Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

- Advertisement -
- Advertisement -

ವಿದೇಶದಲ್ಲಿ ನಡೆದ ಉತ್ಖನನದ ವೇಳೆ ಮಹಾಭಾರತದ ರಥಗಳು ಪತ್ತೆಯಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವೈರಲ್ ವಿಡಿಯೊದಲ್ಲಿ ರಥಗಳ ಚಕ್ರಕಗಳು, ಮನುಷ್ಯರ ತಲೆಬುಡುಡೆ, ಎಲುಬು ಸೇರಿದಂತೆ ಇತರ ವಸ್ತುಗಳು ಇರುವುದು ಕಾಣಬಹುದಾಗಿದೆ.

ಬಿಜೆಪಿ ಬೆಂಬಲಿಗರು ಇದನ್ನು ವ್ಯಾಪಕವಾಗಿ ಹಂಚುತ್ತಿದ್ದಾರೆ. ನಮೋ ಮಲ್ಲೇಶ್ ಎಂಬ ಮೋದಿ ಅಭಿಮಾನಿ ಇದನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ಸುಮಾರು 10 ಸಾವಿರ ಜನರು ವೀಕ್ಷಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ವಜನ ಸುಖಿನೋ ಭವಂತೂ’ ಎಂಬ ಫೇಸ್‌ಬುಕ್ ಅಕೌಂಟ್‌ ಕೂಡಾ ಇವುಗಳನ್ನು ಪೋಸ್ಟ್‌ ಮಾಡಿ, ರಾಮಾಯಣದ ರಥಗಳ ಪತ್ತೆ ಎಂದು ವೈರಲ್ ಮಾಡಿದೆ.

ಆದರೆ ನಿಜಕ್ಕೂ ಇವು ವಿದೇಶದಲ್ಲಿ ಪತ್ತೆಯಾದ ಮಹಾಭಾರತ ಕಾಲದ ರಥವೆ?

ಈ ವೈರಲ್ ವೀಡಿಯೊದಲ್ಲಿನ ದೃಶ್ಯಗಳ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಇದು ಚೀನಾದ ಆನ್ ಯಾಂಗ್ ನಗರದ ಸಮೀಪವಿರುವ ‘‘ಯಿನ್ ಕ್ಸು” ಮ್ಯೂಸಿಯಂನದ್ದು ಎಂದು ತಿಳಿದು ಬಂದಿದೆ. ಇದರ ಕುರಿತು ಹೆಚ್ಚಿನ ವೀಡಿಯೊಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಚೀನೀ ಸರ್ಕಾರದ ಅಧಿಕೃತ ವೆಬ್‌ಸೈಟ್ ಪ್ರಕಾರ, “ಯಿನ್ ಕ್ಸು” ಪ್ರದೇಶವು ಚೀನಾದ ಅತ್ಯಂತ ಹಳೆಯ ಪುರಾತನ ತಾಣಗಳಲ್ಲಿ ಒಂದಾಗಿದೆ. 19ನೇ ಶತಮಾನದಿಂದಲೂ ಇಲ್ಲಿ ಉತ್ಖನನ ನಡೆಸಲಾಗುತ್ತಿದೆ. ಸುಮಾರು 3300 ವರ್ಷಗಳಷ್ಟು ಹಳೆಯದಾದ ವಸ್ತುಗಳು, ಮೂಳೆಗಳು, ಆಭರಣಗಳು ಮತ್ತು ರಥಗಳನ್ನು ಇಲ್ಲಿನ ವಸ್ತುಸಂಗ್ರಹಾಲಯದಲ್ಲಿ ಕಾಣಬಹುದು.

ವಾಸ್ತವದಲ್ಲಿ ಇದು ‘ಶಾಂಗ್(ಇನ್)’ ರಾಜವಂಶದ ಪಳೆಯುಳಿಕೆಗಳಾಗಿದ್ದು, ಅವರ ಆಳ್ವಿಕೆ ಕ್ರಿಸ್ತಪೂರ್ವ 16 ರಿಂದ 11 ನೇ ಶತಮಾನದ ಮಧ್ಯದವರೆಗೆ ಇತ್ತು. ಈ ತಾಣವನ್ನು ಯುನೆಸ್ಕೋ ‘ವಿಶ್ವ ಪರಂಪರೆಯ ತಾಣ’ ಎಂದು ಘೋಷಿಸಿದೆ. ಇಲ್ಲಿನ ಪುರಾತನ ಸಮಾಧಿಗಳಲ್ಲಿ ಮಾನವ ಮೂಳೆಗಳ ಜೊತೆಗೆ ರಥದ ಚಕ್ರಗಳು, ವಿವಿಧ ಆಭರಣಗಳು ಮತ್ತು ಪಾತ್ರೆಗಳು ಸಹ ಕಂಡುಬಂದಿವೆ. ಈ ವಸ್ತುಸಂಗ್ರಹಾಲಯದಲ್ಲಿ ಸಂರಕ್ಷಿಸಲಾದ ರಥಗಳ ಹೆಚ್ಚಿನ ಫೋಟೋಗಳನ್ನು ಇಲ್ಲಿ ಕಾಣಬಹುದು.

ಒಟ್ಟಿನಲ್ಲಿ, ಚೀನಾದ ವಸ್ತುಸಂಗ್ರಹಾಲಯದಲ್ಲಿರುವ 3300 ವರ್ಷಗಳಷ್ಟು ಹಳೆಯದಾದ ಶಾಂಗ್ ರಾಜವಂಶದ ರಥದ ಚಕ್ರವನ್ನು ಮಹಾಭಾರತದ ರಥ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ವೀಡಿಯೊದಲ್ಲಿನ ದೃಶ್ಯಗಳು ಚೀನಾದ ಆನ್ ಯಾಂಗ್ ನಗರದ ಸಮೀಪವಿರುವ “ಯಿನ್ ಕ್ಸು” ವಸ್ತುಸಂಗ್ರಹಾಲಯದ್ದಾಗಿದೆ.

ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

ಇಲ್ಲಿನ ಪುರಾತನ ಸಮಾಧಿಗಳಲ್ಲಿ ಮಾನವ ಮೂಳೆಗಳ ಜೊತೆಗೆ ರಥದ ಚಕ್ರಗಳು, ವಿವಿಧ ಆಭರಣಗಳು ಮತ್ತು ಪಾತ್ರೆಗಳು ಸಹ ಕಂಡುಬಂದಿವೆ. ಇವುಗಳು 3300 ವರ್ಷಗಳಷ್ಟು ಹಳೆಯದಾದ ಶಾಂಗ್ ರಾಜವಂಶಕ್ಕೆ ಸೇರಿದವು ಎಂದು ಯುನೆಸ್ಕೋ ಗುರುತಿಸಿದೆ. ಜೊತೆಗೆ ಈ ವಸ್ತುಸಂಗ್ರಹಾಲಯದಲ್ಲಿ ಅನೇಕ ಪುರಾತನ ರಥಗಳನ್ನು ಸಹ ಕಾಣಬಹುದು. ಹಾಗಾಗಿ ವೈರಲ್‌ ವಿಡಿಯೊ ಪೋಸ್ಟ್‌ನಲ್ಲಿ ಮಾಡುತ್ತಿರುವ ಪ್ರತಿಪಾದನೆ ಸುಳ್ಳಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....