Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ಟೊಮೊಟೊಗೂ ಬಂತು ಕೊರೊನಾಗಿಂತ ಡೆಡ್ಲಿ ವೈರಸ್: ನೀವು ನಂಬುತ್ತೀರಾ?

ಫ್ಯಾಕ್ಟ್‌ಚೆಕ್‌: ಟೊಮೊಟೊಗೂ ಬಂತು ಕೊರೊನಾಗಿಂತ ಡೆಡ್ಲಿ ವೈರಸ್: ನೀವು ನಂಬುತ್ತೀರಾ?

- Advertisement -
- Advertisement -

ಟೊಮೊಟೊದಿಂದ ಟೆನ್ಷನ್, ರೆಡ್ ಡೆಡ್ಲಿ ವೈರಸ್ ಇನ್ಫೆಕ್ಷನ್. ತಿರಂಗ ವೈರಸ್ ಬಂದಿದೆ. ತರಕಾರಿಗಳಿಂದ ಮಾನವನ ದೇಹ ಹೊಕ್ಕಿ ಕೊಲ್ಲಲು ಸಜ್ಜಾಗಿದೆ. ಇದು ಕೊರೊನಾ ವೈರಸ್‌ನ ಹೊಸ ರೂಪ. ಆದರೆ ಕೊರೊನಾಗಿಂತಲೂ ಡೇಂಜರ್ ವೈರಸ್. ಅದರಿಂದಾಗಿ ಮಹಾರಾಷ್ಟ್ರದಲ್ಲಿ ಒಂದು ವರ್ಷ ಜನರು ಟೊಮೊಟೊ ತಿನ್ನುವುದಿಲ್ಲ ಎಂದು ನಿರ್ಧರಿಸಿದ್ದಾರೆ.

ಈ ಮೇಲಿನ ಅಣಿಮುತ್ತುಗಳು ಟಿವಿ9 ಭಾರತ್‌ವರ್ಷ್ ಹಿಂದಿವಾಹಿನಿಯಲ್ಲಿ ಮೇ13 ರಂದು ಪ್ರಸಾರವಾದಂತವುಗಳು. ಜೊತೆಗೆ ಅಷ್ಟೇ ಬೇಗ ಅದನ್ನು ಡಿಲಿಟ್ ಮಾಡಲಾಯಿತು ಕೂಡ. ಅಷ್ಟರಲ್ಲಿ ಅದನ್ನು ನೋಡಿದ ಎಷ್ಟು ಜನರು ಇದನ್ನು ನಂಬಿದರೋ ಗೊತ್ತಿಲ್ಲ. ಆದರೆ ಬಹಳಷ್ಟು ಜನರು ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ತಾವೇ ಕಂಡುಹಿಡಿದವರಂತೆ ಹಾಕಿಕೊಂಡಿದ್ದರು.

ಫ್ಯಾಕ್ಟ್‌ಚೆಕ್‌

ಈ ವರ್ಷ ಮಹಾರಾಷ್ಟ್ರದ ಹಲವು ಕಡೆ ಕೂಯ್ಲಿಗೆ ಬಂದ ಟೊಮೊಟೊಗಳು ಮಾಗಿಹೋಗಿವೆ. ಇದರಿಂದ ರೈತರಿಗೆ ಸಾಕಷ್ಟು ನಷ್ಟವಾಗಿದೆ. ನಾಸಿಕ್‌, ಪುಣೆ ಮತ್ತು ಅಹ್ಮದ್‌ ನಗರ ಜಿಲ್ಲೆಗಳಲ್ಲಿ ಕಳೆದ ಹತ್ತು ದಿನಗಳಿಂದ ಶೇ.60% ಟೊಮೊಟೊ ನಾಶವಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ.

