Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: TMC ಕಾರ್ಯಕರ್ತರಿಂದ BJP ಸದಸ್ಯನ ಕೊಲೆ ಎಂಬ ಈ ಚಿತ್ರ 2018ರದ್ದು!

ಫ್ಯಾಕ್ಟ್‌ಚೆಕ್: TMC ಕಾರ್ಯಕರ್ತರಿಂದ BJP ಸದಸ್ಯನ ಕೊಲೆ ಎಂಬ ಈ ಚಿತ್ರ 2018ರದ್ದು!

TMC ಕಾರ್ಯಕರ್ತರು ಈತನನ್ನು ಕೊಂದು 'ಟಿ-ಶರ್ಟ್ ಮೇಲೆ' ಬಿಜೆಪಿಯ ಭಾಗವಾಗಿದ್ದಕ್ಕಾಗಿ ಇದು ಶಿಕ್ಷೆ 'ಎಂದು ಬರೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

- Advertisement -
- Advertisement -

ತೃಣಮೂಲ ಕಾಂಗ್ರೆಸ್ (TMC) ಕಾರ್ಯಕರ್ತರು 18 ವರ್ಷದ ಬಿಜೆಪಿ ಸದಸ್ಯನನ್ನು ಕೊಂದಿದ್ದಾರೆ ಎಂಬ ಹೇಳಿಕೆಯೊಂದಿಗೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿರುವ ಯುವಕನ ಚಿತ್ರವನ್ನು ಹಂಚಿಕೊಳ್ಳುತ್ತಿದ್ದಾರೆ.

ಈ ಚಿತ್ರವನ್ನು ಅರ್ಪಿತ ಜನ ಎಂಬುವವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, “ಈತ ಪಶ್ಚಿಮ ಬಂಗಾಳದ 18 ವರ್ಷದ ವ್ಯಕ್ತಿ ತ್ರಿಲೋಚನ್ ಮಹತೋ. TMC ಕಾರ್ಯಕರ್ತರು ಈತನನ್ನು ಕೊಂದು ‘ಟಿ-ಶರ್ಟ್ ಮೇಲೆ’ ಬಿಜೆಪಿಯ ಭಾಗವಾಗಿದ್ದಕ್ಕಾಗಿ ಈ ಶಿಕ್ಷೆ ‘ಎಂದು ಬರೆದಿದ್ದಾರೆ. ಆದರೆ TMC ನಾಯಕ ಡೆರೆಕ್ ಒ’ಬ್ರಿಯೆನ್, ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಮಾತನಾಡಲು ನೀಡಲು ಯುಪಿಗೆ ಹೋಗಿದ್ದಾರೆ. ಅವರ ಕರುಣಾಜನಕ ರಾಜಕಾರಣವನ್ನು ನೀವು ನೋಡುತ್ತಿದ್ದೀರಾ?” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಈ ಟ್ವೀಟ್‌ಗೆ, ಈ ವರದಿ ಬರೆಯುವ ವೇಳೆಗೆ, ಸುಮಾರು 12,000 ಟ್ವಿಟ್ಟರ್‌ ಬಳಕೆದಾರರು ಲೈಕ್ ನೀಡಿದ್ದು, 8,000 ಜನ ಇದನ್ನು ರೀಟ್ವೀಟ್ ಮಾಡಿದ್ದಾರೆ.

ಅಕ್ಟೋಬರ್ 5 ರಂದು ಕ್ರೆಟಿಲಿ ಎಂಬ ವೆಬ್‌ಸೈಟ್ ಇದೇ ಪ್ರತಿಪಾದನೆಯೊಂದಿಗೆ ಈ ಚಿತ್ರವನ್ನು ಬಳಸಿಕೊಂಡು ಲೇಖನವೊಂದನ್ನು ಪ್ರಕಟಿಸಿದೆ. ಈ ಲೇಖನವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇದೇ ಪ್ರತಿಪಾದನೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಾವಿರಾರು ಜನ ಬಳಕೆದಾರರು ಈ ಪೋಸ್ಟನ್ನು ಹಂಚಿಕೊಂಡಿದ್ದಾರೆ. ಅದರ ಆರ್ಕೈವ್ ಪೋಸ್ಟನ್ನು ಇಲ್ಲಿ ಕಾಣಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಎಡಿಟೆಡ್‌ ವಿಡಿಯೋ ಹಂಚಿದ ಮಧ್ಯಪ್ರದೇಶ ಕಾಂಗ್ರೆಸ್‌!

ಫ್ಯಾಕ್ಟ್‌ಚೆಕ್:

ಈ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಇದಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಇಂಡಿಯಾ ಟುಡೆಯಲ್ಲಿ ಪ್ರಕಟವಾದ ಲೇಖನ ಸಿಗುತ್ತದೆ. ಈ ಲೇಖನವು ಇದೇ ಚಿತ್ರವನ್ನು ಹೊಂದಿದೆ. ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 18 ವರ್ಷದ ಯುವಕನ ಶವ ಪತ್ತೆಯಾಗಿದೆ ಎಂದು ಲೇಖನದಲ್ಲಿ ಉಲ್ಲೇಖಿಸಲಾಗಿದೆ. ಇದಾದ ನಂತರ ಈತ ತಮ್ಮ ಪಕ್ಷದ ಸದಸ್ಯ ಎಂದು ಅಲ್ಲಿನ ಬಿಜೆಪಿ ಹೇಳಿಕೊಂಡಿತ್ತು ಎಂದು ದಿ ಕ್ವಿಂಟ್ ವರದಿ ಮಾಡಿದೆ.

