Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: TMC ಕಾರ್ಯಕರ್ತರಿಂದ BJP ಸದಸ್ಯನ ಕೊಲೆ ಎಂಬ ಈ ಚಿತ್ರ 2018ರದ್ದು!

ಫ್ಯಾಕ್ಟ್‌ಚೆಕ್: TMC ಕಾರ್ಯಕರ್ತರಿಂದ BJP ಸದಸ್ಯನ ಕೊಲೆ ಎಂಬ ಈ ಚಿತ್ರ 2018ರದ್ದು!

TMC ಕಾರ್ಯಕರ್ತರು ಈತನನ್ನು ಕೊಂದು 'ಟಿ-ಶರ್ಟ್ ಮೇಲೆ' ಬಿಜೆಪಿಯ ಭಾಗವಾಗಿದ್ದಕ್ಕಾಗಿ ಇದು ಶಿಕ್ಷೆ 'ಎಂದು ಬರೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

- Advertisement -
- Advertisement -

ತೃಣಮೂಲ ಕಾಂಗ್ರೆಸ್ (TMC) ಕಾರ್ಯಕರ್ತರು 18 ವರ್ಷದ ಬಿಜೆಪಿ ಸದಸ್ಯನನ್ನು ಕೊಂದಿದ್ದಾರೆ ಎಂಬ ಹೇಳಿಕೆಯೊಂದಿಗೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿರುವ ಯುವಕನ ಚಿತ್ರವನ್ನು ಹಂಚಿಕೊಳ್ಳುತ್ತಿದ್ದಾರೆ.

ಈ ಚಿತ್ರವನ್ನು ಅರ್ಪಿತ ಜನ ಎಂಬುವವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, “ಈತ ಪಶ್ಚಿಮ ಬಂಗಾಳದ 18 ವರ್ಷದ ವ್ಯಕ್ತಿ ತ್ರಿಲೋಚನ್ ಮಹತೋ. TMC ಕಾರ್ಯಕರ್ತರು ಈತನನ್ನು ಕೊಂದು ‘ಟಿ-ಶರ್ಟ್ ಮೇಲೆ’ ಬಿಜೆಪಿಯ ಭಾಗವಾಗಿದ್ದಕ್ಕಾಗಿ ಈ ಶಿಕ್ಷೆ ‘ಎಂದು ಬರೆದಿದ್ದಾರೆ. ಆದರೆ TMC ನಾಯಕ ಡೆರೆಕ್ ಒ’ಬ್ರಿಯೆನ್, ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಮಾತನಾಡಲು ನೀಡಲು ಯುಪಿಗೆ ಹೋಗಿದ್ದಾರೆ. ಅವರ ಕರುಣಾಜನಕ ರಾಜಕಾರಣವನ್ನು ನೀವು ನೋಡುತ್ತಿದ್ದೀರಾ?” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಈ ಟ್ವೀಟ್‌ಗೆ, ಈ ವರದಿ ಬರೆಯುವ ವೇಳೆಗೆ, ಸುಮಾರು 12,000 ಟ್ವಿಟ್ಟರ್‌ ಬಳಕೆದಾರರು ಲೈಕ್ ನೀಡಿದ್ದು, 8,000 ಜನ ಇದನ್ನು ರೀಟ್ವೀಟ್ ಮಾಡಿದ್ದಾರೆ.

ಅಕ್ಟೋಬರ್ 5 ರಂದು ಕ್ರೆಟಿಲಿ ಎಂಬ ವೆಬ್‌ಸೈಟ್ ಇದೇ ಪ್ರತಿಪಾದನೆಯೊಂದಿಗೆ ಈ ಚಿತ್ರವನ್ನು ಬಳಸಿಕೊಂಡು ಲೇಖನವೊಂದನ್ನು ಪ್ರಕಟಿಸಿದೆ. ಈ ಲೇಖನವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇದೇ ಪ್ರತಿಪಾದನೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಾವಿರಾರು ಜನ ಬಳಕೆದಾರರು ಈ ಪೋಸ್ಟನ್ನು ಹಂಚಿಕೊಂಡಿದ್ದಾರೆ. ಅದರ ಆರ್ಕೈವ್ ಪೋಸ್ಟನ್ನು ಇಲ್ಲಿ ಕಾಣಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಎಡಿಟೆಡ್‌ ವಿಡಿಯೋ ಹಂಚಿದ ಮಧ್ಯಪ್ರದೇಶ ಕಾಂಗ್ರೆಸ್‌!

ಫ್ಯಾಕ್ಟ್‌ಚೆಕ್:

ಈ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಇದಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಇಂಡಿಯಾ ಟುಡೆಯಲ್ಲಿ ಪ್ರಕಟವಾದ ಲೇಖನ ಸಿಗುತ್ತದೆ. ಈ ಲೇಖನವು ಇದೇ ಚಿತ್ರವನ್ನು ಹೊಂದಿದೆ. ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 18 ವರ್ಷದ ಯುವಕನ ಶವ ಪತ್ತೆಯಾಗಿದೆ ಎಂದು ಲೇಖನದಲ್ಲಿ ಉಲ್ಲೇಖಿಸಲಾಗಿದೆ. ಇದಾದ ನಂತರ ಈತ ತಮ್ಮ ಪಕ್ಷದ ಸದಸ್ಯ ಎಂದು ಅಲ್ಲಿನ ಬಿಜೆಪಿ ಹೇಳಿಕೊಂಡಿತ್ತು ಎಂದು ದಿ ಕ್ವಿಂಟ್ ವರದಿ ಮಾಡಿದೆ.

