Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

- Advertisement -
- Advertisement -

ದೆಹಲಿ ಗಡಿಗಳಲ್ಲಿ ಅನ್ನದಾತರು ನಡೆಸುತ್ತಿರುವ ಅಪ್ರತಿಮ ಹೋರಾಟಕ್ಕೆ ಮಸಿ ಬಳಿಯುವ ಯತ್ನಗಳು ನಿರಂತರವಾಗಿ ಪ್ರಚಲಿತದಲ್ಲಿದ್ದು, ಬಿಜೆಪಿ ಐಟಿ ಸೆಲ್ ಇದರಲ್ಲಿ ಸಕ್ರಿಯ ಪಾತ್ರ ನಿರ್ವಹಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳ ಸೈನ್‌ಬೋರ್ಡ್ಗಳನ್ನು ತಪ್ಪಾಗಿ ತಿದ್ದುವ ಕೆಲಸದಲ್ಲಿ ಹಲವರು ನಿರತರಾದ ಎಂಟು ಫೋಟೊಗಳ ಸಮ್ಮಿಶ್ರಣ (ಕೊಲ್ಯಾಜ್) ಒಂದು ನಿನ್ನೆ-ಮೊನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಹೀಗೆ ಸೈನ್ ಬೋರ್ಡ್ ತಿದ್ದುತ್ತಿರುವವರು ಪ್ರತಿಭಟನಾನಿರತ ರೈತರು ಎಂದು ಅಪಾದಿಸಲಾಗುತ್ತಿದೆ.

ಈಗ ವೈರಲ್ ಆಗಿರುವ ಹಿಂದಿ ಸಂದೇಶದಲ್ಲಿ, ‘ಪ್ರತಿಭಟನಾಕಾರರಿಗೆ ಅಭಿವೃದ್ಧಿಯೇ ಬೇಕಿಲ್ಲ. ಅವರು ಕೇವಲ ವಿನಾಶವನ್ನು ಬಯಸುವವರು. ಅವರಿಗೆ ಸ್ವಾತಂತ್ರ್ಯದ ಮೇಲೆ ನಂಬಿಕೆ ಇಲ್ಲ, ಅವರು ಅರಾಜಕತಾವಾದಿಗಳು’ ಎಂದು ಟೀಕಿಸಲಾಗಿದೆಯಲ್ಲದೇ, ಇಡೀ ಹೋರಾಟವನ್ನು ‘ಫೇಕ್ ಕಿಸಾನ್ ಮೂವ್‌ಮೆಂಟ್’ ಎಂದು ಅವಹೇಳನ ಮಾಡಲಾಗಿದೆ.

ಮೊದಲಿಗೆ ಬಿಜೆಪಿ ಸದಸ್ಯ ಜವಾಹರ್ ಯಾದವ್ ಎನ್ನುವವನು 2017ರ ಈ ಫೋಟೊಗಳನ್ನು ಹಾಕಿ ಸುಳ್ಳು ಹರಡುವ ಟ್ವೀಟ್ ಮಾಡಿದ್ದಾನೆ. ನಂತರ ಇದೇ ಫೋಟೊಗಳನ್ನು ಬಳಸಿ, ‘ಐ ಸಪೋರ್ಟ್ ನರೇಂದ್ರ ಮೋದಿ’ ಎಂಬ ಫೇಸ್‌ಬುಕ್ ಗ್ರೂಪ್‌‌ನಲ್ಲಿ ಕೃಷ್ಣಕಾಂತ್ ಸಿಂಗ್ ಎನ್ನುವವನು ಪೋಸ್ಟ್ ಮಾಡಿದ್ದಾನೆ.

 

ಫ್ಯಾಕ್ಟ್‌ಚೆಕ್

ರಿವರ್ಸ್ ಇಮೇಜ್ ಸರ್ಚ್ ನಡೆಸಿದಾಗ ಈ ಫೋಟೊಗಳು ಇತ್ತೀಚಿನವಲ್ಲ, 2017ರ ಫೋಟೊಗಳು ಎಂದು ದೃಢಪಟ್ಟಿದೆ.

ಮೊದಲ ಪರಿಶೀಲನೆ: ಕೊಲ್ಯಾಜ್‌ನಲ್ಲಿರುವ 4 ಇಮೇಜ್‌ಗಳು ಮತ್ತು ಕೆಳದ ಎಡ ತುದಿಯಲ್ಲಿರುವ ಒಂದು ಇಮೇಜ್ ಅನ್ನು 2017ರ ಅಕ್ಟೋಬರ್‌ನಲ್ಲಿ ಬ್ಲಾಗ್ ಒಂದರಲ್ಲಿ ಪ್ರಕಟಿಸಲಾಗಿದೆ. ಬ್ಲಾಗ್ ಪ್ರಕಾರ ಈ ಇಮೇಜ್‌ಗಳು ಪಂಜಾಬ್‌ಗೆ ಸಂಬಂಧಿಸಿವೆ.

ಎರಡನೆ ಪರಿಶೀಲನೆ: ಮೇಲಿನ ಸಾಲಿನ ಬಲತುದಿಯಲ್ಲಿರುವ ಇಮೇಜ್ ಅನ್ನು ಹಿಂದೂಸ್ತಾನ್ ಟೈಮ್ಸ್ 2017ರ ಅಕ್ಟೋಬರ್‌ನಲ್ಲಿ ಪ್ರಕಟಿಸಿದೆ. ಲೇಖನದ ಪ್ರಕಾರ, ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು, ಟ್ರಾಫಿಕ್ ಸೈನ್‌ಬೋರ್ಡ್ಗಳಲ್ಲಿ ಹಿಂದಿ, ಇಂಗ್ಲಿಷ್ ನಂತರ ಕೆಳಗಿನ ಸಾಲಿನಲ್ಲಿ ಪಂಜಾಬಿ ಭಾಷೆಯನ್ನು ನಮೂದಿಸುವ ಮೂಲಕ ಪಂಜಾಬಿ ಭಾಷೆಗೆ “ಅಗೌರವ” ತೋರಿಸಲಾಗಿದೆ ಎಂದು ಆರೋಪಿಸಿ ಟ್ರಾಫಿಕ್ ಚಿಹ್ನೆಗಳನ್ನು ಧ್ವಂಸಗೊಳಿಸಿದರು ಎಂದು ವಿವರಿಸಲಾಗಿದೆ.

ಹೀಗಾಗಿ ಸದ್ಯ ಜಾಲತಾಣದಲ್ಲಿ ರೈತರ ಹೆಸರಿನಲ್ಲಿ ಓಡಾಡುತ್ತಿರುವ ಇಮೇಜ್‌ಗಳಿಗೂ ರೈತ ಪ್ರತಿಭಟನಾಕಾರರಿಗೂ ಸಂಬಂಧವೇ ಇಲ್ಲ. ಅವು 2017ರಲ್ಲಿ ಪಂಜಾಬಿ ಭಾಷೆಗೆ ಅಗೌರವ ಸಲ್ಲಿಸಲಾಗಿದೆ ಎಂದು ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು ನಡೆಸಿದ ಪ್ರತಿಭಟನೆಯ ಫೋಟೊಗಳಾಗಿವೆ.

ನಮ್ ಪ್ರಶ್ನೆ: ಅಷ್ಟಕ್ಕೂ ಹಿಂದಿ ಮತ್ತು ಇಂಗ್ಲಿಷ್ ಹೇರಿಕೆಯನ್ನು ವಿರೋಧಿಸುವುದು ಅದ್ಹೇಗೆ ಅರಾಜಕತೆ ಆಗುತ್ತದೆ?

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...