Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಬಿಹಾರದಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ?

ಫ್ಯಾಕ್ಟ್‌ಚೆಕ್‌: ಬಿಹಾರದಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ?

- Advertisement -
- Advertisement -

ಇತ್ತೀಚೆಗೆ ಬಿಹಾರದಲ್ಲಿ ವರ್ಚುವಲ್ ಚುನಾವಣಾ ರ್‍ಯಾಲಿ ನಡೆಸಲು ಗೃಹಸಚಿವ ಅಮಿತ್‌ ಶಾರವರು ಬಿಹಾರಕ್ಕೆ ತೆರಳಿದ್ದರು. ಆಗ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು, ಇಟ್ಟಿಗೆಗಳನ್ನು ಎಸೆದು ದಾಳಿ ಮಾಡಲಾಗಿದೆ ಎಂಬ ವಿಡಿಯೋವನ್ನು ಎಲ್ಲಾ ಕಡೆ ಹಂಚಿಕೊಳ್ಳಲಾಗುತ್ತಿದೆ.

ಬಿಹಾರದಲ್ಲಿ ಬಿಜೆಪಿ Rally ಯ ವಿರುದ್ಧ ಜನಾಕ್ರೋಶ.ಇಂತ ಪರಿಸ್ಥಿತಿ ಯಾವ ಪಕ್ಷಕ್ಕೂ ಬಂದಿಲ್ಲ

Posted by Chandru Chandru on Monday, June 22, 2020

ಬಿಹಾರದಲ್ಲಿ ಬಿಜೆಪಿ Rally ಯ ವಿರುದ್ಧ ಜನಾಕ್ರೋಶ.ಇಂತ ಪರಿಸ್ಥಿತಿ ಯಾವ ಪಕ್ಷಕ್ಕೂ ಬಂದಿಲ್ಲ ಎಂದು ಚಂದ್ರು ಎಂಬುವವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಎರಡು ನಿಮಿಷಗಳ ವೀಡಿಯೊದಲ್ಲಿ ಬೆಂಗಾವಲು ವಾಹನ ಹೋಗುತ್ತಿದ್ದಂತೆಯೇ ಪ್ರೇಕ್ಷಕರು ಇಟ್ಟಿಗೆಗಳನ್ನು ಎಸೆಯುವುದನ್ನು ಕಾಣಬಹುದು. ಇದರಿಂದ ಪೊಲೀಸ್ ವಾಹನವು ಕಂದಕಕ್ಕೆ ಜಾರುವುದನ್ನು ಕಾಣಬಹುದು. ಕಾರಿನಿಂದ ಹೊರಬಂದ ಒಬ್ಬ ಪೋಲೀಸ್ ಸಹ ಗಾಯಗೊಂಡಂತೆ ಕಂಡುಬರುತ್ತದೆ. ಇದರ ನಂತರ ಅವ್ಯವಸ್ಥೆ ಉಂಟಾಗುತ್ತದೆ ಮತ್ತು ದಾಳಿ ಮಾಡಿದ ಜನರನ್ನು ಪೊಲೀಸರು ಲಾಠಿ ಹಿಡಿದು ಪೊಲೀಸರು ಅಟ್ಟಿಸಿಕೊಂಡು ಹೋಗುತ್ತಾರೆ.

ಅದೇ ಮಂಡನೆಯೊಂದಿಗೆ ಆ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಬಹಳಷ್ಟು ಜನರು ಹಂಚಿಕೊಂಡಿದ್ದಾರೆ.

ವಾಸ್ತವವೇನು?

ವೀಡಿಯೊವನ್ನು ಕೂಲಂಕುಷವಾಗಿ ನೋಡಿದಾಗ, ಕಂದಕಕ್ಕೆ ಬೀಳುವ ವಾಹನವು ‘ಬಿಆರ್ 11 ಟಿ’ ಎಂದು ಬರೆದಿರುವ ನಂಬರ್‌ಪ್ಲೇಟ್ ಅನ್ನು ಹೊಂದಿದೆ. ಈ ನೋಂದಣಿ ಸಂಖ್ಯೆ ಬಿಹಾರದ ಪೂರ್ಣಿಯಾಕ್ಕೆ ಸೇರಿದೆ. ಅದರ ಜಾಡು ಹಿಡಿದು ಹುಡುಕಾಡಿದಾಗ ಹಲವು ಸುದ್ದಿವಾಹಿನಿಗಳ ವಿಡಿಯೋಗಳು, ಸುದ್ದಿಗಳು ಸಿಗುತ್ತವೆ. ಅವುಗಳ ಪ್ರಕಾರ ಈ ವಿಡಿಯೋ ಮೊದಲು ಅಪ್‌ಲೋಡ್ ಆಗಿರುವುದು 12 ಜನವರಿ 2018 ಆಗಿದೆ. ಅಂದರೆ ಎರಡು ವರ್ಷಗಳಷ್ಟು ಹಳೆಯ ವಿಡಿಯೋ ಇದಾಗಿದೆ. ಅಲ್ಲದೇ ಇದು ಅಮಿತ್‌ ಶಾ ಬೆಂಗಾವಲು ವಾಹನದ ಮೇಲಿನ ದಾಳಿಯಾಗಿರದೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನ ಮೇಲಿನ ಕಲ್ಲು ತೂರಾಟವಾಗಿದೆ.

