Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ’ಮಾನ್ಸೂನ್’ ಬಗ್ಗೆ ತಪ್ಪು ಮಾಹಿತಿ ನೀಡಿದ ಅಮಿತಾಬ್‌ ಬಚ್ಚನ್‌!

ಫ್ಯಾಕ್ಟ್‌‌ಚೆಕ್‌: ’ಮಾನ್ಸೂನ್’ ಬಗ್ಗೆ ತಪ್ಪು ಮಾಹಿತಿ ನೀಡಿದ ಅಮಿತಾಬ್‌ ಬಚ್ಚನ್‌!

ಶಬ್ದಗಳಿಂದ ಉಂಟಾಗುವ ತರಂಗಗಳಿಂದ ಕೊರೊನಾ ವೈರಸ್ ಸಾಯುತ್ತದೆ ಎಂದು ಟ್ವೀಟ್‌ ಮಾಡಿದ್ದೆರು. ನೆಟ್ಟಿಗರು ಇದರ ವಿರುದ್ಧ ಕಿಡಿಕಾರಿದಾಗ ಅವರು ಟ್ವೀಟ್ ಡಿಲೀಟ್ ಮಾಡಿದ್ದರು.

- Advertisement -
- Advertisement -

ಟ್ವಿಟ್ಟರ್‌ನಲ್ಲಿ 4.38 ಕೋಟಿ ಅನುಯಾಯಿಗಳನ್ನು ಹೊಂದಿರುವ ಬಾಲಿವುಡ್ ಚಿತ್ರನಟ ಅಮಿತಾಬ್‌ ಬಚ್ಚನ್ ಗುರುವಾರ ರಾತ್ರಿ “ಮಾನ್ಸೂನ್ 400 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂದು ನಿಮಗೆ ತಿಳಿದಿದೆಯೇ? ಅದನ್ನು ಎಲ್ಲೋ ಓದಿದ ನೆನಪು.. ಆದರೆ ಅದನ್ನು ಹೇಗೆ ಮತ್ತು ಯಾರು ಲೆಕ್ಕ ಹಾಕಿದರು ..?” ಎಂದು ಟ್ವೇಟ್‌ ಮಾಡಿದ್ದಾರೆ.

ಅವರ ಈ ಪೋಸ್ಟ್ 2,100 ಬಾರಿ ರಿಟ್ವೀಟ್ ಮಾಡಲಾಗಿದ್ದು, 40,500 ಲೈಕ್‌‌ಗಳು ಪಡೆದಿದೆ. ಅದರ ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌‌ಚೆಕ್

ನಮ್ಮ ಮಾನ್ಸೂನ್ ಕೇವಲ 40 ಮಿಲಿಯನ್‌ಗಳಷ್ಟು ಹಳೆಯದಾಗಿದೆ. ನಟ ಅಮಿತಾಬ್‌ ಬಚ್ಚನ್ ಪ್ರಶ್ನಿಸಿರುವಂತೆ ನಮ್ಮ ಮಾನ್ಸೂನ್ 400 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂಬ ವಾದ ತಪ್ಪಾಗಿದೆ.

ವಿಶ್ವದ ಅತಿದೊಡ್ಡ ಹವಾಮಾನ ವ್ಯವಸ್ಥೆಗಳಲ್ಲಿ ಒಂದಾಗಿರುವ ಏಷ್ಯನ್ ಮಾನ್ಸೂನ್ 40 ಮಿಲಿಯನ್‌ ವರ್ಷಗಳಷ್ಟು ಹಳೆಯದು ಎಂದು ಅಂತರರಾಷ್ಟ್ರೀಯ ಸಂಶೋಧನಾ ತಂಡದ ಹೊಸ ಅಧ್ಯಯನವು ಕಂಡುಹಿಡಿದಿದೆ ಎಂದು ಸೈನ್ಸ್ ಡೈಲಿ ಎಂಬ ವಿಜ್ಞಾನ ವೆಬ್‌ಸೈಟ್‌ ಮಾಹಿತಿ ನೀಡುತ್ತದೆ.

