Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ’ಮಾನ್ಸೂನ್’ ಬಗ್ಗೆ ತಪ್ಪು ಮಾಹಿತಿ ನೀಡಿದ ಅಮಿತಾಬ್‌ ಬಚ್ಚನ್‌!

ಫ್ಯಾಕ್ಟ್‌‌ಚೆಕ್‌: ’ಮಾನ್ಸೂನ್’ ಬಗ್ಗೆ ತಪ್ಪು ಮಾಹಿತಿ ನೀಡಿದ ಅಮಿತಾಬ್‌ ಬಚ್ಚನ್‌!

ಶಬ್ದಗಳಿಂದ ಉಂಟಾಗುವ ತರಂಗಗಳಿಂದ ಕೊರೊನಾ ವೈರಸ್ ಸಾಯುತ್ತದೆ ಎಂದು ಟ್ವೀಟ್‌ ಮಾಡಿದ್ದೆರು. ನೆಟ್ಟಿಗರು ಇದರ ವಿರುದ್ಧ ಕಿಡಿಕಾರಿದಾಗ ಅವರು ಟ್ವೀಟ್ ಡಿಲೀಟ್ ಮಾಡಿದ್ದರು.

- Advertisement -
- Advertisement -

ಟ್ವಿಟ್ಟರ್‌ನಲ್ಲಿ 4.38 ಕೋಟಿ ಅನುಯಾಯಿಗಳನ್ನು ಹೊಂದಿರುವ ಬಾಲಿವುಡ್ ಚಿತ್ರನಟ ಅಮಿತಾಬ್‌ ಬಚ್ಚನ್ ಗುರುವಾರ ರಾತ್ರಿ “ಮಾನ್ಸೂನ್ 400 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂದು ನಿಮಗೆ ತಿಳಿದಿದೆಯೇ? ಅದನ್ನು ಎಲ್ಲೋ ಓದಿದ ನೆನಪು.. ಆದರೆ ಅದನ್ನು ಹೇಗೆ ಮತ್ತು ಯಾರು ಲೆಕ್ಕ ಹಾಕಿದರು ..?” ಎಂದು ಟ್ವೇಟ್‌ ಮಾಡಿದ್ದಾರೆ.

ಅವರ ಈ ಪೋಸ್ಟ್ 2,100 ಬಾರಿ ರಿಟ್ವೀಟ್ ಮಾಡಲಾಗಿದ್ದು, 40,500 ಲೈಕ್‌‌ಗಳು ಪಡೆದಿದೆ. ಅದರ ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌‌ಚೆಕ್

ನಮ್ಮ ಮಾನ್ಸೂನ್ ಕೇವಲ 40 ಮಿಲಿಯನ್‌ಗಳಷ್ಟು ಹಳೆಯದಾಗಿದೆ. ನಟ ಅಮಿತಾಬ್‌ ಬಚ್ಚನ್ ಪ್ರಶ್ನಿಸಿರುವಂತೆ ನಮ್ಮ ಮಾನ್ಸೂನ್ 400 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂಬ ವಾದ ತಪ್ಪಾಗಿದೆ.

ವಿಶ್ವದ ಅತಿದೊಡ್ಡ ಹವಾಮಾನ ವ್ಯವಸ್ಥೆಗಳಲ್ಲಿ ಒಂದಾಗಿರುವ ಏಷ್ಯನ್ ಮಾನ್ಸೂನ್ 40 ಮಿಲಿಯನ್‌ ವರ್ಷಗಳಷ್ಟು ಹಳೆಯದು ಎಂದು ಅಂತರರಾಷ್ಟ್ರೀಯ ಸಂಶೋಧನಾ ತಂಡದ ಹೊಸ ಅಧ್ಯಯನವು ಕಂಡುಹಿಡಿದಿದೆ ಎಂದು ಸೈನ್ಸ್ ಡೈಲಿ ಎಂಬ ವಿಜ್ಞಾನ ವೆಬ್‌ಸೈಟ್‌ ಮಾಹಿತಿ ನೀಡುತ್ತದೆ.

