Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ’ಮಾನ್ಸೂನ್’ ಬಗ್ಗೆ ತಪ್ಪು ಮಾಹಿತಿ ನೀಡಿದ ಅಮಿತಾಬ್‌ ಬಚ್ಚನ್‌!

ಫ್ಯಾಕ್ಟ್‌‌ಚೆಕ್‌: ’ಮಾನ್ಸೂನ್’ ಬಗ್ಗೆ ತಪ್ಪು ಮಾಹಿತಿ ನೀಡಿದ ಅಮಿತಾಬ್‌ ಬಚ್ಚನ್‌!

ಶಬ್ದಗಳಿಂದ ಉಂಟಾಗುವ ತರಂಗಗಳಿಂದ ಕೊರೊನಾ ವೈರಸ್ ಸಾಯುತ್ತದೆ ಎಂದು ಟ್ವೀಟ್‌ ಮಾಡಿದ್ದೆರು. ನೆಟ್ಟಿಗರು ಇದರ ವಿರುದ್ಧ ಕಿಡಿಕಾರಿದಾಗ ಅವರು ಟ್ವೀಟ್ ಡಿಲೀಟ್ ಮಾಡಿದ್ದರು.

- Advertisement -
- Advertisement -

ಟ್ವಿಟ್ಟರ್‌ನಲ್ಲಿ 4.38 ಕೋಟಿ ಅನುಯಾಯಿಗಳನ್ನು ಹೊಂದಿರುವ ಬಾಲಿವುಡ್ ಚಿತ್ರನಟ ಅಮಿತಾಬ್‌ ಬಚ್ಚನ್ ಗುರುವಾರ ರಾತ್ರಿ “ಮಾನ್ಸೂನ್ 400 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂದು ನಿಮಗೆ ತಿಳಿದಿದೆಯೇ? ಅದನ್ನು ಎಲ್ಲೋ ಓದಿದ ನೆನಪು.. ಆದರೆ ಅದನ್ನು ಹೇಗೆ ಮತ್ತು ಯಾರು ಲೆಕ್ಕ ಹಾಕಿದರು ..?” ಎಂದು ಟ್ವೇಟ್‌ ಮಾಡಿದ್ದಾರೆ.

ಅವರ ಈ ಪೋಸ್ಟ್ 2,100 ಬಾರಿ ರಿಟ್ವೀಟ್ ಮಾಡಲಾಗಿದ್ದು, 40,500 ಲೈಕ್‌‌ಗಳು ಪಡೆದಿದೆ. ಅದರ ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌‌ಚೆಕ್

ನಮ್ಮ ಮಾನ್ಸೂನ್ ಕೇವಲ 40 ಮಿಲಿಯನ್‌ಗಳಷ್ಟು ಹಳೆಯದಾಗಿದೆ. ನಟ ಅಮಿತಾಬ್‌ ಬಚ್ಚನ್ ಪ್ರಶ್ನಿಸಿರುವಂತೆ ನಮ್ಮ ಮಾನ್ಸೂನ್ 400 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂಬ ವಾದ ತಪ್ಪಾಗಿದೆ.

ವಿಶ್ವದ ಅತಿದೊಡ್ಡ ಹವಾಮಾನ ವ್ಯವಸ್ಥೆಗಳಲ್ಲಿ ಒಂದಾಗಿರುವ ಏಷ್ಯನ್ ಮಾನ್ಸೂನ್ 40 ಮಿಲಿಯನ್‌ ವರ್ಷಗಳಷ್ಟು ಹಳೆಯದು ಎಂದು ಅಂತರರಾಷ್ಟ್ರೀಯ ಸಂಶೋಧನಾ ತಂಡದ ಹೊಸ ಅಧ್ಯಯನವು ಕಂಡುಹಿಡಿದಿದೆ ಎಂದು ಸೈನ್ಸ್ ಡೈಲಿ ಎಂಬ ವಿಜ್ಞಾನ ವೆಬ್‌ಸೈಟ್‌ ಮಾಹಿತಿ ನೀಡುತ್ತದೆ.

