Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಬಿಹಾರದಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ?

ಫ್ಯಾಕ್ಟ್‌ಚೆಕ್‌: ಬಿಹಾರದಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ?

- Advertisement -
- Advertisement -

ಇತ್ತೀಚೆಗೆ ಬಿಹಾರದಲ್ಲಿ ವರ್ಚುವಲ್ ಚುನಾವಣಾ ರ್‍ಯಾಲಿ ನಡೆಸಲು ಗೃಹಸಚಿವ ಅಮಿತ್‌ ಶಾರವರು ಬಿಹಾರಕ್ಕೆ ತೆರಳಿದ್ದರು. ಆಗ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು, ಇಟ್ಟಿಗೆಗಳನ್ನು ಎಸೆದು ದಾಳಿ ಮಾಡಲಾಗಿದೆ ಎಂಬ ವಿಡಿಯೋವನ್ನು ಎಲ್ಲಾ ಕಡೆ ಹಂಚಿಕೊಳ್ಳಲಾಗುತ್ತಿದೆ.

ಬಿಹಾರದಲ್ಲಿ ಬಿಜೆಪಿ Rally ಯ ವಿರುದ್ಧ ಜನಾಕ್ರೋಶ.ಇಂತ ಪರಿಸ್ಥಿತಿ ಯಾವ ಪಕ್ಷಕ್ಕೂ ಬಂದಿಲ್ಲ

Posted by Chandru Chandru on Monday, June 22, 2020

ಬಿಹಾರದಲ್ಲಿ ಬಿಜೆಪಿ Rally ಯ ವಿರುದ್ಧ ಜನಾಕ್ರೋಶ.ಇಂತ ಪರಿಸ್ಥಿತಿ ಯಾವ ಪಕ್ಷಕ್ಕೂ ಬಂದಿಲ್ಲ ಎಂದು ಚಂದ್ರು ಎಂಬುವವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಎರಡು ನಿಮಿಷಗಳ ವೀಡಿಯೊದಲ್ಲಿ ಬೆಂಗಾವಲು ವಾಹನ ಹೋಗುತ್ತಿದ್ದಂತೆಯೇ ಪ್ರೇಕ್ಷಕರು ಇಟ್ಟಿಗೆಗಳನ್ನು ಎಸೆಯುವುದನ್ನು ಕಾಣಬಹುದು. ಇದರಿಂದ ಪೊಲೀಸ್ ವಾಹನವು ಕಂದಕಕ್ಕೆ ಜಾರುವುದನ್ನು ಕಾಣಬಹುದು. ಕಾರಿನಿಂದ ಹೊರಬಂದ ಒಬ್ಬ ಪೋಲೀಸ್ ಸಹ ಗಾಯಗೊಂಡಂತೆ ಕಂಡುಬರುತ್ತದೆ. ಇದರ ನಂತರ ಅವ್ಯವಸ್ಥೆ ಉಂಟಾಗುತ್ತದೆ ಮತ್ತು ದಾಳಿ ಮಾಡಿದ ಜನರನ್ನು ಪೊಲೀಸರು ಲಾಠಿ ಹಿಡಿದು ಪೊಲೀಸರು ಅಟ್ಟಿಸಿಕೊಂಡು ಹೋಗುತ್ತಾರೆ.

ಅದೇ ಮಂಡನೆಯೊಂದಿಗೆ ಆ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಬಹಳಷ್ಟು ಜನರು ಹಂಚಿಕೊಂಡಿದ್ದಾರೆ.

ವಾಸ್ತವವೇನು?

ವೀಡಿಯೊವನ್ನು ಕೂಲಂಕುಷವಾಗಿ ನೋಡಿದಾಗ, ಕಂದಕಕ್ಕೆ ಬೀಳುವ ವಾಹನವು ‘ಬಿಆರ್ 11 ಟಿ’ ಎಂದು ಬರೆದಿರುವ ನಂಬರ್‌ಪ್ಲೇಟ್ ಅನ್ನು ಹೊಂದಿದೆ. ಈ ನೋಂದಣಿ ಸಂಖ್ಯೆ ಬಿಹಾರದ ಪೂರ್ಣಿಯಾಕ್ಕೆ ಸೇರಿದೆ. ಅದರ ಜಾಡು ಹಿಡಿದು ಹುಡುಕಾಡಿದಾಗ ಹಲವು ಸುದ್ದಿವಾಹಿನಿಗಳ ವಿಡಿಯೋಗಳು, ಸುದ್ದಿಗಳು ಸಿಗುತ್ತವೆ. ಅವುಗಳ ಪ್ರಕಾರ ಈ ವಿಡಿಯೋ ಮೊದಲು ಅಪ್‌ಲೋಡ್ ಆಗಿರುವುದು 12 ಜನವರಿ 2018 ಆಗಿದೆ. ಅಂದರೆ ಎರಡು ವರ್ಷಗಳಷ್ಟು ಹಳೆಯ ವಿಡಿಯೋ ಇದಾಗಿದೆ. ಅಲ್ಲದೇ ಇದು ಅಮಿತ್‌ ಶಾ ಬೆಂಗಾವಲು ವಾಹನದ ಮೇಲಿನ ದಾಳಿಯಾಗಿರದೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನ ಮೇಲಿನ ಕಲ್ಲು ತೂರಾಟವಾಗಿದೆ.

