Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ಗಡಿ ಉದ್ವಿಗ್ನತೆಯ ಮಧ್ಯೆಯೂ ಭಾರತದಲ್ಲಿ ಮೊದಲ ಶಾಖೆ ತೆರೆದ ಬ್ಯಾಂಕ್ ಆಫ್ ಚೀನಾ?

ಫ್ಯಾಕ್ಟ್‌ಚೆಕ್‌: ಗಡಿ ಉದ್ವಿಗ್ನತೆಯ ಮಧ್ಯೆಯೂ ಭಾರತದಲ್ಲಿ ಮೊದಲ ಶಾಖೆ ತೆರೆದ ಬ್ಯಾಂಕ್ ಆಫ್ ಚೀನಾ?

- Advertisement -
- Advertisement -

ಭಾರತ ಚೀನಾ ಉಭಯ ದೇಶಗಳ ಗಡಿ ಉದ್ವಿಗ್ನತೆಯ ಮಧ್ಯೆಯೂ ಭಾರತದಲ್ಲಿ ಕಾರ್ಯನಿರ್ವಹಿಸಲು ಆರ್‌ಬಿಐ ಬ್ಯಾಂಕ್ ಆಫ್ ಚೀನಾಕ್ಕೆ ಪರವಾನಗಿ ನೀಡಿದೆ ಮತ್ತು ಅದು ಮೊದಲ ಶಾಖೆ ತೆರೆದಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ.

ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ರಕ್ತಸಿಕ್ತ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾದ ನಂತರ ಭಾರತದಲ್ಲಿ ಚೀನಾ ವಿರೋಧಿ ಭಾವನೆ ಹೆಚ್ಚಾಗಿದೆ. ಚೀನಾದ ಉತ್ಪನ್ನಗಳು ಮತ್ತು ಸೇವೆಗಳನ್ನು ಬಹಿಷ್ಕರಿಸುವ ಕರೆಗಳ ಹೊರತಾಗಿಯೂ ಬ್ಯಾಂಕ್ ಆಫ್ ಚೀನಾ ತನ್ನ ಮೊದಲ ಭಾರತೀಯ ಶಾಖೆಯನ್ನು ಮುಂಬೈನಲ್ಲಿ ತೆರೆಯುತ್ತಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಿಡಿ ಕಾರಲಾಗಿದೆ.

ಫೇಸ್‌ಬುಕ್‌ನಲ್ಲಿ “ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಆಫ್ ಚೀನಾಕ್ಕೆ ಭಾರತದಲ್ಲಿ ಕಾರ್ಯನಿರ್ವಹಿಸಲು ಪರವಾನಗಿಗಳನ್ನು ನೀಡುತ್ತದೆ. ಇದು ಚೀನಾದ ನಾಯಕತ್ವಕ್ಕೆ ಪಿಎಂ ಮೋದಿ ಕೊಟ್ಟಿದ್ದ ಆಶ್ವಾಸನೆಯಾಗಿದೆ: ಮೂಲಗಳು” ಎಂಬ ಎಎನ್‌ಐ ಟ್ವೀಟ್‌ ಅನ್ನು ಉಲ್ಲೇಖಿಸಿರುವ ಪೋಸ್ಟ್ ವೈರಲ್ ಆಗಿದೆ.

ಫ್ಯಾಕ್ಟ್‌ಚೆಕ್

ಗಡಿ ಉದ್ವಿಗ್ನತೆಯ ನಡುವೆಯೂ ಚೀನಾ ಬ್ಯಾಂಕ್‌ಗೆ ಅವಕಾಶ ವೈರಲ್‌ ಪೋಸ್ಟ್‌ ಹೇಳಿಕೆಯು ಸುಳ್ಳಾಗಿದೆ. ಏಕೆಂದರೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2018ರಲ್ಲಿಯೇ ಬ್ಯಾಂಕ್ ಆಫ್ ಚೀನಾಕ್ಕೆ ಪರವಾನಗಿ ನೀಡಿತ್ತು. ಅಲ್ಲದೇ ಬ್ಯಾಂಕ್ ಆಫ್ ಚೀನಾ ತನ್ನ ಮೊದಲ ಭಾರತೀಯ ಶಾಖೆಯನ್ನು ಮುಂಬೈನಲ್ಲಿ ಕಳೆದ ವರ್ಷ ಜೂನ್‌ನಲ್ಲಿಯೇ ತೆರೆದಿದೆ. ವೈರಲ್ ಎಎನ್‌ಐ ಪೋಸ್ಟ್‌ನಲ್ಲಿ ಅವರ ದಿನಾಂಕವನ್ನು ಕತ್ತರಿಸಿ ಪೋಸ್ಟ್‌ ಮಾಡಿದೆ. ಆ ಎಎನ್ಐ ಟ್ವೀಟ್ ಎರಡು ವರ್ಷಗಳಷ್ಟು ಹಳೆಯದಾಗಿದೆ.

