Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

- Advertisement -
- Advertisement -

ದೆಹಲಿ ಗಡಿಗಳಲ್ಲಿ ಅನ್ನದಾತರು ನಡೆಸುತ್ತಿರುವ ಅಪ್ರತಿಮ ಹೋರಾಟಕ್ಕೆ ಮಸಿ ಬಳಿಯುವ ಯತ್ನಗಳು ನಿರಂತರವಾಗಿ ಪ್ರಚಲಿತದಲ್ಲಿದ್ದು, ಬಿಜೆಪಿ ಐಟಿ ಸೆಲ್ ಇದರಲ್ಲಿ ಸಕ್ರಿಯ ಪಾತ್ರ ನಿರ್ವಹಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳ ಸೈನ್‌ಬೋರ್ಡ್ಗಳನ್ನು ತಪ್ಪಾಗಿ ತಿದ್ದುವ ಕೆಲಸದಲ್ಲಿ ಹಲವರು ನಿರತರಾದ ಎಂಟು ಫೋಟೊಗಳ ಸಮ್ಮಿಶ್ರಣ (ಕೊಲ್ಯಾಜ್) ಒಂದು ನಿನ್ನೆ-ಮೊನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಹೀಗೆ ಸೈನ್ ಬೋರ್ಡ್ ತಿದ್ದುತ್ತಿರುವವರು ಪ್ರತಿಭಟನಾನಿರತ ರೈತರು ಎಂದು ಅಪಾದಿಸಲಾಗುತ್ತಿದೆ.

ಈಗ ವೈರಲ್ ಆಗಿರುವ ಹಿಂದಿ ಸಂದೇಶದಲ್ಲಿ, ‘ಪ್ರತಿಭಟನಾಕಾರರಿಗೆ ಅಭಿವೃದ್ಧಿಯೇ ಬೇಕಿಲ್ಲ. ಅವರು ಕೇವಲ ವಿನಾಶವನ್ನು ಬಯಸುವವರು. ಅವರಿಗೆ ಸ್ವಾತಂತ್ರ್ಯದ ಮೇಲೆ ನಂಬಿಕೆ ಇಲ್ಲ, ಅವರು ಅರಾಜಕತಾವಾದಿಗಳು’ ಎಂದು ಟೀಕಿಸಲಾಗಿದೆಯಲ್ಲದೇ, ಇಡೀ ಹೋರಾಟವನ್ನು ‘ಫೇಕ್ ಕಿಸಾನ್ ಮೂವ್‌ಮೆಂಟ್’ ಎಂದು ಅವಹೇಳನ ಮಾಡಲಾಗಿದೆ.

ಮೊದಲಿಗೆ ಬಿಜೆಪಿ ಸದಸ್ಯ ಜವಾಹರ್ ಯಾದವ್ ಎನ್ನುವವನು 2017ರ ಈ ಫೋಟೊಗಳನ್ನು ಹಾಕಿ ಸುಳ್ಳು ಹರಡುವ ಟ್ವೀಟ್ ಮಾಡಿದ್ದಾನೆ. ನಂತರ ಇದೇ ಫೋಟೊಗಳನ್ನು ಬಳಸಿ, ‘ಐ ಸಪೋರ್ಟ್ ನರೇಂದ್ರ ಮೋದಿ’ ಎಂಬ ಫೇಸ್‌ಬುಕ್ ಗ್ರೂಪ್‌‌ನಲ್ಲಿ ಕೃಷ್ಣಕಾಂತ್ ಸಿಂಗ್ ಎನ್ನುವವನು ಪೋಸ್ಟ್ ಮಾಡಿದ್ದಾನೆ.

 

ಫ್ಯಾಕ್ಟ್‌ಚೆಕ್

ರಿವರ್ಸ್ ಇಮೇಜ್ ಸರ್ಚ್ ನಡೆಸಿದಾಗ ಈ ಫೋಟೊಗಳು ಇತ್ತೀಚಿನವಲ್ಲ, 2017ರ ಫೋಟೊಗಳು ಎಂದು ದೃಢಪಟ್ಟಿದೆ.

ಮೊದಲ ಪರಿಶೀಲನೆ: ಕೊಲ್ಯಾಜ್‌ನಲ್ಲಿರುವ 4 ಇಮೇಜ್‌ಗಳು ಮತ್ತು ಕೆಳದ ಎಡ ತುದಿಯಲ್ಲಿರುವ ಒಂದು ಇಮೇಜ್ ಅನ್ನು 2017ರ ಅಕ್ಟೋಬರ್‌ನಲ್ಲಿ ಬ್ಲಾಗ್ ಒಂದರಲ್ಲಿ ಪ್ರಕಟಿಸಲಾಗಿದೆ. ಬ್ಲಾಗ್ ಪ್ರಕಾರ ಈ ಇಮೇಜ್‌ಗಳು ಪಂಜಾಬ್‌ಗೆ ಸಂಬಂಧಿಸಿವೆ.

ಎರಡನೆ ಪರಿಶೀಲನೆ: ಮೇಲಿನ ಸಾಲಿನ ಬಲತುದಿಯಲ್ಲಿರುವ ಇಮೇಜ್ ಅನ್ನು ಹಿಂದೂಸ್ತಾನ್ ಟೈಮ್ಸ್ 2017ರ ಅಕ್ಟೋಬರ್‌ನಲ್ಲಿ ಪ್ರಕಟಿಸಿದೆ. ಲೇಖನದ ಪ್ರಕಾರ, ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು, ಟ್ರಾಫಿಕ್ ಸೈನ್‌ಬೋರ್ಡ್ಗಳಲ್ಲಿ ಹಿಂದಿ, ಇಂಗ್ಲಿಷ್ ನಂತರ ಕೆಳಗಿನ ಸಾಲಿನಲ್ಲಿ ಪಂಜಾಬಿ ಭಾಷೆಯನ್ನು ನಮೂದಿಸುವ ಮೂಲಕ ಪಂಜಾಬಿ ಭಾಷೆಗೆ “ಅಗೌರವ” ತೋರಿಸಲಾಗಿದೆ ಎಂದು ಆರೋಪಿಸಿ ಟ್ರಾಫಿಕ್ ಚಿಹ್ನೆಗಳನ್ನು ಧ್ವಂಸಗೊಳಿಸಿದರು ಎಂದು ವಿವರಿಸಲಾಗಿದೆ.

ಹೀಗಾಗಿ ಸದ್ಯ ಜಾಲತಾಣದಲ್ಲಿ ರೈತರ ಹೆಸರಿನಲ್ಲಿ ಓಡಾಡುತ್ತಿರುವ ಇಮೇಜ್‌ಗಳಿಗೂ ರೈತ ಪ್ರತಿಭಟನಾಕಾರರಿಗೂ ಸಂಬಂಧವೇ ಇಲ್ಲ. ಅವು 2017ರಲ್ಲಿ ಪಂಜಾಬಿ ಭಾಷೆಗೆ ಅಗೌರವ ಸಲ್ಲಿಸಲಾಗಿದೆ ಎಂದು ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು ನಡೆಸಿದ ಪ್ರತಿಭಟನೆಯ ಫೋಟೊಗಳಾಗಿವೆ.

ನಮ್ ಪ್ರಶ್ನೆ: ಅಷ್ಟಕ್ಕೂ ಹಿಂದಿ ಮತ್ತು ಇಂಗ್ಲಿಷ್ ಹೇರಿಕೆಯನ್ನು ವಿರೋಧಿಸುವುದು ಅದ್ಹೇಗೆ ಅರಾಜಕತೆ ಆಗುತ್ತದೆ?

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...