Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

- Advertisement -
- Advertisement -

ವ್ಯಕ್ತಿಯೊಬ್ಬರು ತಮ್ಮ ಫೋನ್‌ ಚಾರ್ಜಿಂಗ್‌ನಲ್ಲಿಟ್ಟು ನೀರು ಕುಡಿಯುತ್ತಾ ಫೋನ್ ಕರೆಯಲ್ಲಿ ಮಾತನಾಡುತ್ತಿರುವಾಗ ಅವರ ಕಿವಿಯ ಮೇಲೆ ಫೋನ್ ಸ್ಫೋಟಗೊಂಡಿದೆ ಎಂದು ಹೇಳುವ ಸಿಸಿಟಿವಿ ದೃಶ್ಯಾವಳಿಗಳ ವಿಡಿಯೋ ವೈರಲ್ ಆಗಿದೆ. ಮರಾಠಿ ಭಾಷೆಯಲ್ಲಿರುವ ಹೇಳಿಕೆಯೊಂದಿಗೆ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

“ಇದು ಅಪಾಯಕಾರಿ! ನೀರು ಕುಡಿಯುವ ವೇಳೆ ಚಾರ್ಜ್‌ನಲ್ಲಿರುವ ನಿಮ್ಮ ಫೋನ್ ಅನ್ನು ಬಳಸುವಾಗ ಎಲ್ಲರೂ ಕಾಳಜಿ ವಹಿಸಿ. ಇದರಿಂದ ಮೆದುಳು ಕೂಡ ಆಘಾತಕ್ಕೊಳಗಾಗುವ ಸಾಧ್ಯತೆ ಇದೆ” ಎಂದು ಫೋಸ್ಟ್‌ನಲ್ಲಿ ಹೇಳಲಾಗಿದೆ.

ಪುಣೆ ಮೂಲದ ಫೇಸ್‌ಬುಕ್ ಪೇಜ್‌ ಫನ್‌ ಮರಾಠಿಯಲ್ಲಿಯೂ ಈ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಹಲವಾರು ಇತರ ಫೇಸ್‌ಬುಕ್‌ ಬಳಕೆದಾರರು ಸಹ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದರ ಸತ್ಯಾಸತ್ಯತೆಯನ್ನು ಈ ಲೇಖನದಲ್ಲಿ ಪರಿಶೀಲಿಸೋಣ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಈ ವಿಡಿಯೋವನ್ನು ಐಪಿಎಸ್ ಅಧಿಕಾರಿ ರೂಪಿನ್ ಶರ್ಮಾ ಕೂಡ ಪೋಸ್ಟ್ ಮಾಡಿದ್ದಾರೆ. ಬಳಿಕ ಅದನ್ನು ಅಳಿಸಿದ್ದಾರೆ.

ಈ ವಿಡಿಯೋವನ್ನು ಟ್ವಿಟರ್ ಮತ್ತು ಯೂಟ್ಯೂಬ್‌ನಲ್ಲಿಯೂ ಹಂಚಿಕೊಳ್ಳಲಾಗಿದೆ.

ನಿಜಾಂಶ:

ಇದು ನೈಜ ಘಟನೆ ಎಂದು ವೈರಲ್ ಆಗುತ್ತಿರುವ ದೃಶ್ಯಾವಳಿಯ ಸಂಪೂರ್ಣ ವೀಡಿಯೊದ ಕ್ಲಿಪ್ ಆನ್‌ಲೈನ್‌ನಲ್ಲಿ ಪ್ರಸಾರವಾಗುತ್ತಿದೆ. ಇದು ಸ್ಕ್ರಿಪ್ಟೆಂಡ್‌ ವಿಡಿಯೋ ಎಂದು ಹೇಳಲಾಗಿದೆ.

