Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

- Advertisement -
- Advertisement -

ವ್ಯಕ್ತಿಯೊಬ್ಬರು ತಮ್ಮ ಫೋನ್‌ ಚಾರ್ಜಿಂಗ್‌ನಲ್ಲಿಟ್ಟು ನೀರು ಕುಡಿಯುತ್ತಾ ಫೋನ್ ಕರೆಯಲ್ಲಿ ಮಾತನಾಡುತ್ತಿರುವಾಗ ಅವರ ಕಿವಿಯ ಮೇಲೆ ಫೋನ್ ಸ್ಫೋಟಗೊಂಡಿದೆ ಎಂದು ಹೇಳುವ ಸಿಸಿಟಿವಿ ದೃಶ್ಯಾವಳಿಗಳ ವಿಡಿಯೋ ವೈರಲ್ ಆಗಿದೆ. ಮರಾಠಿ ಭಾಷೆಯಲ್ಲಿರುವ ಹೇಳಿಕೆಯೊಂದಿಗೆ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

“ಇದು ಅಪಾಯಕಾರಿ! ನೀರು ಕುಡಿಯುವ ವೇಳೆ ಚಾರ್ಜ್‌ನಲ್ಲಿರುವ ನಿಮ್ಮ ಫೋನ್ ಅನ್ನು ಬಳಸುವಾಗ ಎಲ್ಲರೂ ಕಾಳಜಿ ವಹಿಸಿ. ಇದರಿಂದ ಮೆದುಳು ಕೂಡ ಆಘಾತಕ್ಕೊಳಗಾಗುವ ಸಾಧ್ಯತೆ ಇದೆ” ಎಂದು ಫೋಸ್ಟ್‌ನಲ್ಲಿ ಹೇಳಲಾಗಿದೆ.

ಪುಣೆ ಮೂಲದ ಫೇಸ್‌ಬುಕ್ ಪೇಜ್‌ ಫನ್‌ ಮರಾಠಿಯಲ್ಲಿಯೂ ಈ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಹಲವಾರು ಇತರ ಫೇಸ್‌ಬುಕ್‌ ಬಳಕೆದಾರರು ಸಹ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದರ ಸತ್ಯಾಸತ್ಯತೆಯನ್ನು ಈ ಲೇಖನದಲ್ಲಿ ಪರಿಶೀಲಿಸೋಣ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಈ ವಿಡಿಯೋವನ್ನು ಐಪಿಎಸ್ ಅಧಿಕಾರಿ ರೂಪಿನ್ ಶರ್ಮಾ ಕೂಡ ಪೋಸ್ಟ್ ಮಾಡಿದ್ದಾರೆ. ಬಳಿಕ ಅದನ್ನು ಅಳಿಸಿದ್ದಾರೆ.

ಈ ವಿಡಿಯೋವನ್ನು ಟ್ವಿಟರ್ ಮತ್ತು ಯೂಟ್ಯೂಬ್‌ನಲ್ಲಿಯೂ ಹಂಚಿಕೊಳ್ಳಲಾಗಿದೆ.

ನಿಜಾಂಶ:

ಇದು ನೈಜ ಘಟನೆ ಎಂದು ವೈರಲ್ ಆಗುತ್ತಿರುವ ದೃಶ್ಯಾವಳಿಯ ಸಂಪೂರ್ಣ ವೀಡಿಯೊದ ಕ್ಲಿಪ್ ಆನ್‌ಲೈನ್‌ನಲ್ಲಿ ಪ್ರಸಾರವಾಗುತ್ತಿದೆ. ಇದು ಸ್ಕ್ರಿಪ್ಟೆಂಡ್‌ ವಿಡಿಯೋ ಎಂದು ಹೇಳಲಾಗಿದೆ.