ಮಹಾತ್ಮಾ ಫುಲೆ ಕೃಷಿ ವಿದ್ಯಾಪೀಠದ ಡಾ.ನವಲೆ ಎಂಬುವವರು ಟೊಮೊಟೊಗಳು ಹಾಳಾಗಲು ಕಾರಣವೇನೆಂದು ಅಧ್ಯಯನ ಮಾಡುತ್ತಿದ್ದಾರೆ. ಅವರು ಸ್ಯಾಂಪಲ್‌ಗಳನ್ನು ಬೆಂಗಳೂರಿನ ಇನ್ಸ್ಟಿಟ್ಯೂಟ್‌ ಆಫ್‌ ಹಾರ್ಟಿಕಲ್ಚರ್‌ ರಿಸರ್ಚ್‌ ಫಾರ್‌ ಐಡೆಂಟಿಫಿಕೇಶನ್‌ ಕಳಿಸಿದ್ದಾರೆ. ಅವರು ಬರೆದ ಲೇಖನದಲ್ಲಿ ಯಾವುದೋ  ರೋಗದಿಂದ ಟೊಮೊಟೊ ಎಲೆಗಳು ಮೊದಲು ಹಾಳಾಗಿ ನಂತರ ಹಣ್ಣು ಸಹ ಹಾಳಾಗುತ್ತಿದೆ ಎಂದಿದ್ದಾರೆ. ಅಲ್ಲದೇ ರೋಗದಿಂದ ಕೂಡಿದ ಟೊಮೊಟೊ ಬೀಜಗಳನ್ನು ವಿತರಿಸಿರುವುದರಿಂದ ಈ ಸಮಸ್ಯೆ ಉಂಟಾಗಿದೆ ಎಂದು ಹಲವು ರೈತರು ಪ್ರತಿಭಟನೆ ನಡೆಸಿರುವುದನ್ನು ಲೇಖನದಲ್ಲಿ ಉಲ್ಲೇಖಿಸಿದ್ದಾರೆ.

ಬಹಳಷ್ಟು ಕೀಟತಜ್ಞರು ಇದು ಕೊರೊನಾ ವೈರಸ್‌ ರೀತಿಯದು ಎಂಬ ಸುದ್ದಿಯನ್ನು ಅಲ್ಲಗೆಳೆದಿದ್ದಾರೆ. ಟೊಮೊಟೊಗೆ ಹಲವು ರೋಗಗಳು ಬರುವುದು ಸಹಜ. ಅದರಿಂದ ಕೆಂಪು ಟೊಮೊಟೊಗಳು ಮಾಗಿವೆ. ಆದರೆ ಇದಕ್ಕೂ ಕೊರೊನಾ ವೈರಸ್ ಯಾವ ಸಂಬಂಧವಿಲ್ಲ, ತರಕಾರಿಗಳಿಂದ ವೈರಸ್ ಮನುಷ್ಯನ ದೇಹ ಸೇರುತ್ತವೆ ಎಂಬುದು ಸಂಪೂರ್ಣ ಸುಳ್ಳು ಎಂದಿದ್ದಾರೆ.

ನಂತರ ಈ ಸ್ಟೋರಿಗಳನ್ನು ಡಿಲಿಟ್ ಮಾಡಿರುವ ಟಿವಿ9 ಭಾರತ್‌ವರ್ಷ್ ಮೇ15 ರಂದು ಮತ್ತೊಂದು ಶೋ ನಡೆಸಿ ನಾವು ಪ್ರಶ್ನಾರ್ಥಕ ಚಿನ್ನೆಗಳನ್ನಿಟ್ಟು ಶೋ ನಡೆಸಿದ್ದವು. ಆದರೆ ಸಾಮಾಜಿಕ ಜಾಲತಾಣಿಗರು ತಪ್ಪು ಸಂದೇಶ ಹರಡಿದ್ದಾರೆ ಎಂದು ಸಮರ್ಥಿಸಿಕೊಂಡಿವೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಆಹಾರ, ಹಣಕ್ಕಾಗಿ ವಲಸೆ ಕಾರ್ಮಿಕರಿಂದ ದರೋಡೆ ಮತ್ತು ಕೊಲೆ?: ಇದು ನಿಜವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...