Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

- Advertisement -
- Advertisement -

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರಿಗೆ, ರಾಜ್ಯದ ವಯೋವೃದ್ದನೋರ್ವ ‘ಛೀಮಾರಿ’ ಹಾಕುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. 14 ಸೆಕೆಂಡಿನ ಈ ವಿಡಿಯೊದಲ್ಲಿ ಅಖಿಲೇಶ್‌ ಯಾದವ್‌ ಅವರು ಕಾಣಿಸಿಕೊಂಡಿದ್ದು, ವಯಸ್ಸಾದ ವ್ಯಕ್ತಿಯೊಬ್ಬರು ಅವರ ಜೊತೆಗೆ ಮಾತನಾಡುವುದು ಕೇಳಿಸುತ್ತದೆ.

ಹಿಂದಿ ಹಾಗೂ ಕನ್ನಡ ಸಂದೇಶದೊಂದಿಗೆ ಈ ವಿಡಿಯೊ ವೈರಲ್‌ ಆಗಿದೆ. “ನೀನು ಹೋಗು, ಮಸೀದಿ ಕಟ್ಟಿಸು, ಇಡೀ ಪ್ರದೇಶದಿಂದ ನಿನಗೆ ಒಂದು ಮತವನ್ನೂ ನಾವು ಕೊಡುವುದಿಲ್ಲ” ಎಂದು ವೃದ್ದ ವ್ಯಕ್ತಿ ಅಖಿಲೇಶ್ ಯಾದವ್‌ ಅವರಿಗೆ ಹೇಳಿದ್ದಾರೆ ಎಂದು ಕನ್ನಡದಲ್ಲಿ ವೈರಲ್ ಆಗಿದೆ. ಈ ವೈರಲ್ ಪೋಸ್ಟ್‌ “ಅಖಿಲೇಶ್‌ ಯಾದವ್‌ಗೆ ಮಂಗಳಾರತಿ” ಮಾಡಲಾಗಿದೆ ಎಂದು ಪ್ರತಿಪಾದಿಸುತ್ತದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಈ ವಿಡಿಯೊವನ್ನು ಬಿಜೆಪಿ ಬೆಂಬಲಿಗ ಸಂತೋಷ್‌ ಕೆಂಚಾಂಬ ಎಂಬ ವ್ಯಕ್ತಿ ಸೇರಿದಂತೆ, ಇನ್ನೂ ಹಲವಾರು ಜನರು ಹಂಚಿಕೊಂಡಿದ್ದಾರೆ. ಈ ಮೂಲಕ ಈ ವಿಡಿಯೊವನ್ನು ಸಾವಿರಾರು ಜನರು ಹಂಚಿಕೊಂಡಿದ್ದಾರೆ ಮತ್ತು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಟ್ವಿಟರ್‌ನಲ್ಲೂ ಈ ವಿಡಿಯೊ ಅದೇ ಪ್ರತಿಪಾದನೆಯೊಂದಿಗೆ ಕನ್ನಡ ಸಂದೇಶದೊಂದಿಗೆ ಹಂಚಿಕೊಂಡಿರುವುದನ್ನು ಇಲ್ಲಿ ನೋಡಬಹುದು.

ಇಷ್ಟೇ ಅಲ್ಲದೆ ಹಿಂದಿ ಭಾಷೆಯಲ್ಲೂ ಈ ವಿಡಿಯೊ ವೈರಲ್ ಆಗಿದೆ. ದೆಹಲಿ ಬಿಜೆಪಿಯ ಉಪಾಧ್ಯಕ್ಷ ಸುನಿಲ್ ಯಾದವ್‌ ಅವರು, “ವಯೋವೃದ್ಧ ವ್ಯಕ್ತಿ ಅಖಿಲೇಶ್ ಯಾದವ್ ಅವರಿಗೆ ವೋಟ್ ಇಲ್ಲ, ವೋಟ್ ಇಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ” ಎಂಬ ಪ್ರತಿಪಾದನೆಯೊಂದಿಗೆ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನ್ನಡದಲ್ಲಿ ವೈರಲ್ ಆಗಿರುವಂತೆಯೇ ಹಿಂದಿಯಲ್ಲಿ ಕೂಡಾ, “ನೀವು ಮಸೀದಿ ಮಾಡಲು ಹೋಗುತ್ತೀರಿ, ಇಡೀ ಪ್ರದೇಶದ ಯಾರೂ ನಿಮಗೆ ಮತ ನೀಡುವುದಿಲ್ಲ” ಎಂದು ವಯೋವೃದ್ದ ವ್ಯಕ್ತಿ ಅಖಿಲೇಶ್‌ಗೆ ಛೀಮಾರಿ ಹಾಕಿದ್ದಾರೆ ಎಂದು ವೈರಲ್ ಆಗಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಟ್ವಿಟರ್‌ನಲ್ಲಿ ಹಲವು ಜನರು ಹಂಚಿಕೊಂಡಿದ್ದಾರೆ. ಜೊತೆಗೆ ಫೇಸ್‌ಬುಕ್‌ ಅಲ್ಲೂ ಈ ವಿಡಿಯೊ ವೈರಲ್ ಆಗಿದೆ. ಅದಲ್ಲಿ ಇಲ್ಲಿ, ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಜಿಲ್ಲಾಧಿಕಾರಿ ಏಕೆ ಮೇಕಪ್‌ ಮಾಡಿಲ್ಲ?’- ಮನಕಲಕುವ ಕತೆ ಹಿಂದಿನ ವಾಸ್ತವವೇನು?

