Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

- Advertisement -
- Advertisement -

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರಿಗೆ, ರಾಜ್ಯದ ವಯೋವೃದ್ದನೋರ್ವ ‘ಛೀಮಾರಿ’ ಹಾಕುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. 14 ಸೆಕೆಂಡಿನ ಈ ವಿಡಿಯೊದಲ್ಲಿ ಅಖಿಲೇಶ್‌ ಯಾದವ್‌ ಅವರು ಕಾಣಿಸಿಕೊಂಡಿದ್ದು, ವಯಸ್ಸಾದ ವ್ಯಕ್ತಿಯೊಬ್ಬರು ಅವರ ಜೊತೆಗೆ ಮಾತನಾಡುವುದು ಕೇಳಿಸುತ್ತದೆ.

ಹಿಂದಿ ಹಾಗೂ ಕನ್ನಡ ಸಂದೇಶದೊಂದಿಗೆ ಈ ವಿಡಿಯೊ ವೈರಲ್‌ ಆಗಿದೆ. “ನೀನು ಹೋಗು, ಮಸೀದಿ ಕಟ್ಟಿಸು, ಇಡೀ ಪ್ರದೇಶದಿಂದ ನಿನಗೆ ಒಂದು ಮತವನ್ನೂ ನಾವು ಕೊಡುವುದಿಲ್ಲ” ಎಂದು ವೃದ್ದ ವ್ಯಕ್ತಿ ಅಖಿಲೇಶ್ ಯಾದವ್‌ ಅವರಿಗೆ ಹೇಳಿದ್ದಾರೆ ಎಂದು ಕನ್ನಡದಲ್ಲಿ ವೈರಲ್ ಆಗಿದೆ. ಈ ವೈರಲ್ ಪೋಸ್ಟ್‌ “ಅಖಿಲೇಶ್‌ ಯಾದವ್‌ಗೆ ಮಂಗಳಾರತಿ” ಮಾಡಲಾಗಿದೆ ಎಂದು ಪ್ರತಿಪಾದಿಸುತ್ತದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಈ ವಿಡಿಯೊವನ್ನು ಬಿಜೆಪಿ ಬೆಂಬಲಿಗ ಸಂತೋಷ್‌ ಕೆಂಚಾಂಬ ಎಂಬ ವ್ಯಕ್ತಿ ಸೇರಿದಂತೆ, ಇನ್ನೂ ಹಲವಾರು ಜನರು ಹಂಚಿಕೊಂಡಿದ್ದಾರೆ. ಈ ಮೂಲಕ ಈ ವಿಡಿಯೊವನ್ನು ಸಾವಿರಾರು ಜನರು ಹಂಚಿಕೊಂಡಿದ್ದಾರೆ ಮತ್ತು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಟ್ವಿಟರ್‌ನಲ್ಲೂ ಈ ವಿಡಿಯೊ ಅದೇ ಪ್ರತಿಪಾದನೆಯೊಂದಿಗೆ ಕನ್ನಡ ಸಂದೇಶದೊಂದಿಗೆ ಹಂಚಿಕೊಂಡಿರುವುದನ್ನು ಇಲ್ಲಿ ನೋಡಬಹುದು.

ಇಷ್ಟೇ ಅಲ್ಲದೆ ಹಿಂದಿ ಭಾಷೆಯಲ್ಲೂ ಈ ವಿಡಿಯೊ ವೈರಲ್ ಆಗಿದೆ. ದೆಹಲಿ ಬಿಜೆಪಿಯ ಉಪಾಧ್ಯಕ್ಷ ಸುನಿಲ್ ಯಾದವ್‌ ಅವರು, “ವಯೋವೃದ್ಧ ವ್ಯಕ್ತಿ ಅಖಿಲೇಶ್ ಯಾದವ್ ಅವರಿಗೆ ವೋಟ್ ಇಲ್ಲ, ವೋಟ್ ಇಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ” ಎಂಬ ಪ್ರತಿಪಾದನೆಯೊಂದಿಗೆ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನ್ನಡದಲ್ಲಿ ವೈರಲ್ ಆಗಿರುವಂತೆಯೇ ಹಿಂದಿಯಲ್ಲಿ ಕೂಡಾ, “ನೀವು ಮಸೀದಿ ಮಾಡಲು ಹೋಗುತ್ತೀರಿ, ಇಡೀ ಪ್ರದೇಶದ ಯಾರೂ ನಿಮಗೆ ಮತ ನೀಡುವುದಿಲ್ಲ” ಎಂದು ವಯೋವೃದ್ದ ವ್ಯಕ್ತಿ ಅಖಿಲೇಶ್‌ಗೆ ಛೀಮಾರಿ ಹಾಕಿದ್ದಾರೆ ಎಂದು ವೈರಲ್ ಆಗಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಟ್ವಿಟರ್‌ನಲ್ಲಿ ಹಲವು ಜನರು ಹಂಚಿಕೊಂಡಿದ್ದಾರೆ. ಜೊತೆಗೆ ಫೇಸ್‌ಬುಕ್‌ ಅಲ್ಲೂ ಈ ವಿಡಿಯೊ ವೈರಲ್ ಆಗಿದೆ. ಅದಲ್ಲಿ ಇಲ್ಲಿ, ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಜಿಲ್ಲಾಧಿಕಾರಿ ಏಕೆ ಮೇಕಪ್‌ ಮಾಡಿಲ್ಲ?’- ಮನಕಲಕುವ ಕತೆ ಹಿಂದಿನ ವಾಸ್ತವವೇನು?