ಅಷ್ಟೆ ಅಲ್ಲದೇ, ಗೃಹ ಸಚಿವ ಅಮಿತ್ ಶಾ ಅವರು ಮೇ 2018 ರಲ್ಲಿ ಚಿತ್ರವನ್ನು ಟ್ವೀಟ್ ಮಾಡಿದ್ದು, “ಯುವ ಸದಸ್ಯನನ್ನು ಮರದಲ್ಲಿ ಗಲ್ಲಿಗೇರಿಸಲಾಗಿದೆ. ಏಕೆಂದರೆ ಆತನ ಸಿದ್ಧಾಂತವು ರಾಜ್ಯ ಪ್ರಾಯೋಜಿತ ಗೂಂಡಾಗಳಿಗಿಂತ ಭಿನ್ನವಾಗಿದೆ” ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕೇಂದ್ರ ಸರ್ಕಾರ ಪ್ರತಿ ಹೆಣ್ಣು ಮಕ್ಕಳಿಗೆ ಮಾಸಿಕ ತಲಾ 2000 ರೂ. ನೀಡುತ್ತಿರುವುದು…

ಕ್ವಿಂಟ್ ಕೂಡ 2018 ರಲ್ಲಿ ನಡೆದ ಘಟನೆಯ ಬಗ್ಗೆ ವರದಿ ಮಾಡಿತ್ತು. ಸಂತ್ರಸ್ತನ ಗುರುತನ್ನು ಸ್ವತಂತ್ರವಾಗಿ ಪರಿಶೀಲಿಸಲಾಗದಿದ್ದರೂ, ಅಮಿತ್ ಷಾ ಅವರ ಟ್ವೀಟ್‌ನಲ್ಲಿ ಸಂತ್ರಸ್ತನ ಹೆಸರು “ತ್ರಿಲೋಚನ್ ಮಹಾತೋ” ಎಂದು ಉಲ್ಲೇಖವಾಗಿದೆ.

18 ವರ್ಷದ ಮೃತ ಯುವಕನ ಬಟ್ಟೆಯ ಮೇಲೆ ಟಿಪ್ಪಣಿಯೊಂದು ಕಂಡುಬಂದಿದೆ. “ಬಿಜೆಪಿಯೊಂದಿಗಿನ ನಿನ್ನ ಒಡನಾಟವೇ ನಿನ್ನ ಸಾವಿಗೆ ಕಾರಣ. ಚುನಾವಣೆಯ ನಂತರ ನಾನು ನಿನ್ನನ್ನು ಕೊಲ್ಲಲ್ಲು ಯತ್ನಿಸಿದ್ದೆ. ಆದರೆ ನಾನು ಆಗ ವಿಫಲವಾಗಿದ್ದೆ. ಇಂದು ನಿನ್ನ ಜೀವನ ಕೊನೆಗೊಂಡಿದೆ” ಎಂದು ಬರೆಯಲಾಗಿತ್ತು.

ಘಟನೆಯ ಹಿಂದಿನ ದಿನ ಸಂಜೆ ಯುವಕನು ತನ್ನ ಹಳ್ಳಿಯಿಂದ ಕೇವಲ ಮೂರು ಕಿಲೋಮೀಟರ್ ದೂರದಲ್ಲಿರುವ ಸ್ಥಳಕ್ಕೆ ಹೋಗಿದ್ದು, ಮನೆಗೆ ಹಿಂದಿರುಗಿರಲಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

“ಅವರ ಕುಟುಂಬದಿಂದ ನಮಗೆ ಮಾಹಿತಿ ಬಂದ ನಂತರ, ಇಡೀ ರಾತ್ರಿ ಹುಡುಕಾಡಿದರೂ ಆತನನ್ನು ಪತ್ತೆಹಚ್ಚಲಾಗಲಿಲ್ಲ” ಎಂದು ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದರು. ಈ ಸಾವಿನ ಹಿಂದೆ ಪಶ್ಚಿಮ ಬಂಗಾಳದ TMC ಸರ್ಕಾರವಿದೆ ಎಂದು ಅಮಿತ್ ಷಾ ಆರೋಪಿಸಿದ್ದರೆ, ಟಿಎಂಸಿ ಈ ಆರೋಪಗಳನ್ನು ಆಧಾರರಹಿತ ಮತ್ತು ಸಂಚು ಎಂದು ಹೇಳಿದೆ.

ಹಾಗಾಗಿ, ಇದರಿಂದ ತಿಳಿದುಬರುವುದೇನೆಂದರೆ 2 ವರ್ಷಗಳ ಹಿಂದಿನ ಹತ್ಯೆಯನ್ನು ಪ್ರಸ್ತುತ ನಡೆದಿರುವ ಹತ್ಯೆ ಎಂದು ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...