ಈ ಘಟನೆ ಬಕ್ಸರ್‌ನ ನಂದನ್‌ನಲ್ಲಿ ನಡೆದಿದ್ದು, ಸಿಎಂಗೆ ಯಾವುದೇ ಗಾಯವಾಗದಿದ್ದರೂ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಎಎನ್‌ಐ ಅಪ್‌ಲೋಡ್ ಮಾಡಿರುವ ವಿಡಿಯೋ ವಿವರಣೆಯಲ್ಲಿ ತಿಳಿಸಲಾಗಿದೆ.

ಜನವರಿ 2018 ರಲ್ಲಿ ನಿತೀಶ್‌ ಕುಮಾರ್‌ರವರ “ವಿಕಾಸ್ ಸಮೀಕ್ಷಾ ಯಾತ್ರೆ” ಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾದ ಹಲವಾರು ಸುದ್ದಿ ವರದಿಗಳನ್ನು ನಾವು ಲಭ್ಯವಿವೆ. ಅವರು ಆ ಸಮಯದಲ್ಲಿ ಸರ್ಕಾರದ ಅಭಿವೃದ್ಧಿ ಯೋಜನೆಗಳ ಸ್ಥಿತಿಯನ್ನು ತಿಳಯಲು ರಾಜ್ಯವ್ಯಾಪಿ ಪ್ರವಾಸದಲ್ಲಿದ್ದರು ಎಂದು ವರದಿಗಳು ಉಲ್ಲೇಖಿಸಿವೆ.

ಎನ್‌ಡಿಟಿವಿ ವರದಿಯ ಪ್ರಕಾರ, ಆ ಗ್ರಾಮದ ಜನರು ಮುಖ್ಯಮಂತ್ರಿಗಳು ದಲಿತ ಕಾಲೋನಿಗೆ ಭೇಟಿ ನೀಡಬೇಕೆಂದು ಬಯಸಿದ್ದರು. ಆದರೆ ಅವರು ಬಾರದಿದ್ದಾಗ ಭಿನ್ನಾಭಿಪ್ರಾಯಕ್ಕೆ ಕಾರಣವಾಯಿತು ಮತ್ತು ನಂತರ ಕಲ್ಲು ತೂರಾಟ ನಡೆಯಿತು.

ನಿತೀಶ್‌ ಕುಮಾರ್‌ ಅವರ ಕಾರು ದಲಿತ ಕಾಲೋನಿಯಲ್ಲಿ ನಿಲ್ಲದಿದ್ದಾಗ ಅವರ ಬೆಂಗಾವಲು ವಾಹನಕ್ಕೆ ಕಲ್ಲು ಮತ್ತು ಇಟ್ಟಿಗೆಗಳನ್ನು ಜನರು ತೂರಿದರು ಎಂದು ಹಿಂದೂ ವರದಿ ಮಾಡಿದೆ. ಅಲ್ಲದೇ ನ್ಯೂಸ್‌ 18 ಸುದ್ದಿವಾಹಿನಿಯು ವಿಡಿಯೋ ಮಾಡಿ ಸಂಪೂರ್ಣ ಸುದ್ದಿ ಬಿತ್ತರಿಸಿದೆ. ಅದನ್ನು ನೀವು ಕೆಳಗೆ ನೋಡಬಹುದು.

Bihar CM Nitish Kumar's Convoy Attacked.

WATCH: While Bihar CM Nitish Kumar was on his way to a village in Buxar, some villagers started pelting stones on the CM's convoy.

Posted by News18 on Saturday, January 13, 2018

ಅಲ್ಲಿಗೆ ಈ ವಿಡಿಯೋ ಇತ್ತೀಚೆಗೆ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ ಎಂಬುದು ಸುಳ್ಳಾಗಿದೆ. ಇದು ಎರಡು ವರ್ಷಗಳ ಹಿಂದಿನ ನಿತೀಶ್‌ ಕುಮಾರ್‌ರವರಿಗೆ ಸಂಬಂಧಿಸಿದ ಘಟನೆಯಾಗಿದೆ.


ಇದನ್ನೂ ಓದಿ: ಕೊರೋನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...