Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ಟೊಮೊಟೊಗೂ ಬಂತು ಕೊರೊನಾಗಿಂತ ಡೆಡ್ಲಿ ವೈರಸ್: ನೀವು ನಂಬುತ್ತೀರಾ?

ಫ್ಯಾಕ್ಟ್‌ಚೆಕ್‌: ಟೊಮೊಟೊಗೂ ಬಂತು ಕೊರೊನಾಗಿಂತ ಡೆಡ್ಲಿ ವೈರಸ್: ನೀವು ನಂಬುತ್ತೀರಾ?

- Advertisement -
- Advertisement -

ಟೊಮೊಟೊದಿಂದ ಟೆನ್ಷನ್, ರೆಡ್ ಡೆಡ್ಲಿ ವೈರಸ್ ಇನ್ಫೆಕ್ಷನ್. ತಿರಂಗ ವೈರಸ್ ಬಂದಿದೆ. ತರಕಾರಿಗಳಿಂದ ಮಾನವನ ದೇಹ ಹೊಕ್ಕಿ ಕೊಲ್ಲಲು ಸಜ್ಜಾಗಿದೆ. ಇದು ಕೊರೊನಾ ವೈರಸ್‌ನ ಹೊಸ ರೂಪ. ಆದರೆ ಕೊರೊನಾಗಿಂತಲೂ ಡೇಂಜರ್ ವೈರಸ್. ಅದರಿಂದಾಗಿ ಮಹಾರಾಷ್ಟ್ರದಲ್ಲಿ ಒಂದು ವರ್ಷ ಜನರು ಟೊಮೊಟೊ ತಿನ್ನುವುದಿಲ್ಲ ಎಂದು ನಿರ್ಧರಿಸಿದ್ದಾರೆ.

ಈ ಮೇಲಿನ ಅಣಿಮುತ್ತುಗಳು ಟಿವಿ9 ಭಾರತ್‌ವರ್ಷ್ ಹಿಂದಿವಾಹಿನಿಯಲ್ಲಿ ಮೇ13 ರಂದು ಪ್ರಸಾರವಾದಂತವುಗಳು. ಜೊತೆಗೆ ಅಷ್ಟೇ ಬೇಗ ಅದನ್ನು ಡಿಲಿಟ್ ಮಾಡಲಾಯಿತು ಕೂಡ. ಅಷ್ಟರಲ್ಲಿ ಅದನ್ನು ನೋಡಿದ ಎಷ್ಟು ಜನರು ಇದನ್ನು ನಂಬಿದರೋ ಗೊತ್ತಿಲ್ಲ. ಆದರೆ ಬಹಳಷ್ಟು ಜನರು ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ತಾವೇ ಕಂಡುಹಿಡಿದವರಂತೆ ಹಾಕಿಕೊಂಡಿದ್ದರು.

ಫ್ಯಾಕ್ಟ್‌ಚೆಕ್‌

ಈ ವರ್ಷ ಮಹಾರಾಷ್ಟ್ರದ ಹಲವು ಕಡೆ ಕೂಯ್ಲಿಗೆ ಬಂದ ಟೊಮೊಟೊಗಳು ಮಾಗಿಹೋಗಿವೆ. ಇದರಿಂದ ರೈತರಿಗೆ ಸಾಕಷ್ಟು ನಷ್ಟವಾಗಿದೆ. ನಾಸಿಕ್‌, ಪುಣೆ ಮತ್ತು ಅಹ್ಮದ್‌ ನಗರ ಜಿಲ್ಲೆಗಳಲ್ಲಿ ಕಳೆದ ಹತ್ತು ದಿನಗಳಿಂದ ಶೇ.60% ಟೊಮೊಟೊ ನಾಶವಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ.

