Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

- Advertisement -
- Advertisement -

ದೆಹಲಿ ಗಡಿಗಳಲ್ಲಿ ಅನ್ನದಾತರು ನಡೆಸುತ್ತಿರುವ ಅಪ್ರತಿಮ ಹೋರಾಟಕ್ಕೆ ಮಸಿ ಬಳಿಯುವ ಯತ್ನಗಳು ನಿರಂತರವಾಗಿ ಪ್ರಚಲಿತದಲ್ಲಿದ್ದು, ಬಿಜೆಪಿ ಐಟಿ ಸೆಲ್ ಇದರಲ್ಲಿ ಸಕ್ರಿಯ ಪಾತ್ರ ನಿರ್ವಹಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳ ಸೈನ್‌ಬೋರ್ಡ್ಗಳನ್ನು ತಪ್ಪಾಗಿ ತಿದ್ದುವ ಕೆಲಸದಲ್ಲಿ ಹಲವರು ನಿರತರಾದ ಎಂಟು ಫೋಟೊಗಳ ಸಮ್ಮಿಶ್ರಣ (ಕೊಲ್ಯಾಜ್) ಒಂದು ನಿನ್ನೆ-ಮೊನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಹೀಗೆ ಸೈನ್ ಬೋರ್ಡ್ ತಿದ್ದುತ್ತಿರುವವರು ಪ್ರತಿಭಟನಾನಿರತ ರೈತರು ಎಂದು ಅಪಾದಿಸಲಾಗುತ್ತಿದೆ.

ಈಗ ವೈರಲ್ ಆಗಿರುವ ಹಿಂದಿ ಸಂದೇಶದಲ್ಲಿ, ‘ಪ್ರತಿಭಟನಾಕಾರರಿಗೆ ಅಭಿವೃದ್ಧಿಯೇ ಬೇಕಿಲ್ಲ. ಅವರು ಕೇವಲ ವಿನಾಶವನ್ನು ಬಯಸುವವರು. ಅವರಿಗೆ ಸ್ವಾತಂತ್ರ್ಯದ ಮೇಲೆ ನಂಬಿಕೆ ಇಲ್ಲ, ಅವರು ಅರಾಜಕತಾವಾದಿಗಳು’ ಎಂದು ಟೀಕಿಸಲಾಗಿದೆಯಲ್ಲದೇ, ಇಡೀ ಹೋರಾಟವನ್ನು ‘ಫೇಕ್ ಕಿಸಾನ್ ಮೂವ್‌ಮೆಂಟ್’ ಎಂದು ಅವಹೇಳನ ಮಾಡಲಾಗಿದೆ.

ಮೊದಲಿಗೆ ಬಿಜೆಪಿ ಸದಸ್ಯ ಜವಾಹರ್ ಯಾದವ್ ಎನ್ನುವವನು 2017ರ ಈ ಫೋಟೊಗಳನ್ನು ಹಾಕಿ ಸುಳ್ಳು ಹರಡುವ ಟ್ವೀಟ್ ಮಾಡಿದ್ದಾನೆ. ನಂತರ ಇದೇ ಫೋಟೊಗಳನ್ನು ಬಳಸಿ, ‘ಐ ಸಪೋರ್ಟ್ ನರೇಂದ್ರ ಮೋದಿ’ ಎಂಬ ಫೇಸ್‌ಬುಕ್ ಗ್ರೂಪ್‌‌ನಲ್ಲಿ ಕೃಷ್ಣಕಾಂತ್ ಸಿಂಗ್ ಎನ್ನುವವನು ಪೋಸ್ಟ್ ಮಾಡಿದ್ದಾನೆ.

 

ಫ್ಯಾಕ್ಟ್‌ಚೆಕ್

ರಿವರ್ಸ್ ಇಮೇಜ್ ಸರ್ಚ್ ನಡೆಸಿದಾಗ ಈ ಫೋಟೊಗಳು ಇತ್ತೀಚಿನವಲ್ಲ, 2017ರ ಫೋಟೊಗಳು ಎಂದು ದೃಢಪಟ್ಟಿದೆ.

