Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ಇವರು ನಿಮ್ಮ ಪ್ರದೇಶಗಳಿಗೂ ಬಂದರೆ ನೀವೇನು ಮಾಡುತ್ತೀರಿ ಎಂಬ ಪ್ರಶ್ನೆಯೊಂದಿಗೆ ಚಿತ್ರ ವೈರಲಾಗಿದೆ.

- Advertisement -
- Advertisement -

ಹಲವಾರು ಜನರು ಆಕ್ರೋಶಗೊಂಡು ಕೋಲುಗಳನ್ನು ಹಿಡಿದು ಓಡಿ ಬರುತ್ತಿರುವ ಚಿತ್ರವೊಂದು ವೈರಲಾಗಿದ್ದು, ಅದು ಕೇರಳದ ಮುಸ್ಲಿಮರ ಚಿತ್ರವೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವೈರಲ್ ಚಿತ್ರದ ಜೊತೆಗೆ “ಇದು ಕೇರಳದ ಚಿತ್ರವಾಗಿದ್ದು, ಇಂತಹ ಜನರ ಗುಂಪು ನಿಮ್ಮ ಪ್ರದೇಶಗಳಿಗೆ ತಲುಪಿದರೆ ನೀವು ಸ್ವಾಗತಿಸುವಿರೊ ಅಥವಾ ಇಲ್ಲವೇ” ಎಂಬ ಸಂದೇಶ ಕೂಡಾ ಹರಡಲಾಗುತ್ತದೆ.

ಫ್ಯಾಕ್ಟ್‌‌ಚೆಕ್‌‌: 

ಈ ಚಿತ್ರವನ್ನು ರಿವರ್ಸ್ ಸರ್ಚ್ ನಡೆಸಿದಾಗ, ಬಾಂಗ್ಲಾದೇಶದ ಬರಹಗಾರ್ತಿ ತಸ್ಲೀಮಾ ನಸ್ರೀನ್ ಅವರ ಅಕ್ಟೋಬರ್ 2019 ರ ಟ್ವೀಟ್‌ನಲ್ಲಿ ಈ ಚಿತ್ರವನ್ನು ಕಾಣಬಹುದಾಗಿದೆ. ಅದರಲ್ಲಿ ತಸ್ಲೀಮ ಅವರು ಈ ಚಿತ್ರವನ್ನು ಬಾಂಗ್ಲಾದೇಶವೆಂದು ಉಲ್ಲೇಖಿಸಿದ್ದಾರೆ.

ಅಲ್ಲದೆ ಇದೇ ಚಿತ್ರವು ಗೂಗಲ್‌ನಲ್ಲಿ ಹಲವಾರು ಲಭ್ಯವಿದ್ದು, ಗೆಟ್ಟಿ ಇಮೇಜ್‌ನಲ್ಲಿ ಕೂಡಾ ಈ ಚಿತ್ರವಿದೆ. ಈ ಛಾಯಚಿತ್ರ ಎಎಫ್‌ಪಿ ಕ್ಲಿಕ್ಕಿಸಿದ್ದು, ಈ ದೃಶ್ಯವು 5 ಮೇ 2013 ರಂದು ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನಡೆದ ಪ್ರತಿಭಟನೆಯಾಗಿದೆ. ಚಿತ್ರವೂ ಪ್ರತಿಭಟನಾಗಾರರು ಬೀದಿಯಲ್ಲಿ ಮೆರವಣಿಗೆ ನಡೆಸುತ್ತಿರುವುದಾಗಿದೆ.

ಈ ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಧರ್ಮನಿಂದೆಯ ಹೊಸ ಕಾನೂನನ್ನು ಕೋರಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಶೀರ್ಷಿಕೆ ತಿಳಿಸುತ್ತದೆ.