ಈ ಘಟನೆ ಬಕ್ಸರ್‌ನ ನಂದನ್‌ನಲ್ಲಿ ನಡೆದಿದ್ದು, ಸಿಎಂಗೆ ಯಾವುದೇ ಗಾಯವಾಗದಿದ್ದರೂ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಎಎನ್‌ಐ ಅಪ್‌ಲೋಡ್ ಮಾಡಿರುವ ವಿಡಿಯೋ ವಿವರಣೆಯಲ್ಲಿ ತಿಳಿಸಲಾಗಿದೆ.

ಜನವರಿ 2018 ರಲ್ಲಿ ನಿತೀಶ್‌ ಕುಮಾರ್‌ರವರ “ವಿಕಾಸ್ ಸಮೀಕ್ಷಾ ಯಾತ್ರೆ” ಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾದ ಹಲವಾರು ಸುದ್ದಿ ವರದಿಗಳನ್ನು ನಾವು ಲಭ್ಯವಿವೆ. ಅವರು ಆ ಸಮಯದಲ್ಲಿ ಸರ್ಕಾರದ ಅಭಿವೃದ್ಧಿ ಯೋಜನೆಗಳ ಸ್ಥಿತಿಯನ್ನು ತಿಳಯಲು ರಾಜ್ಯವ್ಯಾಪಿ ಪ್ರವಾಸದಲ್ಲಿದ್ದರು ಎಂದು ವರದಿಗಳು ಉಲ್ಲೇಖಿಸಿವೆ.

ಎನ್‌ಡಿಟಿವಿ ವರದಿಯ ಪ್ರಕಾರ, ಆ ಗ್ರಾಮದ ಜನರು ಮುಖ್ಯಮಂತ್ರಿಗಳು ದಲಿತ ಕಾಲೋನಿಗೆ ಭೇಟಿ ನೀಡಬೇಕೆಂದು ಬಯಸಿದ್ದರು. ಆದರೆ ಅವರು ಬಾರದಿದ್ದಾಗ ಭಿನ್ನಾಭಿಪ್ರಾಯಕ್ಕೆ ಕಾರಣವಾಯಿತು ಮತ್ತು ನಂತರ ಕಲ್ಲು ತೂರಾಟ ನಡೆಯಿತು.

ನಿತೀಶ್‌ ಕುಮಾರ್‌ ಅವರ ಕಾರು ದಲಿತ ಕಾಲೋನಿಯಲ್ಲಿ ನಿಲ್ಲದಿದ್ದಾಗ ಅವರ ಬೆಂಗಾವಲು ವಾಹನಕ್ಕೆ ಕಲ್ಲು ಮತ್ತು ಇಟ್ಟಿಗೆಗಳನ್ನು ಜನರು ತೂರಿದರು ಎಂದು ಹಿಂದೂ ವರದಿ ಮಾಡಿದೆ. ಅಲ್ಲದೇ ನ್ಯೂಸ್‌ 18 ಸುದ್ದಿವಾಹಿನಿಯು ವಿಡಿಯೋ ಮಾಡಿ ಸಂಪೂರ್ಣ ಸುದ್ದಿ ಬಿತ್ತರಿಸಿದೆ. ಅದನ್ನು ನೀವು ಕೆಳಗೆ ನೋಡಬಹುದು.

Bihar CM Nitish Kumar's Convoy Attacked.

WATCH: While Bihar CM Nitish Kumar was on his way to a village in Buxar, some villagers started pelting stones on the CM's convoy.

Posted by News18 on Saturday, January 13, 2018

ಅಲ್ಲಿಗೆ ಈ ವಿಡಿಯೋ ಇತ್ತೀಚೆಗೆ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ ಎಂಬುದು ಸುಳ್ಳಾಗಿದೆ. ಇದು ಎರಡು ವರ್ಷಗಳ ಹಿಂದಿನ ನಿತೀಶ್‌ ಕುಮಾರ್‌ರವರಿಗೆ ಸಂಬಂಧಿಸಿದ ಘಟನೆಯಾಗಿದೆ.


ಇದನ್ನೂ ಓದಿ: ಕೊರೋನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...