Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ಇವರು ನಿಮ್ಮ ಪ್ರದೇಶಗಳಿಗೂ ಬಂದರೆ ನೀವೇನು ಮಾಡುತ್ತೀರಿ ಎಂಬ ಪ್ರಶ್ನೆಯೊಂದಿಗೆ ಚಿತ್ರ ವೈರಲಾಗಿದೆ.

- Advertisement -
- Advertisement -

ಹಲವಾರು ಜನರು ಆಕ್ರೋಶಗೊಂಡು ಕೋಲುಗಳನ್ನು ಹಿಡಿದು ಓಡಿ ಬರುತ್ತಿರುವ ಚಿತ್ರವೊಂದು ವೈರಲಾಗಿದ್ದು, ಅದು ಕೇರಳದ ಮುಸ್ಲಿಮರ ಚಿತ್ರವೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವೈರಲ್ ಚಿತ್ರದ ಜೊತೆಗೆ “ಇದು ಕೇರಳದ ಚಿತ್ರವಾಗಿದ್ದು, ಇಂತಹ ಜನರ ಗುಂಪು ನಿಮ್ಮ ಪ್ರದೇಶಗಳಿಗೆ ತಲುಪಿದರೆ ನೀವು ಸ್ವಾಗತಿಸುವಿರೊ ಅಥವಾ ಇಲ್ಲವೇ” ಎಂಬ ಸಂದೇಶ ಕೂಡಾ ಹರಡಲಾಗುತ್ತದೆ.

ಫ್ಯಾಕ್ಟ್‌‌ಚೆಕ್‌‌: 

ಈ ಚಿತ್ರವನ್ನು ರಿವರ್ಸ್ ಸರ್ಚ್ ನಡೆಸಿದಾಗ, ಬಾಂಗ್ಲಾದೇಶದ ಬರಹಗಾರ್ತಿ ತಸ್ಲೀಮಾ ನಸ್ರೀನ್ ಅವರ ಅಕ್ಟೋಬರ್ 2019 ರ ಟ್ವೀಟ್‌ನಲ್ಲಿ ಈ ಚಿತ್ರವನ್ನು ಕಾಣಬಹುದಾಗಿದೆ. ಅದರಲ್ಲಿ ತಸ್ಲೀಮ ಅವರು ಈ ಚಿತ್ರವನ್ನು ಬಾಂಗ್ಲಾದೇಶವೆಂದು ಉಲ್ಲೇಖಿಸಿದ್ದಾರೆ.

ಅಲ್ಲದೆ ಇದೇ ಚಿತ್ರವು ಗೂಗಲ್‌ನಲ್ಲಿ ಹಲವಾರು ಲಭ್ಯವಿದ್ದು, ಗೆಟ್ಟಿ ಇಮೇಜ್‌ನಲ್ಲಿ ಕೂಡಾ ಈ ಚಿತ್ರವಿದೆ. ಈ ಛಾಯಚಿತ್ರ ಎಎಫ್‌ಪಿ ಕ್ಲಿಕ್ಕಿಸಿದ್ದು, ಈ ದೃಶ್ಯವು 5 ಮೇ 2013 ರಂದು ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನಡೆದ ಪ್ರತಿಭಟನೆಯಾಗಿದೆ. ಚಿತ್ರವೂ ಪ್ರತಿಭಟನಾಗಾರರು ಬೀದಿಯಲ್ಲಿ ಮೆರವಣಿಗೆ ನಡೆಸುತ್ತಿರುವುದಾಗಿದೆ.

ಈ ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಧರ್ಮನಿಂದೆಯ ಹೊಸ ಕಾನೂನನ್ನು ಕೋರಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಶೀರ್ಷಿಕೆ ತಿಳಿಸುತ್ತದೆ.

