Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಬಿಹಾರದಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ?

ಫ್ಯಾಕ್ಟ್‌ಚೆಕ್‌: ಬಿಹಾರದಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ?

- Advertisement -
- Advertisement -

ಇತ್ತೀಚೆಗೆ ಬಿಹಾರದಲ್ಲಿ ವರ್ಚುವಲ್ ಚುನಾವಣಾ ರ್‍ಯಾಲಿ ನಡೆಸಲು ಗೃಹಸಚಿವ ಅಮಿತ್‌ ಶಾರವರು ಬಿಹಾರಕ್ಕೆ ತೆರಳಿದ್ದರು. ಆಗ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು, ಇಟ್ಟಿಗೆಗಳನ್ನು ಎಸೆದು ದಾಳಿ ಮಾಡಲಾಗಿದೆ ಎಂಬ ವಿಡಿಯೋವನ್ನು ಎಲ್ಲಾ ಕಡೆ ಹಂಚಿಕೊಳ್ಳಲಾಗುತ್ತಿದೆ.

ಬಿಹಾರದಲ್ಲಿ ಬಿಜೆಪಿ Rally ಯ ವಿರುದ್ಧ ಜನಾಕ್ರೋಶ.ಇಂತ ಪರಿಸ್ಥಿತಿ ಯಾವ ಪಕ್ಷಕ್ಕೂ ಬಂದಿಲ್ಲ

Posted by Chandru Chandru on Monday, June 22, 2020

ಬಿಹಾರದಲ್ಲಿ ಬಿಜೆಪಿ Rally ಯ ವಿರುದ್ಧ ಜನಾಕ್ರೋಶ.ಇಂತ ಪರಿಸ್ಥಿತಿ ಯಾವ ಪಕ್ಷಕ್ಕೂ ಬಂದಿಲ್ಲ ಎಂದು ಚಂದ್ರು ಎಂಬುವವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಎರಡು ನಿಮಿಷಗಳ ವೀಡಿಯೊದಲ್ಲಿ ಬೆಂಗಾವಲು ವಾಹನ ಹೋಗುತ್ತಿದ್ದಂತೆಯೇ ಪ್ರೇಕ್ಷಕರು ಇಟ್ಟಿಗೆಗಳನ್ನು ಎಸೆಯುವುದನ್ನು ಕಾಣಬಹುದು. ಇದರಿಂದ ಪೊಲೀಸ್ ವಾಹನವು ಕಂದಕಕ್ಕೆ ಜಾರುವುದನ್ನು ಕಾಣಬಹುದು. ಕಾರಿನಿಂದ ಹೊರಬಂದ ಒಬ್ಬ ಪೋಲೀಸ್ ಸಹ ಗಾಯಗೊಂಡಂತೆ ಕಂಡುಬರುತ್ತದೆ. ಇದರ ನಂತರ ಅವ್ಯವಸ್ಥೆ ಉಂಟಾಗುತ್ತದೆ ಮತ್ತು ದಾಳಿ ಮಾಡಿದ ಜನರನ್ನು ಪೊಲೀಸರು ಲಾಠಿ ಹಿಡಿದು ಪೊಲೀಸರು ಅಟ್ಟಿಸಿಕೊಂಡು ಹೋಗುತ್ತಾರೆ.

ಅದೇ ಮಂಡನೆಯೊಂದಿಗೆ ಆ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಬಹಳಷ್ಟು ಜನರು ಹಂಚಿಕೊಂಡಿದ್ದಾರೆ.

ವಾಸ್ತವವೇನು?

ವೀಡಿಯೊವನ್ನು ಕೂಲಂಕುಷವಾಗಿ ನೋಡಿದಾಗ, ಕಂದಕಕ್ಕೆ ಬೀಳುವ ವಾಹನವು ‘ಬಿಆರ್ 11 ಟಿ’ ಎಂದು ಬರೆದಿರುವ ನಂಬರ್‌ಪ್ಲೇಟ್ ಅನ್ನು ಹೊಂದಿದೆ. ಈ ನೋಂದಣಿ ಸಂಖ್ಯೆ ಬಿಹಾರದ ಪೂರ್ಣಿಯಾಕ್ಕೆ ಸೇರಿದೆ. ಅದರ ಜಾಡು ಹಿಡಿದು ಹುಡುಕಾಡಿದಾಗ ಹಲವು ಸುದ್ದಿವಾಹಿನಿಗಳ ವಿಡಿಯೋಗಳು, ಸುದ್ದಿಗಳು ಸಿಗುತ್ತವೆ. ಅವುಗಳ ಪ್ರಕಾರ ಈ ವಿಡಿಯೋ ಮೊದಲು ಅಪ್‌ಲೋಡ್ ಆಗಿರುವುದು 12 ಜನವರಿ 2018 ಆಗಿದೆ. ಅಂದರೆ ಎರಡು ವರ್ಷಗಳಷ್ಟು ಹಳೆಯ ವಿಡಿಯೋ ಇದಾಗಿದೆ. ಅಲ್ಲದೇ ಇದು ಅಮಿತ್‌ ಶಾ ಬೆಂಗಾವಲು ವಾಹನದ ಮೇಲಿನ ದಾಳಿಯಾಗಿರದೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನ ಮೇಲಿನ ಕಲ್ಲು ತೂರಾಟವಾಗಿದೆ.

