Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

- Advertisement -
- Advertisement -

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರಿಗೆ, ರಾಜ್ಯದ ವಯೋವೃದ್ದನೋರ್ವ ‘ಛೀಮಾರಿ’ ಹಾಕುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. 14 ಸೆಕೆಂಡಿನ ಈ ವಿಡಿಯೊದಲ್ಲಿ ಅಖಿಲೇಶ್‌ ಯಾದವ್‌ ಅವರು ಕಾಣಿಸಿಕೊಂಡಿದ್ದು, ವಯಸ್ಸಾದ ವ್ಯಕ್ತಿಯೊಬ್ಬರು ಅವರ ಜೊತೆಗೆ ಮಾತನಾಡುವುದು ಕೇಳಿಸುತ್ತದೆ.

ಹಿಂದಿ ಹಾಗೂ ಕನ್ನಡ ಸಂದೇಶದೊಂದಿಗೆ ಈ ವಿಡಿಯೊ ವೈರಲ್‌ ಆಗಿದೆ. “ನೀನು ಹೋಗು, ಮಸೀದಿ ಕಟ್ಟಿಸು, ಇಡೀ ಪ್ರದೇಶದಿಂದ ನಿನಗೆ ಒಂದು ಮತವನ್ನೂ ನಾವು ಕೊಡುವುದಿಲ್ಲ” ಎಂದು ವೃದ್ದ ವ್ಯಕ್ತಿ ಅಖಿಲೇಶ್ ಯಾದವ್‌ ಅವರಿಗೆ ಹೇಳಿದ್ದಾರೆ ಎಂದು ಕನ್ನಡದಲ್ಲಿ ವೈರಲ್ ಆಗಿದೆ. ಈ ವೈರಲ್ ಪೋಸ್ಟ್‌ “ಅಖಿಲೇಶ್‌ ಯಾದವ್‌ಗೆ ಮಂಗಳಾರತಿ” ಮಾಡಲಾಗಿದೆ ಎಂದು ಪ್ರತಿಪಾದಿಸುತ್ತದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಈ ವಿಡಿಯೊವನ್ನು ಬಿಜೆಪಿ ಬೆಂಬಲಿಗ ಸಂತೋಷ್‌ ಕೆಂಚಾಂಬ ಎಂಬ ವ್ಯಕ್ತಿ ಸೇರಿದಂತೆ, ಇನ್ನೂ ಹಲವಾರು ಜನರು ಹಂಚಿಕೊಂಡಿದ್ದಾರೆ. ಈ ಮೂಲಕ ಈ ವಿಡಿಯೊವನ್ನು ಸಾವಿರಾರು ಜನರು ಹಂಚಿಕೊಂಡಿದ್ದಾರೆ ಮತ್ತು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಟ್ವಿಟರ್‌ನಲ್ಲೂ ಈ ವಿಡಿಯೊ ಅದೇ ಪ್ರತಿಪಾದನೆಯೊಂದಿಗೆ ಕನ್ನಡ ಸಂದೇಶದೊಂದಿಗೆ ಹಂಚಿಕೊಂಡಿರುವುದನ್ನು ಇಲ್ಲಿ ನೋಡಬಹುದು.

ಇಷ್ಟೇ ಅಲ್ಲದೆ ಹಿಂದಿ ಭಾಷೆಯಲ್ಲೂ ಈ ವಿಡಿಯೊ ವೈರಲ್ ಆಗಿದೆ. ದೆಹಲಿ ಬಿಜೆಪಿಯ ಉಪಾಧ್ಯಕ್ಷ ಸುನಿಲ್ ಯಾದವ್‌ ಅವರು, “ವಯೋವೃದ್ಧ ವ್ಯಕ್ತಿ ಅಖಿಲೇಶ್ ಯಾದವ್ ಅವರಿಗೆ ವೋಟ್ ಇಲ್ಲ, ವೋಟ್ ಇಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ” ಎಂಬ ಪ್ರತಿಪಾದನೆಯೊಂದಿಗೆ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನ್ನಡದಲ್ಲಿ ವೈರಲ್ ಆಗಿರುವಂತೆಯೇ ಹಿಂದಿಯಲ್ಲಿ ಕೂಡಾ, “ನೀವು ಮಸೀದಿ ಮಾಡಲು ಹೋಗುತ್ತೀರಿ, ಇಡೀ ಪ್ರದೇಶದ ಯಾರೂ ನಿಮಗೆ ಮತ ನೀಡುವುದಿಲ್ಲ” ಎಂದು ವಯೋವೃದ್ದ ವ್ಯಕ್ತಿ ಅಖಿಲೇಶ್‌ಗೆ ಛೀಮಾರಿ ಹಾಕಿದ್ದಾರೆ ಎಂದು ವೈರಲ್ ಆಗಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಟ್ವಿಟರ್‌ನಲ್ಲಿ ಹಲವು ಜನರು ಹಂಚಿಕೊಂಡಿದ್ದಾರೆ. ಜೊತೆಗೆ ಫೇಸ್‌ಬುಕ್‌ ಅಲ್ಲೂ ಈ ವಿಡಿಯೊ ವೈರಲ್ ಆಗಿದೆ. ಅದಲ್ಲಿ ಇಲ್ಲಿ, ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಜಿಲ್ಲಾಧಿಕಾರಿ ಏಕೆ ಮೇಕಪ್‌ ಮಾಡಿಲ್ಲ?’- ಮನಕಲಕುವ ಕತೆ ಹಿಂದಿನ ವಾಸ್ತವವೇನು?

