Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ಇವರು ನಿಮ್ಮ ಪ್ರದೇಶಗಳಿಗೂ ಬಂದರೆ ನೀವೇನು ಮಾಡುತ್ತೀರಿ ಎಂಬ ಪ್ರಶ್ನೆಯೊಂದಿಗೆ ಚಿತ್ರ ವೈರಲಾಗಿದೆ.

- Advertisement -
- Advertisement -

ಹಲವಾರು ಜನರು ಆಕ್ರೋಶಗೊಂಡು ಕೋಲುಗಳನ್ನು ಹಿಡಿದು ಓಡಿ ಬರುತ್ತಿರುವ ಚಿತ್ರವೊಂದು ವೈರಲಾಗಿದ್ದು, ಅದು ಕೇರಳದ ಮುಸ್ಲಿಮರ ಚಿತ್ರವೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವೈರಲ್ ಚಿತ್ರದ ಜೊತೆಗೆ “ಇದು ಕೇರಳದ ಚಿತ್ರವಾಗಿದ್ದು, ಇಂತಹ ಜನರ ಗುಂಪು ನಿಮ್ಮ ಪ್ರದೇಶಗಳಿಗೆ ತಲುಪಿದರೆ ನೀವು ಸ್ವಾಗತಿಸುವಿರೊ ಅಥವಾ ಇಲ್ಲವೇ” ಎಂಬ ಸಂದೇಶ ಕೂಡಾ ಹರಡಲಾಗುತ್ತದೆ.

ಫ್ಯಾಕ್ಟ್‌‌ಚೆಕ್‌‌: 

ಈ ಚಿತ್ರವನ್ನು ರಿವರ್ಸ್ ಸರ್ಚ್ ನಡೆಸಿದಾಗ, ಬಾಂಗ್ಲಾದೇಶದ ಬರಹಗಾರ್ತಿ ತಸ್ಲೀಮಾ ನಸ್ರೀನ್ ಅವರ ಅಕ್ಟೋಬರ್ 2019 ರ ಟ್ವೀಟ್‌ನಲ್ಲಿ ಈ ಚಿತ್ರವನ್ನು ಕಾಣಬಹುದಾಗಿದೆ. ಅದರಲ್ಲಿ ತಸ್ಲೀಮ ಅವರು ಈ ಚಿತ್ರವನ್ನು ಬಾಂಗ್ಲಾದೇಶವೆಂದು ಉಲ್ಲೇಖಿಸಿದ್ದಾರೆ.

ಅಲ್ಲದೆ ಇದೇ ಚಿತ್ರವು ಗೂಗಲ್‌ನಲ್ಲಿ ಹಲವಾರು ಲಭ್ಯವಿದ್ದು, ಗೆಟ್ಟಿ ಇಮೇಜ್‌ನಲ್ಲಿ ಕೂಡಾ ಈ ಚಿತ್ರವಿದೆ. ಈ ಛಾಯಚಿತ್ರ ಎಎಫ್‌ಪಿ ಕ್ಲಿಕ್ಕಿಸಿದ್ದು, ಈ ದೃಶ್ಯವು 5 ಮೇ 2013 ರಂದು ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನಡೆದ ಪ್ರತಿಭಟನೆಯಾಗಿದೆ. ಚಿತ್ರವೂ ಪ್ರತಿಭಟನಾಗಾರರು ಬೀದಿಯಲ್ಲಿ ಮೆರವಣಿಗೆ ನಡೆಸುತ್ತಿರುವುದಾಗಿದೆ.

ಈ ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಧರ್ಮನಿಂದೆಯ ಹೊಸ ಕಾನೂನನ್ನು ಕೋರಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಶೀರ್ಷಿಕೆ ತಿಳಿಸುತ್ತದೆ.

