Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ಇವರು ನಿಮ್ಮ ಪ್ರದೇಶಗಳಿಗೂ ಬಂದರೆ ನೀವೇನು ಮಾಡುತ್ತೀರಿ ಎಂಬ ಪ್ರಶ್ನೆಯೊಂದಿಗೆ ಚಿತ್ರ ವೈರಲಾಗಿದೆ.

- Advertisement -
- Advertisement -

ಹಲವಾರು ಜನರು ಆಕ್ರೋಶಗೊಂಡು ಕೋಲುಗಳನ್ನು ಹಿಡಿದು ಓಡಿ ಬರುತ್ತಿರುವ ಚಿತ್ರವೊಂದು ವೈರಲಾಗಿದ್ದು, ಅದು ಕೇರಳದ ಮುಸ್ಲಿಮರ ಚಿತ್ರವೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವೈರಲ್ ಚಿತ್ರದ ಜೊತೆಗೆ “ಇದು ಕೇರಳದ ಚಿತ್ರವಾಗಿದ್ದು, ಇಂತಹ ಜನರ ಗುಂಪು ನಿಮ್ಮ ಪ್ರದೇಶಗಳಿಗೆ ತಲುಪಿದರೆ ನೀವು ಸ್ವಾಗತಿಸುವಿರೊ ಅಥವಾ ಇಲ್ಲವೇ” ಎಂಬ ಸಂದೇಶ ಕೂಡಾ ಹರಡಲಾಗುತ್ತದೆ.

ಫ್ಯಾಕ್ಟ್‌‌ಚೆಕ್‌‌: 

ಈ ಚಿತ್ರವನ್ನು ರಿವರ್ಸ್ ಸರ್ಚ್ ನಡೆಸಿದಾಗ, ಬಾಂಗ್ಲಾದೇಶದ ಬರಹಗಾರ್ತಿ ತಸ್ಲೀಮಾ ನಸ್ರೀನ್ ಅವರ ಅಕ್ಟೋಬರ್ 2019 ರ ಟ್ವೀಟ್‌ನಲ್ಲಿ ಈ ಚಿತ್ರವನ್ನು ಕಾಣಬಹುದಾಗಿದೆ. ಅದರಲ್ಲಿ ತಸ್ಲೀಮ ಅವರು ಈ ಚಿತ್ರವನ್ನು ಬಾಂಗ್ಲಾದೇಶವೆಂದು ಉಲ್ಲೇಖಿಸಿದ್ದಾರೆ.

ಅಲ್ಲದೆ ಇದೇ ಚಿತ್ರವು ಗೂಗಲ್‌ನಲ್ಲಿ ಹಲವಾರು ಲಭ್ಯವಿದ್ದು, ಗೆಟ್ಟಿ ಇಮೇಜ್‌ನಲ್ಲಿ ಕೂಡಾ ಈ ಚಿತ್ರವಿದೆ. ಈ ಛಾಯಚಿತ್ರ ಎಎಫ್‌ಪಿ ಕ್ಲಿಕ್ಕಿಸಿದ್ದು, ಈ ದೃಶ್ಯವು 5 ಮೇ 2013 ರಂದು ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನಡೆದ ಪ್ರತಿಭಟನೆಯಾಗಿದೆ. ಚಿತ್ರವೂ ಪ್ರತಿಭಟನಾಗಾರರು ಬೀದಿಯಲ್ಲಿ ಮೆರವಣಿಗೆ ನಡೆಸುತ್ತಿರುವುದಾಗಿದೆ.

ಈ ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಧರ್ಮನಿಂದೆಯ ಹೊಸ ಕಾನೂನನ್ನು ಕೋರಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಶೀರ್ಷಿಕೆ ತಿಳಿಸುತ್ತದೆ.

