Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ’ಮಾನ್ಸೂನ್’ ಬಗ್ಗೆ ತಪ್ಪು ಮಾಹಿತಿ ನೀಡಿದ ಅಮಿತಾಬ್‌ ಬಚ್ಚನ್‌!

ಫ್ಯಾಕ್ಟ್‌‌ಚೆಕ್‌: ’ಮಾನ್ಸೂನ್’ ಬಗ್ಗೆ ತಪ್ಪು ಮಾಹಿತಿ ನೀಡಿದ ಅಮಿತಾಬ್‌ ಬಚ್ಚನ್‌!

ಶಬ್ದಗಳಿಂದ ಉಂಟಾಗುವ ತರಂಗಗಳಿಂದ ಕೊರೊನಾ ವೈರಸ್ ಸಾಯುತ್ತದೆ ಎಂದು ಟ್ವೀಟ್‌ ಮಾಡಿದ್ದೆರು. ನೆಟ್ಟಿಗರು ಇದರ ವಿರುದ್ಧ ಕಿಡಿಕಾರಿದಾಗ ಅವರು ಟ್ವೀಟ್ ಡಿಲೀಟ್ ಮಾಡಿದ್ದರು.

- Advertisement -
- Advertisement -

ಟ್ವಿಟ್ಟರ್‌ನಲ್ಲಿ 4.38 ಕೋಟಿ ಅನುಯಾಯಿಗಳನ್ನು ಹೊಂದಿರುವ ಬಾಲಿವುಡ್ ಚಿತ್ರನಟ ಅಮಿತಾಬ್‌ ಬಚ್ಚನ್ ಗುರುವಾರ ರಾತ್ರಿ “ಮಾನ್ಸೂನ್ 400 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂದು ನಿಮಗೆ ತಿಳಿದಿದೆಯೇ? ಅದನ್ನು ಎಲ್ಲೋ ಓದಿದ ನೆನಪು.. ಆದರೆ ಅದನ್ನು ಹೇಗೆ ಮತ್ತು ಯಾರು ಲೆಕ್ಕ ಹಾಕಿದರು ..?” ಎಂದು ಟ್ವೇಟ್‌ ಮಾಡಿದ್ದಾರೆ.

ಅವರ ಈ ಪೋಸ್ಟ್ 2,100 ಬಾರಿ ರಿಟ್ವೀಟ್ ಮಾಡಲಾಗಿದ್ದು, 40,500 ಲೈಕ್‌‌ಗಳು ಪಡೆದಿದೆ. ಅದರ ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌‌ಚೆಕ್

ನಮ್ಮ ಮಾನ್ಸೂನ್ ಕೇವಲ 40 ಮಿಲಿಯನ್‌ಗಳಷ್ಟು ಹಳೆಯದಾಗಿದೆ. ನಟ ಅಮಿತಾಬ್‌ ಬಚ್ಚನ್ ಪ್ರಶ್ನಿಸಿರುವಂತೆ ನಮ್ಮ ಮಾನ್ಸೂನ್ 400 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂಬ ವಾದ ತಪ್ಪಾಗಿದೆ.

ವಿಶ್ವದ ಅತಿದೊಡ್ಡ ಹವಾಮಾನ ವ್ಯವಸ್ಥೆಗಳಲ್ಲಿ ಒಂದಾಗಿರುವ ಏಷ್ಯನ್ ಮಾನ್ಸೂನ್ 40 ಮಿಲಿಯನ್‌ ವರ್ಷಗಳಷ್ಟು ಹಳೆಯದು ಎಂದು ಅಂತರರಾಷ್ಟ್ರೀಯ ಸಂಶೋಧನಾ ತಂಡದ ಹೊಸ ಅಧ್ಯಯನವು ಕಂಡುಹಿಡಿದಿದೆ ಎಂದು ಸೈನ್ಸ್ ಡೈಲಿ ಎಂಬ ವಿಜ್ಞಾನ ವೆಬ್‌ಸೈಟ್‌ ಮಾಹಿತಿ ನೀಡುತ್ತದೆ.

