Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

- Advertisement -
- Advertisement -

ವ್ಯಕ್ತಿಯೊಬ್ಬರು ತಮ್ಮ ಫೋನ್‌ ಚಾರ್ಜಿಂಗ್‌ನಲ್ಲಿಟ್ಟು ನೀರು ಕುಡಿಯುತ್ತಾ ಫೋನ್ ಕರೆಯಲ್ಲಿ ಮಾತನಾಡುತ್ತಿರುವಾಗ ಅವರ ಕಿವಿಯ ಮೇಲೆ ಫೋನ್ ಸ್ಫೋಟಗೊಂಡಿದೆ ಎಂದು ಹೇಳುವ ಸಿಸಿಟಿವಿ ದೃಶ್ಯಾವಳಿಗಳ ವಿಡಿಯೋ ವೈರಲ್ ಆಗಿದೆ. ಮರಾಠಿ ಭಾಷೆಯಲ್ಲಿರುವ ಹೇಳಿಕೆಯೊಂದಿಗೆ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

“ಇದು ಅಪಾಯಕಾರಿ! ನೀರು ಕುಡಿಯುವ ವೇಳೆ ಚಾರ್ಜ್‌ನಲ್ಲಿರುವ ನಿಮ್ಮ ಫೋನ್ ಅನ್ನು ಬಳಸುವಾಗ ಎಲ್ಲರೂ ಕಾಳಜಿ ವಹಿಸಿ. ಇದರಿಂದ ಮೆದುಳು ಕೂಡ ಆಘಾತಕ್ಕೊಳಗಾಗುವ ಸಾಧ್ಯತೆ ಇದೆ” ಎಂದು ಫೋಸ್ಟ್‌ನಲ್ಲಿ ಹೇಳಲಾಗಿದೆ.

ಪುಣೆ ಮೂಲದ ಫೇಸ್‌ಬುಕ್ ಪೇಜ್‌ ಫನ್‌ ಮರಾಠಿಯಲ್ಲಿಯೂ ಈ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಹಲವಾರು ಇತರ ಫೇಸ್‌ಬುಕ್‌ ಬಳಕೆದಾರರು ಸಹ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದರ ಸತ್ಯಾಸತ್ಯತೆಯನ್ನು ಈ ಲೇಖನದಲ್ಲಿ ಪರಿಶೀಲಿಸೋಣ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಈ ವಿಡಿಯೋವನ್ನು ಐಪಿಎಸ್ ಅಧಿಕಾರಿ ರೂಪಿನ್ ಶರ್ಮಾ ಕೂಡ ಪೋಸ್ಟ್ ಮಾಡಿದ್ದಾರೆ. ಬಳಿಕ ಅದನ್ನು ಅಳಿಸಿದ್ದಾರೆ.

ಈ ವಿಡಿಯೋವನ್ನು ಟ್ವಿಟರ್ ಮತ್ತು ಯೂಟ್ಯೂಬ್‌ನಲ್ಲಿಯೂ ಹಂಚಿಕೊಳ್ಳಲಾಗಿದೆ.

ನಿಜಾಂಶ:

ಇದು ನೈಜ ಘಟನೆ ಎಂದು ವೈರಲ್ ಆಗುತ್ತಿರುವ ದೃಶ್ಯಾವಳಿಯ ಸಂಪೂರ್ಣ ವೀಡಿಯೊದ ಕ್ಲಿಪ್ ಆನ್‌ಲೈನ್‌ನಲ್ಲಿ ಪ್ರಸಾರವಾಗುತ್ತಿದೆ. ಇದು ಸ್ಕ್ರಿಪ್ಟೆಂಡ್‌ ವಿಡಿಯೋ ಎಂದು ಹೇಳಲಾಗಿದೆ.

