Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಬಿಹಾರದಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ?

ಫ್ಯಾಕ್ಟ್‌ಚೆಕ್‌: ಬಿಹಾರದಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ?

- Advertisement -
- Advertisement -

ಇತ್ತೀಚೆಗೆ ಬಿಹಾರದಲ್ಲಿ ವರ್ಚುವಲ್ ಚುನಾವಣಾ ರ್‍ಯಾಲಿ ನಡೆಸಲು ಗೃಹಸಚಿವ ಅಮಿತ್‌ ಶಾರವರು ಬಿಹಾರಕ್ಕೆ ತೆರಳಿದ್ದರು. ಆಗ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು, ಇಟ್ಟಿಗೆಗಳನ್ನು ಎಸೆದು ದಾಳಿ ಮಾಡಲಾಗಿದೆ ಎಂಬ ವಿಡಿಯೋವನ್ನು ಎಲ್ಲಾ ಕಡೆ ಹಂಚಿಕೊಳ್ಳಲಾಗುತ್ತಿದೆ.

ಬಿಹಾರದಲ್ಲಿ ಬಿಜೆಪಿ Rally ಯ ವಿರುದ್ಧ ಜನಾಕ್ರೋಶ.ಇಂತ ಪರಿಸ್ಥಿತಿ ಯಾವ ಪಕ್ಷಕ್ಕೂ ಬಂದಿಲ್ಲ

Posted by Chandru Chandru on Monday, June 22, 2020

ಬಿಹಾರದಲ್ಲಿ ಬಿಜೆಪಿ Rally ಯ ವಿರುದ್ಧ ಜನಾಕ್ರೋಶ.ಇಂತ ಪರಿಸ್ಥಿತಿ ಯಾವ ಪಕ್ಷಕ್ಕೂ ಬಂದಿಲ್ಲ ಎಂದು ಚಂದ್ರು ಎಂಬುವವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಎರಡು ನಿಮಿಷಗಳ ವೀಡಿಯೊದಲ್ಲಿ ಬೆಂಗಾವಲು ವಾಹನ ಹೋಗುತ್ತಿದ್ದಂತೆಯೇ ಪ್ರೇಕ್ಷಕರು ಇಟ್ಟಿಗೆಗಳನ್ನು ಎಸೆಯುವುದನ್ನು ಕಾಣಬಹುದು. ಇದರಿಂದ ಪೊಲೀಸ್ ವಾಹನವು ಕಂದಕಕ್ಕೆ ಜಾರುವುದನ್ನು ಕಾಣಬಹುದು. ಕಾರಿನಿಂದ ಹೊರಬಂದ ಒಬ್ಬ ಪೋಲೀಸ್ ಸಹ ಗಾಯಗೊಂಡಂತೆ ಕಂಡುಬರುತ್ತದೆ. ಇದರ ನಂತರ ಅವ್ಯವಸ್ಥೆ ಉಂಟಾಗುತ್ತದೆ ಮತ್ತು ದಾಳಿ ಮಾಡಿದ ಜನರನ್ನು ಪೊಲೀಸರು ಲಾಠಿ ಹಿಡಿದು ಪೊಲೀಸರು ಅಟ್ಟಿಸಿಕೊಂಡು ಹೋಗುತ್ತಾರೆ.

ಅದೇ ಮಂಡನೆಯೊಂದಿಗೆ ಆ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಬಹಳಷ್ಟು ಜನರು ಹಂಚಿಕೊಂಡಿದ್ದಾರೆ.

ವಾಸ್ತವವೇನು?

ವೀಡಿಯೊವನ್ನು ಕೂಲಂಕುಷವಾಗಿ ನೋಡಿದಾಗ, ಕಂದಕಕ್ಕೆ ಬೀಳುವ ವಾಹನವು ‘ಬಿಆರ್ 11 ಟಿ’ ಎಂದು ಬರೆದಿರುವ ನಂಬರ್‌ಪ್ಲೇಟ್ ಅನ್ನು ಹೊಂದಿದೆ. ಈ ನೋಂದಣಿ ಸಂಖ್ಯೆ ಬಿಹಾರದ ಪೂರ್ಣಿಯಾಕ್ಕೆ ಸೇರಿದೆ. ಅದರ ಜಾಡು ಹಿಡಿದು ಹುಡುಕಾಡಿದಾಗ ಹಲವು ಸುದ್ದಿವಾಹಿನಿಗಳ ವಿಡಿಯೋಗಳು, ಸುದ್ದಿಗಳು ಸಿಗುತ್ತವೆ. ಅವುಗಳ ಪ್ರಕಾರ ಈ ವಿಡಿಯೋ ಮೊದಲು ಅಪ್‌ಲೋಡ್ ಆಗಿರುವುದು 12 ಜನವರಿ 2018 ಆಗಿದೆ. ಅಂದರೆ ಎರಡು ವರ್ಷಗಳಷ್ಟು ಹಳೆಯ ವಿಡಿಯೋ ಇದಾಗಿದೆ. ಅಲ್ಲದೇ ಇದು ಅಮಿತ್‌ ಶಾ ಬೆಂಗಾವಲು ವಾಹನದ ಮೇಲಿನ ದಾಳಿಯಾಗಿರದೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನ ಮೇಲಿನ ಕಲ್ಲು ತೂರಾಟವಾಗಿದೆ.

