Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

- Advertisement -
- Advertisement -

ದೆಹಲಿ ಗಡಿಗಳಲ್ಲಿ ಅನ್ನದಾತರು ನಡೆಸುತ್ತಿರುವ ಅಪ್ರತಿಮ ಹೋರಾಟಕ್ಕೆ ಮಸಿ ಬಳಿಯುವ ಯತ್ನಗಳು ನಿರಂತರವಾಗಿ ಪ್ರಚಲಿತದಲ್ಲಿದ್ದು, ಬಿಜೆಪಿ ಐಟಿ ಸೆಲ್ ಇದರಲ್ಲಿ ಸಕ್ರಿಯ ಪಾತ್ರ ನಿರ್ವಹಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳ ಸೈನ್‌ಬೋರ್ಡ್ಗಳನ್ನು ತಪ್ಪಾಗಿ ತಿದ್ದುವ ಕೆಲಸದಲ್ಲಿ ಹಲವರು ನಿರತರಾದ ಎಂಟು ಫೋಟೊಗಳ ಸಮ್ಮಿಶ್ರಣ (ಕೊಲ್ಯಾಜ್) ಒಂದು ನಿನ್ನೆ-ಮೊನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಹೀಗೆ ಸೈನ್ ಬೋರ್ಡ್ ತಿದ್ದುತ್ತಿರುವವರು ಪ್ರತಿಭಟನಾನಿರತ ರೈತರು ಎಂದು ಅಪಾದಿಸಲಾಗುತ್ತಿದೆ.

ಈಗ ವೈರಲ್ ಆಗಿರುವ ಹಿಂದಿ ಸಂದೇಶದಲ್ಲಿ, ‘ಪ್ರತಿಭಟನಾಕಾರರಿಗೆ ಅಭಿವೃದ್ಧಿಯೇ ಬೇಕಿಲ್ಲ. ಅವರು ಕೇವಲ ವಿನಾಶವನ್ನು ಬಯಸುವವರು. ಅವರಿಗೆ ಸ್ವಾತಂತ್ರ್ಯದ ಮೇಲೆ ನಂಬಿಕೆ ಇಲ್ಲ, ಅವರು ಅರಾಜಕತಾವಾದಿಗಳು’ ಎಂದು ಟೀಕಿಸಲಾಗಿದೆಯಲ್ಲದೇ, ಇಡೀ ಹೋರಾಟವನ್ನು ‘ಫೇಕ್ ಕಿಸಾನ್ ಮೂವ್‌ಮೆಂಟ್’ ಎಂದು ಅವಹೇಳನ ಮಾಡಲಾಗಿದೆ.

ಮೊದಲಿಗೆ ಬಿಜೆಪಿ ಸದಸ್ಯ ಜವಾಹರ್ ಯಾದವ್ ಎನ್ನುವವನು 2017ರ ಈ ಫೋಟೊಗಳನ್ನು ಹಾಕಿ ಸುಳ್ಳು ಹರಡುವ ಟ್ವೀಟ್ ಮಾಡಿದ್ದಾನೆ. ನಂತರ ಇದೇ ಫೋಟೊಗಳನ್ನು ಬಳಸಿ, ‘ಐ ಸಪೋರ್ಟ್ ನರೇಂದ್ರ ಮೋದಿ’ ಎಂಬ ಫೇಸ್‌ಬುಕ್ ಗ್ರೂಪ್‌‌ನಲ್ಲಿ ಕೃಷ್ಣಕಾಂತ್ ಸಿಂಗ್ ಎನ್ನುವವನು ಪೋಸ್ಟ್ ಮಾಡಿದ್ದಾನೆ.

 

ಫ್ಯಾಕ್ಟ್‌ಚೆಕ್

ರಿವರ್ಸ್ ಇಮೇಜ್ ಸರ್ಚ್ ನಡೆಸಿದಾಗ ಈ ಫೋಟೊಗಳು ಇತ್ತೀಚಿನವಲ್ಲ, 2017ರ ಫೋಟೊಗಳು ಎಂದು ದೃಢಪಟ್ಟಿದೆ.

ಮೊದಲ ಪರಿಶೀಲನೆ: ಕೊಲ್ಯಾಜ್‌ನಲ್ಲಿರುವ 4 ಇಮೇಜ್‌ಗಳು ಮತ್ತು ಕೆಳದ ಎಡ ತುದಿಯಲ್ಲಿರುವ ಒಂದು ಇಮೇಜ್ ಅನ್ನು 2017ರ ಅಕ್ಟೋಬರ್‌ನಲ್ಲಿ ಬ್ಲಾಗ್ ಒಂದರಲ್ಲಿ ಪ್ರಕಟಿಸಲಾಗಿದೆ. ಬ್ಲಾಗ್ ಪ್ರಕಾರ ಈ ಇಮೇಜ್‌ಗಳು ಪಂಜಾಬ್‌ಗೆ ಸಂಬಂಧಿಸಿವೆ.

ಎರಡನೆ ಪರಿಶೀಲನೆ: ಮೇಲಿನ ಸಾಲಿನ ಬಲತುದಿಯಲ್ಲಿರುವ ಇಮೇಜ್ ಅನ್ನು ಹಿಂದೂಸ್ತಾನ್ ಟೈಮ್ಸ್ 2017ರ ಅಕ್ಟೋಬರ್‌ನಲ್ಲಿ ಪ್ರಕಟಿಸಿದೆ. ಲೇಖನದ ಪ್ರಕಾರ, ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು, ಟ್ರಾಫಿಕ್ ಸೈನ್‌ಬೋರ್ಡ್ಗಳಲ್ಲಿ ಹಿಂದಿ, ಇಂಗ್ಲಿಷ್ ನಂತರ ಕೆಳಗಿನ ಸಾಲಿನಲ್ಲಿ ಪಂಜಾಬಿ ಭಾಷೆಯನ್ನು ನಮೂದಿಸುವ ಮೂಲಕ ಪಂಜಾಬಿ ಭಾಷೆಗೆ “ಅಗೌರವ” ತೋರಿಸಲಾಗಿದೆ ಎಂದು ಆರೋಪಿಸಿ ಟ್ರಾಫಿಕ್ ಚಿಹ್ನೆಗಳನ್ನು ಧ್ವಂಸಗೊಳಿಸಿದರು ಎಂದು ವಿವರಿಸಲಾಗಿದೆ.

ಹೀಗಾಗಿ ಸದ್ಯ ಜಾಲತಾಣದಲ್ಲಿ ರೈತರ ಹೆಸರಿನಲ್ಲಿ ಓಡಾಡುತ್ತಿರುವ ಇಮೇಜ್‌ಗಳಿಗೂ ರೈತ ಪ್ರತಿಭಟನಾಕಾರರಿಗೂ ಸಂಬಂಧವೇ ಇಲ್ಲ. ಅವು 2017ರಲ್ಲಿ ಪಂಜಾಬಿ ಭಾಷೆಗೆ ಅಗೌರವ ಸಲ್ಲಿಸಲಾಗಿದೆ ಎಂದು ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು ನಡೆಸಿದ ಪ್ರತಿಭಟನೆಯ ಫೋಟೊಗಳಾಗಿವೆ.

ನಮ್ ಪ್ರಶ್ನೆ: ಅಷ್ಟಕ್ಕೂ ಹಿಂದಿ ಮತ್ತು ಇಂಗ್ಲಿಷ್ ಹೇರಿಕೆಯನ್ನು ವಿರೋಧಿಸುವುದು ಅದ್ಹೇಗೆ ಅರಾಜಕತೆ ಆಗುತ್ತದೆ?

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...