ಫ್ಯಾಕ್ಟ್‌ಚೆಕ್

ಒಟ್ಟಿನಲ್ಲಿ ನೋಡುವುದಾದರೆ, ‘ಅಖಿಲೇಶ್ ಯಾದವ್‌ ಅವರಿಗೆ ಯುಪಿಯಲ್ಲಿ ವೃದ್ದರೊಬ್ಬರು ಛೀಮಾರಿ ಹಾಕಿದ್ದಾರೆ’ ಎಂಬ ಪ್ರತಿಪಾದನೆಯೊಂದಿಗೆ 14 ಸೆಕೆಂಡಿನ ಈ ವಿಡಿಯೊವನ್ನು ವೈರಲ್ ಮಾಡಿರುವವರಲ್ಲಿ ಹೆಚ್ಚಿನ ಜನರು ಬಿಜೆಪಿ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ.

ನಾನುಗೌರಿ.ಕಾಂ ಈ ವಿಡಿಯೊದ ಸ್ಕ್ರೀನ್‌ ಶಾರ್ಟ್ ಬಳಿಸಿ ರಿವರ್ಸ್ ಸರ್ಚ್ ಮಾಡಿದಾಗ, ವೈರಲ್ ವಿಡಿಯೊದ ಧೀರ್ಘ ವಿಡಿಯೊ ಲಭ್ಯವಾಗಿದೆ. ಈ ವಿಡಿಯೊ 1:04 ಸೆಕೆಂಡ್‌ ಇದೆ.

ಈ ವಿಡಿಯೊ, ಉತ್ತರ ಪ್ರದೇಶದ ಚುನಾವಣೆ ಪ್ರಯುಕ್ತ ಅಖಿಲೇಶ್‌ ಯಾದವ್ ಮನೆ ಮನೆ ಪ್ರಚಾರದ ಸಮಯದಲ್ಲಿ ಮಾಡಿರುವ ವಿಡಿಯೊ ಎಂದು ತೋರುತ್ತಿದೆ. ಆದರೆ ಈ ವಿಡಿಯೊ ಯಾವಾಗ ರೆಕಾರ್ಡ್ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. ಅವರು ಮಾತನಾಡುತ್ತಾ ಇರುವ ಸಂಧರ್ಭದಲ್ಲಿ ಹಲವಾರು ಜನರು ಅವರ ಸುತ್ತುವರೆದು ಮಾತನಾಡುತ್ತಿದ್ದಾರೆ.

ಅಖಿಲೇಶ್ ಯಾದವ್ ಅವರು ಅಲ್ಲಿ ನೆರೆದಿರುವ ಜನರೊಂದಿಗೆ ಮಾತನಾಡುತ್ತಾ, “ಜನರು ಏನು ಯೋಚಿಸುತ್ತಿದ್ದಾರೆ” ಎಂದು ಪ್ರಶ್ನಿಸುತ್ತಾರೆ. ಜೊತೆಗೆ, ಜನರು ಚೆನ್ನಾಗಿದ್ದಾರೆಯೆ? ರಸ್ತೆ ಮತ್ತು ಹೆದ್ದಾರಿ ಚೆನ್ನಾಗಿದೆಯೆ ಎಂದು ಕೇಳುತ್ತಾರೆ.

ಈ ವೇಳೆ ವಯೋವೃದ್ದಎಂದು ತೋರುವ ವ್ಯಕ್ತಿಯೊಬ್ಬರು, “ಮಗನೇ, ಮೊದಲು ಮಿಷಿನ್(EVM) ಅನ್ನು ಸುಟ್ಟು ಹಾಕು” ಎಂದು ಹೇಳುತ್ತಾರೆ. ವಿಡಿಯೊದಲ್ಲಿ ವ್ಯಕ್ತಿ ಕಾಣಿಸುವುದಿಲ್ಲ. ಕೇವಲ ಕೈಗಳಷ್ಟೇ ಕಾಣುತ್ತದೆ.

