Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ಇವರು ನಿಮ್ಮ ಪ್ರದೇಶಗಳಿಗೂ ಬಂದರೆ ನೀವೇನು ಮಾಡುತ್ತೀರಿ ಎಂಬ ಪ್ರಶ್ನೆಯೊಂದಿಗೆ ಚಿತ್ರ ವೈರಲಾಗಿದೆ.

- Advertisement -
- Advertisement -

ಹಲವಾರು ಜನರು ಆಕ್ರೋಶಗೊಂಡು ಕೋಲುಗಳನ್ನು ಹಿಡಿದು ಓಡಿ ಬರುತ್ತಿರುವ ಚಿತ್ರವೊಂದು ವೈರಲಾಗಿದ್ದು, ಅದು ಕೇರಳದ ಮುಸ್ಲಿಮರ ಚಿತ್ರವೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವೈರಲ್ ಚಿತ್ರದ ಜೊತೆಗೆ “ಇದು ಕೇರಳದ ಚಿತ್ರವಾಗಿದ್ದು, ಇಂತಹ ಜನರ ಗುಂಪು ನಿಮ್ಮ ಪ್ರದೇಶಗಳಿಗೆ ತಲುಪಿದರೆ ನೀವು ಸ್ವಾಗತಿಸುವಿರೊ ಅಥವಾ ಇಲ್ಲವೇ” ಎಂಬ ಸಂದೇಶ ಕೂಡಾ ಹರಡಲಾಗುತ್ತದೆ.

ಫ್ಯಾಕ್ಟ್‌‌ಚೆಕ್‌‌: 

ಈ ಚಿತ್ರವನ್ನು ರಿವರ್ಸ್ ಸರ್ಚ್ ನಡೆಸಿದಾಗ, ಬಾಂಗ್ಲಾದೇಶದ ಬರಹಗಾರ್ತಿ ತಸ್ಲೀಮಾ ನಸ್ರೀನ್ ಅವರ ಅಕ್ಟೋಬರ್ 2019 ರ ಟ್ವೀಟ್‌ನಲ್ಲಿ ಈ ಚಿತ್ರವನ್ನು ಕಾಣಬಹುದಾಗಿದೆ. ಅದರಲ್ಲಿ ತಸ್ಲೀಮ ಅವರು ಈ ಚಿತ್ರವನ್ನು ಬಾಂಗ್ಲಾದೇಶವೆಂದು ಉಲ್ಲೇಖಿಸಿದ್ದಾರೆ.

ಅಲ್ಲದೆ ಇದೇ ಚಿತ್ರವು ಗೂಗಲ್‌ನಲ್ಲಿ ಹಲವಾರು ಲಭ್ಯವಿದ್ದು, ಗೆಟ್ಟಿ ಇಮೇಜ್‌ನಲ್ಲಿ ಕೂಡಾ ಈ ಚಿತ್ರವಿದೆ. ಈ ಛಾಯಚಿತ್ರ ಎಎಫ್‌ಪಿ ಕ್ಲಿಕ್ಕಿಸಿದ್ದು, ಈ ದೃಶ್ಯವು 5 ಮೇ 2013 ರಂದು ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನಡೆದ ಪ್ರತಿಭಟನೆಯಾಗಿದೆ. ಚಿತ್ರವೂ ಪ್ರತಿಭಟನಾಗಾರರು ಬೀದಿಯಲ್ಲಿ ಮೆರವಣಿಗೆ ನಡೆಸುತ್ತಿರುವುದಾಗಿದೆ.

ಈ ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಧರ್ಮನಿಂದೆಯ ಹೊಸ ಕಾನೂನನ್ನು ಕೋರಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಶೀರ್ಷಿಕೆ ತಿಳಿಸುತ್ತದೆ.

