Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ಟೊಮೊಟೊಗೂ ಬಂತು ಕೊರೊನಾಗಿಂತ ಡೆಡ್ಲಿ ವೈರಸ್: ನೀವು ನಂಬುತ್ತೀರಾ?

ಫ್ಯಾಕ್ಟ್‌ಚೆಕ್‌: ಟೊಮೊಟೊಗೂ ಬಂತು ಕೊರೊನಾಗಿಂತ ಡೆಡ್ಲಿ ವೈರಸ್: ನೀವು ನಂಬುತ್ತೀರಾ?

- Advertisement -
- Advertisement -

ಟೊಮೊಟೊದಿಂದ ಟೆನ್ಷನ್, ರೆಡ್ ಡೆಡ್ಲಿ ವೈರಸ್ ಇನ್ಫೆಕ್ಷನ್. ತಿರಂಗ ವೈರಸ್ ಬಂದಿದೆ. ತರಕಾರಿಗಳಿಂದ ಮಾನವನ ದೇಹ ಹೊಕ್ಕಿ ಕೊಲ್ಲಲು ಸಜ್ಜಾಗಿದೆ. ಇದು ಕೊರೊನಾ ವೈರಸ್‌ನ ಹೊಸ ರೂಪ. ಆದರೆ ಕೊರೊನಾಗಿಂತಲೂ ಡೇಂಜರ್ ವೈರಸ್. ಅದರಿಂದಾಗಿ ಮಹಾರಾಷ್ಟ್ರದಲ್ಲಿ ಒಂದು ವರ್ಷ ಜನರು ಟೊಮೊಟೊ ತಿನ್ನುವುದಿಲ್ಲ ಎಂದು ನಿರ್ಧರಿಸಿದ್ದಾರೆ.

ಈ ಮೇಲಿನ ಅಣಿಮುತ್ತುಗಳು ಟಿವಿ9 ಭಾರತ್‌ವರ್ಷ್ ಹಿಂದಿವಾಹಿನಿಯಲ್ಲಿ ಮೇ13 ರಂದು ಪ್ರಸಾರವಾದಂತವುಗಳು. ಜೊತೆಗೆ ಅಷ್ಟೇ ಬೇಗ ಅದನ್ನು ಡಿಲಿಟ್ ಮಾಡಲಾಯಿತು ಕೂಡ. ಅಷ್ಟರಲ್ಲಿ ಅದನ್ನು ನೋಡಿದ ಎಷ್ಟು ಜನರು ಇದನ್ನು ನಂಬಿದರೋ ಗೊತ್ತಿಲ್ಲ. ಆದರೆ ಬಹಳಷ್ಟು ಜನರು ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ತಾವೇ ಕಂಡುಹಿಡಿದವರಂತೆ ಹಾಕಿಕೊಂಡಿದ್ದರು.

ಫ್ಯಾಕ್ಟ್‌ಚೆಕ್‌

ಈ ವರ್ಷ ಮಹಾರಾಷ್ಟ್ರದ ಹಲವು ಕಡೆ ಕೂಯ್ಲಿಗೆ ಬಂದ ಟೊಮೊಟೊಗಳು ಮಾಗಿಹೋಗಿವೆ. ಇದರಿಂದ ರೈತರಿಗೆ ಸಾಕಷ್ಟು ನಷ್ಟವಾಗಿದೆ. ನಾಸಿಕ್‌, ಪುಣೆ ಮತ್ತು ಅಹ್ಮದ್‌ ನಗರ ಜಿಲ್ಲೆಗಳಲ್ಲಿ ಕಳೆದ ಹತ್ತು ದಿನಗಳಿಂದ ಶೇ.60% ಟೊಮೊಟೊ ನಾಶವಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ.

