Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

- Advertisement -
- Advertisement -

ವಿದೇಶದಲ್ಲಿ ನಡೆದ ಉತ್ಖನನದ ವೇಳೆ ಮಹಾಭಾರತದ ರಥಗಳು ಪತ್ತೆಯಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವೈರಲ್ ವಿಡಿಯೊದಲ್ಲಿ ರಥಗಳ ಚಕ್ರಕಗಳು, ಮನುಷ್ಯರ ತಲೆಬುಡುಡೆ, ಎಲುಬು ಸೇರಿದಂತೆ ಇತರ ವಸ್ತುಗಳು ಇರುವುದು ಕಾಣಬಹುದಾಗಿದೆ.

ಬಿಜೆಪಿ ಬೆಂಬಲಿಗರು ಇದನ್ನು ವ್ಯಾಪಕವಾಗಿ ಹಂಚುತ್ತಿದ್ದಾರೆ. ನಮೋ ಮಲ್ಲೇಶ್ ಎಂಬ ಮೋದಿ ಅಭಿಮಾನಿ ಇದನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ಸುಮಾರು 10 ಸಾವಿರ ಜನರು ವೀಕ್ಷಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ವಜನ ಸುಖಿನೋ ಭವಂತೂ’ ಎಂಬ ಫೇಸ್‌ಬುಕ್ ಅಕೌಂಟ್‌ ಕೂಡಾ ಇವುಗಳನ್ನು ಪೋಸ್ಟ್‌ ಮಾಡಿ, ರಾಮಾಯಣದ ರಥಗಳ ಪತ್ತೆ ಎಂದು ವೈರಲ್ ಮಾಡಿದೆ.

ಆದರೆ ನಿಜಕ್ಕೂ ಇವು ವಿದೇಶದಲ್ಲಿ ಪತ್ತೆಯಾದ ಮಹಾಭಾರತ ಕಾಲದ ರಥವೆ?

ಈ ವೈರಲ್ ವೀಡಿಯೊದಲ್ಲಿನ ದೃಶ್ಯಗಳ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಇದು ಚೀನಾದ ಆನ್ ಯಾಂಗ್ ನಗರದ ಸಮೀಪವಿರುವ ‘‘ಯಿನ್ ಕ್ಸು” ಮ್ಯೂಸಿಯಂನದ್ದು ಎಂದು ತಿಳಿದು ಬಂದಿದೆ. ಇದರ ಕುರಿತು ಹೆಚ್ಚಿನ ವೀಡಿಯೊಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಚೀನೀ ಸರ್ಕಾರದ ಅಧಿಕೃತ ವೆಬ್‌ಸೈಟ್ ಪ್ರಕಾರ, “ಯಿನ್ ಕ್ಸು” ಪ್ರದೇಶವು ಚೀನಾದ ಅತ್ಯಂತ ಹಳೆಯ ಪುರಾತನ ತಾಣಗಳಲ್ಲಿ ಒಂದಾಗಿದೆ. 19ನೇ ಶತಮಾನದಿಂದಲೂ ಇಲ್ಲಿ ಉತ್ಖನನ ನಡೆಸಲಾಗುತ್ತಿದೆ. ಸುಮಾರು 3300 ವರ್ಷಗಳಷ್ಟು ಹಳೆಯದಾದ ವಸ್ತುಗಳು, ಮೂಳೆಗಳು, ಆಭರಣಗಳು ಮತ್ತು ರಥಗಳನ್ನು ಇಲ್ಲಿನ ವಸ್ತುಸಂಗ್ರಹಾಲಯದಲ್ಲಿ ಕಾಣಬಹುದು.

ವಾಸ್ತವದಲ್ಲಿ ಇದು ‘ಶಾಂಗ್(ಇನ್)’ ರಾಜವಂಶದ ಪಳೆಯುಳಿಕೆಗಳಾಗಿದ್ದು, ಅವರ ಆಳ್ವಿಕೆ ಕ್ರಿಸ್ತಪೂರ್ವ 16 ರಿಂದ 11 ನೇ ಶತಮಾನದ ಮಧ್ಯದವರೆಗೆ ಇತ್ತು. ಈ ತಾಣವನ್ನು ಯುನೆಸ್ಕೋ ‘ವಿಶ್ವ ಪರಂಪರೆಯ ತಾಣ’ ಎಂದು ಘೋಷಿಸಿದೆ. ಇಲ್ಲಿನ ಪುರಾತನ ಸಮಾಧಿಗಳಲ್ಲಿ ಮಾನವ ಮೂಳೆಗಳ ಜೊತೆಗೆ ರಥದ ಚಕ್ರಗಳು, ವಿವಿಧ ಆಭರಣಗಳು ಮತ್ತು ಪಾತ್ರೆಗಳು ಸಹ ಕಂಡುಬಂದಿವೆ. ಈ ವಸ್ತುಸಂಗ್ರಹಾಲಯದಲ್ಲಿ ಸಂರಕ್ಷಿಸಲಾದ ರಥಗಳ ಹೆಚ್ಚಿನ ಫೋಟೋಗಳನ್ನು ಇಲ್ಲಿ ಕಾಣಬಹುದು.

ಒಟ್ಟಿನಲ್ಲಿ, ಚೀನಾದ ವಸ್ತುಸಂಗ್ರಹಾಲಯದಲ್ಲಿರುವ 3300 ವರ್ಷಗಳಷ್ಟು ಹಳೆಯದಾದ ಶಾಂಗ್ ರಾಜವಂಶದ ರಥದ ಚಕ್ರವನ್ನು ಮಹಾಭಾರತದ ರಥ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ವೀಡಿಯೊದಲ್ಲಿನ ದೃಶ್ಯಗಳು ಚೀನಾದ ಆನ್ ಯಾಂಗ್ ನಗರದ ಸಮೀಪವಿರುವ “ಯಿನ್ ಕ್ಸು” ವಸ್ತುಸಂಗ್ರಹಾಲಯದ್ದಾಗಿದೆ.

ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

ಇಲ್ಲಿನ ಪುರಾತನ ಸಮಾಧಿಗಳಲ್ಲಿ ಮಾನವ ಮೂಳೆಗಳ ಜೊತೆಗೆ ರಥದ ಚಕ್ರಗಳು, ವಿವಿಧ ಆಭರಣಗಳು ಮತ್ತು ಪಾತ್ರೆಗಳು ಸಹ ಕಂಡುಬಂದಿವೆ. ಇವುಗಳು 3300 ವರ್ಷಗಳಷ್ಟು ಹಳೆಯದಾದ ಶಾಂಗ್ ರಾಜವಂಶಕ್ಕೆ ಸೇರಿದವು ಎಂದು ಯುನೆಸ್ಕೋ ಗುರುತಿಸಿದೆ. ಜೊತೆಗೆ ಈ ವಸ್ತುಸಂಗ್ರಹಾಲಯದಲ್ಲಿ ಅನೇಕ ಪುರಾತನ ರಥಗಳನ್ನು ಸಹ ಕಾಣಬಹುದು. ಹಾಗಾಗಿ ವೈರಲ್‌ ವಿಡಿಯೊ ಪೋಸ್ಟ್‌ನಲ್ಲಿ ಮಾಡುತ್ತಿರುವ ಪ್ರತಿಪಾದನೆ ಸುಳ್ಳಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...