Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

- Advertisement -
- Advertisement -

ದೆಹಲಿ ಗಡಿಗಳಲ್ಲಿ ಅನ್ನದಾತರು ನಡೆಸುತ್ತಿರುವ ಅಪ್ರತಿಮ ಹೋರಾಟಕ್ಕೆ ಮಸಿ ಬಳಿಯುವ ಯತ್ನಗಳು ನಿರಂತರವಾಗಿ ಪ್ರಚಲಿತದಲ್ಲಿದ್ದು, ಬಿಜೆಪಿ ಐಟಿ ಸೆಲ್ ಇದರಲ್ಲಿ ಸಕ್ರಿಯ ಪಾತ್ರ ನಿರ್ವಹಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳ ಸೈನ್‌ಬೋರ್ಡ್ಗಳನ್ನು ತಪ್ಪಾಗಿ ತಿದ್ದುವ ಕೆಲಸದಲ್ಲಿ ಹಲವರು ನಿರತರಾದ ಎಂಟು ಫೋಟೊಗಳ ಸಮ್ಮಿಶ್ರಣ (ಕೊಲ್ಯಾಜ್) ಒಂದು ನಿನ್ನೆ-ಮೊನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಹೀಗೆ ಸೈನ್ ಬೋರ್ಡ್ ತಿದ್ದುತ್ತಿರುವವರು ಪ್ರತಿಭಟನಾನಿರತ ರೈತರು ಎಂದು ಅಪಾದಿಸಲಾಗುತ್ತಿದೆ.

ಈಗ ವೈರಲ್ ಆಗಿರುವ ಹಿಂದಿ ಸಂದೇಶದಲ್ಲಿ, ‘ಪ್ರತಿಭಟನಾಕಾರರಿಗೆ ಅಭಿವೃದ್ಧಿಯೇ ಬೇಕಿಲ್ಲ. ಅವರು ಕೇವಲ ವಿನಾಶವನ್ನು ಬಯಸುವವರು. ಅವರಿಗೆ ಸ್ವಾತಂತ್ರ್ಯದ ಮೇಲೆ ನಂಬಿಕೆ ಇಲ್ಲ, ಅವರು ಅರಾಜಕತಾವಾದಿಗಳು’ ಎಂದು ಟೀಕಿಸಲಾಗಿದೆಯಲ್ಲದೇ, ಇಡೀ ಹೋರಾಟವನ್ನು ‘ಫೇಕ್ ಕಿಸಾನ್ ಮೂವ್‌ಮೆಂಟ್’ ಎಂದು ಅವಹೇಳನ ಮಾಡಲಾಗಿದೆ.

ಮೊದಲಿಗೆ ಬಿಜೆಪಿ ಸದಸ್ಯ ಜವಾಹರ್ ಯಾದವ್ ಎನ್ನುವವನು 2017ರ ಈ ಫೋಟೊಗಳನ್ನು ಹಾಕಿ ಸುಳ್ಳು ಹರಡುವ ಟ್ವೀಟ್ ಮಾಡಿದ್ದಾನೆ. ನಂತರ ಇದೇ ಫೋಟೊಗಳನ್ನು ಬಳಸಿ, ‘ಐ ಸಪೋರ್ಟ್ ನರೇಂದ್ರ ಮೋದಿ’ ಎಂಬ ಫೇಸ್‌ಬುಕ್ ಗ್ರೂಪ್‌‌ನಲ್ಲಿ ಕೃಷ್ಣಕಾಂತ್ ಸಿಂಗ್ ಎನ್ನುವವನು ಪೋಸ್ಟ್ ಮಾಡಿದ್ದಾನೆ.

 

ಫ್ಯಾಕ್ಟ್‌ಚೆಕ್

ರಿವರ್ಸ್ ಇಮೇಜ್ ಸರ್ಚ್ ನಡೆಸಿದಾಗ ಈ ಫೋಟೊಗಳು ಇತ್ತೀಚಿನವಲ್ಲ, 2017ರ ಫೋಟೊಗಳು ಎಂದು ದೃಢಪಟ್ಟಿದೆ.

ಮೊದಲ ಪರಿಶೀಲನೆ: ಕೊಲ್ಯಾಜ್‌ನಲ್ಲಿರುವ 4 ಇಮೇಜ್‌ಗಳು ಮತ್ತು ಕೆಳದ ಎಡ ತುದಿಯಲ್ಲಿರುವ ಒಂದು ಇಮೇಜ್ ಅನ್ನು 2017ರ ಅಕ್ಟೋಬರ್‌ನಲ್ಲಿ ಬ್ಲಾಗ್ ಒಂದರಲ್ಲಿ ಪ್ರಕಟಿಸಲಾಗಿದೆ. ಬ್ಲಾಗ್ ಪ್ರಕಾರ ಈ ಇಮೇಜ್‌ಗಳು ಪಂಜಾಬ್‌ಗೆ ಸಂಬಂಧಿಸಿವೆ.

ಎರಡನೆ ಪರಿಶೀಲನೆ: ಮೇಲಿನ ಸಾಲಿನ ಬಲತುದಿಯಲ್ಲಿರುವ ಇಮೇಜ್ ಅನ್ನು ಹಿಂದೂಸ್ತಾನ್ ಟೈಮ್ಸ್ 2017ರ ಅಕ್ಟೋಬರ್‌ನಲ್ಲಿ ಪ್ರಕಟಿಸಿದೆ. ಲೇಖನದ ಪ್ರಕಾರ, ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು, ಟ್ರಾಫಿಕ್ ಸೈನ್‌ಬೋರ್ಡ್ಗಳಲ್ಲಿ ಹಿಂದಿ, ಇಂಗ್ಲಿಷ್ ನಂತರ ಕೆಳಗಿನ ಸಾಲಿನಲ್ಲಿ ಪಂಜಾಬಿ ಭಾಷೆಯನ್ನು ನಮೂದಿಸುವ ಮೂಲಕ ಪಂಜಾಬಿ ಭಾಷೆಗೆ “ಅಗೌರವ” ತೋರಿಸಲಾಗಿದೆ ಎಂದು ಆರೋಪಿಸಿ ಟ್ರಾಫಿಕ್ ಚಿಹ್ನೆಗಳನ್ನು ಧ್ವಂಸಗೊಳಿಸಿದರು ಎಂದು ವಿವರಿಸಲಾಗಿದೆ.

ಹೀಗಾಗಿ ಸದ್ಯ ಜಾಲತಾಣದಲ್ಲಿ ರೈತರ ಹೆಸರಿನಲ್ಲಿ ಓಡಾಡುತ್ತಿರುವ ಇಮೇಜ್‌ಗಳಿಗೂ ರೈತ ಪ್ರತಿಭಟನಾಕಾರರಿಗೂ ಸಂಬಂಧವೇ ಇಲ್ಲ. ಅವು 2017ರಲ್ಲಿ ಪಂಜಾಬಿ ಭಾಷೆಗೆ ಅಗೌರವ ಸಲ್ಲಿಸಲಾಗಿದೆ ಎಂದು ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು ನಡೆಸಿದ ಪ್ರತಿಭಟನೆಯ ಫೋಟೊಗಳಾಗಿವೆ.

ನಮ್ ಪ್ರಶ್ನೆ: ಅಷ್ಟಕ್ಕೂ ಹಿಂದಿ ಮತ್ತು ಇಂಗ್ಲಿಷ್ ಹೇರಿಕೆಯನ್ನು ವಿರೋಧಿಸುವುದು ಅದ್ಹೇಗೆ ಅರಾಜಕತೆ ಆಗುತ್ತದೆ?

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....