ಈ ಹಿಂದೆ, ಟಿಬೆಟಿಯನ್ ಪ್ರಸ್ಥಭೂಮಿ ಮತ್ತು ಹಿಮಾಲಯ ಪರ್ವತಗಳು ಖಂಡಾಂತರ ಚಲನೆಯಿಂದ ಮೇಲೆದ್ದ ಪರಿಣಾಮವಾಗಿ ಮಾನ್ಸೂನ್ 22-25 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂದು ವಿಜ್ಞಾನಿಗಳು ನಂಬಿದ್ದರು. ಆದರೆ ಹೊಸ ಅಧ್ಯಯನಗಳು ಏಷ್ಯಾದ ಮಾನ್ಸೂನ್ 40 ಮಿಲಿಯನ್ ವರ್ಷಗಳಷ್ಟು ಹಿಂದೆ ವಾತಾವರಣದಲ್ಲಿ ಇಂಗಾಲದ ಡೈಆಕ್ಸೈಡ್ ಮತ್ತು ಬೆಚ್ಚಗಿನ ತಾಪಮಾನದ ಅವಧಿಯಿಂದಲೂ ಅಸ್ತಿತ್ವದಲ್ಲಿದೆ ಎಂದು ಕಂಡುಹಿಡಿದಿದೆ.

ಅಮಿತಾಬ್ ಬಚ್ಚನ್ ಸುಳ್ಳು ವಾದಗಳನ್ನು ಮಂಡಿಸುವ ಪೋಸ್ಟ್ ಮಾಡುವುದು ಇದೇ ಮೊದಲ ಬಾರಿಯಲ್ಲ. ಈ ಹಿಂದೆ ಅವರು ಗೀತರಚನೆಕಾರ ಮತ್ತು ಕವಿ ಪ್ರಸೂನ್ ಜೋಶಿ ಬರೆದ ಕವಿತೆಯೊಂದನ್ನು ತಮ್ಮ ತಂದೆ, ಕವಿ ಹರಿವನ್ಶ್ ರಾಯ್ ಬಚ್ಚನ್ ಅವರು ಬರೆದದ್ದು ಎಂದು ಸುಳ್ಳು ಬರೆದಿದ್ದರು. ನಂತರದ ಟ್ವೀಟ್‌ನಲ್ಲಿ ಆದ ಪ್ರಮಾದವನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದರು.

ಅಲ್ಲದೇ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ನರೇಂದ್ರ ಮೋದಿಯವರು ಚಪ್ಪಾಳೆ ತಟ್ಟಲು, ತಟ್ಟೆ ಬಡಿಯಲು ಸೂಚಿಸಿದ್ದರು. ಆಗ ಅಮಿತಾಬ್ ಬಚ್ಚನ್‌ರವರು ಈ ಶಬ್ದಗಳಿಂದ ಉಂಟಾಗುವ ತರಂಗಗಳಿಂದ ಕೊರೊನಾ ವೈರಸ್ ಸಾಯುತ್ತದೆ ಎಂದು ಟ್ವೀಟ್‌ ಮಾಡಿದ್ದೆರು. ನೆಟ್ಟಿಗರು ಇದರ ವಿರುದ್ಧ ಕಿಡಿಕಾರಿದಾಗ ಅವರು ಟ್ವೀಟ್ ಡಿಲೀಟ್ ಮಾಡಿದ್ದರು.

ನಮ್ಮ ಮಾನ್ಸೂನ್ ಕೇವಲ 40 ಮಿಲಿಯನ್ ವರ್ಷಗಳಷ್ಟು ಹಳೆಯದಾಗಿದೆ. ಅಮಿತಾಬ್ ಬಚ್ಚನ್ ಅವರ ಟ್ವೀಟ್‌‌ನಲ್ಲಿನ ಮಾನ್ಸೂನ್ 400 ವರ್ಷಗಳಷ್ಟು ಹಳೆಯದು ಎಂಬ ಮಾಹಿತಿ ತಪ್ಪಾಗಿದೆ.


ಓದಿ: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ ವರದಿ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...