ಮಹಾತ್ಮಾ ಫುಲೆ ಕೃಷಿ ವಿದ್ಯಾಪೀಠದ ಡಾ.ನವಲೆ ಎಂಬುವವರು ಟೊಮೊಟೊಗಳು ಹಾಳಾಗಲು ಕಾರಣವೇನೆಂದು ಅಧ್ಯಯನ ಮಾಡುತ್ತಿದ್ದಾರೆ. ಅವರು ಸ್ಯಾಂಪಲ್‌ಗಳನ್ನು ಬೆಂಗಳೂರಿನ ಇನ್ಸ್ಟಿಟ್ಯೂಟ್‌ ಆಫ್‌ ಹಾರ್ಟಿಕಲ್ಚರ್‌ ರಿಸರ್ಚ್‌ ಫಾರ್‌ ಐಡೆಂಟಿಫಿಕೇಶನ್‌ ಕಳಿಸಿದ್ದಾರೆ. ಅವರು ಬರೆದ ಲೇಖನದಲ್ಲಿ ಯಾವುದೋ  ರೋಗದಿಂದ ಟೊಮೊಟೊ ಎಲೆಗಳು ಮೊದಲು ಹಾಳಾಗಿ ನಂತರ ಹಣ್ಣು ಸಹ ಹಾಳಾಗುತ್ತಿದೆ ಎಂದಿದ್ದಾರೆ. ಅಲ್ಲದೇ ರೋಗದಿಂದ ಕೂಡಿದ ಟೊಮೊಟೊ ಬೀಜಗಳನ್ನು ವಿತರಿಸಿರುವುದರಿಂದ ಈ ಸಮಸ್ಯೆ ಉಂಟಾಗಿದೆ ಎಂದು ಹಲವು ರೈತರು ಪ್ರತಿಭಟನೆ ನಡೆಸಿರುವುದನ್ನು ಲೇಖನದಲ್ಲಿ ಉಲ್ಲೇಖಿಸಿದ್ದಾರೆ.

ಬಹಳಷ್ಟು ಕೀಟತಜ್ಞರು ಇದು ಕೊರೊನಾ ವೈರಸ್‌ ರೀತಿಯದು ಎಂಬ ಸುದ್ದಿಯನ್ನು ಅಲ್ಲಗೆಳೆದಿದ್ದಾರೆ. ಟೊಮೊಟೊಗೆ ಹಲವು ರೋಗಗಳು ಬರುವುದು ಸಹಜ. ಅದರಿಂದ ಕೆಂಪು ಟೊಮೊಟೊಗಳು ಮಾಗಿವೆ. ಆದರೆ ಇದಕ್ಕೂ ಕೊರೊನಾ ವೈರಸ್ ಯಾವ ಸಂಬಂಧವಿಲ್ಲ, ತರಕಾರಿಗಳಿಂದ ವೈರಸ್ ಮನುಷ್ಯನ ದೇಹ ಸೇರುತ್ತವೆ ಎಂಬುದು ಸಂಪೂರ್ಣ ಸುಳ್ಳು ಎಂದಿದ್ದಾರೆ.

ನಂತರ ಈ ಸ್ಟೋರಿಗಳನ್ನು ಡಿಲಿಟ್ ಮಾಡಿರುವ ಟಿವಿ9 ಭಾರತ್‌ವರ್ಷ್ ಮೇ15 ರಂದು ಮತ್ತೊಂದು ಶೋ ನಡೆಸಿ ನಾವು ಪ್ರಶ್ನಾರ್ಥಕ ಚಿನ್ನೆಗಳನ್ನಿಟ್ಟು ಶೋ ನಡೆಸಿದ್ದವು. ಆದರೆ ಸಾಮಾಜಿಕ ಜಾಲತಾಣಿಗರು ತಪ್ಪು ಸಂದೇಶ ಹರಡಿದ್ದಾರೆ ಎಂದು ಸಮರ್ಥಿಸಿಕೊಂಡಿವೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಆಹಾರ, ಹಣಕ್ಕಾಗಿ ವಲಸೆ ಕಾರ್ಮಿಕರಿಂದ ದರೋಡೆ ಮತ್ತು ಕೊಲೆ?: ಇದು ನಿಜವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...