Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

- Advertisement -
- Advertisement -

ದೆಹಲಿ ಗಡಿಗಳಲ್ಲಿ ಅನ್ನದಾತರು ನಡೆಸುತ್ತಿರುವ ಅಪ್ರತಿಮ ಹೋರಾಟಕ್ಕೆ ಮಸಿ ಬಳಿಯುವ ಯತ್ನಗಳು ನಿರಂತರವಾಗಿ ಪ್ರಚಲಿತದಲ್ಲಿದ್ದು, ಬಿಜೆಪಿ ಐಟಿ ಸೆಲ್ ಇದರಲ್ಲಿ ಸಕ್ರಿಯ ಪಾತ್ರ ನಿರ್ವಹಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳ ಸೈನ್‌ಬೋರ್ಡ್ಗಳನ್ನು ತಪ್ಪಾಗಿ ತಿದ್ದುವ ಕೆಲಸದಲ್ಲಿ ಹಲವರು ನಿರತರಾದ ಎಂಟು ಫೋಟೊಗಳ ಸಮ್ಮಿಶ್ರಣ (ಕೊಲ್ಯಾಜ್) ಒಂದು ನಿನ್ನೆ-ಮೊನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಹೀಗೆ ಸೈನ್ ಬೋರ್ಡ್ ತಿದ್ದುತ್ತಿರುವವರು ಪ್ರತಿಭಟನಾನಿರತ ರೈತರು ಎಂದು ಅಪಾದಿಸಲಾಗುತ್ತಿದೆ.

ಈಗ ವೈರಲ್ ಆಗಿರುವ ಹಿಂದಿ ಸಂದೇಶದಲ್ಲಿ, ‘ಪ್ರತಿಭಟನಾಕಾರರಿಗೆ ಅಭಿವೃದ್ಧಿಯೇ ಬೇಕಿಲ್ಲ. ಅವರು ಕೇವಲ ವಿನಾಶವನ್ನು ಬಯಸುವವರು. ಅವರಿಗೆ ಸ್ವಾತಂತ್ರ್ಯದ ಮೇಲೆ ನಂಬಿಕೆ ಇಲ್ಲ, ಅವರು ಅರಾಜಕತಾವಾದಿಗಳು’ ಎಂದು ಟೀಕಿಸಲಾಗಿದೆಯಲ್ಲದೇ, ಇಡೀ ಹೋರಾಟವನ್ನು ‘ಫೇಕ್ ಕಿಸಾನ್ ಮೂವ್‌ಮೆಂಟ್’ ಎಂದು ಅವಹೇಳನ ಮಾಡಲಾಗಿದೆ.

ಮೊದಲಿಗೆ ಬಿಜೆಪಿ ಸದಸ್ಯ ಜವಾಹರ್ ಯಾದವ್ ಎನ್ನುವವನು 2017ರ ಈ ಫೋಟೊಗಳನ್ನು ಹಾಕಿ ಸುಳ್ಳು ಹರಡುವ ಟ್ವೀಟ್ ಮಾಡಿದ್ದಾನೆ. ನಂತರ ಇದೇ ಫೋಟೊಗಳನ್ನು ಬಳಸಿ, ‘ಐ ಸಪೋರ್ಟ್ ನರೇಂದ್ರ ಮೋದಿ’ ಎಂಬ ಫೇಸ್‌ಬುಕ್ ಗ್ರೂಪ್‌‌ನಲ್ಲಿ ಕೃಷ್ಣಕಾಂತ್ ಸಿಂಗ್ ಎನ್ನುವವನು ಪೋಸ್ಟ್ ಮಾಡಿದ್ದಾನೆ.

 

ಫ್ಯಾಕ್ಟ್‌ಚೆಕ್

ರಿವರ್ಸ್ ಇಮೇಜ್ ಸರ್ಚ್ ನಡೆಸಿದಾಗ ಈ ಫೋಟೊಗಳು ಇತ್ತೀಚಿನವಲ್ಲ, 2017ರ ಫೋಟೊಗಳು ಎಂದು ದೃಢಪಟ್ಟಿದೆ.

ಮೊದಲ ಪರಿಶೀಲನೆ: ಕೊಲ್ಯಾಜ್‌ನಲ್ಲಿರುವ 4 ಇಮೇಜ್‌ಗಳು ಮತ್ತು ಕೆಳದ ಎಡ ತುದಿಯಲ್ಲಿರುವ ಒಂದು ಇಮೇಜ್ ಅನ್ನು 2017ರ ಅಕ್ಟೋಬರ್‌ನಲ್ಲಿ ಬ್ಲಾಗ್ ಒಂದರಲ್ಲಿ ಪ್ರಕಟಿಸಲಾಗಿದೆ. ಬ್ಲಾಗ್ ಪ್ರಕಾರ ಈ ಇಮೇಜ್‌ಗಳು ಪಂಜಾಬ್‌ಗೆ ಸಂಬಂಧಿಸಿವೆ.

ಎರಡನೆ ಪರಿಶೀಲನೆ: ಮೇಲಿನ ಸಾಲಿನ ಬಲತುದಿಯಲ್ಲಿರುವ ಇಮೇಜ್ ಅನ್ನು ಹಿಂದೂಸ್ತಾನ್ ಟೈಮ್ಸ್ 2017ರ ಅಕ್ಟೋಬರ್‌ನಲ್ಲಿ ಪ್ರಕಟಿಸಿದೆ. ಲೇಖನದ ಪ್ರಕಾರ, ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು, ಟ್ರಾಫಿಕ್ ಸೈನ್‌ಬೋರ್ಡ್ಗಳಲ್ಲಿ ಹಿಂದಿ, ಇಂಗ್ಲಿಷ್ ನಂತರ ಕೆಳಗಿನ ಸಾಲಿನಲ್ಲಿ ಪಂಜಾಬಿ ಭಾಷೆಯನ್ನು ನಮೂದಿಸುವ ಮೂಲಕ ಪಂಜಾಬಿ ಭಾಷೆಗೆ “ಅಗೌರವ” ತೋರಿಸಲಾಗಿದೆ ಎಂದು ಆರೋಪಿಸಿ ಟ್ರಾಫಿಕ್ ಚಿಹ್ನೆಗಳನ್ನು ಧ್ವಂಸಗೊಳಿಸಿದರು ಎಂದು ವಿವರಿಸಲಾಗಿದೆ.

ಹೀಗಾಗಿ ಸದ್ಯ ಜಾಲತಾಣದಲ್ಲಿ ರೈತರ ಹೆಸರಿನಲ್ಲಿ ಓಡಾಡುತ್ತಿರುವ ಇಮೇಜ್‌ಗಳಿಗೂ ರೈತ ಪ್ರತಿಭಟನಾಕಾರರಿಗೂ ಸಂಬಂಧವೇ ಇಲ್ಲ. ಅವು 2017ರಲ್ಲಿ ಪಂಜಾಬಿ ಭಾಷೆಗೆ ಅಗೌರವ ಸಲ್ಲಿಸಲಾಗಿದೆ ಎಂದು ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು ನಡೆಸಿದ ಪ್ರತಿಭಟನೆಯ ಫೋಟೊಗಳಾಗಿವೆ.

ನಮ್ ಪ್ರಶ್ನೆ: ಅಷ್ಟಕ್ಕೂ ಹಿಂದಿ ಮತ್ತು ಇಂಗ್ಲಿಷ್ ಹೇರಿಕೆಯನ್ನು ವಿರೋಧಿಸುವುದು ಅದ್ಹೇಗೆ ಅರಾಜಕತೆ ಆಗುತ್ತದೆ?

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...