ದೇಶದಲ್ಲಿ ಹೊಸ ಕಾನೂನನ್ನು ತರಬೇಕು ಎಂದು 5 ಮೇ 2013 ರಂದು ನಡೆದ ಹಲವಾರು ಚಿತ್ರಗಳು ಸಿಗುತ್ತದೆ. ಅಲ್ ಜಜೀರಾ ವರದಿಯ ಪ್ರಕಾರ, ಪ್ರತಿಭಟನೆಗಳು ಹಿಂಸಾತ್ಮಕ ಘರ್ಷಣೆಗಳಾಗಿ ಮಾರ್ಪಟ್ಟಿದ್ದು, ಅದರಲ್ಲಿ ಅನೇಕ ಜನರು ಸಾವಿಗೀಡಾದರು ಎಂದು ಹೇಳಿದೆ. ವರದಿಯಲ್ಲಿ ಪ್ರತಿಭಟನೆಯನ್ನು ಹೆಫಜತ್-ಎ-ಇಸ್ಲಾಂ ಎಂಬ ಗುಂಪಿನ ಜನರು ಸಂಘಟಿಸಿದ್ದರು ಎಂದು ಅದು ಹೇಳಿದೆ.

ಈ ಬಗ್ಗೆ ಇನ್ನಷ್ಟು ಹುಡುಕಿದಾಗ ಈ ಪ್ರತಿಭಟನೆಯು ಎಪ್ರಿಲ್ 2013 ರಿಂದ ನಡೆಯುತ್ತಿದೆ ಎಂದು ವರದಿಯಾಗಿದೆ.

“ಹೆಫಜತ್-ಇ-ಇಸ್ಲಾಂ 2013 ಬಾಂಗ್ಲಾದೇಶ ಢಾಕಾ ಪ್ರತಿಭಟನೆ” ಎಂಬ ಕೀ ವರ್ಡ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಿದರೆ ಅಲಾಮಿ ವೆಬ್‌ಸೈಟ್‌ನಲ್ಲಿ ಇದರ ಚಿತ್ರಗಳನ್ನು ನಮಗೆ ಕಾಣಬಹುದಾಗಿದೆ. ಅಲ್ಲದೆ ವೈರಲಾಗುತ್ತಿರುಯವ ಚಿತ್ರದ ಬೇರೆ ಕೋನದ ಚಿತ್ರಗಳು ಕೂಡಾ ಅಲ್ಲಿ ಲಭ್ಯವಿದೆ.

ಢಾಕಾದ ಪೋಸ್ಟಾಗೋಲಾ ಬಳಿಯ ಬಾಂಗ್ಲಾದೇಶ-ಚೀನಾ ಸ್ನೇಹ ಸೇತುವೆಯಲ್ಲಿ 2013 ರ ಮೇ 5 ರಂದು ಇದನ್ನು ಕ್ಲಿಕ್ಕಿಸಲಾಗಿದೆ ಎಂದು ಫೋಟೋದ ವಿವರಣೆಯಲ್ಲಿ ಹೇಳಲಾಗಿದೆ.

ಈ ಎರಡೂ ಫೋಟೋಗಳನ್ನು ವೈರಲ್ ಫೋಟೋದೊಂದಿಗೆ ಹೋಲಿಸಿದಾಗ, ಅವು ಒಂದೇ ರ್‍ಯಾಲಿಯದ್ದಾಗಿದೆ ಎಂದು ನಾವು ಗಮನಿಸಬಹುದಾಗಿದ್ದು, ಆದರೆ ವಿಭಿನ್ನ ಕೋನಗಳಿಂದ ಚಿತ್ರೀಕರಿಸಲಾಗಿದೆ.

ಆದ್ದರಿಂದ, 2013 ರಲ್ಲಿ ಬಾಂಗ್ಲಾದೇಶದ ಢಾಕಾದಲ್ಲಿ ನಡೆದ ಹಳೆಯ ಘಟನೆಯ ಫೋಟೋವನ್ನು ಕೇರಳದಲ್ಲಿ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿದೆ ಎಂಬುವುದು ಸ್ಪಷ್ಟಮಾಗುತ್ತದೆ.


ಓದಿ: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರವೆ ??; ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...