ಬೆಂಗಾವಲು ವಾಹನದ ಮೇಲಿನ ದಾಳಿಯಾಗಿರದೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನ ಮೇಲಿನ ಕಲ್ಲು ತೂರಾಟವಾಗಿದೆ.

ಈ ಘಟನೆ ಬಕ್ಸರ್‌ನ ನಂದನ್‌ನಲ್ಲಿ ನಡೆದಿದ್ದು, ಸಿಎಂಗೆ ಯಾವುದೇ ಗಾಯವಾಗದಿದ್ದರೂ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಎಎನ್‌ಐ ಅಪ್‌ಲೋಡ್ ಮಾಡಿರುವ ವಿಡಿಯೋ ವಿವರಣೆಯಲ್ಲಿ ತಿಳಿಸಲಾಗಿದೆ.

ಜನವರಿ 2018 ರಲ್ಲಿ ನಿತೀಶ್‌ ಕುಮಾರ್‌ರವರ “ವಿಕಾಸ್ ಸಮೀಕ್ಷಾ ಯಾತ್ರೆ” ಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾದ ಹಲವಾರು ಸುದ್ದಿ ವರದಿಗಳನ್ನು ನಾವು ಲಭ್ಯವಿವೆ. ಅವರು ಆ ಸಮಯದಲ್ಲಿ ಸರ್ಕಾರದ ಅಭಿವೃದ್ಧಿ ಯೋಜನೆಗಳ ಸ್ಥಿತಿಯನ್ನು ತಿಳಯಲು ರಾಜ್ಯವ್ಯಾಪಿ ಪ್ರವಾಸದಲ್ಲಿದ್ದರು ಎಂದು ವರದಿಗಳು ಉಲ್ಲೇಖಿಸಿವೆ.

ಎನ್‌ಡಿಟಿವಿ ವರದಿಯ ಪ್ರಕಾರ, ಆ ಗ್ರಾಮದ ಜನರು ಮುಖ್ಯಮಂತ್ರಿಗಳು ದಲಿತ ಕಾಲೋನಿಗೆ ಭೇಟಿ ನೀಡಬೇಕೆಂದು ಬಯಸಿದ್ದರು. ಆದರೆ ಅವರು ಬಾರದಿದ್ದಾಗ ಭಿನ್ನಾಭಿಪ್ರಾಯಕ್ಕೆ ಕಾರಣವಾಯಿತು ಮತ್ತು ನಂತರ ಕಲ್ಲು ತೂರಾಟ ನಡೆಯಿತು.

ನಿತೀಶ್‌ ಕುಮಾರ್‌ ಅವರ ಕಾರು ದಲಿತ ಕಾಲೋನಿಯಲ್ಲಿ ನಿಲ್ಲದಿದ್ದಾಗ ಅವರ ಬೆಂಗಾವಲು ವಾಹನಕ್ಕೆ ಕಲ್ಲು ಮತ್ತು ಇಟ್ಟಿಗೆಗಳನ್ನು ಜನರು ತೂರಿದರು ಎಂದು ಹಿಂದೂ ವರದಿ ಮಾಡಿದೆ. ಅಲ್ಲದೇ ನ್ಯೂಸ್‌ 18 ಸುದ್ದಿವಾಹಿನಿಯು ವಿಡಿಯೋ ಮಾಡಿ ಸಂಪೂರ್ಣ ಸುದ್ದಿ ಬಿತ್ತರಿಸಿದೆ. ಅದನ್ನು ನೀವು ಕೆಳಗೆ ನೋಡಬಹುದು.

Bihar CM Nitish Kumar's Convoy Attacked.

WATCH: While Bihar CM Nitish Kumar was on his way to a village in Buxar, some villagers started pelting stones on the CM's convoy.

Posted by News18 on Saturday, January 13, 2018

ಅಲ್ಲಿಗೆ ಈ ವಿಡಿಯೋ ಇತ್ತೀಚೆಗೆ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ ಎಂಬುದು ಸುಳ್ಳಾಗಿದೆ. ಇದು ಎರಡು ವರ್ಷಗಳ ಹಿಂದಿನ ನಿತೀಶ್‌ ಕುಮಾರ್‌ರವರಿಗೆ ಸಂಬಂಧಿಸಿದ ಘಟನೆಯಾಗಿದೆ.


ಇದನ್ನೂ ಓದಿ: ಕೊರೋನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...