ಫ್ಯಾಕ್ಟ್‌ಚೆಕ್

ಒಟ್ಟಿನಲ್ಲಿ ನೋಡುವುದಾದರೆ, ‘ಅಖಿಲೇಶ್ ಯಾದವ್‌ ಅವರಿಗೆ ಯುಪಿಯಲ್ಲಿ ವೃದ್ದರೊಬ್ಬರು ಛೀಮಾರಿ ಹಾಕಿದ್ದಾರೆ’ ಎಂಬ ಪ್ರತಿಪಾದನೆಯೊಂದಿಗೆ 14 ಸೆಕೆಂಡಿನ ಈ ವಿಡಿಯೊವನ್ನು ವೈರಲ್ ಮಾಡಿರುವವರಲ್ಲಿ ಹೆಚ್ಚಿನ ಜನರು ಬಿಜೆಪಿ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ.

ನಾನುಗೌರಿ.ಕಾಂ ಈ ವಿಡಿಯೊದ ಸ್ಕ್ರೀನ್‌ ಶಾರ್ಟ್ ಬಳಿಸಿ ರಿವರ್ಸ್ ಸರ್ಚ್ ಮಾಡಿದಾಗ, ವೈರಲ್ ವಿಡಿಯೊದ ಧೀರ್ಘ ವಿಡಿಯೊ ಲಭ್ಯವಾಗಿದೆ. ಈ ವಿಡಿಯೊ 1:04 ಸೆಕೆಂಡ್‌ ಇದೆ.

ಈ ವಿಡಿಯೊ, ಉತ್ತರ ಪ್ರದೇಶದ ಚುನಾವಣೆ ಪ್ರಯುಕ್ತ ಅಖಿಲೇಶ್‌ ಯಾದವ್ ಮನೆ ಮನೆ ಪ್ರಚಾರದ ಸಮಯದಲ್ಲಿ ಮಾಡಿರುವ ವಿಡಿಯೊ ಎಂದು ತೋರುತ್ತಿದೆ. ಆದರೆ ಈ ವಿಡಿಯೊ ಯಾವಾಗ ರೆಕಾರ್ಡ್ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. ಅವರು ಮಾತನಾಡುತ್ತಾ ಇರುವ ಸಂಧರ್ಭದಲ್ಲಿ ಹಲವಾರು ಜನರು ಅವರ ಸುತ್ತುವರೆದು ಮಾತನಾಡುತ್ತಿದ್ದಾರೆ.

ಅಖಿಲೇಶ್ ಯಾದವ್ ಅವರು ಅಲ್ಲಿ ನೆರೆದಿರುವ ಜನರೊಂದಿಗೆ ಮಾತನಾಡುತ್ತಾ, “ಜನರು ಏನು ಯೋಚಿಸುತ್ತಿದ್ದಾರೆ” ಎಂದು ಪ್ರಶ್ನಿಸುತ್ತಾರೆ. ಜೊತೆಗೆ, ಜನರು ಚೆನ್ನಾಗಿದ್ದಾರೆಯೆ? ರಸ್ತೆ ಮತ್ತು ಹೆದ್ದಾರಿ ಚೆನ್ನಾಗಿದೆಯೆ ಎಂದು ಕೇಳುತ್ತಾರೆ.

ಈ ವೇಳೆ ವಯೋವೃದ್ದಎಂದು ತೋರುವ ವ್ಯಕ್ತಿಯೊಬ್ಬರು, “ಮಗನೇ, ಮೊದಲು ಮಿಷಿನ್(EVM) ಅನ್ನು ಸುಟ್ಟು ಹಾಕು” ಎಂದು ಹೇಳುತ್ತಾರೆ. ವಿಡಿಯೊದಲ್ಲಿ ವ್ಯಕ್ತಿ ಕಾಣಿಸುವುದಿಲ್ಲ. ಕೇವಲ ಕೈಗಳಷ್ಟೇ ಕಾಣುತ್ತದೆ.

