Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

- Advertisement -
- Advertisement -

ದೆಹಲಿ ಗಡಿಗಳಲ್ಲಿ ಅನ್ನದಾತರು ನಡೆಸುತ್ತಿರುವ ಅಪ್ರತಿಮ ಹೋರಾಟಕ್ಕೆ ಮಸಿ ಬಳಿಯುವ ಯತ್ನಗಳು ನಿರಂತರವಾಗಿ ಪ್ರಚಲಿತದಲ್ಲಿದ್ದು, ಬಿಜೆಪಿ ಐಟಿ ಸೆಲ್ ಇದರಲ್ಲಿ ಸಕ್ರಿಯ ಪಾತ್ರ ನಿರ್ವಹಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳ ಸೈನ್‌ಬೋರ್ಡ್ಗಳನ್ನು ತಪ್ಪಾಗಿ ತಿದ್ದುವ ಕೆಲಸದಲ್ಲಿ ಹಲವರು ನಿರತರಾದ ಎಂಟು ಫೋಟೊಗಳ ಸಮ್ಮಿಶ್ರಣ (ಕೊಲ್ಯಾಜ್) ಒಂದು ನಿನ್ನೆ-ಮೊನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಹೀಗೆ ಸೈನ್ ಬೋರ್ಡ್ ತಿದ್ದುತ್ತಿರುವವರು ಪ್ರತಿಭಟನಾನಿರತ ರೈತರು ಎಂದು ಅಪಾದಿಸಲಾಗುತ್ತಿದೆ.

ಈಗ ವೈರಲ್ ಆಗಿರುವ ಹಿಂದಿ ಸಂದೇಶದಲ್ಲಿ, ‘ಪ್ರತಿಭಟನಾಕಾರರಿಗೆ ಅಭಿವೃದ್ಧಿಯೇ ಬೇಕಿಲ್ಲ. ಅವರು ಕೇವಲ ವಿನಾಶವನ್ನು ಬಯಸುವವರು. ಅವರಿಗೆ ಸ್ವಾತಂತ್ರ್ಯದ ಮೇಲೆ ನಂಬಿಕೆ ಇಲ್ಲ, ಅವರು ಅರಾಜಕತಾವಾದಿಗಳು’ ಎಂದು ಟೀಕಿಸಲಾಗಿದೆಯಲ್ಲದೇ, ಇಡೀ ಹೋರಾಟವನ್ನು ‘ಫೇಕ್ ಕಿಸಾನ್ ಮೂವ್‌ಮೆಂಟ್’ ಎಂದು ಅವಹೇಳನ ಮಾಡಲಾಗಿದೆ.

ಮೊದಲಿಗೆ ಬಿಜೆಪಿ ಸದಸ್ಯ ಜವಾಹರ್ ಯಾದವ್ ಎನ್ನುವವನು 2017ರ ಈ ಫೋಟೊಗಳನ್ನು ಹಾಕಿ ಸುಳ್ಳು ಹರಡುವ ಟ್ವೀಟ್ ಮಾಡಿದ್ದಾನೆ. ನಂತರ ಇದೇ ಫೋಟೊಗಳನ್ನು ಬಳಸಿ, ‘ಐ ಸಪೋರ್ಟ್ ನರೇಂದ್ರ ಮೋದಿ’ ಎಂಬ ಫೇಸ್‌ಬುಕ್ ಗ್ರೂಪ್‌‌ನಲ್ಲಿ ಕೃಷ್ಣಕಾಂತ್ ಸಿಂಗ್ ಎನ್ನುವವನು ಪೋಸ್ಟ್ ಮಾಡಿದ್ದಾನೆ.

 

ಫ್ಯಾಕ್ಟ್‌ಚೆಕ್

ರಿವರ್ಸ್ ಇಮೇಜ್ ಸರ್ಚ್ ನಡೆಸಿದಾಗ ಈ ಫೋಟೊಗಳು ಇತ್ತೀಚಿನವಲ್ಲ, 2017ರ ಫೋಟೊಗಳು ಎಂದು ದೃಢಪಟ್ಟಿದೆ.

ಮೊದಲ ಪರಿಶೀಲನೆ: ಕೊಲ್ಯಾಜ್‌ನಲ್ಲಿರುವ 4 ಇಮೇಜ್‌ಗಳು ಮತ್ತು ಕೆಳದ ಎಡ ತುದಿಯಲ್ಲಿರುವ ಒಂದು ಇಮೇಜ್ ಅನ್ನು 2017ರ ಅಕ್ಟೋಬರ್‌ನಲ್ಲಿ ಬ್ಲಾಗ್ ಒಂದರಲ್ಲಿ ಪ್ರಕಟಿಸಲಾಗಿದೆ. ಬ್ಲಾಗ್ ಪ್ರಕಾರ ಈ ಇಮೇಜ್‌ಗಳು ಪಂಜಾಬ್‌ಗೆ ಸಂಬಂಧಿಸಿವೆ.

ಎರಡನೆ ಪರಿಶೀಲನೆ: ಮೇಲಿನ ಸಾಲಿನ ಬಲತುದಿಯಲ್ಲಿರುವ ಇಮೇಜ್ ಅನ್ನು ಹಿಂದೂಸ್ತಾನ್ ಟೈಮ್ಸ್ 2017ರ ಅಕ್ಟೋಬರ್‌ನಲ್ಲಿ ಪ್ರಕಟಿಸಿದೆ. ಲೇಖನದ ಪ್ರಕಾರ, ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು, ಟ್ರಾಫಿಕ್ ಸೈನ್‌ಬೋರ್ಡ್ಗಳಲ್ಲಿ ಹಿಂದಿ, ಇಂಗ್ಲಿಷ್ ನಂತರ ಕೆಳಗಿನ ಸಾಲಿನಲ್ಲಿ ಪಂಜಾಬಿ ಭಾಷೆಯನ್ನು ನಮೂದಿಸುವ ಮೂಲಕ ಪಂಜಾಬಿ ಭಾಷೆಗೆ “ಅಗೌರವ” ತೋರಿಸಲಾಗಿದೆ ಎಂದು ಆರೋಪಿಸಿ ಟ್ರಾಫಿಕ್ ಚಿಹ್ನೆಗಳನ್ನು ಧ್ವಂಸಗೊಳಿಸಿದರು ಎಂದು ವಿವರಿಸಲಾಗಿದೆ.

ಹೀಗಾಗಿ ಸದ್ಯ ಜಾಲತಾಣದಲ್ಲಿ ರೈತರ ಹೆಸರಿನಲ್ಲಿ ಓಡಾಡುತ್ತಿರುವ ಇಮೇಜ್‌ಗಳಿಗೂ ರೈತ ಪ್ರತಿಭಟನಾಕಾರರಿಗೂ ಸಂಬಂಧವೇ ಇಲ್ಲ. ಅವು 2017ರಲ್ಲಿ ಪಂಜಾಬಿ ಭಾಷೆಗೆ ಅಗೌರವ ಸಲ್ಲಿಸಲಾಗಿದೆ ಎಂದು ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು ನಡೆಸಿದ ಪ್ರತಿಭಟನೆಯ ಫೋಟೊಗಳಾಗಿವೆ.

ನಮ್ ಪ್ರಶ್ನೆ: ಅಷ್ಟಕ್ಕೂ ಹಿಂದಿ ಮತ್ತು ಇಂಗ್ಲಿಷ್ ಹೇರಿಕೆಯನ್ನು ವಿರೋಧಿಸುವುದು ಅದ್ಹೇಗೆ ಅರಾಜಕತೆ ಆಗುತ್ತದೆ?

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...