ಈ ಘಟನೆ ಬಕ್ಸರ್‌ನ ನಂದನ್‌ನಲ್ಲಿ ನಡೆದಿದ್ದು, ಸಿಎಂಗೆ ಯಾವುದೇ ಗಾಯವಾಗದಿದ್ದರೂ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಎಎನ್‌ಐ ಅಪ್‌ಲೋಡ್ ಮಾಡಿರುವ ವಿಡಿಯೋ ವಿವರಣೆಯಲ್ಲಿ ತಿಳಿಸಲಾಗಿದೆ.

ಜನವರಿ 2018 ರಲ್ಲಿ ನಿತೀಶ್‌ ಕುಮಾರ್‌ರವರ “ವಿಕಾಸ್ ಸಮೀಕ್ಷಾ ಯಾತ್ರೆ” ಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾದ ಹಲವಾರು ಸುದ್ದಿ ವರದಿಗಳನ್ನು ನಾವು ಲಭ್ಯವಿವೆ. ಅವರು ಆ ಸಮಯದಲ್ಲಿ ಸರ್ಕಾರದ ಅಭಿವೃದ್ಧಿ ಯೋಜನೆಗಳ ಸ್ಥಿತಿಯನ್ನು ತಿಳಯಲು ರಾಜ್ಯವ್ಯಾಪಿ ಪ್ರವಾಸದಲ್ಲಿದ್ದರು ಎಂದು ವರದಿಗಳು ಉಲ್ಲೇಖಿಸಿವೆ.

ಎನ್‌ಡಿಟಿವಿ ವರದಿಯ ಪ್ರಕಾರ, ಆ ಗ್ರಾಮದ ಜನರು ಮುಖ್ಯಮಂತ್ರಿಗಳು ದಲಿತ ಕಾಲೋನಿಗೆ ಭೇಟಿ ನೀಡಬೇಕೆಂದು ಬಯಸಿದ್ದರು. ಆದರೆ ಅವರು ಬಾರದಿದ್ದಾಗ ಭಿನ್ನಾಭಿಪ್ರಾಯಕ್ಕೆ ಕಾರಣವಾಯಿತು ಮತ್ತು ನಂತರ ಕಲ್ಲು ತೂರಾಟ ನಡೆಯಿತು.

ನಿತೀಶ್‌ ಕುಮಾರ್‌ ಅವರ ಕಾರು ದಲಿತ ಕಾಲೋನಿಯಲ್ಲಿ ನಿಲ್ಲದಿದ್ದಾಗ ಅವರ ಬೆಂಗಾವಲು ವಾಹನಕ್ಕೆ ಕಲ್ಲು ಮತ್ತು ಇಟ್ಟಿಗೆಗಳನ್ನು ಜನರು ತೂರಿದರು ಎಂದು ಹಿಂದೂ ವರದಿ ಮಾಡಿದೆ. ಅಲ್ಲದೇ ನ್ಯೂಸ್‌ 18 ಸುದ್ದಿವಾಹಿನಿಯು ವಿಡಿಯೋ ಮಾಡಿ ಸಂಪೂರ್ಣ ಸುದ್ದಿ ಬಿತ್ತರಿಸಿದೆ. ಅದನ್ನು ನೀವು ಕೆಳಗೆ ನೋಡಬಹುದು.

Bihar CM Nitish Kumar's Convoy Attacked.

WATCH: While Bihar CM Nitish Kumar was on his way to a village in Buxar, some villagers started pelting stones on the CM's convoy.

Posted by News18 on Saturday, January 13, 2018

ಅಲ್ಲಿಗೆ ಈ ವಿಡಿಯೋ ಇತ್ತೀಚೆಗೆ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ ಎಂಬುದು ಸುಳ್ಳಾಗಿದೆ. ಇದು ಎರಡು ವರ್ಷಗಳ ಹಿಂದಿನ ನಿತೀಶ್‌ ಕುಮಾರ್‌ರವರಿಗೆ ಸಂಬಂಧಿಸಿದ ಘಟನೆಯಾಗಿದೆ.


ಇದನ್ನೂ ಓದಿ: ಕೊರೋನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...