Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ಇವರು ನಿಮ್ಮ ಪ್ರದೇಶಗಳಿಗೂ ಬಂದರೆ ನೀವೇನು ಮಾಡುತ್ತೀರಿ ಎಂಬ ಪ್ರಶ್ನೆಯೊಂದಿಗೆ ಚಿತ್ರ ವೈರಲಾಗಿದೆ.

- Advertisement -
- Advertisement -

ಹಲವಾರು ಜನರು ಆಕ್ರೋಶಗೊಂಡು ಕೋಲುಗಳನ್ನು ಹಿಡಿದು ಓಡಿ ಬರುತ್ತಿರುವ ಚಿತ್ರವೊಂದು ವೈರಲಾಗಿದ್ದು, ಅದು ಕೇರಳದ ಮುಸ್ಲಿಮರ ಚಿತ್ರವೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವೈರಲ್ ಚಿತ್ರದ ಜೊತೆಗೆ “ಇದು ಕೇರಳದ ಚಿತ್ರವಾಗಿದ್ದು, ಇಂತಹ ಜನರ ಗುಂಪು ನಿಮ್ಮ ಪ್ರದೇಶಗಳಿಗೆ ತಲುಪಿದರೆ ನೀವು ಸ್ವಾಗತಿಸುವಿರೊ ಅಥವಾ ಇಲ್ಲವೇ” ಎಂಬ ಸಂದೇಶ ಕೂಡಾ ಹರಡಲಾಗುತ್ತದೆ.

ಫ್ಯಾಕ್ಟ್‌‌ಚೆಕ್‌‌: 

ಈ ಚಿತ್ರವನ್ನು ರಿವರ್ಸ್ ಸರ್ಚ್ ನಡೆಸಿದಾಗ, ಬಾಂಗ್ಲಾದೇಶದ ಬರಹಗಾರ್ತಿ ತಸ್ಲೀಮಾ ನಸ್ರೀನ್ ಅವರ ಅಕ್ಟೋಬರ್ 2019 ರ ಟ್ವೀಟ್‌ನಲ್ಲಿ ಈ ಚಿತ್ರವನ್ನು ಕಾಣಬಹುದಾಗಿದೆ. ಅದರಲ್ಲಿ ತಸ್ಲೀಮ ಅವರು ಈ ಚಿತ್ರವನ್ನು ಬಾಂಗ್ಲಾದೇಶವೆಂದು ಉಲ್ಲೇಖಿಸಿದ್ದಾರೆ.

ಅಲ್ಲದೆ ಇದೇ ಚಿತ್ರವು ಗೂಗಲ್‌ನಲ್ಲಿ ಹಲವಾರು ಲಭ್ಯವಿದ್ದು, ಗೆಟ್ಟಿ ಇಮೇಜ್‌ನಲ್ಲಿ ಕೂಡಾ ಈ ಚಿತ್ರವಿದೆ. ಈ ಛಾಯಚಿತ್ರ ಎಎಫ್‌ಪಿ ಕ್ಲಿಕ್ಕಿಸಿದ್ದು, ಈ ದೃಶ್ಯವು 5 ಮೇ 2013 ರಂದು ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನಡೆದ ಪ್ರತಿಭಟನೆಯಾಗಿದೆ. ಚಿತ್ರವೂ ಪ್ರತಿಭಟನಾಗಾರರು ಬೀದಿಯಲ್ಲಿ ಮೆರವಣಿಗೆ ನಡೆಸುತ್ತಿರುವುದಾಗಿದೆ.

ಈ ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಧರ್ಮನಿಂದೆಯ ಹೊಸ ಕಾನೂನನ್ನು ಕೋರಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಶೀರ್ಷಿಕೆ ತಿಳಿಸುತ್ತದೆ.