ಮಹಾತ್ಮಾ ಫುಲೆ ಕೃಷಿ ವಿದ್ಯಾಪೀಠದ ಡಾ.ನವಲೆ ಎಂಬುವವರು ಟೊಮೊಟೊಗಳು ಹಾಳಾಗಲು ಕಾರಣವೇನೆಂದು ಅಧ್ಯಯನ ಮಾಡುತ್ತಿದ್ದಾರೆ. ಅವರು ಸ್ಯಾಂಪಲ್‌ಗಳನ್ನು ಬೆಂಗಳೂರಿನ ಇನ್ಸ್ಟಿಟ್ಯೂಟ್‌ ಆಫ್‌ ಹಾರ್ಟಿಕಲ್ಚರ್‌ ರಿಸರ್ಚ್‌ ಫಾರ್‌ ಐಡೆಂಟಿಫಿಕೇಶನ್‌ ಕಳಿಸಿದ್ದಾರೆ. ಅವರು ಬರೆದ ಲೇಖನದಲ್ಲಿ ಯಾವುದೋ  ರೋಗದಿಂದ ಟೊಮೊಟೊ ಎಲೆಗಳು ಮೊದಲು ಹಾಳಾಗಿ ನಂತರ ಹಣ್ಣು ಸಹ ಹಾಳಾಗುತ್ತಿದೆ ಎಂದಿದ್ದಾರೆ. ಅಲ್ಲದೇ ರೋಗದಿಂದ ಕೂಡಿದ ಟೊಮೊಟೊ ಬೀಜಗಳನ್ನು ವಿತರಿಸಿರುವುದರಿಂದ ಈ ಸಮಸ್ಯೆ ಉಂಟಾಗಿದೆ ಎಂದು ಹಲವು ರೈತರು ಪ್ರತಿಭಟನೆ ನಡೆಸಿರುವುದನ್ನು ಲೇಖನದಲ್ಲಿ ಉಲ್ಲೇಖಿಸಿದ್ದಾರೆ.

ಬಹಳಷ್ಟು ಕೀಟತಜ್ಞರು ಇದು ಕೊರೊನಾ ವೈರಸ್‌ ರೀತಿಯದು ಎಂಬ ಸುದ್ದಿಯನ್ನು ಅಲ್ಲಗೆಳೆದಿದ್ದಾರೆ. ಟೊಮೊಟೊಗೆ ಹಲವು ರೋಗಗಳು ಬರುವುದು ಸಹಜ. ಅದರಿಂದ ಕೆಂಪು ಟೊಮೊಟೊಗಳು ಮಾಗಿವೆ. ಆದರೆ ಇದಕ್ಕೂ ಕೊರೊನಾ ವೈರಸ್ ಯಾವ ಸಂಬಂಧವಿಲ್ಲ, ತರಕಾರಿಗಳಿಂದ ವೈರಸ್ ಮನುಷ್ಯನ ದೇಹ ಸೇರುತ್ತವೆ ಎಂಬುದು ಸಂಪೂರ್ಣ ಸುಳ್ಳು ಎಂದಿದ್ದಾರೆ.

ನಂತರ ಈ ಸ್ಟೋರಿಗಳನ್ನು ಡಿಲಿಟ್ ಮಾಡಿರುವ ಟಿವಿ9 ಭಾರತ್‌ವರ್ಷ್ ಮೇ15 ರಂದು ಮತ್ತೊಂದು ಶೋ ನಡೆಸಿ ನಾವು ಪ್ರಶ್ನಾರ್ಥಕ ಚಿನ್ನೆಗಳನ್ನಿಟ್ಟು ಶೋ ನಡೆಸಿದ್ದವು. ಆದರೆ ಸಾಮಾಜಿಕ ಜಾಲತಾಣಿಗರು ತಪ್ಪು ಸಂದೇಶ ಹರಡಿದ್ದಾರೆ ಎಂದು ಸಮರ್ಥಿಸಿಕೊಂಡಿವೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಆಹಾರ, ಹಣಕ್ಕಾಗಿ ವಲಸೆ ಕಾರ್ಮಿಕರಿಂದ ದರೋಡೆ ಮತ್ತು ಕೊಲೆ?: ಇದು ನಿಜವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...