ಸಂಪೂರ್ಣ ವಿಡಿಯೋವನ್ನು ಬ್ಯಾಡ್ಮಿಂಟನ್ ಆಟಗಾರ್ತಿ ಗುಟ್ಟಾ ಜ್ವಾಲಾ ಪೋಸ್ಟ್ ಮಾಡಿದ್ದಾರೆ. ಶೀರ್ಷಿಕೆಯು ‘ಎಚ್ಚರಿಕೆಯಿಂದಿರಿ’ ಎಂದು ಕಾಣಿಸುತ್ತದೆ ಮತ್ತು ‘ಇನ್ನಷ್ಟು ವೀಕ್ಷಿಸಿ’ ಕ್ಲಿಕ್ ಮಾಡಿದ ನಂತರ ಕೆಳಗೆ ಓದಿದಾಗ ವೈರಲ್‌ ಆಗುತ್ತಿರುವ ಹೇಳಿಕೆ ತಪ್ಪು ಎಂದು ಗೊತ್ತಾಗುತ್ತದೆ. – “ವೀಕ್ಷಿಸಿದ್ದಕ್ಕಾಗಿ ಧನ್ಯವಾದಗಳು! ಈ ಪುಟವು ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಸಹ ಒಳಗೊಂಡಿದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ಕಿರುಚಿತ್ರಗಳು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ!” ಎಂದು ಬರೆಯಾಗಿದೆ.

‘ಸ್ಫೋಟ’ದ ಹೇಳಿಕೆಯನ್ನು ಉಪಶೀರ್ಷಿಕೆಯಾಗಿ ಮಾತ್ರ ಮಾಡಲಾಗಿದೆ ಎಂಬುದನ್ನು ಓದುಗರು ಗಮನಿಸಬೇಕು. ವೀಡಿಯೋದಲ್ಲಿ ನಿಜವಾದ ಸ್ಫೋಟ ನಡೆದಿಲ್ಲ.

ಅದನ್ನು ಸಂಕ್ಷಿಪ್ತವಾಗಿ ಹೇಳುವುದಾದರೆ, ಸ್ಕ್ರಿಪ್ಟ್ ಮಾಡಿದ ವೀಡಿಯೊವನ್ನು ಕಟ್ ಮಾಡಿ ಹಂಚಿಕೊಳ್ಳಲಾಗಿದೆ. ಮೂಲ ವಿಡಿಯೋವು ಇದು ಸ್ಕ್ರಿಪ್ಟೆಂಡ್ ವಿಡಿಯೋ ಎಂಬುದನ್ನು ಸ್ಪಷ್ಟಪಡಿಸಿದೆ. ಆದರೆ, ವಿಡಿಯೋದ ರಚನೆಕಾರರು ಇದು ಚಿತ್ರೀಕರಿಸಲಾದ ವಿಡಿಯೋ ಎಂದು ತಿಳಿಸಲು ವೀಡಿಯೊಗಳಲ್ಲಿ ಸರಿಯಾದ ಮತ್ತು ಸ್ಪಷ್ಟವಾದ ಹೇಳಿಯನ್ನು ಸೇರಿಸುವಲ್ಲಿ ವಿಫಲರಾಗಿದ್ದಾರೆ.

ಚಾರ್ಜ್‌ನಲ್ಲಿಟ್ಟ ಮೊಬೈಲ್‌ ಫೋನ್‌ನಲ್ಲಿ ಮಾತನಾಡುವಾಗ ಫೋನ್‌ ಸ್ಪೋಟಗೊಂಡಿರುವ ವರದಿಗಳಾಗಿವೆ. ಆದರೆ, ಚಾರ್ಜ್‌ನಲ್ಲಿಟ್ಟ ಮೊಬೈಲ್‌ ಫೋನ್‌ನಲ್ಲಿ ಮಾತನಾಡುತ್ತಾ ನೀರು ಕುಡಿಯುವಾಗ ಸ್ಪೋಟಗೊಂಡಿರುವ ಬಗ್ಗೆ ಯಾವುದೇ ಘಟನೆಯು ವರದಿಯಾಗಿಲ್ಲ. ಆದರೂ, ಮೊಬೈಲ್‌ ಫೋನ್‌ ಜಾರ್ಜ್‌ನಲ್ಲಿದ್ದಾಗ ಫೋನ್‌ನಲ್ಲಿ ಮಾತನಾಡುವುದು ಅಪಾಯಕಾರಿ ಎಂಬುದು ನಮ್ಮ ಅರಿವಿನಲ್ಲಿರಬೇಕು.

ಕೃಪೆ: ಆಲ್ಟ್‌ನ್ಯೂಸ್‌


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...