Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ಗಡಿ ಉದ್ವಿಗ್ನತೆಯ ಮಧ್ಯೆಯೂ ಭಾರತದಲ್ಲಿ ಮೊದಲ ಶಾಖೆ ತೆರೆದ ಬ್ಯಾಂಕ್ ಆಫ್ ಚೀನಾ?

ಫ್ಯಾಕ್ಟ್‌ಚೆಕ್‌: ಗಡಿ ಉದ್ವಿಗ್ನತೆಯ ಮಧ್ಯೆಯೂ ಭಾರತದಲ್ಲಿ ಮೊದಲ ಶಾಖೆ ತೆರೆದ ಬ್ಯಾಂಕ್ ಆಫ್ ಚೀನಾ?

- Advertisement -
- Advertisement -

ಭಾರತ ಚೀನಾ ಉಭಯ ದೇಶಗಳ ಗಡಿ ಉದ್ವಿಗ್ನತೆಯ ಮಧ್ಯೆಯೂ ಭಾರತದಲ್ಲಿ ಕಾರ್ಯನಿರ್ವಹಿಸಲು ಆರ್‌ಬಿಐ ಬ್ಯಾಂಕ್ ಆಫ್ ಚೀನಾಕ್ಕೆ ಪರವಾನಗಿ ನೀಡಿದೆ ಮತ್ತು ಅದು ಮೊದಲ ಶಾಖೆ ತೆರೆದಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ.

ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ರಕ್ತಸಿಕ್ತ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾದ ನಂತರ ಭಾರತದಲ್ಲಿ ಚೀನಾ ವಿರೋಧಿ ಭಾವನೆ ಹೆಚ್ಚಾಗಿದೆ. ಚೀನಾದ ಉತ್ಪನ್ನಗಳು ಮತ್ತು ಸೇವೆಗಳನ್ನು ಬಹಿಷ್ಕರಿಸುವ ಕರೆಗಳ ಹೊರತಾಗಿಯೂ ಬ್ಯಾಂಕ್ ಆಫ್ ಚೀನಾ ತನ್ನ ಮೊದಲ ಭಾರತೀಯ ಶಾಖೆಯನ್ನು ಮುಂಬೈನಲ್ಲಿ ತೆರೆಯುತ್ತಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಿಡಿ ಕಾರಲಾಗಿದೆ.

ಫೇಸ್‌ಬುಕ್‌ನಲ್ಲಿ “ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಆಫ್ ಚೀನಾಕ್ಕೆ ಭಾರತದಲ್ಲಿ ಕಾರ್ಯನಿರ್ವಹಿಸಲು ಪರವಾನಗಿಗಳನ್ನು ನೀಡುತ್ತದೆ. ಇದು ಚೀನಾದ ನಾಯಕತ್ವಕ್ಕೆ ಪಿಎಂ ಮೋದಿ ಕೊಟ್ಟಿದ್ದ ಆಶ್ವಾಸನೆಯಾಗಿದೆ: ಮೂಲಗಳು” ಎಂಬ ಎಎನ್‌ಐ ಟ್ವೀಟ್‌ ಅನ್ನು ಉಲ್ಲೇಖಿಸಿರುವ ಪೋಸ್ಟ್ ವೈರಲ್ ಆಗಿದೆ.

ಫ್ಯಾಕ್ಟ್‌ಚೆಕ್

ಗಡಿ ಉದ್ವಿಗ್ನತೆಯ ನಡುವೆಯೂ ಚೀನಾ ಬ್ಯಾಂಕ್‌ಗೆ ಅವಕಾಶ ವೈರಲ್‌ ಪೋಸ್ಟ್‌ ಹೇಳಿಕೆಯು ಸುಳ್ಳಾಗಿದೆ. ಏಕೆಂದರೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2018ರಲ್ಲಿಯೇ ಬ್ಯಾಂಕ್ ಆಫ್ ಚೀನಾಕ್ಕೆ ಪರವಾನಗಿ ನೀಡಿತ್ತು. ಅಲ್ಲದೇ ಬ್ಯಾಂಕ್ ಆಫ್ ಚೀನಾ ತನ್ನ ಮೊದಲ ಭಾರತೀಯ ಶಾಖೆಯನ್ನು ಮುಂಬೈನಲ್ಲಿ ಕಳೆದ ವರ್ಷ ಜೂನ್‌ನಲ್ಲಿಯೇ ತೆರೆದಿದೆ. ವೈರಲ್ ಎಎನ್‌ಐ ಪೋಸ್ಟ್‌ನಲ್ಲಿ ಅವರ ದಿನಾಂಕವನ್ನು ಕತ್ತರಿಸಿ ಪೋಸ್ಟ್‌ ಮಾಡಿದೆ. ಆ ಎಎನ್ಐ ಟ್ವೀಟ್ ಎರಡು ವರ್ಷಗಳಷ್ಟು ಹಳೆಯದಾಗಿದೆ.

