Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

- Advertisement -
- Advertisement -

ವಿದೇಶದಲ್ಲಿ ನಡೆದ ಉತ್ಖನನದ ವೇಳೆ ಮಹಾಭಾರತದ ರಥಗಳು ಪತ್ತೆಯಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವೈರಲ್ ವಿಡಿಯೊದಲ್ಲಿ ರಥಗಳ ಚಕ್ರಕಗಳು, ಮನುಷ್ಯರ ತಲೆಬುಡುಡೆ, ಎಲುಬು ಸೇರಿದಂತೆ ಇತರ ವಸ್ತುಗಳು ಇರುವುದು ಕಾಣಬಹುದಾಗಿದೆ.

ಬಿಜೆಪಿ ಬೆಂಬಲಿಗರು ಇದನ್ನು ವ್ಯಾಪಕವಾಗಿ ಹಂಚುತ್ತಿದ್ದಾರೆ. ನಮೋ ಮಲ್ಲೇಶ್ ಎಂಬ ಮೋದಿ ಅಭಿಮಾನಿ ಇದನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ಸುಮಾರು 10 ಸಾವಿರ ಜನರು ವೀಕ್ಷಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ವಜನ ಸುಖಿನೋ ಭವಂತೂ’ ಎಂಬ ಫೇಸ್‌ಬುಕ್ ಅಕೌಂಟ್‌ ಕೂಡಾ ಇವುಗಳನ್ನು ಪೋಸ್ಟ್‌ ಮಾಡಿ, ರಾಮಾಯಣದ ರಥಗಳ ಪತ್ತೆ ಎಂದು ವೈರಲ್ ಮಾಡಿದೆ.

ಆದರೆ ನಿಜಕ್ಕೂ ಇವು ವಿದೇಶದಲ್ಲಿ ಪತ್ತೆಯಾದ ಮಹಾಭಾರತ ಕಾಲದ ರಥವೆ?

ಈ ವೈರಲ್ ವೀಡಿಯೊದಲ್ಲಿನ ದೃಶ್ಯಗಳ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಇದು ಚೀನಾದ ಆನ್ ಯಾಂಗ್ ನಗರದ ಸಮೀಪವಿರುವ ‘‘ಯಿನ್ ಕ್ಸು” ಮ್ಯೂಸಿಯಂನದ್ದು ಎಂದು ತಿಳಿದು ಬಂದಿದೆ. ಇದರ ಕುರಿತು ಹೆಚ್ಚಿನ ವೀಡಿಯೊಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಚೀನೀ ಸರ್ಕಾರದ ಅಧಿಕೃತ ವೆಬ್‌ಸೈಟ್ ಪ್ರಕಾರ, “ಯಿನ್ ಕ್ಸು” ಪ್ರದೇಶವು ಚೀನಾದ ಅತ್ಯಂತ ಹಳೆಯ ಪುರಾತನ ತಾಣಗಳಲ್ಲಿ ಒಂದಾಗಿದೆ. 19ನೇ ಶತಮಾನದಿಂದಲೂ ಇಲ್ಲಿ ಉತ್ಖನನ ನಡೆಸಲಾಗುತ್ತಿದೆ. ಸುಮಾರು 3300 ವರ್ಷಗಳಷ್ಟು ಹಳೆಯದಾದ ವಸ್ತುಗಳು, ಮೂಳೆಗಳು, ಆಭರಣಗಳು ಮತ್ತು ರಥಗಳನ್ನು ಇಲ್ಲಿನ ವಸ್ತುಸಂಗ್ರಹಾಲಯದಲ್ಲಿ ಕಾಣಬಹುದು.

ವಾಸ್ತವದಲ್ಲಿ ಇದು ‘ಶಾಂಗ್(ಇನ್)’ ರಾಜವಂಶದ ಪಳೆಯುಳಿಕೆಗಳಾಗಿದ್ದು, ಅವರ ಆಳ್ವಿಕೆ ಕ್ರಿಸ್ತಪೂರ್ವ 16 ರಿಂದ 11 ನೇ ಶತಮಾನದ ಮಧ್ಯದವರೆಗೆ ಇತ್ತು. ಈ ತಾಣವನ್ನು ಯುನೆಸ್ಕೋ ‘ವಿಶ್ವ ಪರಂಪರೆಯ ತಾಣ’ ಎಂದು ಘೋಷಿಸಿದೆ. ಇಲ್ಲಿನ ಪುರಾತನ ಸಮಾಧಿಗಳಲ್ಲಿ ಮಾನವ ಮೂಳೆಗಳ ಜೊತೆಗೆ ರಥದ ಚಕ್ರಗಳು, ವಿವಿಧ ಆಭರಣಗಳು ಮತ್ತು ಪಾತ್ರೆಗಳು ಸಹ ಕಂಡುಬಂದಿವೆ. ಈ ವಸ್ತುಸಂಗ್ರಹಾಲಯದಲ್ಲಿ ಸಂರಕ್ಷಿಸಲಾದ ರಥಗಳ ಹೆಚ್ಚಿನ ಫೋಟೋಗಳನ್ನು ಇಲ್ಲಿ ಕಾಣಬಹುದು.

ಒಟ್ಟಿನಲ್ಲಿ, ಚೀನಾದ ವಸ್ತುಸಂಗ್ರಹಾಲಯದಲ್ಲಿರುವ 3300 ವರ್ಷಗಳಷ್ಟು ಹಳೆಯದಾದ ಶಾಂಗ್ ರಾಜವಂಶದ ರಥದ ಚಕ್ರವನ್ನು ಮಹಾಭಾರತದ ರಥ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ವೀಡಿಯೊದಲ್ಲಿನ ದೃಶ್ಯಗಳು ಚೀನಾದ ಆನ್ ಯಾಂಗ್ ನಗರದ ಸಮೀಪವಿರುವ “ಯಿನ್ ಕ್ಸು” ವಸ್ತುಸಂಗ್ರಹಾಲಯದ್ದಾಗಿದೆ.

ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

ಇಲ್ಲಿನ ಪುರಾತನ ಸಮಾಧಿಗಳಲ್ಲಿ ಮಾನವ ಮೂಳೆಗಳ ಜೊತೆಗೆ ರಥದ ಚಕ್ರಗಳು, ವಿವಿಧ ಆಭರಣಗಳು ಮತ್ತು ಪಾತ್ರೆಗಳು ಸಹ ಕಂಡುಬಂದಿವೆ. ಇವುಗಳು 3300 ವರ್ಷಗಳಷ್ಟು ಹಳೆಯದಾದ ಶಾಂಗ್ ರಾಜವಂಶಕ್ಕೆ ಸೇರಿದವು ಎಂದು ಯುನೆಸ್ಕೋ ಗುರುತಿಸಿದೆ. ಜೊತೆಗೆ ಈ ವಸ್ತುಸಂಗ್ರಹಾಲಯದಲ್ಲಿ ಅನೇಕ ಪುರಾತನ ರಥಗಳನ್ನು ಸಹ ಕಾಣಬಹುದು. ಹಾಗಾಗಿ ವೈರಲ್‌ ವಿಡಿಯೊ ಪೋಸ್ಟ್‌ನಲ್ಲಿ ಮಾಡುತ್ತಿರುವ ಪ್ರತಿಪಾದನೆ ಸುಳ್ಳಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...