Homeಕರೋನಾ ತಲ್ಲಣಫ್ಯಾಕ್ಟ್‌ಚೆಕ್: ಹೈದರಾಬಾದ್‌ನಲ್ಲಿ ಕೊರೊನಾ ರೋಗಿಗಳು ಹಾಸಿಗೆ ಸಿಗದೆ ರಸ್ತೆಯಲ್ಲಿದ್ದಾರೆಯೆ?

ಫ್ಯಾಕ್ಟ್‌ಚೆಕ್: ಹೈದರಾಬಾದ್‌ನಲ್ಲಿ ಕೊರೊನಾ ರೋಗಿಗಳು ಹಾಸಿಗೆ ಸಿಗದೆ ರಸ್ತೆಯಲ್ಲಿದ್ದಾರೆಯೆ?

- Advertisement -
- Advertisement -

ಆಸ್ಪತ್ರೆಯ ಹೊರಗಿನ ರಸ್ತೆಗಳಲ್ಲಿ ಹಾಸಿಗೆಗಳ ಮೇಲೆ ರೋಗಿಗಳಿರುವ ವೀಡಿಯೊವನ್ನು ಹೈದರಾಬಾದ್‌ನ ಓಲ್ಡ್ ಸಿಟಿಯಲ್ಲಿ ನಡೆದಿದ್ದು ಎಂದು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದು ವೈರಲಾಗುತ್ತಿದೆ.

ಆದರೆ, ಈ ವೀಡಿಯೊ ಹೈದರಾಬಾದ್‌ನ ಓಲ್ಡ್ ಸಿಟಿಯದ್ದಲ್ಲ ಪಾಕಿಸ್ತಾನದ ಲಾಹೋರ್‌ನದ್ದಾಗಿದ್ದು, ಅದೂ ಅಲ್ಲದೆ ಇದು ಕೊರೊನಾ ರೋಗಿಗಳ ವೀಡಿಯೋ ಅಲ್ಲ ಎಂದು ತಿಳಿದು ಬಂದಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದ ಈ ಸಂದರ್ಭದಲ್ಲಿ, ಈ ವಿಡಿಯೋವನ್ನು ಹೆಚ್ಚಿನ ಜನರು ನಿಜವೆಂದೇ ನಂಬಿದ್ದಾರೆ, ಯಾಕೆಂದರೆ ವೀಡಿಯೋದಲ್ಲಿ ಕಾಣುವ ರೋಗಿಗಳು ಮತ್ತು ಅವರ ಸಂಬಂಧಿಗಳು ಮಾಸ್ಕ್‌ಗಳನ್ನು ಧರಿಸಿರುವುದನ್ನು ಕಾಣಬಹುದಾಗಿದೆ. ಹಾಸಿಗೆಗಳ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಪ್ರವೇಶ ಪಡೆಯಲು ಸಾಧ್ಯವಾಗದ ಕೊರೊನಾ ರೋಗಿಗಳು ರಸ್ತೆಗಳಲ್ಲಿ ಇರುವಂತಾಗಿದೆ ಎಂದು ವೈರಲ್ ಸಂದೇಶದಲ್ಲಿ ಹೇಳಲಾಗಿದೆ.

ಕಟ್ಟಡದ ಹೊರಗೆ ಹೆಚ್ಚಿನ ಸಂಖ್ಯೆಯ ಜನರು ಕಾಯುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ರೋಗಿಗಳ ಕೆಲವು ಸಂಬಂಧಿಕರು ರೋಗಿಗಳ ಬೆನ್ನನ್ನು ಉಜ್ಜಿಕೊಳ್ಳುವುದು ಕಂಡುಬರುತ್ತದೆ. ಅಷ್ಟೇ ಅಲ್ಲದೆ ಒಬ್ಬ ವ್ಯಕ್ತಿ ಪಿಪಿಇ ಕಿಟ್‌ನಂತೆ ತೋರುವ ದಿರಿಸು ಧರಿಸುವುದನ್ನು ವಿಡಿಯೊದಲ್ಲಿ ಕಾಣಬಹುದು.

“ಓಲ್ಡ್ ಸಿಟಿಯಲ್ಲಿರುವ (ಹೈದರಾಬಾದ್) ಅಪಾಯಕಾರಿ ಪರಿಸ್ಥಿತಿ” ಎಂಬ ಸಂದೇಶದೊಂದಿಗೆ ಅನೇಕ ಜನರು ಈ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳುತ್ತಿದ್ದಾರೆ.

 

ವಿಡಿಯೊವನ್ನು ರಿವರ್ಸ್ ಸರ್ಚ್ ಮೂಲಕ ಹುಡುಕಾಡಿದಾಗ ತಿಳಿದು ಬಂದಿದ್ದೇನೆಂದರೆ, ಪಾಕಿಸ್ತಾನದ ಲಾಹೋರ್‌ನ ಆಸ್ಪತ್ರೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಜನರು ಹೀಗೆ ಹೊರಗೆ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Patients Waited Outside Lahore Hospital Due To Fire – They Are Not COVID Positive

ಪಾಕಿಸ್ತಾನದ ನ್ಯೂಸ್ ಚಾನೆಲ್ ಸಮಾ.ಟಿ.ವಿ ಯ ವರದಿಯು, ಇದು ಜೂನ್ 13 ರ ಶನಿವಾರದಂದು ಲಾಹೋರ್‌ನ ಸರ್ವೀಸಸ್ ಆಸ್ಪತ್ರೆಯ ಶಸ್ತ್ರಚಿಕಿತ್ಸೆಯ ತುರ್ತು ವಾರ್ಡ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದಾಗಿನದ್ದು ಎಂದು ದೃಡಪಡಿಸುತ್ತದೆ.

Patients rescued as fire rages at Lahore’s Services Hospital

ಇದರಿಂದಾಗಿ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 40 ರೋಗಿಗಳನ್ನು ಸ್ಥಳಾಂತರಿಸಿ ಬೇರೆ ವಾರ್ಡ್‌ಗೆ ಸ್ಥಳಾಂತರಿಸಲಾಯಿತು ಎಂದು ವರದಿ ಉಲ್ಲೇಖಿಸಿದೆ.

ಅಷ್ಟೇ ಅಲ್ಲದೆ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್‌ ಕೂಡಾ ಈ ಘಟನೆಯ ಬಗ್ಗೆ ಟ್ವೀಟ್ ಮಾಡಿದೆ.

 

ಆದ್ದರಿಂದ, ಲಾಹೋರ್ ಆಸ್ಪತ್ರೆಯೊಂದರ ವಿಡಿಯೋವೊಂದನ್ನು ಭಾರತದ ಹೈದರಾಬಾದ್‌ನ ಪರಿಸ್ಥಿತಿಯೆಂಬತೆ ಚಿತ್ರಿಸಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ.


ಓದಿ: PM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?: ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...