ಈ ಹಿಂದೆ, ಟಿಬೆಟಿಯನ್ ಪ್ರಸ್ಥಭೂಮಿ ಮತ್ತು ಹಿಮಾಲಯ ಪರ್ವತಗಳು ಖಂಡಾಂತರ ಚಲನೆಯಿಂದ ಮೇಲೆದ್ದ ಪರಿಣಾಮವಾಗಿ ಮಾನ್ಸೂನ್ 22-25 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂದು ವಿಜ್ಞಾನಿಗಳು ನಂಬಿದ್ದರು. ಆದರೆ ಹೊಸ ಅಧ್ಯಯನಗಳು ಏಷ್ಯಾದ ಮಾನ್ಸೂನ್ 40 ಮಿಲಿಯನ್ ವರ್ಷಗಳಷ್ಟು ಹಿಂದೆ ವಾತಾವರಣದಲ್ಲಿ ಇಂಗಾಲದ ಡೈಆಕ್ಸೈಡ್ ಮತ್ತು ಬೆಚ್ಚಗಿನ ತಾಪಮಾನದ ಅವಧಿಯಿಂದಲೂ ಅಸ್ತಿತ್ವದಲ್ಲಿದೆ ಎಂದು ಕಂಡುಹಿಡಿದಿದೆ.

ಅಮಿತಾಬ್ ಬಚ್ಚನ್ ಸುಳ್ಳು ವಾದಗಳನ್ನು ಮಂಡಿಸುವ ಪೋಸ್ಟ್ ಮಾಡುವುದು ಇದೇ ಮೊದಲ ಬಾರಿಯಲ್ಲ. ಈ ಹಿಂದೆ ಅವರು ಗೀತರಚನೆಕಾರ ಮತ್ತು ಕವಿ ಪ್ರಸೂನ್ ಜೋಶಿ ಬರೆದ ಕವಿತೆಯೊಂದನ್ನು ತಮ್ಮ ತಂದೆ, ಕವಿ ಹರಿವನ್ಶ್ ರಾಯ್ ಬಚ್ಚನ್ ಅವರು ಬರೆದದ್ದು ಎಂದು ಸುಳ್ಳು ಬರೆದಿದ್ದರು. ನಂತರದ ಟ್ವೀಟ್‌ನಲ್ಲಿ ಆದ ಪ್ರಮಾದವನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದರು.

ಅಲ್ಲದೇ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ನರೇಂದ್ರ ಮೋದಿಯವರು ಚಪ್ಪಾಳೆ ತಟ್ಟಲು, ತಟ್ಟೆ ಬಡಿಯಲು ಸೂಚಿಸಿದ್ದರು. ಆಗ ಅಮಿತಾಬ್ ಬಚ್ಚನ್‌ರವರು ಈ ಶಬ್ದಗಳಿಂದ ಉಂಟಾಗುವ ತರಂಗಗಳಿಂದ ಕೊರೊನಾ ವೈರಸ್ ಸಾಯುತ್ತದೆ ಎಂದು ಟ್ವೀಟ್‌ ಮಾಡಿದ್ದೆರು. ನೆಟ್ಟಿಗರು ಇದರ ವಿರುದ್ಧ ಕಿಡಿಕಾರಿದಾಗ ಅವರು ಟ್ವೀಟ್ ಡಿಲೀಟ್ ಮಾಡಿದ್ದರು.

ನಮ್ಮ ಮಾನ್ಸೂನ್ ಕೇವಲ 40 ಮಿಲಿಯನ್ ವರ್ಷಗಳಷ್ಟು ಹಳೆಯದಾಗಿದೆ. ಅಮಿತಾಬ್ ಬಚ್ಚನ್ ಅವರ ಟ್ವೀಟ್‌‌ನಲ್ಲಿನ ಮಾನ್ಸೂನ್ 400 ವರ್ಷಗಳಷ್ಟು ಹಳೆಯದು ಎಂಬ ಮಾಹಿತಿ ತಪ್ಪಾಗಿದೆ.


ಓದಿ: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ ವರದಿ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...