Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ಇವರು ನಿಮ್ಮ ಪ್ರದೇಶಗಳಿಗೂ ಬಂದರೆ ನೀವೇನು ಮಾಡುತ್ತೀರಿ ಎಂಬ ಪ್ರಶ್ನೆಯೊಂದಿಗೆ ಚಿತ್ರ ವೈರಲಾಗಿದೆ.

- Advertisement -
- Advertisement -

ಹಲವಾರು ಜನರು ಆಕ್ರೋಶಗೊಂಡು ಕೋಲುಗಳನ್ನು ಹಿಡಿದು ಓಡಿ ಬರುತ್ತಿರುವ ಚಿತ್ರವೊಂದು ವೈರಲಾಗಿದ್ದು, ಅದು ಕೇರಳದ ಮುಸ್ಲಿಮರ ಚಿತ್ರವೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವೈರಲ್ ಚಿತ್ರದ ಜೊತೆಗೆ “ಇದು ಕೇರಳದ ಚಿತ್ರವಾಗಿದ್ದು, ಇಂತಹ ಜನರ ಗುಂಪು ನಿಮ್ಮ ಪ್ರದೇಶಗಳಿಗೆ ತಲುಪಿದರೆ ನೀವು ಸ್ವಾಗತಿಸುವಿರೊ ಅಥವಾ ಇಲ್ಲವೇ” ಎಂಬ ಸಂದೇಶ ಕೂಡಾ ಹರಡಲಾಗುತ್ತದೆ.

ಫ್ಯಾಕ್ಟ್‌‌ಚೆಕ್‌‌: 

ಈ ಚಿತ್ರವನ್ನು ರಿವರ್ಸ್ ಸರ್ಚ್ ನಡೆಸಿದಾಗ, ಬಾಂಗ್ಲಾದೇಶದ ಬರಹಗಾರ್ತಿ ತಸ್ಲೀಮಾ ನಸ್ರೀನ್ ಅವರ ಅಕ್ಟೋಬರ್ 2019 ರ ಟ್ವೀಟ್‌ನಲ್ಲಿ ಈ ಚಿತ್ರವನ್ನು ಕಾಣಬಹುದಾಗಿದೆ. ಅದರಲ್ಲಿ ತಸ್ಲೀಮ ಅವರು ಈ ಚಿತ್ರವನ್ನು ಬಾಂಗ್ಲಾದೇಶವೆಂದು ಉಲ್ಲೇಖಿಸಿದ್ದಾರೆ.

ಅಲ್ಲದೆ ಇದೇ ಚಿತ್ರವು ಗೂಗಲ್‌ನಲ್ಲಿ ಹಲವಾರು ಲಭ್ಯವಿದ್ದು, ಗೆಟ್ಟಿ ಇಮೇಜ್‌ನಲ್ಲಿ ಕೂಡಾ ಈ ಚಿತ್ರವಿದೆ. ಈ ಛಾಯಚಿತ್ರ ಎಎಫ್‌ಪಿ ಕ್ಲಿಕ್ಕಿಸಿದ್ದು, ಈ ದೃಶ್ಯವು 5 ಮೇ 2013 ರಂದು ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನಡೆದ ಪ್ರತಿಭಟನೆಯಾಗಿದೆ. ಚಿತ್ರವೂ ಪ್ರತಿಭಟನಾಗಾರರು ಬೀದಿಯಲ್ಲಿ ಮೆರವಣಿಗೆ ನಡೆಸುತ್ತಿರುವುದಾಗಿದೆ.

ಈ ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಧರ್ಮನಿಂದೆಯ ಹೊಸ ಕಾನೂನನ್ನು ಕೋರಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಶೀರ್ಷಿಕೆ ತಿಳಿಸುತ್ತದೆ.