ಈ ಸಮಯದಲ್ಲಿ ಅಖಿಲೇಶ್ ಯಾದವ್ ಅವರು, “ಈ ಹಿಂದೆ ಅವರು ಚುನಾವಣಾ ಬೂತ್‌ಗಳನ್ನು ಗಲಾಟೆ ಮಾಡಿ ವಶಕ್ಕೆ ಪಡೆಯುತ್ತಿದ್ದರು. ಈಗ ಬಿಜೆಪಿಯವರು ಅದನ್ನು ಬೇರೆಯೆ ರೀತಿಯಲ್ಲಿ ತಂತ್ರಪೂರ್ವಕವಾಗಿ ಮಾಡುತ್ತಿದ್ದಾರೆ” ಎಂದು ಹೇಳುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ಇದರ ನಂತರ ಅಖಿಲೇಶ್‌ ಅವರನ್ನು ಉದ್ದೇಶಿಸಿ ಮತ್ತೇ ಮಾತನಾಡುವ ವಯೋವೃದ್ಧ, “ನಾನು ನಿಮಗೆ ಹೇಳುತ್ತಿದ್ದೇನೆ. ಇಲ್ಲಿ ಒಂದು ಓಟು ಕೂಡಾ ಇಲ್ಲ, ಎಲ್ಲಾ ಓಟು ಕೂಡಾ ಮಿಷಿನ್‌(EVM)ಗೆ ಹೋಗುತ್ತಿದೆ. ನೀವು ಮಿಷಿನ್‌(EVM) ಬದಲಾಯಿಸದೆ, ಜನರ ಸರ್ಕಾರ ಬರುವುದಿಲ್ಲ, ಬರುವುದಿಲ್ಲ, ಬರುವುದಿಲ್ಲ” ಎಂದು ಹೇಳುತ್ತಾರೆ.

ಈ ವೇಳೆ ಅಖಿಲೇಶ್‌ ಯಾದವ್‌, “ಇದು ನಿಜವೇ” ಎಂದು ಕೇಳುತ್ತಾರೆ. ಅದಕ್ಕೆ ವಯೋವೃದ್ದ , “ಮಿಷಿನ್(EVM) ಬದಲಾಯಿಸಿ, ಒಂದೇ ಬಾರಿಗೆ ಎಲ್ಲಾ ಓಟುಗಳೂ ಬರುತ್ತದೆ” ಎಂದು ಹೇಳುತ್ತಾರೆ. ಇದರ ನಂತರ ವೃದ್ದ, ಪ್ರಧಾನಿ ಮೋದಿ ಅವರನ್ನು ಉಲ್ಲೇಖಿಸಿ ಅಶ್ಲೀಲ ಪದ ಉಲ್ಲೇಖಿಸುವಾಗ ಅಖಿಲೇಶ್‌ ಯಾದವ್‌ ಅವರು ಬಾಯಿಗೆ ಬೆರಳಿಟ್ಟು, ಹಾಗೆ ಹೇಳಬೇಡಿ ಎಂದು ಸೂಚಿಸುತ್ತಾರೆ.

ಪೂರ್ಣ ವಿಡಿಯೊ ನೋಡಿ

ವಾಸ್ತವದಲ್ಲಿ ಬಿಜೆಪಿ ಬೆಂಬಲಿಗರು ವೈರಲ್ ಮಾಡಿರುವ ವಿಡಿಯೊ 14 ಸೆಕೆಂಡ್‌ ಇದೆ. ಅದು ಅಸ್ಪಷ್ಟವಾಗಿದೆ. ಅದರಲ್ಲಿ ವಯೋವೃದ್ದ ಮಾತನಾಡುವುದು, “ಎಲ್ಲಾ ಓಟು ಕೂಡಾ ಮಿಷಿನ್‌(EVM)ಗೆ ಹೋಗುತ್ತಿದೆ. ನೀವು ಮಿಷಿನ್‌(EVM) ಬದಲಾಯಿಸದೆ, ಜನರ ಸರ್ಕಾರ ಬರುವುದಿಲ್ಲ, ಬರುವುದಿಲ್ಲ, ಬರುವುದಿಲ್ಲ” ಎಂದಾಗಿದೆ.

ಬಿಜೆಪಿ ಬೆಂಬಲಿಗರು ಪ್ರತಿಪಾದಿಸಿದಂತೆ, ವಯೋವೃದ್ದ ವ್ಯಕ್ತಿಯು ಈ ಇಡೀ ಸಂಭಾಷಣೆಯಲ್ಲಿ, ಮಸೀದಿಯ ಬಗ್ಗೆಯಾಗಲಿ, ನಿಮಗೆ ಓಟು ನೀಡುವುದಿಲ್ಲ ಎಂದಾಗಲಿ ಅಥವಾ ನಿಮ್ಮ ಸರ್ಕಾರ ಬರುವುದಿಲ್ಲ ಎಂದಾಗಲಿ ಹೇಳುವುದಿಲ್ಲ.

ಒಟ್ಟಿನಲ್ಲಿ ಹೇಳಬಹುದಾದರೆ, ಉತ್ತರ ಪ್ರದೇಶ ಚುನಾವಣಾ ಪ್ರಚಾರದ ಸಮಯದಲ್ಲಿ ಅಖಿಲೇಶ್ ಯಾದವ್‌ ಅವರಿಗೆ ವಿಡಿಯೊದಲ್ಲಿನ ವಯೋವೃದ್ದ ಛೀಮಾರಿ ಹಾಕಿಲ್ಲ. ಅವರು ಮಾತನಾಡಿದ್ದು ‘EVM’ ಮಿಷಿನ್ ಬಗ್ಗೆಯಾಗಿದ್ದು, ಅದನ್ನು ಬದಲಾಯಿಸಿ ಎಂದು ಅಖಿಲೇಶ್ ಜೊತೆಗೆ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...