ದೇಶದಲ್ಲಿ ಹೊಸ ಕಾನೂನನ್ನು ತರಬೇಕು ಎಂದು 5 ಮೇ 2013 ರಂದು ನಡೆದ ಹಲವಾರು ಚಿತ್ರಗಳು ಸಿಗುತ್ತದೆ. ಅಲ್ ಜಜೀರಾ ವರದಿಯ ಪ್ರಕಾರ, ಪ್ರತಿಭಟನೆಗಳು ಹಿಂಸಾತ್ಮಕ ಘರ್ಷಣೆಗಳಾಗಿ ಮಾರ್ಪಟ್ಟಿದ್ದು, ಅದರಲ್ಲಿ ಅನೇಕ ಜನರು ಸಾವಿಗೀಡಾದರು ಎಂದು ಹೇಳಿದೆ. ವರದಿಯಲ್ಲಿ ಪ್ರತಿಭಟನೆಯನ್ನು ಹೆಫಜತ್-ಎ-ಇಸ್ಲಾಂ ಎಂಬ ಗುಂಪಿನ ಜನರು ಸಂಘಟಿಸಿದ್ದರು ಎಂದು ಅದು ಹೇಳಿದೆ.

ಈ ಬಗ್ಗೆ ಇನ್ನಷ್ಟು ಹುಡುಕಿದಾಗ ಈ ಪ್ರತಿಭಟನೆಯು ಎಪ್ರಿಲ್ 2013 ರಿಂದ ನಡೆಯುತ್ತಿದೆ ಎಂದು ವರದಿಯಾಗಿದೆ.

“ಹೆಫಜತ್-ಇ-ಇಸ್ಲಾಂ 2013 ಬಾಂಗ್ಲಾದೇಶ ಢಾಕಾ ಪ್ರತಿಭಟನೆ” ಎಂಬ ಕೀ ವರ್ಡ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಿದರೆ ಅಲಾಮಿ ವೆಬ್‌ಸೈಟ್‌ನಲ್ಲಿ ಇದರ ಚಿತ್ರಗಳನ್ನು ನಮಗೆ ಕಾಣಬಹುದಾಗಿದೆ. ಅಲ್ಲದೆ ವೈರಲಾಗುತ್ತಿರುಯವ ಚಿತ್ರದ ಬೇರೆ ಕೋನದ ಚಿತ್ರಗಳು ಕೂಡಾ ಅಲ್ಲಿ ಲಭ್ಯವಿದೆ.

ಢಾಕಾದ ಪೋಸ್ಟಾಗೋಲಾ ಬಳಿಯ ಬಾಂಗ್ಲಾದೇಶ-ಚೀನಾ ಸ್ನೇಹ ಸೇತುವೆಯಲ್ಲಿ 2013 ರ ಮೇ 5 ರಂದು ಇದನ್ನು ಕ್ಲಿಕ್ಕಿಸಲಾಗಿದೆ ಎಂದು ಫೋಟೋದ ವಿವರಣೆಯಲ್ಲಿ ಹೇಳಲಾಗಿದೆ.

ಈ ಎರಡೂ ಫೋಟೋಗಳನ್ನು ವೈರಲ್ ಫೋಟೋದೊಂದಿಗೆ ಹೋಲಿಸಿದಾಗ, ಅವು ಒಂದೇ ರ್‍ಯಾಲಿಯದ್ದಾಗಿದೆ ಎಂದು ನಾವು ಗಮನಿಸಬಹುದಾಗಿದ್ದು, ಆದರೆ ವಿಭಿನ್ನ ಕೋನಗಳಿಂದ ಚಿತ್ರೀಕರಿಸಲಾಗಿದೆ.

ಆದ್ದರಿಂದ, 2013 ರಲ್ಲಿ ಬಾಂಗ್ಲಾದೇಶದ ಢಾಕಾದಲ್ಲಿ ನಡೆದ ಹಳೆಯ ಘಟನೆಯ ಫೋಟೋವನ್ನು ಕೇರಳದಲ್ಲಿ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿದೆ ಎಂಬುವುದು ಸ್ಪಷ್ಟಮಾಗುತ್ತದೆ.


ಓದಿ: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರವೆ ??; ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...