 

ಬ್ಯಾಂಕ್ ಆಫ್ ಚೀನಾ ಭಾರತದಲ್ಲಿ ತನ್ನ ಮೊದಲ ಶಾಖೆಯನ್ನು ತೆರೆಯಲು ಸಂಬಂಧಿಸಿದ ಹಲವಾರು ಸುದ್ದಿ ಲೇಖನಗಳು ಲಭ್ಯವಿವೆ. ಈ ಸುದ್ದಿ ವರದಿಗಳ ಪ್ರಕಾರ, 2019 ರ ಜೂನ್‌ನಲ್ಲಿ ಮುಂಬೈನಲ್ಲಿ ಶಾಖೆ ಪ್ರಾರಂಭವಾಯಿತು.

ಜುಲೈ 4, 2018 ರಂದು, ಸುದ್ದಿ ಸಂಸ್ಥೆ ಎಎನ್‌ಐ ಭಾರತದಲ್ಲಿ ಕಾರ್ಯನಿರ್ವಹಿಸಲು ಆರ್‌ಬಿಐ ಬ್ಯಾಂಕ್ ಆಫ್ ಚೀನಾಕ್ಕೆ ಪರವಾನಗಿ ನೀಡಿದೆ ಎಂದು ಟ್ವೀಟ್ ಮಾಡಿದೆ. “ಹಿಂದೂಸ್ತಾನ್ ಟೈಮ್ಸ್” ಕೂಡ ಜುಲೈ 4, 2018 ರಂದು ವರದಿ ಮಾಡಿದೆ.

ಕಳೆದ ತಿಂಗಳು ಚೀನಾದ ನಗರವಾದ ಕಿಂಗ್‌ಡಾವೊದಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯ ಸಂದರ್ಭದಲ್ಲಿ ಭೇಟಿಯಾದಾಗ ಬ್ಯಾಂಕ್ ಆಫ್ ಚೀನಾ ಭಾರತದಲ್ಲಿ ಶಾಖೆಗಳನ್ನು ಸ್ಥಾಪಿಸಲು ಅವಕಾಶ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರಿಗೆ ಮಾತು ನೀಡಿದ್ದರು ಎಂದು ವರದಿ ಹೇಳಿದೆ.

ಆದ್ದರಿಂದ, ಉಭಯ ದೇಶಗಳ ಗಡಿ ಉದ್ವಿಗ್ನತೆಯ ನಡುವೆ ಬ್ಯಾಂಕ್ ಆಫ್ ಚೀನಾ ತನ್ನ ಮೊದಲ ಭಾರತೀಯ ಶಾಖೆಯನ್ನು ಮುಂಬೈನಲ್ಲಿ ತೆರೆಯುತ್ತಿದೆ ಎಂಬ ವೈರಲ್ ಹಕ್ಕು ತಪ್ಪುದಾರಿಗೆಳೆಯುವಂತಿದೆ. ವಾಸ್ತವದಲ್ಲಿ ಕಳೆದ ವರ್ಷವೆ ಶಾಖೆ ತೆರೆದಿತ್ತು ಮತ್ತು ಎರಡು ವರ್ಷಗಳ ಹಿಂದೆಯೇ ಪರವಾನಗಿ ನೀಡಲಾಗಿದೆ.


ಇದನ್ನೂ ಓದಿ: ಭಾರತ-ಚೀನಾ ಗಡಿ ಸಂಘರ್ಷ: ವಾಟ್ಸಾಪ್‌ ಮೆಸೇಜನ್ನು ನಂಬಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ’ಟೈಮ್ಸ್ ನೌ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...