Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಈ ಫೋಟೊಗಳು ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್‌ನವಲ್ಲ.. ಬದಲಿಗೆ ಬಿಹಾರದವು‌‌

ಫ್ಯಾಕ್ಟ್‌‌ಚೆಕ್‌: ಈ ಫೋಟೊಗಳು ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್‌ನವಲ್ಲ.. ಬದಲಿಗೆ ಬಿಹಾರದವು‌‌

ರಾಹುಲ್ ಗಾಂಧಿಯವರ ಕ್ಷೇತ್ರವಾದ ವಯನಾಡ್ ದೇಶದ ಮೊದಲ ಸ್ಮಾರ್ಟ್ ಸಿಟಿಯಾಗಿದ್ದು, ಪ್ರತಿ ಮನೆಯ ಹೊರಗೆ ವಿಭಿನ್ನ ಈಜುಕೊಳಗಳನ್ನು ನಿರ್ಮಿಸಿದ ಮೊದಲ ನಗರವಾಗಿದೆ ಎಂದು ಚಿತ್ರವೂ ವೈರಲಾಗಿದೆ.

- Advertisement -
- Advertisement -

ರಸ್ತೆಯಲ್ಲಿ ನೂರಾರು ಗುಂಡಿಗಳಿರುವ, ಮಳೆ ನೀರು ತುಂಬಿರುವ ರಸ್ತೆಯ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದು ಕಾಂಗ್ರೆಸ್ ಮುಂಖಡ ರಾಹುಲ್ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡ್‌ಗೆ ಸೇರಿದೆ ಎಂದು ಪ್ರಚಾರ ಮಾಡಲಾಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಚಿತ್ರಕ್ಕೆ “ರಾಹುಲ್ ಗಾಂಧಿಯ ಕ್ಷೇತ್ರವಾದ ವಯನಾಡ್ ದೇಶದ ಮೊದಲ ಸ್ಮಾರ್ಟ್ ಸಿಟಿಯಾಗಿದ್ದು, ಪ್ರತಿ ಮನೆಯ ಹೊರಗೆ ವಿಭಿನ್ನ ಈಜುಕೊಳಗಳನ್ನು ನಿರ್ಮಿಸಿದ ಮೊದಲ ನಗರವಾಗಿದೆ.” ಎಂಬ ಶೀರ್ಷಿಕೆ ನೀಡಿ ವ್ಯಂಗ್ಯವಾಡಲಾಗಿದೆ.

ಫೇಸ್‌ಬುಕ್ ಬಳಕೆದಾರ ಅಂಕಿತ್ ಅಗ್ರವಾಲ್ ಎಂಬವರು ಪೋಸ್ಟ್ ಮಾಡಿದ ಈ ಚಿತ್ರವು 2,500 ಕ್ಕೂ ಹೆಚ್ಚು ಬಾರಿ ಷೇರ್ ಮಾಡಲಾಗಿದೆ.

ಅದೇ ರೀತಿಯ ನಿರೂಪಣೆಯೊಂದಿಗೆ ಈ ಚಿತ್ರವನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಬೃಹತ್ ಪ್ರಮಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌‌ಚೆಕ್‌‌‌:

ಈ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಾಡಿದಾಗ ಇದೇ ಚಿತ್ರವನ್ನು 2017 ರಲ್ಲಿ ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದ ಲೇಖನವೊಂದನ್ನು ಕಾಣಬಹುದಾಗಿದೆ. ಅದರಲ್ಲಿ “ಭಾಗಲ್ಪುರ್ ಎನ್ಎಚ್ -80 ಕೆಟ್ಟ ಸ್ಥಿತಿಯಲ್ಲಿದೆ” ಎಂದು ವರದಿಯಾಗಿದೆ. ಅಂದರೆ ಅದು ಬಿಹಾರ ರಾಜ್ಯಕ್ಕೆ ಸೇರಿದ ಎಂಬುದು ದೃಢಪಟ್ಟಿದೆ.

ಬಿಹಾರದ ರಸ್ತೆಯ ಈ ಹಳೆಯ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಕೇರಳದ ವಯನಾಡ್‌ಗೆ ಸೇರಿದ್ದು ವರದಿ ಪ್ರಕಟಿಸಿದ್ದಾರೆ.

ಇದಲ್ಲದೆ ಇದು ಭಾಗಲ್ಪುರದ ರಸ್ತೆಯ ಹಳೆಯ ಚಿತ್ರ ಎಂದು ಅಲ್ಲಿನ ಸ್ಥಳೀಯ ವರದಿಗಾರ ರಂಜನ್ ದೃಡೀಕರಿಸಿದ್ದಾರೆ. “ಇದು ಹಳೆಯ ಚಿತ್ರವಾಗಿದ್ದು, ಪ್ರಸ್ತುತ ಈಗ ಈ ರಸ್ತೆಯು ಉತ್ತಮವಾಗಿದೆ” ಎಂದು ಅವರು ಹೇಳಿದ್ದಾರೆ.

ಇದು ಮಾತ್ರವಲ್ಲದೆ, 2017ರ ಜುಲೈಯಲ್ಲಿ ಬಿಹಾರದ ಮಾಜಿ ಉಪಮುಖ್ಯಮಂತ್ರಿಯಾಗಿದ್ದ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ರಸ್ತೆಯ ಎರಡೂ ಚಿತ್ರಗಳನ್ನು ಟ್ವೀಟ್ ಮಾಡಿ, ಅದರ ಬಗ್ಗೆ ಸುಳ್ಳು ಹರಡಬೇಡಿ ಎಂದು ಮನವಿ ಮಾಡಿದ್ದರು.

 

ಒಟ್ಟಿನಲ್ಲಿ ಬಿಹಾರದ  ಹಳೆಯ ಚಿತ್ರವೊಂದುನ್ನ ಕೇರಳದ ವಯನಾಡ್ ಚಿತ್ರ ಎಂದು ತಪ್ಪಾಗಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಓದಿ: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...