Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಬಿಹಾರದಲ್ಲಿ EVM ಮತಯಂತ್ರಗಳನ್ನು ಕದಿಯುತ್ತಿದ್ದಾರಾ?

ಫ್ಯಾಕ್ಟ್‌ಚೆಕ್: ಬಿಹಾರದಲ್ಲಿ EVM ಮತಯಂತ್ರಗಳನ್ನು ಕದಿಯುತ್ತಿದ್ದಾರಾ?

ಅಜಯ್ ಪ್ರತಾಪ್ ಸಿಂಗ್ ಎಂಬುವವರು, "ದೇಶದಲ್ಲಿ ಏನಾಗುತ್ತಿದೆ? ನಿಮಗೆ ತಿಳಿದಿದೆಯೇ ಅಥವಾ ನೀವು ಮಲಗಿದ್ದೀರಾ, ಕಳ್ಳರು ಸಾರ್ವಜನಿಕವಾಗಿ ಕದಿಯುತ್ತಿದ್ದಾರೆ" ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

- Advertisement -
- Advertisement -

2020 ರ ಬಿಹಾರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ವಿದ್ಯುನ್ಮಾನ ಮತಯಂತ್ರ (EVM)ಗಳನ್ನು ಕಳವು ಮಾಡಲಾಗಿದೆ ಎಂಬ ಹೇಳಿಕೆಯೊಂದಿಗೆ EVM ಗಳನ್ನು ಅರಣ್ಯ ಪ್ರದೇಶದ ಮೂಲಕ ಸಾಗಿಸುವ ವ್ಯಕ್ತಿಯ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಸ್ಟೆಫ್ಫಿ ಎಂಬುವವರು ಈ ಚಿತ್ರಗಳನ್ನು ಹಂಚಿಕೊಂಡು, “EVM ಯಂತ್ರಗಳನ್ನು ಮತ್ತೆ ಪರಿಶೀಲಿಸಬೇಕು. ನಿತೀಶ್ ಕುಮಾರ್ ಜೈಲಿಗೆ ಹೋಗುತ್ತಾರೆಯೇ? ಬಿಹಾರದ ಜನತೆ ಕೇಳುತ್ತಿದ್ದಾರೆ, EVM ಯಂತ್ರವನ್ನು ಕದ್ದ ನಂತರ ಅವನು ಎಲ್ಲಿಗೆ ಹೋಗುತ್ತಿದ್ದಾನೆ? ಮೋದಿ ಆಯೋಗ ಕಳ್ಳ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನೈಜೀರಿಯಾದಲ್ಲಿ ನಟ ಸುಶಾಂತ್‌ಗೆ ನ್ಯಾಯ ಕೋರಿ ನಡೆಯಿತೆ ಪ್ರತಿಭಟನೆ?

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದೆಯೇ?

ಇದೇ ರೀತಿಯ ಹೇಳಿಕೆ ಮತ್ತು ಚಿತ್ರಗಳಿರುವ ಈ ಪೋಸ್ಟನ್ನು ಫೇಸ್‌ಬುಕ್‌ನಲ್ಲಿಯೂ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅಜಯ್ ಪ್ರತಾಪ್ ಸಿಂಗ್ ಎಂಬುವವರು, “ದೇಶದಲ್ಲಿ ಏನಾಗುತ್ತಿದೆ? ನಿಮಗೆ ತಿಳಿದಿದೆಯೇ ಅಥವಾ ನೀವು ಮಲಗಿದ್ದೀರಾ, ಕಳ್ಳರು ಸಾರ್ವಜನಿಕವಾಗಿ ಕದಿಯುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಹೀಗೆ ನೂರಾರು ಜನರು ಇದನ್ನು ಹಂಚಿಕೊಳ್ಳುತ್ತಿದ್ದಾರೆ.

ಫ್ಯಾಕ್ಟ್‌ಚೆಕ್:

ಈ ಚಿತ್ರಗಳನ್ನು ಆಧರಿಸಿ ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದಾಗ, 2019 ರ ಅಕ್ಟೋಬರ್‌ ತಿಂಗಳಿನ ಎರಡು ಟ್ವೀಟ್‌ಗಳು ಪತ್ತೆಯಾದವು. ಅದರಲ್ಲಿ ಈ ಫೋಟೋಗಳು ರಾಯಗಡ್‌ನದ್ದು ಎಂದು ಹೇಳಿದೆ. ಹಾಗಾಗಿ ರಾಯಗಡ್‌ ಮತದಾನದ ವಿವರವನ್ನು ಒಳಗೊಂಡಿರುವ ಹೆಚ್ಚಿನ ಟ್ವೀಟ್‌ಗಳಿಗಾಗಿ ಹುಡುಕಾಡಿದಾಗ, ರಾಯಗಡ್‌ನ ಜಿಲ್ಲಾ ಮಾಹಿತಿ ಕಚೇರಿಯ ಅಧಿಕೃತ ಹ್ಯಾಂಡಲ್ ಪೋಸ್ಟ್ ಮಾಡಿದ ಟ್ವೀಟ್ ಪತ್ತೆಯಾಯಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಹಕ್ಕೆ ಕಬ್ಬಿಣದ ಮುಳ್ಳುತಂತಿ ಸುತ್ತಿಕೊಂಡು ಅತ್ಯಾಚಾರದ ವಿರುದ್ಧ ಪ್ರತಿಭಟನೆ?- ವಾಸ್ತವವೇನು?

ಇದರಲ್ಲಿ, “ಕಲ್ಕರೈನಂತಹ ದೂರದ ದುರ್ಗಮ ಪ್ರದೇಶಗಳ ಮತಗಟ್ಟೆಗಳನ್ನು ತಲುಪುತ್ತಿರುವ ಸಿಬ್ಬಂದಿ. ನಾವು ನಿಮ್ಮ ಬಗ್ಗೆ ತುಂಬಾ ಹೆಮ್ಮೆಪಡುತ್ತೇವೆ” ಎಂದು ಬರೆಯಲಾಗಿದೆ.

ಹಾಗಾಗಿ ಇದರಿಂದ ತಿಳಿದುಬರುವುದೇನೆಂದರೆ, ಈ ಚಿತ್ರಗಳು ಬಿಹಾರ ಚುನಾವಣೆಯಲ್ಲಿ ಮತಯಂತ್ರಗಳನ್ನು ಕದಿಯಲಾಗುತ್ತಿದೆ ಎಂದು ಮಾಡಿರುವ ಆರೋಪ ಸುಳ್ಳಾಗಿದ್ದು, ಇದು ಚುನಾವಣಾ ಸಿಬ್ಬಂದಿಯು ಮತಯಂತ್ರಗಳೊಟ್ಟಿಗೆ ಮತಗಟ್ಟೆಯನ್ನು ತಲುಪುತ್ತಿರುವಾಗ ತೆಗೆದ ಚಿತ್ರವಾಗಿದೆ ಎಂಬುದು ಸ್ಪಷ್ಟವಾಗಿ ತಿಳಿದುಬಂದಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ವಿಶ್ವದ ಏಳನೇ ಹೆಚ್ಚು ವಿದ್ಯಾವಂತ ನಾಯಕ ಎಂಬುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...