ಫ್ಯಾಕ್ಟ್‌ಚೆಕ್

ಒಟ್ಟಿನಲ್ಲಿ ನೋಡುವುದಾದರೆ, ‘ಅಖಿಲೇಶ್ ಯಾದವ್‌ ಅವರಿಗೆ ಯುಪಿಯಲ್ಲಿ ವೃದ್ದರೊಬ್ಬರು ಛೀಮಾರಿ ಹಾಕಿದ್ದಾರೆ’ ಎಂಬ ಪ್ರತಿಪಾದನೆಯೊಂದಿಗೆ 14 ಸೆಕೆಂಡಿನ ಈ ವಿಡಿಯೊವನ್ನು ವೈರಲ್ ಮಾಡಿರುವವರಲ್ಲಿ ಹೆಚ್ಚಿನ ಜನರು ಬಿಜೆಪಿ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ.

ನಾನುಗೌರಿ.ಕಾಂ ಈ ವಿಡಿಯೊದ ಸ್ಕ್ರೀನ್‌ ಶಾರ್ಟ್ ಬಳಿಸಿ ರಿವರ್ಸ್ ಸರ್ಚ್ ಮಾಡಿದಾಗ, ವೈರಲ್ ವಿಡಿಯೊದ ಧೀರ್ಘ ವಿಡಿಯೊ ಲಭ್ಯವಾಗಿದೆ. ಈ ವಿಡಿಯೊ 1:04 ಸೆಕೆಂಡ್‌ ಇದೆ.

ಈ ವಿಡಿಯೊ, ಉತ್ತರ ಪ್ರದೇಶದ ಚುನಾವಣೆ ಪ್ರಯುಕ್ತ ಅಖಿಲೇಶ್‌ ಯಾದವ್ ಮನೆ ಮನೆ ಪ್ರಚಾರದ ಸಮಯದಲ್ಲಿ ಮಾಡಿರುವ ವಿಡಿಯೊ ಎಂದು ತೋರುತ್ತಿದೆ. ಆದರೆ ಈ ವಿಡಿಯೊ ಯಾವಾಗ ರೆಕಾರ್ಡ್ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. ಅವರು ಮಾತನಾಡುತ್ತಾ ಇರುವ ಸಂಧರ್ಭದಲ್ಲಿ ಹಲವಾರು ಜನರು ಅವರ ಸುತ್ತುವರೆದು ಮಾತನಾಡುತ್ತಿದ್ದಾರೆ.

ಅಖಿಲೇಶ್ ಯಾದವ್ ಅವರು ಅಲ್ಲಿ ನೆರೆದಿರುವ ಜನರೊಂದಿಗೆ ಮಾತನಾಡುತ್ತಾ, “ಜನರು ಏನು ಯೋಚಿಸುತ್ತಿದ್ದಾರೆ” ಎಂದು ಪ್ರಶ್ನಿಸುತ್ತಾರೆ. ಜೊತೆಗೆ, ಜನರು ಚೆನ್ನಾಗಿದ್ದಾರೆಯೆ? ರಸ್ತೆ ಮತ್ತು ಹೆದ್ದಾರಿ ಚೆನ್ನಾಗಿದೆಯೆ ಎಂದು ಕೇಳುತ್ತಾರೆ.

ಈ ವೇಳೆ ವಯೋವೃದ್ದಎಂದು ತೋರುವ ವ್ಯಕ್ತಿಯೊಬ್ಬರು, “ಮಗನೇ, ಮೊದಲು ಮಿಷಿನ್(EVM) ಅನ್ನು ಸುಟ್ಟು ಹಾಕು” ಎಂದು ಹೇಳುತ್ತಾರೆ. ವಿಡಿಯೊದಲ್ಲಿ ವ್ಯಕ್ತಿ ಕಾಣಿಸುವುದಿಲ್ಲ. ಕೇವಲ ಕೈಗಳಷ್ಟೇ ಕಾಣುತ್ತದೆ.