ಸಂಪೂರ್ಣ ವಿಡಿಯೋವನ್ನು ಬ್ಯಾಡ್ಮಿಂಟನ್ ಆಟಗಾರ್ತಿ ಗುಟ್ಟಾ ಜ್ವಾಲಾ ಪೋಸ್ಟ್ ಮಾಡಿದ್ದಾರೆ. ಶೀರ್ಷಿಕೆಯು ‘ಎಚ್ಚರಿಕೆಯಿಂದಿರಿ’ ಎಂದು ಕಾಣಿಸುತ್ತದೆ ಮತ್ತು ‘ಇನ್ನಷ್ಟು ವೀಕ್ಷಿಸಿ’ ಕ್ಲಿಕ್ ಮಾಡಿದ ನಂತರ ಕೆಳಗೆ ಓದಿದಾಗ ವೈರಲ್‌ ಆಗುತ್ತಿರುವ ಹೇಳಿಕೆ ತಪ್ಪು ಎಂದು ಗೊತ್ತಾಗುತ್ತದೆ. – “ವೀಕ್ಷಿಸಿದ್ದಕ್ಕಾಗಿ ಧನ್ಯವಾದಗಳು! ಈ ಪುಟವು ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಸಹ ಒಳಗೊಂಡಿದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ಕಿರುಚಿತ್ರಗಳು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ!” ಎಂದು ಬರೆಯಾಗಿದೆ.

‘ಸ್ಫೋಟ’ದ ಹೇಳಿಕೆಯನ್ನು ಉಪಶೀರ್ಷಿಕೆಯಾಗಿ ಮಾತ್ರ ಮಾಡಲಾಗಿದೆ ಎಂಬುದನ್ನು ಓದುಗರು ಗಮನಿಸಬೇಕು. ವೀಡಿಯೋದಲ್ಲಿ ನಿಜವಾದ ಸ್ಫೋಟ ನಡೆದಿಲ್ಲ.

ಅದನ್ನು ಸಂಕ್ಷಿಪ್ತವಾಗಿ ಹೇಳುವುದಾದರೆ, ಸ್ಕ್ರಿಪ್ಟ್ ಮಾಡಿದ ವೀಡಿಯೊವನ್ನು ಕಟ್ ಮಾಡಿ ಹಂಚಿಕೊಳ್ಳಲಾಗಿದೆ. ಮೂಲ ವಿಡಿಯೋವು ಇದು ಸ್ಕ್ರಿಪ್ಟೆಂಡ್ ವಿಡಿಯೋ ಎಂಬುದನ್ನು ಸ್ಪಷ್ಟಪಡಿಸಿದೆ. ಆದರೆ, ವಿಡಿಯೋದ ರಚನೆಕಾರರು ಇದು ಚಿತ್ರೀಕರಿಸಲಾದ ವಿಡಿಯೋ ಎಂದು ತಿಳಿಸಲು ವೀಡಿಯೊಗಳಲ್ಲಿ ಸರಿಯಾದ ಮತ್ತು ಸ್ಪಷ್ಟವಾದ ಹೇಳಿಯನ್ನು ಸೇರಿಸುವಲ್ಲಿ ವಿಫಲರಾಗಿದ್ದಾರೆ.

ಚಾರ್ಜ್‌ನಲ್ಲಿಟ್ಟ ಮೊಬೈಲ್‌ ಫೋನ್‌ನಲ್ಲಿ ಮಾತನಾಡುವಾಗ ಫೋನ್‌ ಸ್ಪೋಟಗೊಂಡಿರುವ ವರದಿಗಳಾಗಿವೆ. ಆದರೆ, ಚಾರ್ಜ್‌ನಲ್ಲಿಟ್ಟ ಮೊಬೈಲ್‌ ಫೋನ್‌ನಲ್ಲಿ ಮಾತನಾಡುತ್ತಾ ನೀರು ಕುಡಿಯುವಾಗ ಸ್ಪೋಟಗೊಂಡಿರುವ ಬಗ್ಗೆ ಯಾವುದೇ ಘಟನೆಯು ವರದಿಯಾಗಿಲ್ಲ. ಆದರೂ, ಮೊಬೈಲ್‌ ಫೋನ್‌ ಜಾರ್ಜ್‌ನಲ್ಲಿದ್ದಾಗ ಫೋನ್‌ನಲ್ಲಿ ಮಾತನಾಡುವುದು ಅಪಾಯಕಾರಿ ಎಂಬುದು ನಮ್ಮ ಅರಿವಿನಲ್ಲಿರಬೇಕು.

ಕೃಪೆ: ಆಲ್ಟ್‌ನ್ಯೂಸ್‌


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....