Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

- Advertisement -
- Advertisement -

ವಿದೇಶದಲ್ಲಿ ನಡೆದ ಉತ್ಖನನದ ವೇಳೆ ಮಹಾಭಾರತದ ರಥಗಳು ಪತ್ತೆಯಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವೈರಲ್ ವಿಡಿಯೊದಲ್ಲಿ ರಥಗಳ ಚಕ್ರಕಗಳು, ಮನುಷ್ಯರ ತಲೆಬುಡುಡೆ, ಎಲುಬು ಸೇರಿದಂತೆ ಇತರ ವಸ್ತುಗಳು ಇರುವುದು ಕಾಣಬಹುದಾಗಿದೆ.

ಬಿಜೆಪಿ ಬೆಂಬಲಿಗರು ಇದನ್ನು ವ್ಯಾಪಕವಾಗಿ ಹಂಚುತ್ತಿದ್ದಾರೆ. ನಮೋ ಮಲ್ಲೇಶ್ ಎಂಬ ಮೋದಿ ಅಭಿಮಾನಿ ಇದನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ಸುಮಾರು 10 ಸಾವಿರ ಜನರು ವೀಕ್ಷಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ವಜನ ಸುಖಿನೋ ಭವಂತೂ’ ಎಂಬ ಫೇಸ್‌ಬುಕ್ ಅಕೌಂಟ್‌ ಕೂಡಾ ಇವುಗಳನ್ನು ಪೋಸ್ಟ್‌ ಮಾಡಿ, ರಾಮಾಯಣದ ರಥಗಳ ಪತ್ತೆ ಎಂದು ವೈರಲ್ ಮಾಡಿದೆ.

ಆದರೆ ನಿಜಕ್ಕೂ ಇವು ವಿದೇಶದಲ್ಲಿ ಪತ್ತೆಯಾದ ಮಹಾಭಾರತ ಕಾಲದ ರಥವೆ?

ಈ ವೈರಲ್ ವೀಡಿಯೊದಲ್ಲಿನ ದೃಶ್ಯಗಳ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಇದು ಚೀನಾದ ಆನ್ ಯಾಂಗ್ ನಗರದ ಸಮೀಪವಿರುವ ‘‘ಯಿನ್ ಕ್ಸು” ಮ್ಯೂಸಿಯಂನದ್ದು ಎಂದು ತಿಳಿದು ಬಂದಿದೆ. ಇದರ ಕುರಿತು ಹೆಚ್ಚಿನ ವೀಡಿಯೊಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಚೀನೀ ಸರ್ಕಾರದ ಅಧಿಕೃತ ವೆಬ್‌ಸೈಟ್ ಪ್ರಕಾರ, “ಯಿನ್ ಕ್ಸು” ಪ್ರದೇಶವು ಚೀನಾದ ಅತ್ಯಂತ ಹಳೆಯ ಪುರಾತನ ತಾಣಗಳಲ್ಲಿ ಒಂದಾಗಿದೆ. 19ನೇ ಶತಮಾನದಿಂದಲೂ ಇಲ್ಲಿ ಉತ್ಖನನ ನಡೆಸಲಾಗುತ್ತಿದೆ. ಸುಮಾರು 3300 ವರ್ಷಗಳಷ್ಟು ಹಳೆಯದಾದ ವಸ್ತುಗಳು, ಮೂಳೆಗಳು, ಆಭರಣಗಳು ಮತ್ತು ರಥಗಳನ್ನು ಇಲ್ಲಿನ ವಸ್ತುಸಂಗ್ರಹಾಲಯದಲ್ಲಿ ಕಾಣಬಹುದು.

ವಾಸ್ತವದಲ್ಲಿ ಇದು ‘ಶಾಂಗ್(ಇನ್)’ ರಾಜವಂಶದ ಪಳೆಯುಳಿಕೆಗಳಾಗಿದ್ದು, ಅವರ ಆಳ್ವಿಕೆ ಕ್ರಿಸ್ತಪೂರ್ವ 16 ರಿಂದ 11 ನೇ ಶತಮಾನದ ಮಧ್ಯದವರೆಗೆ ಇತ್ತು. ಈ ತಾಣವನ್ನು ಯುನೆಸ್ಕೋ ‘ವಿಶ್ವ ಪರಂಪರೆಯ ತಾಣ’ ಎಂದು ಘೋಷಿಸಿದೆ. ಇಲ್ಲಿನ ಪುರಾತನ ಸಮಾಧಿಗಳಲ್ಲಿ ಮಾನವ ಮೂಳೆಗಳ ಜೊತೆಗೆ ರಥದ ಚಕ್ರಗಳು, ವಿವಿಧ ಆಭರಣಗಳು ಮತ್ತು ಪಾತ್ರೆಗಳು ಸಹ ಕಂಡುಬಂದಿವೆ. ಈ ವಸ್ತುಸಂಗ್ರಹಾಲಯದಲ್ಲಿ ಸಂರಕ್ಷಿಸಲಾದ ರಥಗಳ ಹೆಚ್ಚಿನ ಫೋಟೋಗಳನ್ನು ಇಲ್ಲಿ ಕಾಣಬಹುದು.

ಒಟ್ಟಿನಲ್ಲಿ, ಚೀನಾದ ವಸ್ತುಸಂಗ್ರಹಾಲಯದಲ್ಲಿರುವ 3300 ವರ್ಷಗಳಷ್ಟು ಹಳೆಯದಾದ ಶಾಂಗ್ ರಾಜವಂಶದ ರಥದ ಚಕ್ರವನ್ನು ಮಹಾಭಾರತದ ರಥ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ವೀಡಿಯೊದಲ್ಲಿನ ದೃಶ್ಯಗಳು ಚೀನಾದ ಆನ್ ಯಾಂಗ್ ನಗರದ ಸಮೀಪವಿರುವ “ಯಿನ್ ಕ್ಸು” ವಸ್ತುಸಂಗ್ರಹಾಲಯದ್ದಾಗಿದೆ.

ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

ಇಲ್ಲಿನ ಪುರಾತನ ಸಮಾಧಿಗಳಲ್ಲಿ ಮಾನವ ಮೂಳೆಗಳ ಜೊತೆಗೆ ರಥದ ಚಕ್ರಗಳು, ವಿವಿಧ ಆಭರಣಗಳು ಮತ್ತು ಪಾತ್ರೆಗಳು ಸಹ ಕಂಡುಬಂದಿವೆ. ಇವುಗಳು 3300 ವರ್ಷಗಳಷ್ಟು ಹಳೆಯದಾದ ಶಾಂಗ್ ರಾಜವಂಶಕ್ಕೆ ಸೇರಿದವು ಎಂದು ಯುನೆಸ್ಕೋ ಗುರುತಿಸಿದೆ. ಜೊತೆಗೆ ಈ ವಸ್ತುಸಂಗ್ರಹಾಲಯದಲ್ಲಿ ಅನೇಕ ಪುರಾತನ ರಥಗಳನ್ನು ಸಹ ಕಾಣಬಹುದು. ಹಾಗಾಗಿ ವೈರಲ್‌ ವಿಡಿಯೊ ಪೋಸ್ಟ್‌ನಲ್ಲಿ ಮಾಡುತ್ತಿರುವ ಪ್ರತಿಪಾದನೆ ಸುಳ್ಳಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...