Homeಮುಖಪುಟಫ್ಯಾಕ್ಟ್‌ಚೆಕ್: ರೈತರು ಮೋದಿಗೆ ಕೃತಜ್ಞತೆ ಹೇಳುತ್ತಿದ್ದಾರೆ ಎಂದು ಹಳೆಯ ಫೋಟೋ ಹಂಚಿಕೊಂಡ ಬಿಜೆಪಿ ನಾಯಕ!

ಫ್ಯಾಕ್ಟ್‌ಚೆಕ್: ರೈತರು ಮೋದಿಗೆ ಕೃತಜ್ಞತೆ ಹೇಳುತ್ತಿದ್ದಾರೆ ಎಂದು ಹಳೆಯ ಫೋಟೋ ಹಂಚಿಕೊಂಡ ಬಿಜೆಪಿ ನಾಯಕ!

ವಾಸ್ತವದಲ್ಲಿ ಈ ಚಿತ್ರ ಇತ್ತೀಚಿನದಲ್ಲ ಅಥವಾ ಪಶ್ಚಿಮ ಬಂಗಾಳದ್ದಲ್ಲ. ಇದನ್ನು ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ತೆಗೆದ ಚಿತ್ರವಾಗಿದೆ.

- Advertisement -
- Advertisement -

ವಿವಾದಿತ ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯಲು ಆಗ್ರಹಿಸಿ ದೇಶಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ನಡುವೆ ಆಡಳಿತ ಪಕ್ಷ ಬಿಜೆಪಿ ರೈತರಿಗೆ ವಿರೋಧ ಪಕ್ಷಗಳು ಕಾಯಿದೆ ವಿರುದ್ಧ ತಪ್ಪು ಮಾಹಿತಿ ನೀಡುತ್ತಿವೆ ಎಂದು ಆರೋಪಿಸಿ, ರೈತರಲ್ಲಿ ಜಾಗೃತಿ ಮೂಡಿಸುತ್ತೇವೆ ಎಂದು ಮನೆ ಮನೆಗೆ ತೆರಳಲು ಹೊರಟಿದೆ.

ಈ ನಡುವೆ ಪಶ್ಚಿಮ ಬಂಗಾಳ ಬಿಜೆಪಿ ಮುಖಂಡ ದಿಲೀಪ್ ಘೋಷ್ ಅಕ್ಟೋಬರ್‌ 6 ರಂದು ಒಂದು ಚಿತ್ರವನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಶೇರ್‌ ಮಾಡಿದ್ದು, “ಪಶ್ಚಿಮ ಬಂಗಾಳದ ರೈತರು  ಪ್ರಧಾನಿ ಮೋದಿಯವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

PC:Twitter@Dilip Ghosh

ವಾಸ್ತವದಲ್ಲಿ ಈ ಚಿತ್ರ ಇತ್ತೀಚಿನದಲ್ಲ ಅಥವಾ ಪಶ್ಚಿಮ ಬಂಗಾಳದ್ದಲ್ಲ. ಇದನ್ನು ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ತೆಗೆದ ಚಿತ್ರವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಯುವತಿಯ ಅಪಹರಣದ ವೀಡಿಯೋ ವೈರಲ್; ಇದು ಉತ್ತರಪ್ರದೇಶದ್ದೇ?

ಈ ಚಿತ್ರವು ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್‌ಪುರದ ಪಂತೋರ್ ಗ್ರಾಮದಿಂದ ಬಂದಿದೆ ಎಂದು ಘೋಷ್ ಹೇಳಿದ್ದಾರೆ. “ಕುಮಾರ್ಗಂಜ್ ಅಸೆಂಬ್ಲಿಯ (ದಕ್ಷಿಣ ದಿನಾಜ್‌ಪುರ) ಪಂತೋರ್‌ ಗ್ರಾಮದಲ್ಲಿ ತೆಗೆದ ಚಿತ್ರ. ಬಂಗಾಳದ ರೈತರು, ಗೌರವಾನ್ವಿತ ಪ್ರಧಾನ ಮಂತ್ರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಚಿತ್ರವನ್ನು ಹಲವು ಮಂದಿ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಚಿತ್ರ ಹಂಚಿಕೊಂಡಿರುವ ಬಿಜೆಪಿ ಮುಖಂಡ ದಿಲೀಪ್ ಘೋಷ್‌ ಅವರ ಟ್ವೀಟ್‌ ಅನ್ನು 355 ಮಂದಿ ರಿಟ್ವೀಟ್ ಮಾಡಿದ್ದಾರೆ.

ಈ ಚಿತ್ರವನ್ನು ಗೂಗಲ್‌ನಲ್ಲಿ ರಿವರ್ಸ್ ಇಮೇಜ್ ಹುಡುಕಾಟ ಮಾಡಿದಾಗ ಔಟ್‌ಲುಕ್ ಫೋಟೋ ಗ್ಯಾಲರಿಯಲ್ಲಿ ಈ ಚಿತ್ರ ಬಿಹಾರದಲ್ಲಿ ಜುಲೈ 12 ರಂದು ತೆಗೆದ ಚಿತ್ರವಾಗಿದೆ ಎಂಬುದನ್ನು ತೋರಿಸಿದೆ.

PC: Outlook/screenshot

“ಕೃಷಿ ಕಾರ್ಮಿಕರು ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಬಿಹಾರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ” “ಬಿಜೆಪಿ ಮೋದಿ” ಎಂದು ಭತ್ತದ ಸಸಿಗಳಲ್ಲಿ ಬರೆದಿದ್ದಾರೆ ಎಂದು ಶೀರ್ಷಿಕೆ ನೀಡಿದೆ.

ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಯ ಫೋಟೋ ಆರ್ಕೈವ್‌ನಲ್ಲಿ ‘ಕೈಮೂರ್’ ಕೀವರ್ಡ್ ಆಗಿ ಹುಡುಕಾಡಿದಾಗ ಅದೇ ಚಿತ್ರವನ್ನು ಜುಲೈ 12 ರಂದು ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಈ ಎಲ್ಲಾ ವಿವರಗಳು ಸ್ಪಷ್ಟವಾಗಿ ಹೇಳುವುದು ಬಿಜೆಪಿ ನಾಯಕ ಬಿಹಾರದ ಹಳೆಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಅದು ಪಶ್ಚಿಮ ಬಂಗಾಳ ರಾಜ್ಯದ ರೈತರದ್ದು, ಅವರು ಮೋದಿಯನ್ನು ಬೆಂಬಲಿಸಿದ್ದಾರೆ ಎಂದು ಸುಳ್ಳು ಹೇಳಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...