Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

- Advertisement -
- Advertisement -

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರಿಗೆ, ರಾಜ್ಯದ ವಯೋವೃದ್ದನೋರ್ವ ‘ಛೀಮಾರಿ’ ಹಾಕುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. 14 ಸೆಕೆಂಡಿನ ಈ ವಿಡಿಯೊದಲ್ಲಿ ಅಖಿಲೇಶ್‌ ಯಾದವ್‌ ಅವರು ಕಾಣಿಸಿಕೊಂಡಿದ್ದು, ವಯಸ್ಸಾದ ವ್ಯಕ್ತಿಯೊಬ್ಬರು ಅವರ ಜೊತೆಗೆ ಮಾತನಾಡುವುದು ಕೇಳಿಸುತ್ತದೆ.

ಹಿಂದಿ ಹಾಗೂ ಕನ್ನಡ ಸಂದೇಶದೊಂದಿಗೆ ಈ ವಿಡಿಯೊ ವೈರಲ್‌ ಆಗಿದೆ. “ನೀನು ಹೋಗು, ಮಸೀದಿ ಕಟ್ಟಿಸು, ಇಡೀ ಪ್ರದೇಶದಿಂದ ನಿನಗೆ ಒಂದು ಮತವನ್ನೂ ನಾವು ಕೊಡುವುದಿಲ್ಲ” ಎಂದು ವೃದ್ದ ವ್ಯಕ್ತಿ ಅಖಿಲೇಶ್ ಯಾದವ್‌ ಅವರಿಗೆ ಹೇಳಿದ್ದಾರೆ ಎಂದು ಕನ್ನಡದಲ್ಲಿ ವೈರಲ್ ಆಗಿದೆ. ಈ ವೈರಲ್ ಪೋಸ್ಟ್‌ “ಅಖಿಲೇಶ್‌ ಯಾದವ್‌ಗೆ ಮಂಗಳಾರತಿ” ಮಾಡಲಾಗಿದೆ ಎಂದು ಪ್ರತಿಪಾದಿಸುತ್ತದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಈ ವಿಡಿಯೊವನ್ನು ಬಿಜೆಪಿ ಬೆಂಬಲಿಗ ಸಂತೋಷ್‌ ಕೆಂಚಾಂಬ ಎಂಬ ವ್ಯಕ್ತಿ ಸೇರಿದಂತೆ, ಇನ್ನೂ ಹಲವಾರು ಜನರು ಹಂಚಿಕೊಂಡಿದ್ದಾರೆ. ಈ ಮೂಲಕ ಈ ವಿಡಿಯೊವನ್ನು ಸಾವಿರಾರು ಜನರು ಹಂಚಿಕೊಂಡಿದ್ದಾರೆ ಮತ್ತು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಟ್ವಿಟರ್‌ನಲ್ಲೂ ಈ ವಿಡಿಯೊ ಅದೇ ಪ್ರತಿಪಾದನೆಯೊಂದಿಗೆ ಕನ್ನಡ ಸಂದೇಶದೊಂದಿಗೆ ಹಂಚಿಕೊಂಡಿರುವುದನ್ನು ಇಲ್ಲಿ ನೋಡಬಹುದು.

ಇಷ್ಟೇ ಅಲ್ಲದೆ ಹಿಂದಿ ಭಾಷೆಯಲ್ಲೂ ಈ ವಿಡಿಯೊ ವೈರಲ್ ಆಗಿದೆ. ದೆಹಲಿ ಬಿಜೆಪಿಯ ಉಪಾಧ್ಯಕ್ಷ ಸುನಿಲ್ ಯಾದವ್‌ ಅವರು, “ವಯೋವೃದ್ಧ ವ್ಯಕ್ತಿ ಅಖಿಲೇಶ್ ಯಾದವ್ ಅವರಿಗೆ ವೋಟ್ ಇಲ್ಲ, ವೋಟ್ ಇಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ” ಎಂಬ ಪ್ರತಿಪಾದನೆಯೊಂದಿಗೆ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನ್ನಡದಲ್ಲಿ ವೈರಲ್ ಆಗಿರುವಂತೆಯೇ ಹಿಂದಿಯಲ್ಲಿ ಕೂಡಾ, “ನೀವು ಮಸೀದಿ ಮಾಡಲು ಹೋಗುತ್ತೀರಿ, ಇಡೀ ಪ್ರದೇಶದ ಯಾರೂ ನಿಮಗೆ ಮತ ನೀಡುವುದಿಲ್ಲ” ಎಂದು ವಯೋವೃದ್ದ ವ್ಯಕ್ತಿ ಅಖಿಲೇಶ್‌ಗೆ ಛೀಮಾರಿ ಹಾಕಿದ್ದಾರೆ ಎಂದು ವೈರಲ್ ಆಗಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಟ್ವಿಟರ್‌ನಲ್ಲಿ ಹಲವು ಜನರು ಹಂಚಿಕೊಂಡಿದ್ದಾರೆ. ಜೊತೆಗೆ ಫೇಸ್‌ಬುಕ್‌ ಅಲ್ಲೂ ಈ ವಿಡಿಯೊ ವೈರಲ್ ಆಗಿದೆ. ಅದಲ್ಲಿ ಇಲ್ಲಿ, ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಜಿಲ್ಲಾಧಿಕಾರಿ ಏಕೆ ಮೇಕಪ್‌ ಮಾಡಿಲ್ಲ?’- ಮನಕಲಕುವ ಕತೆ ಹಿಂದಿನ ವಾಸ್ತವವೇನು?

