Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

- Advertisement -
- Advertisement -

ದೆಹಲಿ ಗಡಿಗಳಲ್ಲಿ ಅನ್ನದಾತರು ನಡೆಸುತ್ತಿರುವ ಅಪ್ರತಿಮ ಹೋರಾಟಕ್ಕೆ ಮಸಿ ಬಳಿಯುವ ಯತ್ನಗಳು ನಿರಂತರವಾಗಿ ಪ್ರಚಲಿತದಲ್ಲಿದ್ದು, ಬಿಜೆಪಿ ಐಟಿ ಸೆಲ್ ಇದರಲ್ಲಿ ಸಕ್ರಿಯ ಪಾತ್ರ ನಿರ್ವಹಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳ ಸೈನ್‌ಬೋರ್ಡ್ಗಳನ್ನು ತಪ್ಪಾಗಿ ತಿದ್ದುವ ಕೆಲಸದಲ್ಲಿ ಹಲವರು ನಿರತರಾದ ಎಂಟು ಫೋಟೊಗಳ ಸಮ್ಮಿಶ್ರಣ (ಕೊಲ್ಯಾಜ್) ಒಂದು ನಿನ್ನೆ-ಮೊನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಹೀಗೆ ಸೈನ್ ಬೋರ್ಡ್ ತಿದ್ದುತ್ತಿರುವವರು ಪ್ರತಿಭಟನಾನಿರತ ರೈತರು ಎಂದು ಅಪಾದಿಸಲಾಗುತ್ತಿದೆ.

ಈಗ ವೈರಲ್ ಆಗಿರುವ ಹಿಂದಿ ಸಂದೇಶದಲ್ಲಿ, ‘ಪ್ರತಿಭಟನಾಕಾರರಿಗೆ ಅಭಿವೃದ್ಧಿಯೇ ಬೇಕಿಲ್ಲ. ಅವರು ಕೇವಲ ವಿನಾಶವನ್ನು ಬಯಸುವವರು. ಅವರಿಗೆ ಸ್ವಾತಂತ್ರ್ಯದ ಮೇಲೆ ನಂಬಿಕೆ ಇಲ್ಲ, ಅವರು ಅರಾಜಕತಾವಾದಿಗಳು’ ಎಂದು ಟೀಕಿಸಲಾಗಿದೆಯಲ್ಲದೇ, ಇಡೀ ಹೋರಾಟವನ್ನು ‘ಫೇಕ್ ಕಿಸಾನ್ ಮೂವ್‌ಮೆಂಟ್’ ಎಂದು ಅವಹೇಳನ ಮಾಡಲಾಗಿದೆ.

ಮೊದಲಿಗೆ ಬಿಜೆಪಿ ಸದಸ್ಯ ಜವಾಹರ್ ಯಾದವ್ ಎನ್ನುವವನು 2017ರ ಈ ಫೋಟೊಗಳನ್ನು ಹಾಕಿ ಸುಳ್ಳು ಹರಡುವ ಟ್ವೀಟ್ ಮಾಡಿದ್ದಾನೆ. ನಂತರ ಇದೇ ಫೋಟೊಗಳನ್ನು ಬಳಸಿ, ‘ಐ ಸಪೋರ್ಟ್ ನರೇಂದ್ರ ಮೋದಿ’ ಎಂಬ ಫೇಸ್‌ಬುಕ್ ಗ್ರೂಪ್‌‌ನಲ್ಲಿ ಕೃಷ್ಣಕಾಂತ್ ಸಿಂಗ್ ಎನ್ನುವವನು ಪೋಸ್ಟ್ ಮಾಡಿದ್ದಾನೆ.

 

ಫ್ಯಾಕ್ಟ್‌ಚೆಕ್

ರಿವರ್ಸ್ ಇಮೇಜ್ ಸರ್ಚ್ ನಡೆಸಿದಾಗ ಈ ಫೋಟೊಗಳು ಇತ್ತೀಚಿನವಲ್ಲ, 2017ರ ಫೋಟೊಗಳು ಎಂದು ದೃಢಪಟ್ಟಿದೆ.

ಮೊದಲ ಪರಿಶೀಲನೆ: ಕೊಲ್ಯಾಜ್‌ನಲ್ಲಿರುವ 4 ಇಮೇಜ್‌ಗಳು ಮತ್ತು ಕೆಳದ ಎಡ ತುದಿಯಲ್ಲಿರುವ ಒಂದು ಇಮೇಜ್ ಅನ್ನು 2017ರ ಅಕ್ಟೋಬರ್‌ನಲ್ಲಿ ಬ್ಲಾಗ್ ಒಂದರಲ್ಲಿ ಪ್ರಕಟಿಸಲಾಗಿದೆ. ಬ್ಲಾಗ್ ಪ್ರಕಾರ ಈ ಇಮೇಜ್‌ಗಳು ಪಂಜಾಬ್‌ಗೆ ಸಂಬಂಧಿಸಿವೆ.

ಎರಡನೆ ಪರಿಶೀಲನೆ: ಮೇಲಿನ ಸಾಲಿನ ಬಲತುದಿಯಲ್ಲಿರುವ ಇಮೇಜ್ ಅನ್ನು ಹಿಂದೂಸ್ತಾನ್ ಟೈಮ್ಸ್ 2017ರ ಅಕ್ಟೋಬರ್‌ನಲ್ಲಿ ಪ್ರಕಟಿಸಿದೆ. ಲೇಖನದ ಪ್ರಕಾರ, ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು, ಟ್ರಾಫಿಕ್ ಸೈನ್‌ಬೋರ್ಡ್ಗಳಲ್ಲಿ ಹಿಂದಿ, ಇಂಗ್ಲಿಷ್ ನಂತರ ಕೆಳಗಿನ ಸಾಲಿನಲ್ಲಿ ಪಂಜಾಬಿ ಭಾಷೆಯನ್ನು ನಮೂದಿಸುವ ಮೂಲಕ ಪಂಜಾಬಿ ಭಾಷೆಗೆ “ಅಗೌರವ” ತೋರಿಸಲಾಗಿದೆ ಎಂದು ಆರೋಪಿಸಿ ಟ್ರಾಫಿಕ್ ಚಿಹ್ನೆಗಳನ್ನು ಧ್ವಂಸಗೊಳಿಸಿದರು ಎಂದು ವಿವರಿಸಲಾಗಿದೆ.

ಹೀಗಾಗಿ ಸದ್ಯ ಜಾಲತಾಣದಲ್ಲಿ ರೈತರ ಹೆಸರಿನಲ್ಲಿ ಓಡಾಡುತ್ತಿರುವ ಇಮೇಜ್‌ಗಳಿಗೂ ರೈತ ಪ್ರತಿಭಟನಾಕಾರರಿಗೂ ಸಂಬಂಧವೇ ಇಲ್ಲ. ಅವು 2017ರಲ್ಲಿ ಪಂಜಾಬಿ ಭಾಷೆಗೆ ಅಗೌರವ ಸಲ್ಲಿಸಲಾಗಿದೆ ಎಂದು ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು ನಡೆಸಿದ ಪ್ರತಿಭಟನೆಯ ಫೋಟೊಗಳಾಗಿವೆ.

ನಮ್ ಪ್ರಶ್ನೆ: ಅಷ್ಟಕ್ಕೂ ಹಿಂದಿ ಮತ್ತು ಇಂಗ್ಲಿಷ್ ಹೇರಿಕೆಯನ್ನು ವಿರೋಧಿಸುವುದು ಅದ್ಹೇಗೆ ಅರಾಜಕತೆ ಆಗುತ್ತದೆ?

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...