Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಬಿಜೆಪಿ ಧ್ವಜವನ್ನು ಬ್ರಾಹ್ಮಣರು ಸುಟ್ಟು ಹಾಕಿದರೆ?

ಫ್ಯಾಕ್ಟ್‌ಚೆಕ್‌: ಬಿಜೆಪಿ ಧ್ವಜವನ್ನು ಬ್ರಾಹ್ಮಣರು ಸುಟ್ಟು ಹಾಕಿದರೆ?

ವೈರಲ್ ಚಿತ್ರದ ಶಿರ್ಷಿಕೆಯಲ್ಲಿ 'ಜೈ ಪರಶುರಾಮ್...ಭ್ರಾಹ್ಮಣರು ಬಿಜೆಪಿಯ ಧ್ವಜವನ್ನು ಸುಟ್ಟು ಹಾಕಿದರು' ಎಂದು ಬರೆಯಲಾಗಿದೆ.

- Advertisement -
- Advertisement -

ಜನರ ಗುಂಪೊಂದು ಬಿಜೆಪಿ ಧ್ವಜವನ್ನು ಸುಡುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ ಚಿತ್ರದ ಶಿರ್ಷಿಕೆಯಲ್ಲಿ ಬ್ರಾಹ್ಮಣರು ಬಿಜೆಪಿಯ ಧ್ವಜವನ್ನು ಸುಡುತ್ತಿದ್ದಾರೆ ಎಂದು ಬರೆಯಲಾಗಿದೆ.

ಚತ್ರನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಲಾಗುತ್ತಿದ್ದು, ಅದರಲ್ಲಿ “ಜೈ ಜೈ ಪರಶುರಾಮ್, ಬಿಜೆಪಿಯ ಧ್ವಜವನ್ನು ಬ್ರಾಹ್ಮಣರು ಸುಟ್ಟು ಹಾಕಿದರು ಎಂದು ಬರೆಯಲಾಗಿದೆ.

ಈ ಚಿತ್ರವನ್ನು ಇದೇ ಶೀರ್ಷಿಕೆಯೊಂದಿಗೆ ಹಲವಾರು ಜನರು ಹಂಚಿಕೊಂಡಿದ್ದಾರೆ. ಇನ್ನು ಕೆಲವರು ಅದರ ಸ್ಕ್ರೀನ್ ಶಾಟ್‌ ಅನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್‌:

ಟ್ವಿಟ್ಟರ್ ಬಳಕೆದಾರ ಪ್ರಮೋದ್ ಟ್ವೀಟ್‌ ನ ರಿಪ್ಲೈನಲ್ಲಿ ಹಲವಾರು ಜನರು ಭಾಸ್ಕರ್ ನ್ಯೂಸ್ ನೆಟ್‌ವರ್ಕ್ ಲೇಖನದ ಸ್ಕ್ರೀನ್‌ಶಾಟ್ ಹಾಕಿದ್ದು, ಅದರಲ್ಲಿ ಅದು 20 ನವೆಂಬರ್ 2018ರ ಲೇಖನ ಎಂದು ಸೂಚಿಸಲಾಗಿದೆ ಎಂದು ಬರೆದಿದ್ದಾರೆ.

ಲೇಖನದ ಶೀರ್ಷಿಕೆಯಲ್ಲಿ ಉಲ್ಲೇಖಿಸಲಾದ ಹೆಸರಿನವರನ್ನು ‘ದಿ ಕ್ವಿಂಟ್’ ವೆಬ್ ಸೈಟ್ ಮಾತನಾಡಿಸಿದ್ದು, ಲೇಖನದಲ್ಲಿ ಹೇಳುವಂತೆ 2018ರ ನವೆಂಬರ್‌ನಲ್ಲಿ ಜೈಪುರ ಜಿಲ್ಲೆಯ ಕೊಟ್‌ಪುಟ್ಲಿಯಲ್ಲಿ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಮುನ್ನ ಈ ಘಟನೆ ನಡೆದಿದ್ದು, ಸ್ಥಳೀಯ ಬಿಜೆಪಿ ಮುಖಂಡ ಹನ್ಸರಾಜ್ ಅವರಿಗೆ ಚುನಾವಣೆಗೆ ಟಿಕೆಟ್ ನಿರಾಕರಿಸಿ ಮತ್ತೊಬ್ಬ ಬಿಜೆಪಿ ಮುಖಂಡ ಮುಖೇಶ್ ಗೋಯಲ್ ಅವರಿಗೆ ಟಿಕೆಟ್ ನೀಡಲಾಯಿತು. ಇದರಿಂದ ಕೋಪಗೊಂಡ ಹನ್ಸ್ರಾಜ್ ಬೆಂಬಲಿಗರು ಕೆಲವು ಪ್ರಮುಖ ಬಿಜೆಪಿ ನಾಯಕರ ಪ್ರತಿಕೃತಿ ಹಾಗೂ ಪಕ್ಷದ ಧ್ವಜವನ್ನು ಸುಟ್ಟು ಪ್ರತಿಭಟಿಸಿದ್ದರು.

ಇದಲ್ಲದೆ, ಈ ಘಟನೆಯ ಬಗ್ಗೆ ಸ್ಥಳೀಯ ವರದಿಗಾರ ಕೂಡಾ ಈ ಘಟನೆಯನ್ನು ದೃಢೀಕರಿಸಿದ್ದಾಗಿ ದಿ ಕ್ವಿಂಟ್ ತನ್ನ ವರದಿಯಲ್ಲಿ ಹೇಳಿದೆ.

ಅಲ್ಲದೆ ಈ ಪ್ರತಿಭಟನೆ ನಡೆದಿದ್ದರೂ ಸಹ ಬಿಜೆಪಿ ಪಕ್ಷದಿಂದ ಟಿಕೆಟ್ ಸಿಗದೆ ಹನ್ಸ್ರಾಜ್ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಆದ್ದರಿಂದ, ಎರಡು ವರ್ಷಗಳ ಹಳೆಯ ಚಿತ್ರವನ್ನು ಈಗ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ.


ಓದಿ:ಕೇರಳ ಸರ್ಕಾರ ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರವನ್ನು ಮುಸ್ಲಿಮರಿಗೆ ಹಾಗೂ ಕ್ರೈಸ್ತರಿಗೆ ನೀಡಿದೆಯೆ? 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...