ಫ್ಯಾಕ್ಟ್‌ಚೆಕ್

ಒಟ್ಟಿನಲ್ಲಿ ನೋಡುವುದಾದರೆ, ‘ಅಖಿಲೇಶ್ ಯಾದವ್‌ ಅವರಿಗೆ ಯುಪಿಯಲ್ಲಿ ವೃದ್ದರೊಬ್ಬರು ಛೀಮಾರಿ ಹಾಕಿದ್ದಾರೆ’ ಎಂಬ ಪ್ರತಿಪಾದನೆಯೊಂದಿಗೆ 14 ಸೆಕೆಂಡಿನ ಈ ವಿಡಿಯೊವನ್ನು ವೈರಲ್ ಮಾಡಿರುವವರಲ್ಲಿ ಹೆಚ್ಚಿನ ಜನರು ಬಿಜೆಪಿ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ.

ನಾನುಗೌರಿ.ಕಾಂ ಈ ವಿಡಿಯೊದ ಸ್ಕ್ರೀನ್‌ ಶಾರ್ಟ್ ಬಳಿಸಿ ರಿವರ್ಸ್ ಸರ್ಚ್ ಮಾಡಿದಾಗ, ವೈರಲ್ ವಿಡಿಯೊದ ಧೀರ್ಘ ವಿಡಿಯೊ ಲಭ್ಯವಾಗಿದೆ. ಈ ವಿಡಿಯೊ 1:04 ಸೆಕೆಂಡ್‌ ಇದೆ.

ಈ ವಿಡಿಯೊ, ಉತ್ತರ ಪ್ರದೇಶದ ಚುನಾವಣೆ ಪ್ರಯುಕ್ತ ಅಖಿಲೇಶ್‌ ಯಾದವ್ ಮನೆ ಮನೆ ಪ್ರಚಾರದ ಸಮಯದಲ್ಲಿ ಮಾಡಿರುವ ವಿಡಿಯೊ ಎಂದು ತೋರುತ್ತಿದೆ. ಆದರೆ ಈ ವಿಡಿಯೊ ಯಾವಾಗ ರೆಕಾರ್ಡ್ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. ಅವರು ಮಾತನಾಡುತ್ತಾ ಇರುವ ಸಂಧರ್ಭದಲ್ಲಿ ಹಲವಾರು ಜನರು ಅವರ ಸುತ್ತುವರೆದು ಮಾತನಾಡುತ್ತಿದ್ದಾರೆ.

ಅಖಿಲೇಶ್ ಯಾದವ್ ಅವರು ಅಲ್ಲಿ ನೆರೆದಿರುವ ಜನರೊಂದಿಗೆ ಮಾತನಾಡುತ್ತಾ, “ಜನರು ಏನು ಯೋಚಿಸುತ್ತಿದ್ದಾರೆ” ಎಂದು ಪ್ರಶ್ನಿಸುತ್ತಾರೆ. ಜೊತೆಗೆ, ಜನರು ಚೆನ್ನಾಗಿದ್ದಾರೆಯೆ? ರಸ್ತೆ ಮತ್ತು ಹೆದ್ದಾರಿ ಚೆನ್ನಾಗಿದೆಯೆ ಎಂದು ಕೇಳುತ್ತಾರೆ.

ಈ ವೇಳೆ ವಯೋವೃದ್ದಎಂದು ತೋರುವ ವ್ಯಕ್ತಿಯೊಬ್ಬರು, “ಮಗನೇ, ಮೊದಲು ಮಿಷಿನ್(EVM) ಅನ್ನು ಸುಟ್ಟು ಹಾಕು” ಎಂದು ಹೇಳುತ್ತಾರೆ. ವಿಡಿಯೊದಲ್ಲಿ ವ್ಯಕ್ತಿ ಕಾಣಿಸುವುದಿಲ್ಲ. ಕೇವಲ ಕೈಗಳಷ್ಟೇ ಕಾಣುತ್ತದೆ.

