Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

- Advertisement -
- Advertisement -

ದೆಹಲಿ ಗಡಿಗಳಲ್ಲಿ ಅನ್ನದಾತರು ನಡೆಸುತ್ತಿರುವ ಅಪ್ರತಿಮ ಹೋರಾಟಕ್ಕೆ ಮಸಿ ಬಳಿಯುವ ಯತ್ನಗಳು ನಿರಂತರವಾಗಿ ಪ್ರಚಲಿತದಲ್ಲಿದ್ದು, ಬಿಜೆಪಿ ಐಟಿ ಸೆಲ್ ಇದರಲ್ಲಿ ಸಕ್ರಿಯ ಪಾತ್ರ ನಿರ್ವಹಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳ ಸೈನ್‌ಬೋರ್ಡ್ಗಳನ್ನು ತಪ್ಪಾಗಿ ತಿದ್ದುವ ಕೆಲಸದಲ್ಲಿ ಹಲವರು ನಿರತರಾದ ಎಂಟು ಫೋಟೊಗಳ ಸಮ್ಮಿಶ್ರಣ (ಕೊಲ್ಯಾಜ್) ಒಂದು ನಿನ್ನೆ-ಮೊನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಹೀಗೆ ಸೈನ್ ಬೋರ್ಡ್ ತಿದ್ದುತ್ತಿರುವವರು ಪ್ರತಿಭಟನಾನಿರತ ರೈತರು ಎಂದು ಅಪಾದಿಸಲಾಗುತ್ತಿದೆ.

ಈಗ ವೈರಲ್ ಆಗಿರುವ ಹಿಂದಿ ಸಂದೇಶದಲ್ಲಿ, ‘ಪ್ರತಿಭಟನಾಕಾರರಿಗೆ ಅಭಿವೃದ್ಧಿಯೇ ಬೇಕಿಲ್ಲ. ಅವರು ಕೇವಲ ವಿನಾಶವನ್ನು ಬಯಸುವವರು. ಅವರಿಗೆ ಸ್ವಾತಂತ್ರ್ಯದ ಮೇಲೆ ನಂಬಿಕೆ ಇಲ್ಲ, ಅವರು ಅರಾಜಕತಾವಾದಿಗಳು’ ಎಂದು ಟೀಕಿಸಲಾಗಿದೆಯಲ್ಲದೇ, ಇಡೀ ಹೋರಾಟವನ್ನು ‘ಫೇಕ್ ಕಿಸಾನ್ ಮೂವ್‌ಮೆಂಟ್’ ಎಂದು ಅವಹೇಳನ ಮಾಡಲಾಗಿದೆ.

ಮೊದಲಿಗೆ ಬಿಜೆಪಿ ಸದಸ್ಯ ಜವಾಹರ್ ಯಾದವ್ ಎನ್ನುವವನು 2017ರ ಈ ಫೋಟೊಗಳನ್ನು ಹಾಕಿ ಸುಳ್ಳು ಹರಡುವ ಟ್ವೀಟ್ ಮಾಡಿದ್ದಾನೆ. ನಂತರ ಇದೇ ಫೋಟೊಗಳನ್ನು ಬಳಸಿ, ‘ಐ ಸಪೋರ್ಟ್ ನರೇಂದ್ರ ಮೋದಿ’ ಎಂಬ ಫೇಸ್‌ಬುಕ್ ಗ್ರೂಪ್‌‌ನಲ್ಲಿ ಕೃಷ್ಣಕಾಂತ್ ಸಿಂಗ್ ಎನ್ನುವವನು ಪೋಸ್ಟ್ ಮಾಡಿದ್ದಾನೆ.

 

ಫ್ಯಾಕ್ಟ್‌ಚೆಕ್

ರಿವರ್ಸ್ ಇಮೇಜ್ ಸರ್ಚ್ ನಡೆಸಿದಾಗ ಈ ಫೋಟೊಗಳು ಇತ್ತೀಚಿನವಲ್ಲ, 2017ರ ಫೋಟೊಗಳು ಎಂದು ದೃಢಪಟ್ಟಿದೆ.

ಮೊದಲ ಪರಿಶೀಲನೆ: ಕೊಲ್ಯಾಜ್‌ನಲ್ಲಿರುವ 4 ಇಮೇಜ್‌ಗಳು ಮತ್ತು ಕೆಳದ ಎಡ ತುದಿಯಲ್ಲಿರುವ ಒಂದು ಇಮೇಜ್ ಅನ್ನು 2017ರ ಅಕ್ಟೋಬರ್‌ನಲ್ಲಿ ಬ್ಲಾಗ್ ಒಂದರಲ್ಲಿ ಪ್ರಕಟಿಸಲಾಗಿದೆ. ಬ್ಲಾಗ್ ಪ್ರಕಾರ ಈ ಇಮೇಜ್‌ಗಳು ಪಂಜಾಬ್‌ಗೆ ಸಂಬಂಧಿಸಿವೆ.

ಎರಡನೆ ಪರಿಶೀಲನೆ: ಮೇಲಿನ ಸಾಲಿನ ಬಲತುದಿಯಲ್ಲಿರುವ ಇಮೇಜ್ ಅನ್ನು ಹಿಂದೂಸ್ತಾನ್ ಟೈಮ್ಸ್ 2017ರ ಅಕ್ಟೋಬರ್‌ನಲ್ಲಿ ಪ್ರಕಟಿಸಿದೆ. ಲೇಖನದ ಪ್ರಕಾರ, ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು, ಟ್ರಾಫಿಕ್ ಸೈನ್‌ಬೋರ್ಡ್ಗಳಲ್ಲಿ ಹಿಂದಿ, ಇಂಗ್ಲಿಷ್ ನಂತರ ಕೆಳಗಿನ ಸಾಲಿನಲ್ಲಿ ಪಂಜಾಬಿ ಭಾಷೆಯನ್ನು ನಮೂದಿಸುವ ಮೂಲಕ ಪಂಜಾಬಿ ಭಾಷೆಗೆ “ಅಗೌರವ” ತೋರಿಸಲಾಗಿದೆ ಎಂದು ಆರೋಪಿಸಿ ಟ್ರಾಫಿಕ್ ಚಿಹ್ನೆಗಳನ್ನು ಧ್ವಂಸಗೊಳಿಸಿದರು ಎಂದು ವಿವರಿಸಲಾಗಿದೆ.

ಹೀಗಾಗಿ ಸದ್ಯ ಜಾಲತಾಣದಲ್ಲಿ ರೈತರ ಹೆಸರಿನಲ್ಲಿ ಓಡಾಡುತ್ತಿರುವ ಇಮೇಜ್‌ಗಳಿಗೂ ರೈತ ಪ್ರತಿಭಟನಾಕಾರರಿಗೂ ಸಂಬಂಧವೇ ಇಲ್ಲ. ಅವು 2017ರಲ್ಲಿ ಪಂಜಾಬಿ ಭಾಷೆಗೆ ಅಗೌರವ ಸಲ್ಲಿಸಲಾಗಿದೆ ಎಂದು ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು ನಡೆಸಿದ ಪ್ರತಿಭಟನೆಯ ಫೋಟೊಗಳಾಗಿವೆ.

ನಮ್ ಪ್ರಶ್ನೆ: ಅಷ್ಟಕ್ಕೂ ಹಿಂದಿ ಮತ್ತು ಇಂಗ್ಲಿಷ್ ಹೇರಿಕೆಯನ್ನು ವಿರೋಧಿಸುವುದು ಅದ್ಹೇಗೆ ಅರಾಜಕತೆ ಆಗುತ್ತದೆ?

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...