ಈ ಸಮಯದಲ್ಲಿ ಅಖಿಲೇಶ್ ಯಾದವ್ ಅವರು, “ಈ ಹಿಂದೆ ಅವರು ಚುನಾವಣಾ ಬೂತ್‌ಗಳನ್ನು ಗಲಾಟೆ ಮಾಡಿ ವಶಕ್ಕೆ ಪಡೆಯುತ್ತಿದ್ದರು. ಈಗ ಬಿಜೆಪಿಯವರು ಅದನ್ನು ಬೇರೆಯೆ ರೀತಿಯಲ್ಲಿ ತಂತ್ರಪೂರ್ವಕವಾಗಿ ಮಾಡುತ್ತಿದ್ದಾರೆ” ಎಂದು ಹೇಳುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ಇದರ ನಂತರ ಅಖಿಲೇಶ್‌ ಅವರನ್ನು ಉದ್ದೇಶಿಸಿ ಮತ್ತೇ ಮಾತನಾಡುವ ವಯೋವೃದ್ಧ, “ನಾನು ನಿಮಗೆ ಹೇಳುತ್ತಿದ್ದೇನೆ. ಇಲ್ಲಿ ಒಂದು ಓಟು ಕೂಡಾ ಇಲ್ಲ, ಎಲ್ಲಾ ಓಟು ಕೂಡಾ ಮಿಷಿನ್‌(EVM)ಗೆ ಹೋಗುತ್ತಿದೆ. ನೀವು ಮಿಷಿನ್‌(EVM) ಬದಲಾಯಿಸದೆ, ಜನರ ಸರ್ಕಾರ ಬರುವುದಿಲ್ಲ, ಬರುವುದಿಲ್ಲ, ಬರುವುದಿಲ್ಲ” ಎಂದು ಹೇಳುತ್ತಾರೆ.

ಈ ವೇಳೆ ಅಖಿಲೇಶ್‌ ಯಾದವ್‌, “ಇದು ನಿಜವೇ” ಎಂದು ಕೇಳುತ್ತಾರೆ. ಅದಕ್ಕೆ ವಯೋವೃದ್ದ , “ಮಿಷಿನ್(EVM) ಬದಲಾಯಿಸಿ, ಒಂದೇ ಬಾರಿಗೆ ಎಲ್ಲಾ ಓಟುಗಳೂ ಬರುತ್ತದೆ” ಎಂದು ಹೇಳುತ್ತಾರೆ. ಇದರ ನಂತರ ವೃದ್ದ, ಪ್ರಧಾನಿ ಮೋದಿ ಅವರನ್ನು ಉಲ್ಲೇಖಿಸಿ ಅಶ್ಲೀಲ ಪದ ಉಲ್ಲೇಖಿಸುವಾಗ ಅಖಿಲೇಶ್‌ ಯಾದವ್‌ ಅವರು ಬಾಯಿಗೆ ಬೆರಳಿಟ್ಟು, ಹಾಗೆ ಹೇಳಬೇಡಿ ಎಂದು ಸೂಚಿಸುತ್ತಾರೆ.

ಪೂರ್ಣ ವಿಡಿಯೊ ನೋಡಿ

ವಾಸ್ತವದಲ್ಲಿ ಬಿಜೆಪಿ ಬೆಂಬಲಿಗರು ವೈರಲ್ ಮಾಡಿರುವ ವಿಡಿಯೊ 14 ಸೆಕೆಂಡ್‌ ಇದೆ. ಅದು ಅಸ್ಪಷ್ಟವಾಗಿದೆ. ಅದರಲ್ಲಿ ವಯೋವೃದ್ದ ಮಾತನಾಡುವುದು, “ಎಲ್ಲಾ ಓಟು ಕೂಡಾ ಮಿಷಿನ್‌(EVM)ಗೆ ಹೋಗುತ್ತಿದೆ. ನೀವು ಮಿಷಿನ್‌(EVM) ಬದಲಾಯಿಸದೆ, ಜನರ ಸರ್ಕಾರ ಬರುವುದಿಲ್ಲ, ಬರುವುದಿಲ್ಲ, ಬರುವುದಿಲ್ಲ” ಎಂದಾಗಿದೆ.

ಬಿಜೆಪಿ ಬೆಂಬಲಿಗರು ಪ್ರತಿಪಾದಿಸಿದಂತೆ, ವಯೋವೃದ್ದ ವ್ಯಕ್ತಿಯು ಈ ಇಡೀ ಸಂಭಾಷಣೆಯಲ್ಲಿ, ಮಸೀದಿಯ ಬಗ್ಗೆಯಾಗಲಿ, ನಿಮಗೆ ಓಟು ನೀಡುವುದಿಲ್ಲ ಎಂದಾಗಲಿ ಅಥವಾ ನಿಮ್ಮ ಸರ್ಕಾರ ಬರುವುದಿಲ್ಲ ಎಂದಾಗಲಿ ಹೇಳುವುದಿಲ್ಲ.

ಒಟ್ಟಿನಲ್ಲಿ ಹೇಳಬಹುದಾದರೆ, ಉತ್ತರ ಪ್ರದೇಶ ಚುನಾವಣಾ ಪ್ರಚಾರದ ಸಮಯದಲ್ಲಿ ಅಖಿಲೇಶ್ ಯಾದವ್‌ ಅವರಿಗೆ ವಿಡಿಯೊದಲ್ಲಿನ ವಯೋವೃದ್ದ ಛೀಮಾರಿ ಹಾಕಿಲ್ಲ. ಅವರು ಮಾತನಾಡಿದ್ದು ‘EVM’ ಮಿಷಿನ್ ಬಗ್ಗೆಯಾಗಿದ್ದು, ಅದನ್ನು ಬದಲಾಯಿಸಿ ಎಂದು ಅಖಿಲೇಶ್ ಜೊತೆಗೆ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...