ಈ ಘಟನೆ ಬಕ್ಸರ್‌ನ ನಂದನ್‌ನಲ್ಲಿ ನಡೆದಿದ್ದು, ಸಿಎಂಗೆ ಯಾವುದೇ ಗಾಯವಾಗದಿದ್ದರೂ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಎಎನ್‌ಐ ಅಪ್‌ಲೋಡ್ ಮಾಡಿರುವ ವಿಡಿಯೋ ವಿವರಣೆಯಲ್ಲಿ ತಿಳಿಸಲಾಗಿದೆ.

ಜನವರಿ 2018 ರಲ್ಲಿ ನಿತೀಶ್‌ ಕುಮಾರ್‌ರವರ “ವಿಕಾಸ್ ಸಮೀಕ್ಷಾ ಯಾತ್ರೆ” ಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾದ ಹಲವಾರು ಸುದ್ದಿ ವರದಿಗಳನ್ನು ನಾವು ಲಭ್ಯವಿವೆ. ಅವರು ಆ ಸಮಯದಲ್ಲಿ ಸರ್ಕಾರದ ಅಭಿವೃದ್ಧಿ ಯೋಜನೆಗಳ ಸ್ಥಿತಿಯನ್ನು ತಿಳಯಲು ರಾಜ್ಯವ್ಯಾಪಿ ಪ್ರವಾಸದಲ್ಲಿದ್ದರು ಎಂದು ವರದಿಗಳು ಉಲ್ಲೇಖಿಸಿವೆ.

ಎನ್‌ಡಿಟಿವಿ ವರದಿಯ ಪ್ರಕಾರ, ಆ ಗ್ರಾಮದ ಜನರು ಮುಖ್ಯಮಂತ್ರಿಗಳು ದಲಿತ ಕಾಲೋನಿಗೆ ಭೇಟಿ ನೀಡಬೇಕೆಂದು ಬಯಸಿದ್ದರು. ಆದರೆ ಅವರು ಬಾರದಿದ್ದಾಗ ಭಿನ್ನಾಭಿಪ್ರಾಯಕ್ಕೆ ಕಾರಣವಾಯಿತು ಮತ್ತು ನಂತರ ಕಲ್ಲು ತೂರಾಟ ನಡೆಯಿತು.

ನಿತೀಶ್‌ ಕುಮಾರ್‌ ಅವರ ಕಾರು ದಲಿತ ಕಾಲೋನಿಯಲ್ಲಿ ನಿಲ್ಲದಿದ್ದಾಗ ಅವರ ಬೆಂಗಾವಲು ವಾಹನಕ್ಕೆ ಕಲ್ಲು ಮತ್ತು ಇಟ್ಟಿಗೆಗಳನ್ನು ಜನರು ತೂರಿದರು ಎಂದು ಹಿಂದೂ ವರದಿ ಮಾಡಿದೆ. ಅಲ್ಲದೇ ನ್ಯೂಸ್‌ 18 ಸುದ್ದಿವಾಹಿನಿಯು ವಿಡಿಯೋ ಮಾಡಿ ಸಂಪೂರ್ಣ ಸುದ್ದಿ ಬಿತ್ತರಿಸಿದೆ. ಅದನ್ನು ನೀವು ಕೆಳಗೆ ನೋಡಬಹುದು.

Bihar CM Nitish Kumar's Convoy Attacked.

WATCH: While Bihar CM Nitish Kumar was on his way to a village in Buxar, some villagers started pelting stones on the CM's convoy.

Posted by News18 on Saturday, January 13, 2018

ಅಲ್ಲಿಗೆ ಈ ವಿಡಿಯೋ ಇತ್ತೀಚೆಗೆ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ ಎಂಬುದು ಸುಳ್ಳಾಗಿದೆ. ಇದು ಎರಡು ವರ್ಷಗಳ ಹಿಂದಿನ ನಿತೀಶ್‌ ಕುಮಾರ್‌ರವರಿಗೆ ಸಂಬಂಧಿಸಿದ ಘಟನೆಯಾಗಿದೆ.


ಇದನ್ನೂ ಓದಿ: ಕೊರೋನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....