Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

- Advertisement -
- Advertisement -

ವಿದೇಶದಲ್ಲಿ ನಡೆದ ಉತ್ಖನನದ ವೇಳೆ ಮಹಾಭಾರತದ ರಥಗಳು ಪತ್ತೆಯಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವೈರಲ್ ವಿಡಿಯೊದಲ್ಲಿ ರಥಗಳ ಚಕ್ರಕಗಳು, ಮನುಷ್ಯರ ತಲೆಬುಡುಡೆ, ಎಲುಬು ಸೇರಿದಂತೆ ಇತರ ವಸ್ತುಗಳು ಇರುವುದು ಕಾಣಬಹುದಾಗಿದೆ.

ಬಿಜೆಪಿ ಬೆಂಬಲಿಗರು ಇದನ್ನು ವ್ಯಾಪಕವಾಗಿ ಹಂಚುತ್ತಿದ್ದಾರೆ. ನಮೋ ಮಲ್ಲೇಶ್ ಎಂಬ ಮೋದಿ ಅಭಿಮಾನಿ ಇದನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ಸುಮಾರು 10 ಸಾವಿರ ಜನರು ವೀಕ್ಷಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ವಜನ ಸುಖಿನೋ ಭವಂತೂ’ ಎಂಬ ಫೇಸ್‌ಬುಕ್ ಅಕೌಂಟ್‌ ಕೂಡಾ ಇವುಗಳನ್ನು ಪೋಸ್ಟ್‌ ಮಾಡಿ, ರಾಮಾಯಣದ ರಥಗಳ ಪತ್ತೆ ಎಂದು ವೈರಲ್ ಮಾಡಿದೆ.

ಆದರೆ ನಿಜಕ್ಕೂ ಇವು ವಿದೇಶದಲ್ಲಿ ಪತ್ತೆಯಾದ ಮಹಾಭಾರತ ಕಾಲದ ರಥವೆ?

ಈ ವೈರಲ್ ವೀಡಿಯೊದಲ್ಲಿನ ದೃಶ್ಯಗಳ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಇದು ಚೀನಾದ ಆನ್ ಯಾಂಗ್ ನಗರದ ಸಮೀಪವಿರುವ ‘‘ಯಿನ್ ಕ್ಸು” ಮ್ಯೂಸಿಯಂನದ್ದು ಎಂದು ತಿಳಿದು ಬಂದಿದೆ. ಇದರ ಕುರಿತು ಹೆಚ್ಚಿನ ವೀಡಿಯೊಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಚೀನೀ ಸರ್ಕಾರದ ಅಧಿಕೃತ ವೆಬ್‌ಸೈಟ್ ಪ್ರಕಾರ, “ಯಿನ್ ಕ್ಸು” ಪ್ರದೇಶವು ಚೀನಾದ ಅತ್ಯಂತ ಹಳೆಯ ಪುರಾತನ ತಾಣಗಳಲ್ಲಿ ಒಂದಾಗಿದೆ. 19ನೇ ಶತಮಾನದಿಂದಲೂ ಇಲ್ಲಿ ಉತ್ಖನನ ನಡೆಸಲಾಗುತ್ತಿದೆ. ಸುಮಾರು 3300 ವರ್ಷಗಳಷ್ಟು ಹಳೆಯದಾದ ವಸ್ತುಗಳು, ಮೂಳೆಗಳು, ಆಭರಣಗಳು ಮತ್ತು ರಥಗಳನ್ನು ಇಲ್ಲಿನ ವಸ್ತುಸಂಗ್ರಹಾಲಯದಲ್ಲಿ ಕಾಣಬಹುದು.

ವಾಸ್ತವದಲ್ಲಿ ಇದು ‘ಶಾಂಗ್(ಇನ್)’ ರಾಜವಂಶದ ಪಳೆಯುಳಿಕೆಗಳಾಗಿದ್ದು, ಅವರ ಆಳ್ವಿಕೆ ಕ್ರಿಸ್ತಪೂರ್ವ 16 ರಿಂದ 11 ನೇ ಶತಮಾನದ ಮಧ್ಯದವರೆಗೆ ಇತ್ತು. ಈ ತಾಣವನ್ನು ಯುನೆಸ್ಕೋ ‘ವಿಶ್ವ ಪರಂಪರೆಯ ತಾಣ’ ಎಂದು ಘೋಷಿಸಿದೆ. ಇಲ್ಲಿನ ಪುರಾತನ ಸಮಾಧಿಗಳಲ್ಲಿ ಮಾನವ ಮೂಳೆಗಳ ಜೊತೆಗೆ ರಥದ ಚಕ್ರಗಳು, ವಿವಿಧ ಆಭರಣಗಳು ಮತ್ತು ಪಾತ್ರೆಗಳು ಸಹ ಕಂಡುಬಂದಿವೆ. ಈ ವಸ್ತುಸಂಗ್ರಹಾಲಯದಲ್ಲಿ ಸಂರಕ್ಷಿಸಲಾದ ರಥಗಳ ಹೆಚ್ಚಿನ ಫೋಟೋಗಳನ್ನು ಇಲ್ಲಿ ಕಾಣಬಹುದು.

ಒಟ್ಟಿನಲ್ಲಿ, ಚೀನಾದ ವಸ್ತುಸಂಗ್ರಹಾಲಯದಲ್ಲಿರುವ 3300 ವರ್ಷಗಳಷ್ಟು ಹಳೆಯದಾದ ಶಾಂಗ್ ರಾಜವಂಶದ ರಥದ ಚಕ್ರವನ್ನು ಮಹಾಭಾರತದ ರಥ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ವೀಡಿಯೊದಲ್ಲಿನ ದೃಶ್ಯಗಳು ಚೀನಾದ ಆನ್ ಯಾಂಗ್ ನಗರದ ಸಮೀಪವಿರುವ “ಯಿನ್ ಕ್ಸು” ವಸ್ತುಸಂಗ್ರಹಾಲಯದ್ದಾಗಿದೆ.

ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

ಇಲ್ಲಿನ ಪುರಾತನ ಸಮಾಧಿಗಳಲ್ಲಿ ಮಾನವ ಮೂಳೆಗಳ ಜೊತೆಗೆ ರಥದ ಚಕ್ರಗಳು, ವಿವಿಧ ಆಭರಣಗಳು ಮತ್ತು ಪಾತ್ರೆಗಳು ಸಹ ಕಂಡುಬಂದಿವೆ. ಇವುಗಳು 3300 ವರ್ಷಗಳಷ್ಟು ಹಳೆಯದಾದ ಶಾಂಗ್ ರಾಜವಂಶಕ್ಕೆ ಸೇರಿದವು ಎಂದು ಯುನೆಸ್ಕೋ ಗುರುತಿಸಿದೆ. ಜೊತೆಗೆ ಈ ವಸ್ತುಸಂಗ್ರಹಾಲಯದಲ್ಲಿ ಅನೇಕ ಪುರಾತನ ರಥಗಳನ್ನು ಸಹ ಕಾಣಬಹುದು. ಹಾಗಾಗಿ ವೈರಲ್‌ ವಿಡಿಯೊ ಪೋಸ್ಟ್‌ನಲ್ಲಿ ಮಾಡುತ್ತಿರುವ ಪ್ರತಿಪಾದನೆ ಸುಳ್ಳಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...