ದೇಶದಲ್ಲಿ ಹೊಸ ಕಾನೂನನ್ನು ತರಬೇಕು ಎಂದು 5 ಮೇ 2013 ರಂದು ನಡೆದ ಹಲವಾರು ಚಿತ್ರಗಳು ಸಿಗುತ್ತದೆ. ಅಲ್ ಜಜೀರಾ ವರದಿಯ ಪ್ರಕಾರ, ಪ್ರತಿಭಟನೆಗಳು ಹಿಂಸಾತ್ಮಕ ಘರ್ಷಣೆಗಳಾಗಿ ಮಾರ್ಪಟ್ಟಿದ್ದು, ಅದರಲ್ಲಿ ಅನೇಕ ಜನರು ಸಾವಿಗೀಡಾದರು ಎಂದು ಹೇಳಿದೆ. ವರದಿಯಲ್ಲಿ ಪ್ರತಿಭಟನೆಯನ್ನು ಹೆಫಜತ್-ಎ-ಇಸ್ಲಾಂ ಎಂಬ ಗುಂಪಿನ ಜನರು ಸಂಘಟಿಸಿದ್ದರು ಎಂದು ಅದು ಹೇಳಿದೆ.

ಈ ಬಗ್ಗೆ ಇನ್ನಷ್ಟು ಹುಡುಕಿದಾಗ ಈ ಪ್ರತಿಭಟನೆಯು ಎಪ್ರಿಲ್ 2013 ರಿಂದ ನಡೆಯುತ್ತಿದೆ ಎಂದು ವರದಿಯಾಗಿದೆ.

“ಹೆಫಜತ್-ಇ-ಇಸ್ಲಾಂ 2013 ಬಾಂಗ್ಲಾದೇಶ ಢಾಕಾ ಪ್ರತಿಭಟನೆ” ಎಂಬ ಕೀ ವರ್ಡ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಿದರೆ ಅಲಾಮಿ ವೆಬ್‌ಸೈಟ್‌ನಲ್ಲಿ ಇದರ ಚಿತ್ರಗಳನ್ನು ನಮಗೆ ಕಾಣಬಹುದಾಗಿದೆ. ಅಲ್ಲದೆ ವೈರಲಾಗುತ್ತಿರುಯವ ಚಿತ್ರದ ಬೇರೆ ಕೋನದ ಚಿತ್ರಗಳು ಕೂಡಾ ಅಲ್ಲಿ ಲಭ್ಯವಿದೆ.

ಢಾಕಾದ ಪೋಸ್ಟಾಗೋಲಾ ಬಳಿಯ ಬಾಂಗ್ಲಾದೇಶ-ಚೀನಾ ಸ್ನೇಹ ಸೇತುವೆಯಲ್ಲಿ 2013 ರ ಮೇ 5 ರಂದು ಇದನ್ನು ಕ್ಲಿಕ್ಕಿಸಲಾಗಿದೆ ಎಂದು ಫೋಟೋದ ವಿವರಣೆಯಲ್ಲಿ ಹೇಳಲಾಗಿದೆ.

ಈ ಎರಡೂ ಫೋಟೋಗಳನ್ನು ವೈರಲ್ ಫೋಟೋದೊಂದಿಗೆ ಹೋಲಿಸಿದಾಗ, ಅವು ಒಂದೇ ರ್‍ಯಾಲಿಯದ್ದಾಗಿದೆ ಎಂದು ನಾವು ಗಮನಿಸಬಹುದಾಗಿದ್ದು, ಆದರೆ ವಿಭಿನ್ನ ಕೋನಗಳಿಂದ ಚಿತ್ರೀಕರಿಸಲಾಗಿದೆ.

ಆದ್ದರಿಂದ, 2013 ರಲ್ಲಿ ಬಾಂಗ್ಲಾದೇಶದ ಢಾಕಾದಲ್ಲಿ ನಡೆದ ಹಳೆಯ ಘಟನೆಯ ಫೋಟೋವನ್ನು ಕೇರಳದಲ್ಲಿ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿದೆ ಎಂಬುವುದು ಸ್ಪಷ್ಟಮಾಗುತ್ತದೆ.


ಓದಿ: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರವೆ ??; ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...