 

ಬ್ಯಾಂಕ್ ಆಫ್ ಚೀನಾ ಭಾರತದಲ್ಲಿ ತನ್ನ ಮೊದಲ ಶಾಖೆಯನ್ನು ತೆರೆಯಲು ಸಂಬಂಧಿಸಿದ ಹಲವಾರು ಸುದ್ದಿ ಲೇಖನಗಳು ಲಭ್ಯವಿವೆ. ಈ ಸುದ್ದಿ ವರದಿಗಳ ಪ್ರಕಾರ, 2019 ರ ಜೂನ್‌ನಲ್ಲಿ ಮುಂಬೈನಲ್ಲಿ ಶಾಖೆ ಪ್ರಾರಂಭವಾಯಿತು.

ಜುಲೈ 4, 2018 ರಂದು, ಸುದ್ದಿ ಸಂಸ್ಥೆ ಎಎನ್‌ಐ ಭಾರತದಲ್ಲಿ ಕಾರ್ಯನಿರ್ವಹಿಸಲು ಆರ್‌ಬಿಐ ಬ್ಯಾಂಕ್ ಆಫ್ ಚೀನಾಕ್ಕೆ ಪರವಾನಗಿ ನೀಡಿದೆ ಎಂದು ಟ್ವೀಟ್ ಮಾಡಿದೆ. “ಹಿಂದೂಸ್ತಾನ್ ಟೈಮ್ಸ್” ಕೂಡ ಜುಲೈ 4, 2018 ರಂದು ವರದಿ ಮಾಡಿದೆ.

ಕಳೆದ ತಿಂಗಳು ಚೀನಾದ ನಗರವಾದ ಕಿಂಗ್‌ಡಾವೊದಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯ ಸಂದರ್ಭದಲ್ಲಿ ಭೇಟಿಯಾದಾಗ ಬ್ಯಾಂಕ್ ಆಫ್ ಚೀನಾ ಭಾರತದಲ್ಲಿ ಶಾಖೆಗಳನ್ನು ಸ್ಥಾಪಿಸಲು ಅವಕಾಶ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರಿಗೆ ಮಾತು ನೀಡಿದ್ದರು ಎಂದು ವರದಿ ಹೇಳಿದೆ.

ಆದ್ದರಿಂದ, ಉಭಯ ದೇಶಗಳ ಗಡಿ ಉದ್ವಿಗ್ನತೆಯ ನಡುವೆ ಬ್ಯಾಂಕ್ ಆಫ್ ಚೀನಾ ತನ್ನ ಮೊದಲ ಭಾರತೀಯ ಶಾಖೆಯನ್ನು ಮುಂಬೈನಲ್ಲಿ ತೆರೆಯುತ್ತಿದೆ ಎಂಬ ವೈರಲ್ ಹಕ್ಕು ತಪ್ಪುದಾರಿಗೆಳೆಯುವಂತಿದೆ. ವಾಸ್ತವದಲ್ಲಿ ಕಳೆದ ವರ್ಷವೆ ಶಾಖೆ ತೆರೆದಿತ್ತು ಮತ್ತು ಎರಡು ವರ್ಷಗಳ ಹಿಂದೆಯೇ ಪರವಾನಗಿ ನೀಡಲಾಗಿದೆ.


ಇದನ್ನೂ ಓದಿ: ಭಾರತ-ಚೀನಾ ಗಡಿ ಸಂಘರ್ಷ: ವಾಟ್ಸಾಪ್‌ ಮೆಸೇಜನ್ನು ನಂಬಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ’ಟೈಮ್ಸ್ ನೌ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...