ದೇಶದಲ್ಲಿ ಹೊಸ ಕಾನೂನನ್ನು ತರಬೇಕು ಎಂದು 5 ಮೇ 2013 ರಂದು ನಡೆದ ಹಲವಾರು ಚಿತ್ರಗಳು ಸಿಗುತ್ತದೆ. ಅಲ್ ಜಜೀರಾ ವರದಿಯ ಪ್ರಕಾರ, ಪ್ರತಿಭಟನೆಗಳು ಹಿಂಸಾತ್ಮಕ ಘರ್ಷಣೆಗಳಾಗಿ ಮಾರ್ಪಟ್ಟಿದ್ದು, ಅದರಲ್ಲಿ ಅನೇಕ ಜನರು ಸಾವಿಗೀಡಾದರು ಎಂದು ಹೇಳಿದೆ. ವರದಿಯಲ್ಲಿ ಪ್ರತಿಭಟನೆಯನ್ನು ಹೆಫಜತ್-ಎ-ಇಸ್ಲಾಂ ಎಂಬ ಗುಂಪಿನ ಜನರು ಸಂಘಟಿಸಿದ್ದರು ಎಂದು ಅದು ಹೇಳಿದೆ.

ಈ ಬಗ್ಗೆ ಇನ್ನಷ್ಟು ಹುಡುಕಿದಾಗ ಈ ಪ್ರತಿಭಟನೆಯು ಎಪ್ರಿಲ್ 2013 ರಿಂದ ನಡೆಯುತ್ತಿದೆ ಎಂದು ವರದಿಯಾಗಿದೆ.

“ಹೆಫಜತ್-ಇ-ಇಸ್ಲಾಂ 2013 ಬಾಂಗ್ಲಾದೇಶ ಢಾಕಾ ಪ್ರತಿಭಟನೆ” ಎಂಬ ಕೀ ವರ್ಡ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಿದರೆ ಅಲಾಮಿ ವೆಬ್‌ಸೈಟ್‌ನಲ್ಲಿ ಇದರ ಚಿತ್ರಗಳನ್ನು ನಮಗೆ ಕಾಣಬಹುದಾಗಿದೆ. ಅಲ್ಲದೆ ವೈರಲಾಗುತ್ತಿರುಯವ ಚಿತ್ರದ ಬೇರೆ ಕೋನದ ಚಿತ್ರಗಳು ಕೂಡಾ ಅಲ್ಲಿ ಲಭ್ಯವಿದೆ.

ಢಾಕಾದ ಪೋಸ್ಟಾಗೋಲಾ ಬಳಿಯ ಬಾಂಗ್ಲಾದೇಶ-ಚೀನಾ ಸ್ನೇಹ ಸೇತುವೆಯಲ್ಲಿ 2013 ರ ಮೇ 5 ರಂದು ಇದನ್ನು ಕ್ಲಿಕ್ಕಿಸಲಾಗಿದೆ ಎಂದು ಫೋಟೋದ ವಿವರಣೆಯಲ್ಲಿ ಹೇಳಲಾಗಿದೆ.

ಈ ಎರಡೂ ಫೋಟೋಗಳನ್ನು ವೈರಲ್ ಫೋಟೋದೊಂದಿಗೆ ಹೋಲಿಸಿದಾಗ, ಅವು ಒಂದೇ ರ್‍ಯಾಲಿಯದ್ದಾಗಿದೆ ಎಂದು ನಾವು ಗಮನಿಸಬಹುದಾಗಿದ್ದು, ಆದರೆ ವಿಭಿನ್ನ ಕೋನಗಳಿಂದ ಚಿತ್ರೀಕರಿಸಲಾಗಿದೆ.

ಆದ್ದರಿಂದ, 2013 ರಲ್ಲಿ ಬಾಂಗ್ಲಾದೇಶದ ಢಾಕಾದಲ್ಲಿ ನಡೆದ ಹಳೆಯ ಘಟನೆಯ ಫೋಟೋವನ್ನು ಕೇರಳದಲ್ಲಿ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿದೆ ಎಂಬುವುದು ಸ್ಪಷ್ಟಮಾಗುತ್ತದೆ.


ಓದಿ: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರವೆ ??; ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...