ದೇಶದಲ್ಲಿ ಹೊಸ ಕಾನೂನನ್ನು ತರಬೇಕು ಎಂದು 5 ಮೇ 2013 ರಂದು ನಡೆದ ಹಲವಾರು ಚಿತ್ರಗಳು ಸಿಗುತ್ತದೆ. ಅಲ್ ಜಜೀರಾ ವರದಿಯ ಪ್ರಕಾರ, ಪ್ರತಿಭಟನೆಗಳು ಹಿಂಸಾತ್ಮಕ ಘರ್ಷಣೆಗಳಾಗಿ ಮಾರ್ಪಟ್ಟಿದ್ದು, ಅದರಲ್ಲಿ ಅನೇಕ ಜನರು ಸಾವಿಗೀಡಾದರು ಎಂದು ಹೇಳಿದೆ. ವರದಿಯಲ್ಲಿ ಪ್ರತಿಭಟನೆಯನ್ನು ಹೆಫಜತ್-ಎ-ಇಸ್ಲಾಂ ಎಂಬ ಗುಂಪಿನ ಜನರು ಸಂಘಟಿಸಿದ್ದರು ಎಂದು ಅದು ಹೇಳಿದೆ.

ಈ ಬಗ್ಗೆ ಇನ್ನಷ್ಟು ಹುಡುಕಿದಾಗ ಈ ಪ್ರತಿಭಟನೆಯು ಎಪ್ರಿಲ್ 2013 ರಿಂದ ನಡೆಯುತ್ತಿದೆ ಎಂದು ವರದಿಯಾಗಿದೆ.

“ಹೆಫಜತ್-ಇ-ಇಸ್ಲಾಂ 2013 ಬಾಂಗ್ಲಾದೇಶ ಢಾಕಾ ಪ್ರತಿಭಟನೆ” ಎಂಬ ಕೀ ವರ್ಡ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಿದರೆ ಅಲಾಮಿ ವೆಬ್‌ಸೈಟ್‌ನಲ್ಲಿ ಇದರ ಚಿತ್ರಗಳನ್ನು ನಮಗೆ ಕಾಣಬಹುದಾಗಿದೆ. ಅಲ್ಲದೆ ವೈರಲಾಗುತ್ತಿರುಯವ ಚಿತ್ರದ ಬೇರೆ ಕೋನದ ಚಿತ್ರಗಳು ಕೂಡಾ ಅಲ್ಲಿ ಲಭ್ಯವಿದೆ.

ಢಾಕಾದ ಪೋಸ್ಟಾಗೋಲಾ ಬಳಿಯ ಬಾಂಗ್ಲಾದೇಶ-ಚೀನಾ ಸ್ನೇಹ ಸೇತುವೆಯಲ್ಲಿ 2013 ರ ಮೇ 5 ರಂದು ಇದನ್ನು ಕ್ಲಿಕ್ಕಿಸಲಾಗಿದೆ ಎಂದು ಫೋಟೋದ ವಿವರಣೆಯಲ್ಲಿ ಹೇಳಲಾಗಿದೆ.

ಈ ಎರಡೂ ಫೋಟೋಗಳನ್ನು ವೈರಲ್ ಫೋಟೋದೊಂದಿಗೆ ಹೋಲಿಸಿದಾಗ, ಅವು ಒಂದೇ ರ್‍ಯಾಲಿಯದ್ದಾಗಿದೆ ಎಂದು ನಾವು ಗಮನಿಸಬಹುದಾಗಿದ್ದು, ಆದರೆ ವಿಭಿನ್ನ ಕೋನಗಳಿಂದ ಚಿತ್ರೀಕರಿಸಲಾಗಿದೆ.

ಆದ್ದರಿಂದ, 2013 ರಲ್ಲಿ ಬಾಂಗ್ಲಾದೇಶದ ಢಾಕಾದಲ್ಲಿ ನಡೆದ ಹಳೆಯ ಘಟನೆಯ ಫೋಟೋವನ್ನು ಕೇರಳದಲ್ಲಿ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿದೆ ಎಂಬುವುದು ಸ್ಪಷ್ಟಮಾಗುತ್ತದೆ.


ಓದಿ: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರವೆ ??; ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...