ಈ ಸಮಯದಲ್ಲಿ ಅಖಿಲೇಶ್ ಯಾದವ್ ಅವರು, “ಈ ಹಿಂದೆ ಅವರು ಚುನಾವಣಾ ಬೂತ್‌ಗಳನ್ನು ಗಲಾಟೆ ಮಾಡಿ ವಶಕ್ಕೆ ಪಡೆಯುತ್ತಿದ್ದರು. ಈಗ ಬಿಜೆಪಿಯವರು ಅದನ್ನು ಬೇರೆಯೆ ರೀತಿಯಲ್ಲಿ ತಂತ್ರಪೂರ್ವಕವಾಗಿ ಮಾಡುತ್ತಿದ್ದಾರೆ” ಎಂದು ಹೇಳುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ಇದರ ನಂತರ ಅಖಿಲೇಶ್‌ ಅವರನ್ನು ಉದ್ದೇಶಿಸಿ ಮತ್ತೇ ಮಾತನಾಡುವ ವಯೋವೃದ್ಧ, “ನಾನು ನಿಮಗೆ ಹೇಳುತ್ತಿದ್ದೇನೆ. ಇಲ್ಲಿ ಒಂದು ಓಟು ಕೂಡಾ ಇಲ್ಲ, ಎಲ್ಲಾ ಓಟು ಕೂಡಾ ಮಿಷಿನ್‌(EVM)ಗೆ ಹೋಗುತ್ತಿದೆ. ನೀವು ಮಿಷಿನ್‌(EVM) ಬದಲಾಯಿಸದೆ, ಜನರ ಸರ್ಕಾರ ಬರುವುದಿಲ್ಲ, ಬರುವುದಿಲ್ಲ, ಬರುವುದಿಲ್ಲ” ಎಂದು ಹೇಳುತ್ತಾರೆ.

ಈ ವೇಳೆ ಅಖಿಲೇಶ್‌ ಯಾದವ್‌, “ಇದು ನಿಜವೇ” ಎಂದು ಕೇಳುತ್ತಾರೆ. ಅದಕ್ಕೆ ವಯೋವೃದ್ದ , “ಮಿಷಿನ್(EVM) ಬದಲಾಯಿಸಿ, ಒಂದೇ ಬಾರಿಗೆ ಎಲ್ಲಾ ಓಟುಗಳೂ ಬರುತ್ತದೆ” ಎಂದು ಹೇಳುತ್ತಾರೆ. ಇದರ ನಂತರ ವೃದ್ದ, ಪ್ರಧಾನಿ ಮೋದಿ ಅವರನ್ನು ಉಲ್ಲೇಖಿಸಿ ಅಶ್ಲೀಲ ಪದ ಉಲ್ಲೇಖಿಸುವಾಗ ಅಖಿಲೇಶ್‌ ಯಾದವ್‌ ಅವರು ಬಾಯಿಗೆ ಬೆರಳಿಟ್ಟು, ಹಾಗೆ ಹೇಳಬೇಡಿ ಎಂದು ಸೂಚಿಸುತ್ತಾರೆ.

ಪೂರ್ಣ ವಿಡಿಯೊ ನೋಡಿ

ವಾಸ್ತವದಲ್ಲಿ ಬಿಜೆಪಿ ಬೆಂಬಲಿಗರು ವೈರಲ್ ಮಾಡಿರುವ ವಿಡಿಯೊ 14 ಸೆಕೆಂಡ್‌ ಇದೆ. ಅದು ಅಸ್ಪಷ್ಟವಾಗಿದೆ. ಅದರಲ್ಲಿ ವಯೋವೃದ್ದ ಮಾತನಾಡುವುದು, “ಎಲ್ಲಾ ಓಟು ಕೂಡಾ ಮಿಷಿನ್‌(EVM)ಗೆ ಹೋಗುತ್ತಿದೆ. ನೀವು ಮಿಷಿನ್‌(EVM) ಬದಲಾಯಿಸದೆ, ಜನರ ಸರ್ಕಾರ ಬರುವುದಿಲ್ಲ, ಬರುವುದಿಲ್ಲ, ಬರುವುದಿಲ್ಲ” ಎಂದಾಗಿದೆ.

ಬಿಜೆಪಿ ಬೆಂಬಲಿಗರು ಪ್ರತಿಪಾದಿಸಿದಂತೆ, ವಯೋವೃದ್ದ ವ್ಯಕ್ತಿಯು ಈ ಇಡೀ ಸಂಭಾಷಣೆಯಲ್ಲಿ, ಮಸೀದಿಯ ಬಗ್ಗೆಯಾಗಲಿ, ನಿಮಗೆ ಓಟು ನೀಡುವುದಿಲ್ಲ ಎಂದಾಗಲಿ ಅಥವಾ ನಿಮ್ಮ ಸರ್ಕಾರ ಬರುವುದಿಲ್ಲ ಎಂದಾಗಲಿ ಹೇಳುವುದಿಲ್ಲ.

ಒಟ್ಟಿನಲ್ಲಿ ಹೇಳಬಹುದಾದರೆ, ಉತ್ತರ ಪ್ರದೇಶ ಚುನಾವಣಾ ಪ್ರಚಾರದ ಸಮಯದಲ್ಲಿ ಅಖಿಲೇಶ್ ಯಾದವ್‌ ಅವರಿಗೆ ವಿಡಿಯೊದಲ್ಲಿನ ವಯೋವೃದ್ದ ಛೀಮಾರಿ ಹಾಕಿಲ್ಲ. ಅವರು ಮಾತನಾಡಿದ್ದು ‘EVM’ ಮಿಷಿನ್ ಬಗ್ಗೆಯಾಗಿದ್ದು, ಅದನ್ನು ಬದಲಾಯಿಸಿ ಎಂದು ಅಖಿಲೇಶ್ ಜೊತೆಗೆ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...