ಈ ಹಿಂದೆ, ಟಿಬೆಟಿಯನ್ ಪ್ರಸ್ಥಭೂಮಿ ಮತ್ತು ಹಿಮಾಲಯ ಪರ್ವತಗಳು ಖಂಡಾಂತರ ಚಲನೆಯಿಂದ ಮೇಲೆದ್ದ ಪರಿಣಾಮವಾಗಿ ಮಾನ್ಸೂನ್ 22-25 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂದು ವಿಜ್ಞಾನಿಗಳು ನಂಬಿದ್ದರು. ಆದರೆ ಹೊಸ ಅಧ್ಯಯನಗಳು ಏಷ್ಯಾದ ಮಾನ್ಸೂನ್ 40 ಮಿಲಿಯನ್ ವರ್ಷಗಳಷ್ಟು ಹಿಂದೆ ವಾತಾವರಣದಲ್ಲಿ ಇಂಗಾಲದ ಡೈಆಕ್ಸೈಡ್ ಮತ್ತು ಬೆಚ್ಚಗಿನ ತಾಪಮಾನದ ಅವಧಿಯಿಂದಲೂ ಅಸ್ತಿತ್ವದಲ್ಲಿದೆ ಎಂದು ಕಂಡುಹಿಡಿದಿದೆ.

ಅಮಿತಾಬ್ ಬಚ್ಚನ್ ಸುಳ್ಳು ವಾದಗಳನ್ನು ಮಂಡಿಸುವ ಪೋಸ್ಟ್ ಮಾಡುವುದು ಇದೇ ಮೊದಲ ಬಾರಿಯಲ್ಲ. ಈ ಹಿಂದೆ ಅವರು ಗೀತರಚನೆಕಾರ ಮತ್ತು ಕವಿ ಪ್ರಸೂನ್ ಜೋಶಿ ಬರೆದ ಕವಿತೆಯೊಂದನ್ನು ತಮ್ಮ ತಂದೆ, ಕವಿ ಹರಿವನ್ಶ್ ರಾಯ್ ಬಚ್ಚನ್ ಅವರು ಬರೆದದ್ದು ಎಂದು ಸುಳ್ಳು ಬರೆದಿದ್ದರು. ನಂತರದ ಟ್ವೀಟ್‌ನಲ್ಲಿ ಆದ ಪ್ರಮಾದವನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದರು.

ಅಲ್ಲದೇ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ನರೇಂದ್ರ ಮೋದಿಯವರು ಚಪ್ಪಾಳೆ ತಟ್ಟಲು, ತಟ್ಟೆ ಬಡಿಯಲು ಸೂಚಿಸಿದ್ದರು. ಆಗ ಅಮಿತಾಬ್ ಬಚ್ಚನ್‌ರವರು ಈ ಶಬ್ದಗಳಿಂದ ಉಂಟಾಗುವ ತರಂಗಗಳಿಂದ ಕೊರೊನಾ ವೈರಸ್ ಸಾಯುತ್ತದೆ ಎಂದು ಟ್ವೀಟ್‌ ಮಾಡಿದ್ದೆರು. ನೆಟ್ಟಿಗರು ಇದರ ವಿರುದ್ಧ ಕಿಡಿಕಾರಿದಾಗ ಅವರು ಟ್ವೀಟ್ ಡಿಲೀಟ್ ಮಾಡಿದ್ದರು.

ನಮ್ಮ ಮಾನ್ಸೂನ್ ಕೇವಲ 40 ಮಿಲಿಯನ್ ವರ್ಷಗಳಷ್ಟು ಹಳೆಯದಾಗಿದೆ. ಅಮಿತಾಬ್ ಬಚ್ಚನ್ ಅವರ ಟ್ವೀಟ್‌‌ನಲ್ಲಿನ ಮಾನ್ಸೂನ್ 400 ವರ್ಷಗಳಷ್ಟು ಹಳೆಯದು ಎಂಬ ಮಾಹಿತಿ ತಪ್ಪಾಗಿದೆ.


ಓದಿ: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ ವರದಿ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...