ಈ ಹಿಂದೆ, ಟಿಬೆಟಿಯನ್ ಪ್ರಸ್ಥಭೂಮಿ ಮತ್ತು ಹಿಮಾಲಯ ಪರ್ವತಗಳು ಖಂಡಾಂತರ ಚಲನೆಯಿಂದ ಮೇಲೆದ್ದ ಪರಿಣಾಮವಾಗಿ ಮಾನ್ಸೂನ್ 22-25 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂದು ವಿಜ್ಞಾನಿಗಳು ನಂಬಿದ್ದರು. ಆದರೆ ಹೊಸ ಅಧ್ಯಯನಗಳು ಏಷ್ಯಾದ ಮಾನ್ಸೂನ್ 40 ಮಿಲಿಯನ್ ವರ್ಷಗಳಷ್ಟು ಹಿಂದೆ ವಾತಾವರಣದಲ್ಲಿ ಇಂಗಾಲದ ಡೈಆಕ್ಸೈಡ್ ಮತ್ತು ಬೆಚ್ಚಗಿನ ತಾಪಮಾನದ ಅವಧಿಯಿಂದಲೂ ಅಸ್ತಿತ್ವದಲ್ಲಿದೆ ಎಂದು ಕಂಡುಹಿಡಿದಿದೆ.

ಅಮಿತಾಬ್ ಬಚ್ಚನ್ ಸುಳ್ಳು ವಾದಗಳನ್ನು ಮಂಡಿಸುವ ಪೋಸ್ಟ್ ಮಾಡುವುದು ಇದೇ ಮೊದಲ ಬಾರಿಯಲ್ಲ. ಈ ಹಿಂದೆ ಅವರು ಗೀತರಚನೆಕಾರ ಮತ್ತು ಕವಿ ಪ್ರಸೂನ್ ಜೋಶಿ ಬರೆದ ಕವಿತೆಯೊಂದನ್ನು ತಮ್ಮ ತಂದೆ, ಕವಿ ಹರಿವನ್ಶ್ ರಾಯ್ ಬಚ್ಚನ್ ಅವರು ಬರೆದದ್ದು ಎಂದು ಸುಳ್ಳು ಬರೆದಿದ್ದರು. ನಂತರದ ಟ್ವೀಟ್‌ನಲ್ಲಿ ಆದ ಪ್ರಮಾದವನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದರು.

ಅಲ್ಲದೇ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ನರೇಂದ್ರ ಮೋದಿಯವರು ಚಪ್ಪಾಳೆ ತಟ್ಟಲು, ತಟ್ಟೆ ಬಡಿಯಲು ಸೂಚಿಸಿದ್ದರು. ಆಗ ಅಮಿತಾಬ್ ಬಚ್ಚನ್‌ರವರು ಈ ಶಬ್ದಗಳಿಂದ ಉಂಟಾಗುವ ತರಂಗಗಳಿಂದ ಕೊರೊನಾ ವೈರಸ್ ಸಾಯುತ್ತದೆ ಎಂದು ಟ್ವೀಟ್‌ ಮಾಡಿದ್ದೆರು. ನೆಟ್ಟಿಗರು ಇದರ ವಿರುದ್ಧ ಕಿಡಿಕಾರಿದಾಗ ಅವರು ಟ್ವೀಟ್ ಡಿಲೀಟ್ ಮಾಡಿದ್ದರು.

ನಮ್ಮ ಮಾನ್ಸೂನ್ ಕೇವಲ 40 ಮಿಲಿಯನ್ ವರ್ಷಗಳಷ್ಟು ಹಳೆಯದಾಗಿದೆ. ಅಮಿತಾಬ್ ಬಚ್ಚನ್ ಅವರ ಟ್ವೀಟ್‌‌ನಲ್ಲಿನ ಮಾನ್ಸೂನ್ 400 ವರ್ಷಗಳಷ್ಟು ಹಳೆಯದು ಎಂಬ ಮಾಹಿತಿ ತಪ್ಪಾಗಿದೆ.


ಓದಿ: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ ವರದಿ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...