ಅಷ್ಟೆ ಅಲ್ಲದೇ, ಗೃಹ ಸಚಿವ ಅಮಿತ್ ಶಾ ಅವರು ಮೇ 2018 ರಲ್ಲಿ ಚಿತ್ರವನ್ನು ಟ್ವೀಟ್ ಮಾಡಿದ್ದು, “ಯುವ ಸದಸ್ಯನನ್ನು ಮರದಲ್ಲಿ ಗಲ್ಲಿಗೇರಿಸಲಾಗಿದೆ. ಏಕೆಂದರೆ ಆತನ ಸಿದ್ಧಾಂತವು ರಾಜ್ಯ ಪ್ರಾಯೋಜಿತ ಗೂಂಡಾಗಳಿಗಿಂತ ಭಿನ್ನವಾಗಿದೆ” ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕೇಂದ್ರ ಸರ್ಕಾರ ಪ್ರತಿ ಹೆಣ್ಣು ಮಕ್ಕಳಿಗೆ ಮಾಸಿಕ ತಲಾ 2000 ರೂ. ನೀಡುತ್ತಿರುವುದು…

ಕ್ವಿಂಟ್ ಕೂಡ 2018 ರಲ್ಲಿ ನಡೆದ ಘಟನೆಯ ಬಗ್ಗೆ ವರದಿ ಮಾಡಿತ್ತು. ಸಂತ್ರಸ್ತನ ಗುರುತನ್ನು ಸ್ವತಂತ್ರವಾಗಿ ಪರಿಶೀಲಿಸಲಾಗದಿದ್ದರೂ, ಅಮಿತ್ ಷಾ ಅವರ ಟ್ವೀಟ್‌ನಲ್ಲಿ ಸಂತ್ರಸ್ತನ ಹೆಸರು “ತ್ರಿಲೋಚನ್ ಮಹಾತೋ” ಎಂದು ಉಲ್ಲೇಖವಾಗಿದೆ.

18 ವರ್ಷದ ಮೃತ ಯುವಕನ ಬಟ್ಟೆಯ ಮೇಲೆ ಟಿಪ್ಪಣಿಯೊಂದು ಕಂಡುಬಂದಿದೆ. “ಬಿಜೆಪಿಯೊಂದಿಗಿನ ನಿನ್ನ ಒಡನಾಟವೇ ನಿನ್ನ ಸಾವಿಗೆ ಕಾರಣ. ಚುನಾವಣೆಯ ನಂತರ ನಾನು ನಿನ್ನನ್ನು ಕೊಲ್ಲಲ್ಲು ಯತ್ನಿಸಿದ್ದೆ. ಆದರೆ ನಾನು ಆಗ ವಿಫಲವಾಗಿದ್ದೆ. ಇಂದು ನಿನ್ನ ಜೀವನ ಕೊನೆಗೊಂಡಿದೆ” ಎಂದು ಬರೆಯಲಾಗಿತ್ತು.

ಘಟನೆಯ ಹಿಂದಿನ ದಿನ ಸಂಜೆ ಯುವಕನು ತನ್ನ ಹಳ್ಳಿಯಿಂದ ಕೇವಲ ಮೂರು ಕಿಲೋಮೀಟರ್ ದೂರದಲ್ಲಿರುವ ಸ್ಥಳಕ್ಕೆ ಹೋಗಿದ್ದು, ಮನೆಗೆ ಹಿಂದಿರುಗಿರಲಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

“ಅವರ ಕುಟುಂಬದಿಂದ ನಮಗೆ ಮಾಹಿತಿ ಬಂದ ನಂತರ, ಇಡೀ ರಾತ್ರಿ ಹುಡುಕಾಡಿದರೂ ಆತನನ್ನು ಪತ್ತೆಹಚ್ಚಲಾಗಲಿಲ್ಲ” ಎಂದು ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದರು. ಈ ಸಾವಿನ ಹಿಂದೆ ಪಶ್ಚಿಮ ಬಂಗಾಳದ TMC ಸರ್ಕಾರವಿದೆ ಎಂದು ಅಮಿತ್ ಷಾ ಆರೋಪಿಸಿದ್ದರೆ, ಟಿಎಂಸಿ ಈ ಆರೋಪಗಳನ್ನು ಆಧಾರರಹಿತ ಮತ್ತು ಸಂಚು ಎಂದು ಹೇಳಿದೆ.

ಹಾಗಾಗಿ, ಇದರಿಂದ ತಿಳಿದುಬರುವುದೇನೆಂದರೆ 2 ವರ್ಷಗಳ ಹಿಂದಿನ ಹತ್ಯೆಯನ್ನು ಪ್ರಸ್ತುತ ನಡೆದಿರುವ ಹತ್ಯೆ ಎಂದು ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...