Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

- Advertisement -
- Advertisement -

ವ್ಯಕ್ತಿಯೊಬ್ಬರು ತಮ್ಮ ಫೋನ್‌ ಚಾರ್ಜಿಂಗ್‌ನಲ್ಲಿಟ್ಟು ನೀರು ಕುಡಿಯುತ್ತಾ ಫೋನ್ ಕರೆಯಲ್ಲಿ ಮಾತನಾಡುತ್ತಿರುವಾಗ ಅವರ ಕಿವಿಯ ಮೇಲೆ ಫೋನ್ ಸ್ಫೋಟಗೊಂಡಿದೆ ಎಂದು ಹೇಳುವ ಸಿಸಿಟಿವಿ ದೃಶ್ಯಾವಳಿಗಳ ವಿಡಿಯೋ ವೈರಲ್ ಆಗಿದೆ. ಮರಾಠಿ ಭಾಷೆಯಲ್ಲಿರುವ ಹೇಳಿಕೆಯೊಂದಿಗೆ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

“ಇದು ಅಪಾಯಕಾರಿ! ನೀರು ಕುಡಿಯುವ ವೇಳೆ ಚಾರ್ಜ್‌ನಲ್ಲಿರುವ ನಿಮ್ಮ ಫೋನ್ ಅನ್ನು ಬಳಸುವಾಗ ಎಲ್ಲರೂ ಕಾಳಜಿ ವಹಿಸಿ. ಇದರಿಂದ ಮೆದುಳು ಕೂಡ ಆಘಾತಕ್ಕೊಳಗಾಗುವ ಸಾಧ್ಯತೆ ಇದೆ” ಎಂದು ಫೋಸ್ಟ್‌ನಲ್ಲಿ ಹೇಳಲಾಗಿದೆ.

ಪುಣೆ ಮೂಲದ ಫೇಸ್‌ಬುಕ್ ಪೇಜ್‌ ಫನ್‌ ಮರಾಠಿಯಲ್ಲಿಯೂ ಈ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಹಲವಾರು ಇತರ ಫೇಸ್‌ಬುಕ್‌ ಬಳಕೆದಾರರು ಸಹ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದರ ಸತ್ಯಾಸತ್ಯತೆಯನ್ನು ಈ ಲೇಖನದಲ್ಲಿ ಪರಿಶೀಲಿಸೋಣ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಈ ವಿಡಿಯೋವನ್ನು ಐಪಿಎಸ್ ಅಧಿಕಾರಿ ರೂಪಿನ್ ಶರ್ಮಾ ಕೂಡ ಪೋಸ್ಟ್ ಮಾಡಿದ್ದಾರೆ. ಬಳಿಕ ಅದನ್ನು ಅಳಿಸಿದ್ದಾರೆ.

ಈ ವಿಡಿಯೋವನ್ನು ಟ್ವಿಟರ್ ಮತ್ತು ಯೂಟ್ಯೂಬ್‌ನಲ್ಲಿಯೂ ಹಂಚಿಕೊಳ್ಳಲಾಗಿದೆ.

ನಿಜಾಂಶ:

ಇದು ನೈಜ ಘಟನೆ ಎಂದು ವೈರಲ್ ಆಗುತ್ತಿರುವ ದೃಶ್ಯಾವಳಿಯ ಸಂಪೂರ್ಣ ವೀಡಿಯೊದ ಕ್ಲಿಪ್ ಆನ್‌ಲೈನ್‌ನಲ್ಲಿ ಪ್ರಸಾರವಾಗುತ್ತಿದೆ. ಇದು ಸ್ಕ್ರಿಪ್ಟೆಂಡ್‌ ವಿಡಿಯೋ ಎಂದು ಹೇಳಲಾಗಿದೆ.