ದೇಶದಲ್ಲಿ ಹೊಸ ಕಾನೂನನ್ನು ತರಬೇಕು ಎಂದು 5 ಮೇ 2013 ರಂದು ನಡೆದ ಹಲವಾರು ಚಿತ್ರಗಳು ಸಿಗುತ್ತದೆ. ಅಲ್ ಜಜೀರಾ ವರದಿಯ ಪ್ರಕಾರ, ಪ್ರತಿಭಟನೆಗಳು ಹಿಂಸಾತ್ಮಕ ಘರ್ಷಣೆಗಳಾಗಿ ಮಾರ್ಪಟ್ಟಿದ್ದು, ಅದರಲ್ಲಿ ಅನೇಕ ಜನರು ಸಾವಿಗೀಡಾದರು ಎಂದು ಹೇಳಿದೆ. ವರದಿಯಲ್ಲಿ ಪ್ರತಿಭಟನೆಯನ್ನು ಹೆಫಜತ್-ಎ-ಇಸ್ಲಾಂ ಎಂಬ ಗುಂಪಿನ ಜನರು ಸಂಘಟಿಸಿದ್ದರು ಎಂದು ಅದು ಹೇಳಿದೆ.

ಈ ಬಗ್ಗೆ ಇನ್ನಷ್ಟು ಹುಡುಕಿದಾಗ ಈ ಪ್ರತಿಭಟನೆಯು ಎಪ್ರಿಲ್ 2013 ರಿಂದ ನಡೆಯುತ್ತಿದೆ ಎಂದು ವರದಿಯಾಗಿದೆ.

“ಹೆಫಜತ್-ಇ-ಇಸ್ಲಾಂ 2013 ಬಾಂಗ್ಲಾದೇಶ ಢಾಕಾ ಪ್ರತಿಭಟನೆ” ಎಂಬ ಕೀ ವರ್ಡ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಿದರೆ ಅಲಾಮಿ ವೆಬ್‌ಸೈಟ್‌ನಲ್ಲಿ ಇದರ ಚಿತ್ರಗಳನ್ನು ನಮಗೆ ಕಾಣಬಹುದಾಗಿದೆ. ಅಲ್ಲದೆ ವೈರಲಾಗುತ್ತಿರುಯವ ಚಿತ್ರದ ಬೇರೆ ಕೋನದ ಚಿತ್ರಗಳು ಕೂಡಾ ಅಲ್ಲಿ ಲಭ್ಯವಿದೆ.

ಢಾಕಾದ ಪೋಸ್ಟಾಗೋಲಾ ಬಳಿಯ ಬಾಂಗ್ಲಾದೇಶ-ಚೀನಾ ಸ್ನೇಹ ಸೇತುವೆಯಲ್ಲಿ 2013 ರ ಮೇ 5 ರಂದು ಇದನ್ನು ಕ್ಲಿಕ್ಕಿಸಲಾಗಿದೆ ಎಂದು ಫೋಟೋದ ವಿವರಣೆಯಲ್ಲಿ ಹೇಳಲಾಗಿದೆ.

ಈ ಎರಡೂ ಫೋಟೋಗಳನ್ನು ವೈರಲ್ ಫೋಟೋದೊಂದಿಗೆ ಹೋಲಿಸಿದಾಗ, ಅವು ಒಂದೇ ರ್‍ಯಾಲಿಯದ್ದಾಗಿದೆ ಎಂದು ನಾವು ಗಮನಿಸಬಹುದಾಗಿದ್ದು, ಆದರೆ ವಿಭಿನ್ನ ಕೋನಗಳಿಂದ ಚಿತ್ರೀಕರಿಸಲಾಗಿದೆ.

ಆದ್ದರಿಂದ, 2013 ರಲ್ಲಿ ಬಾಂಗ್ಲಾದೇಶದ ಢಾಕಾದಲ್ಲಿ ನಡೆದ ಹಳೆಯ ಘಟನೆಯ ಫೋಟೋವನ್ನು ಕೇರಳದಲ್ಲಿ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿದೆ ಎಂಬುವುದು ಸ್ಪಷ್ಟಮಾಗುತ್ತದೆ.


ಓದಿ: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರವೆ ??; ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...