ಸಂಪೂರ್ಣ ವಿಡಿಯೋವನ್ನು ಬ್ಯಾಡ್ಮಿಂಟನ್ ಆಟಗಾರ್ತಿ ಗುಟ್ಟಾ ಜ್ವಾಲಾ ಪೋಸ್ಟ್ ಮಾಡಿದ್ದಾರೆ. ಶೀರ್ಷಿಕೆಯು ‘ಎಚ್ಚರಿಕೆಯಿಂದಿರಿ’ ಎಂದು ಕಾಣಿಸುತ್ತದೆ ಮತ್ತು ‘ಇನ್ನಷ್ಟು ವೀಕ್ಷಿಸಿ’ ಕ್ಲಿಕ್ ಮಾಡಿದ ನಂತರ ಕೆಳಗೆ ಓದಿದಾಗ ವೈರಲ್‌ ಆಗುತ್ತಿರುವ ಹೇಳಿಕೆ ತಪ್ಪು ಎಂದು ಗೊತ್ತಾಗುತ್ತದೆ. – “ವೀಕ್ಷಿಸಿದ್ದಕ್ಕಾಗಿ ಧನ್ಯವಾದಗಳು! ಈ ಪುಟವು ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಸಹ ಒಳಗೊಂಡಿದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ಕಿರುಚಿತ್ರಗಳು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ!” ಎಂದು ಬರೆಯಾಗಿದೆ.

‘ಸ್ಫೋಟ’ದ ಹೇಳಿಕೆಯನ್ನು ಉಪಶೀರ್ಷಿಕೆಯಾಗಿ ಮಾತ್ರ ಮಾಡಲಾಗಿದೆ ಎಂಬುದನ್ನು ಓದುಗರು ಗಮನಿಸಬೇಕು. ವೀಡಿಯೋದಲ್ಲಿ ನಿಜವಾದ ಸ್ಫೋಟ ನಡೆದಿಲ್ಲ.

ಅದನ್ನು ಸಂಕ್ಷಿಪ್ತವಾಗಿ ಹೇಳುವುದಾದರೆ, ಸ್ಕ್ರಿಪ್ಟ್ ಮಾಡಿದ ವೀಡಿಯೊವನ್ನು ಕಟ್ ಮಾಡಿ ಹಂಚಿಕೊಳ್ಳಲಾಗಿದೆ. ಮೂಲ ವಿಡಿಯೋವು ಇದು ಸ್ಕ್ರಿಪ್ಟೆಂಡ್ ವಿಡಿಯೋ ಎಂಬುದನ್ನು ಸ್ಪಷ್ಟಪಡಿಸಿದೆ. ಆದರೆ, ವಿಡಿಯೋದ ರಚನೆಕಾರರು ಇದು ಚಿತ್ರೀಕರಿಸಲಾದ ವಿಡಿಯೋ ಎಂದು ತಿಳಿಸಲು ವೀಡಿಯೊಗಳಲ್ಲಿ ಸರಿಯಾದ ಮತ್ತು ಸ್ಪಷ್ಟವಾದ ಹೇಳಿಯನ್ನು ಸೇರಿಸುವಲ್ಲಿ ವಿಫಲರಾಗಿದ್ದಾರೆ.

ಚಾರ್ಜ್‌ನಲ್ಲಿಟ್ಟ ಮೊಬೈಲ್‌ ಫೋನ್‌ನಲ್ಲಿ ಮಾತನಾಡುವಾಗ ಫೋನ್‌ ಸ್ಪೋಟಗೊಂಡಿರುವ ವರದಿಗಳಾಗಿವೆ. ಆದರೆ, ಚಾರ್ಜ್‌ನಲ್ಲಿಟ್ಟ ಮೊಬೈಲ್‌ ಫೋನ್‌ನಲ್ಲಿ ಮಾತನಾಡುತ್ತಾ ನೀರು ಕುಡಿಯುವಾಗ ಸ್ಪೋಟಗೊಂಡಿರುವ ಬಗ್ಗೆ ಯಾವುದೇ ಘಟನೆಯು ವರದಿಯಾಗಿಲ್ಲ. ಆದರೂ, ಮೊಬೈಲ್‌ ಫೋನ್‌ ಜಾರ್ಜ್‌ನಲ್ಲಿದ್ದಾಗ ಫೋನ್‌ನಲ್ಲಿ ಮಾತನಾಡುವುದು ಅಪಾಯಕಾರಿ ಎಂಬುದು ನಮ್ಮ ಅರಿವಿನಲ್ಲಿರಬೇಕು.

ಕೃಪೆ: ಆಲ್ಟ್‌ನ್ಯೂಸ್‌


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...