ಮೊದಲ ಪರಿಶೀಲನೆ: ಕೊಲ್ಯಾಜ್‌ನಲ್ಲಿರುವ 4 ಇಮೇಜ್‌ಗಳು ಮತ್ತು ಕೆಳದ ಎಡ ತುದಿಯಲ್ಲಿರುವ ಒಂದು ಇಮೇಜ್ ಅನ್ನು 2017ರ ಅಕ್ಟೋಬರ್‌ನಲ್ಲಿ ಬ್ಲಾಗ್ ಒಂದರಲ್ಲಿ ಪ್ರಕಟಿಸಲಾಗಿದೆ. ಬ್ಲಾಗ್ ಪ್ರಕಾರ ಈ ಇಮೇಜ್‌ಗಳು ಪಂಜಾಬ್‌ಗೆ ಸಂಬಂಧಿಸಿವೆ.

ಎರಡನೆ ಪರಿಶೀಲನೆ: ಮೇಲಿನ ಸಾಲಿನ ಬಲತುದಿಯಲ್ಲಿರುವ ಇಮೇಜ್ ಅನ್ನು ಹಿಂದೂಸ್ತಾನ್ ಟೈಮ್ಸ್ 2017ರ ಅಕ್ಟೋಬರ್‌ನಲ್ಲಿ ಪ್ರಕಟಿಸಿದೆ. ಲೇಖನದ ಪ್ರಕಾರ, ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು, ಟ್ರಾಫಿಕ್ ಸೈನ್‌ಬೋರ್ಡ್ಗಳಲ್ಲಿ ಹಿಂದಿ, ಇಂಗ್ಲಿಷ್ ನಂತರ ಕೆಳಗಿನ ಸಾಲಿನಲ್ಲಿ ಪಂಜಾಬಿ ಭಾಷೆಯನ್ನು ನಮೂದಿಸುವ ಮೂಲಕ ಪಂಜಾಬಿ ಭಾಷೆಗೆ “ಅಗೌರವ” ತೋರಿಸಲಾಗಿದೆ ಎಂದು ಆರೋಪಿಸಿ ಟ್ರಾಫಿಕ್ ಚಿಹ್ನೆಗಳನ್ನು ಧ್ವಂಸಗೊಳಿಸಿದರು ಎಂದು ವಿವರಿಸಲಾಗಿದೆ.

ಹೀಗಾಗಿ ಸದ್ಯ ಜಾಲತಾಣದಲ್ಲಿ ರೈತರ ಹೆಸರಿನಲ್ಲಿ ಓಡಾಡುತ್ತಿರುವ ಇಮೇಜ್‌ಗಳಿಗೂ ರೈತ ಪ್ರತಿಭಟನಾಕಾರರಿಗೂ ಸಂಬಂಧವೇ ಇಲ್ಲ. ಅವು 2017ರಲ್ಲಿ ಪಂಜಾಬಿ ಭಾಷೆಗೆ ಅಗೌರವ ಸಲ್ಲಿಸಲಾಗಿದೆ ಎಂದು ದಳ್ ಖಲ್ಸಾ, ಶಿರೋಮಣಿ ಅಕಾಲಿ ದಳ (ಅಮೃತಸರ), ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ), ಮಾಲ್ವಾ ಯೂತ್ ಫೆಡರೇಶನ್ ಮತ್ತು ಇತರ ಸಂಸ್ಥೆಗಳು ನಡೆಸಿದ ಪ್ರತಿಭಟನೆಯ ಫೋಟೊಗಳಾಗಿವೆ.

ನಮ್ ಪ್ರಶ್ನೆ: ಅಷ್ಟಕ್ಕೂ ಹಿಂದಿ ಮತ್ತು ಇಂಗ್ಲಿಷ್ ಹೇರಿಕೆಯನ್ನು ವಿರೋಧಿಸುವುದು ಅದ್ಹೇಗೆ ಅರಾಜಕತೆ ಆಗುತ್ತದೆ?

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....