ದೇಶದಲ್ಲಿ ಹೊಸ ಕಾನೂನನ್ನು ತರಬೇಕು ಎಂದು 5 ಮೇ 2013 ರಂದು ನಡೆದ ಹಲವಾರು ಚಿತ್ರಗಳು ಸಿಗುತ್ತದೆ. ಅಲ್ ಜಜೀರಾ ವರದಿಯ ಪ್ರಕಾರ, ಪ್ರತಿಭಟನೆಗಳು ಹಿಂಸಾತ್ಮಕ ಘರ್ಷಣೆಗಳಾಗಿ ಮಾರ್ಪಟ್ಟಿದ್ದು, ಅದರಲ್ಲಿ ಅನೇಕ ಜನರು ಸಾವಿಗೀಡಾದರು ಎಂದು ಹೇಳಿದೆ. ವರದಿಯಲ್ಲಿ ಪ್ರತಿಭಟನೆಯನ್ನು ಹೆಫಜತ್-ಎ-ಇಸ್ಲಾಂ ಎಂಬ ಗುಂಪಿನ ಜನರು ಸಂಘಟಿಸಿದ್ದರು ಎಂದು ಅದು ಹೇಳಿದೆ.

ಈ ಬಗ್ಗೆ ಇನ್ನಷ್ಟು ಹುಡುಕಿದಾಗ ಈ ಪ್ರತಿಭಟನೆಯು ಎಪ್ರಿಲ್ 2013 ರಿಂದ ನಡೆಯುತ್ತಿದೆ ಎಂದು ವರದಿಯಾಗಿದೆ.

“ಹೆಫಜತ್-ಇ-ಇಸ್ಲಾಂ 2013 ಬಾಂಗ್ಲಾದೇಶ ಢಾಕಾ ಪ್ರತಿಭಟನೆ” ಎಂಬ ಕೀ ವರ್ಡ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಿದರೆ ಅಲಾಮಿ ವೆಬ್‌ಸೈಟ್‌ನಲ್ಲಿ ಇದರ ಚಿತ್ರಗಳನ್ನು ನಮಗೆ ಕಾಣಬಹುದಾಗಿದೆ. ಅಲ್ಲದೆ ವೈರಲಾಗುತ್ತಿರುಯವ ಚಿತ್ರದ ಬೇರೆ ಕೋನದ ಚಿತ್ರಗಳು ಕೂಡಾ ಅಲ್ಲಿ ಲಭ್ಯವಿದೆ.

ಢಾಕಾದ ಪೋಸ್ಟಾಗೋಲಾ ಬಳಿಯ ಬಾಂಗ್ಲಾದೇಶ-ಚೀನಾ ಸ್ನೇಹ ಸೇತುವೆಯಲ್ಲಿ 2013 ರ ಮೇ 5 ರಂದು ಇದನ್ನು ಕ್ಲಿಕ್ಕಿಸಲಾಗಿದೆ ಎಂದು ಫೋಟೋದ ವಿವರಣೆಯಲ್ಲಿ ಹೇಳಲಾಗಿದೆ.

ಈ ಎರಡೂ ಫೋಟೋಗಳನ್ನು ವೈರಲ್ ಫೋಟೋದೊಂದಿಗೆ ಹೋಲಿಸಿದಾಗ, ಅವು ಒಂದೇ ರ್‍ಯಾಲಿಯದ್ದಾಗಿದೆ ಎಂದು ನಾವು ಗಮನಿಸಬಹುದಾಗಿದ್ದು, ಆದರೆ ವಿಭಿನ್ನ ಕೋನಗಳಿಂದ ಚಿತ್ರೀಕರಿಸಲಾಗಿದೆ.

ಆದ್ದರಿಂದ, 2013 ರಲ್ಲಿ ಬಾಂಗ್ಲಾದೇಶದ ಢಾಕಾದಲ್ಲಿ ನಡೆದ ಹಳೆಯ ಘಟನೆಯ ಫೋಟೋವನ್ನು ಕೇರಳದಲ್ಲಿ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿದೆ ಎಂಬುವುದು ಸ್ಪಷ್ಟಮಾಗುತ್ತದೆ.


ಓದಿ: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರವೆ ??; ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...