ಈ ಸಮಯದಲ್ಲಿ ಅಖಿಲೇಶ್ ಯಾದವ್ ಅವರು, “ಈ ಹಿಂದೆ ಅವರು ಚುನಾವಣಾ ಬೂತ್‌ಗಳನ್ನು ಗಲಾಟೆ ಮಾಡಿ ವಶಕ್ಕೆ ಪಡೆಯುತ್ತಿದ್ದರು. ಈಗ ಬಿಜೆಪಿಯವರು ಅದನ್ನು ಬೇರೆಯೆ ರೀತಿಯಲ್ಲಿ ತಂತ್ರಪೂರ್ವಕವಾಗಿ ಮಾಡುತ್ತಿದ್ದಾರೆ” ಎಂದು ಹೇಳುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ಇದರ ನಂತರ ಅಖಿಲೇಶ್‌ ಅವರನ್ನು ಉದ್ದೇಶಿಸಿ ಮತ್ತೇ ಮಾತನಾಡುವ ವಯೋವೃದ್ಧ, “ನಾನು ನಿಮಗೆ ಹೇಳುತ್ತಿದ್ದೇನೆ. ಇಲ್ಲಿ ಒಂದು ಓಟು ಕೂಡಾ ಇಲ್ಲ, ಎಲ್ಲಾ ಓಟು ಕೂಡಾ ಮಿಷಿನ್‌(EVM)ಗೆ ಹೋಗುತ್ತಿದೆ. ನೀವು ಮಿಷಿನ್‌(EVM) ಬದಲಾಯಿಸದೆ, ಜನರ ಸರ್ಕಾರ ಬರುವುದಿಲ್ಲ, ಬರುವುದಿಲ್ಲ, ಬರುವುದಿಲ್ಲ” ಎಂದು ಹೇಳುತ್ತಾರೆ.

ಈ ವೇಳೆ ಅಖಿಲೇಶ್‌ ಯಾದವ್‌, “ಇದು ನಿಜವೇ” ಎಂದು ಕೇಳುತ್ತಾರೆ. ಅದಕ್ಕೆ ವಯೋವೃದ್ದ , “ಮಿಷಿನ್(EVM) ಬದಲಾಯಿಸಿ, ಒಂದೇ ಬಾರಿಗೆ ಎಲ್ಲಾ ಓಟುಗಳೂ ಬರುತ್ತದೆ” ಎಂದು ಹೇಳುತ್ತಾರೆ. ಇದರ ನಂತರ ವೃದ್ದ, ಪ್ರಧಾನಿ ಮೋದಿ ಅವರನ್ನು ಉಲ್ಲೇಖಿಸಿ ಅಶ್ಲೀಲ ಪದ ಉಲ್ಲೇಖಿಸುವಾಗ ಅಖಿಲೇಶ್‌ ಯಾದವ್‌ ಅವರು ಬಾಯಿಗೆ ಬೆರಳಿಟ್ಟು, ಹಾಗೆ ಹೇಳಬೇಡಿ ಎಂದು ಸೂಚಿಸುತ್ತಾರೆ.

ಪೂರ್ಣ ವಿಡಿಯೊ ನೋಡಿ

ವಾಸ್ತವದಲ್ಲಿ ಬಿಜೆಪಿ ಬೆಂಬಲಿಗರು ವೈರಲ್ ಮಾಡಿರುವ ವಿಡಿಯೊ 14 ಸೆಕೆಂಡ್‌ ಇದೆ. ಅದು ಅಸ್ಪಷ್ಟವಾಗಿದೆ. ಅದರಲ್ಲಿ ವಯೋವೃದ್ದ ಮಾತನಾಡುವುದು, “ಎಲ್ಲಾ ಓಟು ಕೂಡಾ ಮಿಷಿನ್‌(EVM)ಗೆ ಹೋಗುತ್ತಿದೆ. ನೀವು ಮಿಷಿನ್‌(EVM) ಬದಲಾಯಿಸದೆ, ಜನರ ಸರ್ಕಾರ ಬರುವುದಿಲ್ಲ, ಬರುವುದಿಲ್ಲ, ಬರುವುದಿಲ್ಲ” ಎಂದಾಗಿದೆ.

ಬಿಜೆಪಿ ಬೆಂಬಲಿಗರು ಪ್ರತಿಪಾದಿಸಿದಂತೆ, ವಯೋವೃದ್ದ ವ್ಯಕ್ತಿಯು ಈ ಇಡೀ ಸಂಭಾಷಣೆಯಲ್ಲಿ, ಮಸೀದಿಯ ಬಗ್ಗೆಯಾಗಲಿ, ನಿಮಗೆ ಓಟು ನೀಡುವುದಿಲ್ಲ ಎಂದಾಗಲಿ ಅಥವಾ ನಿಮ್ಮ ಸರ್ಕಾರ ಬರುವುದಿಲ್ಲ ಎಂದಾಗಲಿ ಹೇಳುವುದಿಲ್ಲ.

ಒಟ್ಟಿನಲ್ಲಿ ಹೇಳಬಹುದಾದರೆ, ಉತ್ತರ ಪ್ರದೇಶ ಚುನಾವಣಾ ಪ್ರಚಾರದ ಸಮಯದಲ್ಲಿ ಅಖಿಲೇಶ್ ಯಾದವ್‌ ಅವರಿಗೆ ವಿಡಿಯೊದಲ್ಲಿನ ವಯೋವೃದ್ದ ಛೀಮಾರಿ ಹಾಕಿಲ್ಲ. ಅವರು ಮಾತನಾಡಿದ್ದು ‘EVM’ ಮಿಷಿನ್ ಬಗ್ಗೆಯಾಗಿದ್ದು, ಅದನ್ನು ಬದಲಾಯಿಸಿ ಎಂದು ಅಖಿಲೇಶ್ ಜೊತೆಗೆ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...