ಸಂಪೂರ್ಣ ವಿಡಿಯೋವನ್ನು ಬ್ಯಾಡ್ಮಿಂಟನ್ ಆಟಗಾರ್ತಿ ಗುಟ್ಟಾ ಜ್ವಾಲಾ ಪೋಸ್ಟ್ ಮಾಡಿದ್ದಾರೆ. ಶೀರ್ಷಿಕೆಯು ‘ಎಚ್ಚರಿಕೆಯಿಂದಿರಿ’ ಎಂದು ಕಾಣಿಸುತ್ತದೆ ಮತ್ತು ‘ಇನ್ನಷ್ಟು ವೀಕ್ಷಿಸಿ’ ಕ್ಲಿಕ್ ಮಾಡಿದ ನಂತರ ಕೆಳಗೆ ಓದಿದಾಗ ವೈರಲ್‌ ಆಗುತ್ತಿರುವ ಹೇಳಿಕೆ ತಪ್ಪು ಎಂದು ಗೊತ್ತಾಗುತ್ತದೆ. – “ವೀಕ್ಷಿಸಿದ್ದಕ್ಕಾಗಿ ಧನ್ಯವಾದಗಳು! ಈ ಪುಟವು ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಸಹ ಒಳಗೊಂಡಿದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ಕಿರುಚಿತ್ರಗಳು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ!” ಎಂದು ಬರೆಯಾಗಿದೆ.

‘ಸ್ಫೋಟ’ದ ಹೇಳಿಕೆಯನ್ನು ಉಪಶೀರ್ಷಿಕೆಯಾಗಿ ಮಾತ್ರ ಮಾಡಲಾಗಿದೆ ಎಂಬುದನ್ನು ಓದುಗರು ಗಮನಿಸಬೇಕು. ವೀಡಿಯೋದಲ್ಲಿ ನಿಜವಾದ ಸ್ಫೋಟ ನಡೆದಿಲ್ಲ.

ಅದನ್ನು ಸಂಕ್ಷಿಪ್ತವಾಗಿ ಹೇಳುವುದಾದರೆ, ಸ್ಕ್ರಿಪ್ಟ್ ಮಾಡಿದ ವೀಡಿಯೊವನ್ನು ಕಟ್ ಮಾಡಿ ಹಂಚಿಕೊಳ್ಳಲಾಗಿದೆ. ಮೂಲ ವಿಡಿಯೋವು ಇದು ಸ್ಕ್ರಿಪ್ಟೆಂಡ್ ವಿಡಿಯೋ ಎಂಬುದನ್ನು ಸ್ಪಷ್ಟಪಡಿಸಿದೆ. ಆದರೆ, ವಿಡಿಯೋದ ರಚನೆಕಾರರು ಇದು ಚಿತ್ರೀಕರಿಸಲಾದ ವಿಡಿಯೋ ಎಂದು ತಿಳಿಸಲು ವೀಡಿಯೊಗಳಲ್ಲಿ ಸರಿಯಾದ ಮತ್ತು ಸ್ಪಷ್ಟವಾದ ಹೇಳಿಯನ್ನು ಸೇರಿಸುವಲ್ಲಿ ವಿಫಲರಾಗಿದ್ದಾರೆ.

ಚಾರ್ಜ್‌ನಲ್ಲಿಟ್ಟ ಮೊಬೈಲ್‌ ಫೋನ್‌ನಲ್ಲಿ ಮಾತನಾಡುವಾಗ ಫೋನ್‌ ಸ್ಪೋಟಗೊಂಡಿರುವ ವರದಿಗಳಾಗಿವೆ. ಆದರೆ, ಚಾರ್ಜ್‌ನಲ್ಲಿಟ್ಟ ಮೊಬೈಲ್‌ ಫೋನ್‌ನಲ್ಲಿ ಮಾತನಾಡುತ್ತಾ ನೀರು ಕುಡಿಯುವಾಗ ಸ್ಪೋಟಗೊಂಡಿರುವ ಬಗ್ಗೆ ಯಾವುದೇ ಘಟನೆಯು ವರದಿಯಾಗಿಲ್ಲ. ಆದರೂ, ಮೊಬೈಲ್‌ ಫೋನ್‌ ಜಾರ್ಜ್‌ನಲ್ಲಿದ್ದಾಗ ಫೋನ್‌ನಲ್ಲಿ ಮಾತನಾಡುವುದು ಅಪಾಯಕಾರಿ ಎಂಬುದು ನಮ್ಮ ಅರಿವಿನಲ್ಲಿರಬೇಕು.

ಕೃಪೆ: ಆಲ್ಟ್‌ನ್ಯೂಸ್‌


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...